ಚಿಕ್ಕಮಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಆರೋಪದಡಿ ಕಡೂರು ತಾಲೂಕು ವೈದ್ಯಾಧಿಕಾರಿ ಡಾ.ಉಮೇಶ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಡಾ.ಉಮೇಶ್ ೧೯೯೫ರಲ್ಲಿ ವೈದ್ಯಾಧಿಕಾರಿಯಾಗಿ ಸೇವೆಗೆ ನೇಮಕವಾಗಿದ್ದು, ೨೦೨೩ ರಿಂದ ಕಡೂರು ತಾಲೂಕು ವೈದ್ಯಾಧಿ ಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇವರು ೨೦೨೦ ರಿಂದ ೨೦೨೩ ರ ವರೆಗೆ ಚಿಕ್ಕಮಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ೧೯೯೫ ರಿಂದ ಸೇವೆಗೆ ಸೇರಿದಲ್ಲಿಂದ ಇಲ್ಲಿಯವರೆಗೆ ತಮ್ಮ ಅಧಿಕಾರವನ್ನು ದುರುಪ ಯೋಗ ಮಾಡಿಕೊಂಡು ಕಾನೂನು ಬದ್ದ ಮೂಲ ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಚಿರಾಸ್ಥಿ ಹಾಗೂ ಚರಾಸ್ಥಿ ಸಂಪಾದನೆ ಮಾಡಿದ್ದಾರೆ ಆರೋಪವಿದೆ.
ಪತ್ನಿ ಟಿ.ಎಸ್.ಮಂಜುಳ ಹಾಗೂ ಕುಟುಂಬ ಸದಸ್ಯರ ಹೆಸರಿನಲ್ಲಿ ಸ್ಥಿರಾಸ್ತಿಯನ್ನು ಖರೀದಿ ಮಾಡಿದ್ದಾರೆ. ಇಬ್ಬರು ಮಕ್ಕಳು ರಾಯಚೂರು ಮತ್ತು ದಾವಣಗೆರೆ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದನೆ ಮಾಡಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Lokayukta raids Kadur Taluk Medical Officer’s house

Leave a Reply