May 18, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಎ.ಎನ್ ಮಹೇಶ್ ಗೆ ಪ್ರೈಡ್ ಆಫ್ ಕರ್ನಾಟಕ ವಾರ್ಷಿಕ ಪ್ರಶಸ್ತಿ

ಎ.ಎನ್.ಮಹೇಶ್

ಚಿಕ್ಕಮಗಳೂರು: ಬೆಂಗಳೂರಿನ ಪ್ರೆಸ್ ಕ್ಲಭ್ ಆಫ್ ಬೆಂಗಳೂರು ಸಂಸ್ಥೆ ಕೊಡಮಾಡುವ ಪ್ರತಿಷ್ಟಿತ ಪ್ರೈಡ್ ಆಫ್ ಕರ್ನಾಟಕ ವಾರ್ಷಿಕ ಪ್ರಶಸ್ತಿಗೆ ಕರ್ನಾಟಕ ರಾಜ್ಯ ಪರಿಸರ ಮೌಲ್ಯಮಾಪನ ತಜ್ಞರ ಸಮಿತಿಯ ಅಧ್ಯಕ್ಷರಾಗಿರುವ ಎ.ಎನ್ ಮಹೇಶ್ ಆಯ್ಕೆಯಾಗಿದ್ದಾರೆ.

ಪತ್ರಕರ್ತರ ಪ್ರಾತಿನಿಧಿಕ ಸಂಸ್ಥೆಯಾದ ಪ್ರೆಸ್ ಕ್ಲಬ್ ಆಫ್ ಬೆಂಗಳೂರು ದೇಶದ ಅತ್ಯುನ್ನತ ಪ್ರತಿಷ್ಠಿತ ಕ್ಲಬ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ೫೫ ವರ್ಷಗಳ ಇತಿಹಾಸವಿರುವ ಬೆಂಗಳೂರು ಪ್ರೆಸ್‌ಕ್ಲಬ್ ಪ್ರತಿವರ್ಷ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಾ ಬಂದಿದ್ದು,ಈಬಾರಿ ಎ.ಎನ್ ಮಹೇಶ್‌ರವರನ್ನು ಆಯ್ಕೆಮಾಡಿದೆ.

ಜ.ರಂದು ೧೧ ರ ಶನಿವಾರದಂದು ಸಂಜೆ ೫.೩೦ ಕ್ಕೆ ಪ್ರೆಸ್‌ಕ್ಲಬ್ ಆವರಣದಲ್ಲಿ ನಡೆಯುವ ವರ್ಣರಂಜಿತ ಹಾಗೂ ಸುಂದರ ಸಮಾರಂಭದಲ್ಲಿ ಸರ್ಕಾರದ ಆನೇಕ ಸಚಿವರು ಹಾಗೂ ಅತಿಥಿ ಗಣ್ಯರು ಈ ಪ್ರಶಸ್ತಿಯನ್ನು ಪ್ರಧಾನ ಮಾಡಿ ಅಭಿನಂದಿಸಲಿದ್ದಾರೆ.

ದೇಶದ ಪ್ರತಿಷ್ಠಿತ ವ್ಯಕ್ತಿಗಳಾದ ಭಾರತದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಭಾರತರತ್ನ ಪ್ರಶಸ್ತಿ ಪುರಸ್ಕೃತ ಕನ್ನಡಿತ ಡಾ.ಸಿ.ಎನ್.ಆರ್ ರಾವ್, ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ, ಲೋಕಾಯುಕ್ತ ಎನ್. ವೆಂಕಟಾಚಲಯ್ಯ, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್, ಪದ್ಮಶ್ರೀ ಪುರಸ್ಕೃತ ಡಾ. ಸಿ.ಎನ್. ಮಂಜುನಾಥ್, ಅಂತರರಾಷ್ಟ್ರೀಯ ಕ್ರಿಕೆಟ್ ಪಟು ಅನಿಲ್ ಕುಂಬ್ಳೆ, ಔಟ್‌ಲುಕ್ ಪತ್ರಿಕೆಯ ಸಂಪಾದಕ ಕೃಷ್ಣ ಪ್ರಸಾದ್, ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ವಿಜೇತೆ ಕುಮಾರಿ ಅಶ್ವಿನಿ ಅಕ್ಕುಂಜೆ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಡಾ.ಚಂದ್ರಶೇಖರ ಕಂಬಾರ, ಸಾಮಾಜಿಕ ಹೋರಾಟಗಾರ, ಪರಿಸರವಾದಿ, ಸಮಾಜ ಪರಿವರ್ತನ ಸಮುದಾಯ ಸಂಸ್ಥೆಯ ಅಧ್ಯಕ್ಷರಾದ ಎಸ್.ಆರ್. ಹಿರೇಮಠ, ಇಸ್ರೋ ಅಧ್ಯಕ್ಷ ಡಾ.ಕೆ. ರಾಧಾಕೃಷ್ಣನ್, ೨೦೧೭ರ ಶತಮಾನದ ಶ್ರೀಗಳು ಕಾಯಕಯೋಗಿ ಶ್ರೀ ಶಿವಕುಮಾರ್ ಸ್ವಾಮೀಜಿ, ಇನ್ಫೋಸಿಸ್ ಪ್ರತಿಷ್ಠಾನ ಅಧ್ಯಕ್ಷರಾದ ಶ್ರೀಮತಿ ಸುಧಾಮೂರ್ತಿ, ವಿಪ್ರೊ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಅಜೀಂ ಪ್ರೇಮ್‌ಜಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೆಂದ್ರ ಹೆಗ್ಗಡೆ, ಸೇರಿದಂತೆ ಅನೇಕ ಗಣ್ಯಾತಿಗಣ್ಯರಿಗೆ ಸಾಧಕರಿಗೆ ಪ್ರೆಸ್‌ಕ್ಲಬ್ ಆಫ್ ಬೆಂಗಳೂರು ಪ್ರಶಸ್ತಿ ನೀಡಿ ಗೌರವಿಸುತ್ತಾ ಬಂದಿದೆ.

A.N.Mahesh receives Pride of Karnataka Annual Award

Related posts

ಭಾರತ ಆಧ್ಯಾತ್ಮಿಕ ಸಂಪದ್ಭರಿತವಾಗಿದ್ದು, ಜಗತ್ತು ಗೌರವದಿಂದ ನೋಡುತ್ತಿದೆ

Team Suddigara

ಮಾನವ ಕಳ್ಳ ಸಾಗಾಣಿಕೆ ಸಾಮಾಜಿಕ ಪಿಡುಗು

Team Suddigara

ಸುಪ್ರೀಂ ಕೋರ್ಟಿನ ತೀರ್ಪಿನಂತೆ ಯಥಾಸ್ಥಿತಿ ಪಿಂಚಣಿ ಪರಿಷ್ಕರಿಸುವಂತೆ ಆಗ್ರಹಿಸಿ ಪ್ರತಿಭಟನೆ

Team Suddigara

Leave a Comment