June 15, 2026
Suddigaralive News
ಕ್ರೈಂಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಕಡವೆ ಶಿಕಾರಿ ಮಾಡಿದ್ದ ವ್ಯಕ್ತಿ ಸೆರೆ-ಎರಡು ಕೋವಿ ವಶ

ಕಡವೆ ಶಿಕಾರಿ ಮಾಡಿದ್ದ ವ್ಯಕ್ತಿ ಸೆರೆ-ಎರಡು ಕೋವಿ ವಶ

ಚಿಕ್ಕಮಗಳೂರು: ಕಡವೆ ಶಿಕಾರಿ ಮಾಡಿದ್ದ ವ್ಯಕ್ತಿ ಓರ್ವನನ್ನು ಬಂಧಿಸಿರುವ ಅರಣ್ಯ ಸಂಚಾರಿ ದಳ ವಾಹನ ಸಹಿತ ಎರಡು ಕೋವಿ ವಶಪಡಿಸಿಕೊಂಡಿದೆ.

ಚಿಕ್ಕಮಗಳೂರು ವಲಯದ ಅತ್ತಿಗಿರಿ ಸೆಕ್ಷನ್, ತೋಗರಿಹಂಕಲ್ ಗ್ರಾಮದ ಸರ್ವೇ ಸಂಖ್ಯೆ ೩೭ ರಲ್ಲಿ ಕೂತನ್ಕುಲ್ ಎಸ್ಟೇಟ್ ನಲ್ಲಿ ಇಂದು ನಸುಕಿನಲ್ಲಿ ತೋಟದ ರೈಟರ್ ದೇವಯ್ಯ ಕಡವೆ ಶಿಖಾರಿ ಮಾಡಿದ್ದ.

ಶಿಕಾರಿ ಬಳಿಕ ಮಾಂಸವನ್ನು ತುಂಡು ಮಾಡುತ್ತಿದ್ದಾಗ ಅರಣ್ಯ ಸಂಚಾರಿ ದಳದವರು ದಾಳಿ ಮಾಡಿ ದೇವಯ್ಯ ರನ್ನು ಬಂಧಿಸಿ ವನ್ಯಜೀವಿ ಸಾಂಬಾರ್ ಜಿಂಕೆಯ ಅಂದಾಜು ೪೦ ಞg ಮಾಂಸ ಮತ್ತು ಚರ್ಮ, ಚೂರಿ ಹಾಗೂ ಬೇಟೆಗೆ ಬಳಸುತ್ತಿದ್ದ ೨ ಡಿiಜಿಟe ಗಳನ್ನು ವಶಕ್ಕೆ ಪಡೆದಿದ್ದಾರೆ. ಒಂಟಿ ನಳಿಕೆ ರೈಫಲ್ ಹಾಗೂ ಐವತ್ತಕ್ಕೂ ಹೆಚ್ಚು ಜೀವಂತ ಬಳಸಿದ ಗುಂಡು ಪತ್ತೆಯಾಗಿದೆ.

ವನ್ಯಜೀವಿ ಹಾಗೂ ಅರಣ್ಯ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಅರಣ್ಯ ಸಂಚಾರಿ ದಳ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುದರ್ಶನ್ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್, ವಲಯ ಅರಣ್ಯಾಧಿಕಾರಿ ವೆಂಕಟೇಶ್, ಉಪ ವಲಯ ಅರಣ್ಯಾಧಿಕಾರಿ ಪ್ರಹಾರ್ಶ್, ಪೂರಪ್ಪ ಮತ್ತು ಇತರರು ಪಾಲ್ಗೊಂಡಿದ್ದರು

Man arrested for hunting a hawk two guns seized

Related posts

ಬಂಡವಾಳಶಾಹಿ ಕೈಯಲ್ಲಿ ಪತ್ರಿಕೋಧ್ಯಮ ಸಿಲುಕಿರುವುದು ಸಮಾಜಕ್ಕೆ ಮಾರಕ

Team Suddigara

ಸರಳ ಸಜ್ಜನಿಕೆ ವ್ಯಕ್ತಿತ್ವದ ರಾಜಕಾರಣಿ ಡಾ.ಜಿ.ಪರಮೇಶ್ವರ್

Team Suddigara

ಅಂಚೆ ಇಲಾಖೆಯಿಂದ ಕಾಫಿ ತೋಟಗಳ ಚಿತ್ರಣವಿರುವ ವಿಶೇಷ ಮುದ್ರೆ ಬಿಡುಗಡೆ

Team Suddigara

Leave a Comment