ಮುಳ್ಳಯ್ಯನಗಿರಿ ಸಮೀಪದ ಅರಣ್ಯ ಪ್ರದೇಶದ ಬೆಟ್ಟದಲ್ಲಿ ಕಾಡ್ಗಿಚ್ಚು

ಮುಳ್ಳಯ್ಯನಗಿರಿ ಸಮೀಪದ ಅರಣ್ಯ ಪ್ರದೇಶದ ಬೆಟ್ಟದಲ್ಲಿ ಕಾಡ್ಗಿಚ್ಚು

ಚಿಕ್ಕಮಗಳೂರು: ತಾಲೂಕಿನ ಹೆಸರಾಂತ ಪ್ರವಾಸಿ ತಾಣವಾದ ಮುಳ್ಳಯ್ಯನಗಿರಿ ಸಮೀಪದ ಅರಣ್ಯ ಪ್ರದೇಶದ ಬೆಟ್ಟದಲ್ಲಿ ಕಾಡ್ಗಿಚ್ಚು ವ್ಯಾಪಿಸಿದ್ದು, ನೂರಾರು ಎಕರೆ ಅರಣ್ಯ ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿದೆ.

ಸೋಮವಾರ ಸಂಜೆ ವೇಳೆ ಕಿಡಿಗೇಡಿಗಳು ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತಗಳ ಸಾಲಿನ ಬೆಟ್ಟಕ್ಕೆ ಬೆಂಕಿ ಹಾಕಿದ್ದಾರೆಂದು ಹೇಳಲಾಗುತ್ತಿದ್ದು, ಕಿಡಿಗೇಡಿಗಳ ಕೃತ್ಯದಿಂದಾಗಿ ಮುಳ್ಳಯ್ಯನಗಿರಿ ಸಮೀಪದಲ್ಲಿ ನೂರಾರು ಎಕರೆ ಅರಣ್ಯ ಪ್ರದೇಶದಲ್ಲಿ ಬೆಂಕಿ ವ್ಯಾಪಿಸಿದೆ.

ಸುದ್ದಿ ತಿಳಯುತ್ತಿದ್ದಂತೆ ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸದಲ್ಲಿ ತೊಡಗಿಕೊಂಡಿದ್ದು, ಗಿರಿ ಭಾಗದಲ್ಲಿ ಭಾರೀ ಗಾಳಿ ಇರುವ ಕಾರಣದಿಂದಾಗಿ ಬೆಂಕಿಯ ತೀವ್ರತೆ ಹೆಚ್ಚುತ್ತಿರುವುದರಿಂದ ಬೆಂಕಿನAದಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಮುಳ್ಳಯ್ಯನಗಿರಿ ಭಾಗದಲ್ಲಿ ಅಪರೂಪದ ಶೋಲಾ ಕಾಡುಗಳು, ವನ್ಯಜೀವಿಗಳು ಬೆಂಕಿಗೆ ಆಹುತಿಯಾಗುತ್ತಿದ್ದು, ಅರಣ್ಯ ಇಲಾಖೆ ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ರಾತ್ರಿಯೂ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಸ್ಥಳೀಯರು ಸಿಬ್ಬಂದಿಯೊAದಿಗೆ ಸೇರಿ ಬೆಂಕಿನಿಂದಿಸಲು ಶ್ರಮಿಸುತ್ತಿದ್ದಾರೆ.

Forest fire in a forested hill near Mullayanagiri

Comments

Leave a Reply

Your email address will not be published. Required fields are marked *