June 15, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಮುಳ್ಳಯ್ಯನಗಿರಿ ಸಮೀಪದ ಅರಣ್ಯ ಪ್ರದೇಶದ ಬೆಟ್ಟದಲ್ಲಿ ಕಾಡ್ಗಿಚ್ಚು

ಮುಳ್ಳಯ್ಯನಗಿರಿ ಸಮೀಪದ ಅರಣ್ಯ ಪ್ರದೇಶದ ಬೆಟ್ಟದಲ್ಲಿ ಕಾಡ್ಗಿಚ್ಚು

ಚಿಕ್ಕಮಗಳೂರು: ತಾಲೂಕಿನ ಹೆಸರಾಂತ ಪ್ರವಾಸಿ ತಾಣವಾದ ಮುಳ್ಳಯ್ಯನಗಿರಿ ಸಮೀಪದ ಅರಣ್ಯ ಪ್ರದೇಶದ ಬೆಟ್ಟದಲ್ಲಿ ಕಾಡ್ಗಿಚ್ಚು ವ್ಯಾಪಿಸಿದ್ದು, ನೂರಾರು ಎಕರೆ ಅರಣ್ಯ ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿದೆ.

ಸೋಮವಾರ ಸಂಜೆ ವೇಳೆ ಕಿಡಿಗೇಡಿಗಳು ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತಗಳ ಸಾಲಿನ ಬೆಟ್ಟಕ್ಕೆ ಬೆಂಕಿ ಹಾಕಿದ್ದಾರೆಂದು ಹೇಳಲಾಗುತ್ತಿದ್ದು, ಕಿಡಿಗೇಡಿಗಳ ಕೃತ್ಯದಿಂದಾಗಿ ಮುಳ್ಳಯ್ಯನಗಿರಿ ಸಮೀಪದಲ್ಲಿ ನೂರಾರು ಎಕರೆ ಅರಣ್ಯ ಪ್ರದೇಶದಲ್ಲಿ ಬೆಂಕಿ ವ್ಯಾಪಿಸಿದೆ.

ಸುದ್ದಿ ತಿಳಯುತ್ತಿದ್ದಂತೆ ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸದಲ್ಲಿ ತೊಡಗಿಕೊಂಡಿದ್ದು, ಗಿರಿ ಭಾಗದಲ್ಲಿ ಭಾರೀ ಗಾಳಿ ಇರುವ ಕಾರಣದಿಂದಾಗಿ ಬೆಂಕಿಯ ತೀವ್ರತೆ ಹೆಚ್ಚುತ್ತಿರುವುದರಿಂದ ಬೆಂಕಿನAದಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಮುಳ್ಳಯ್ಯನಗಿರಿ ಭಾಗದಲ್ಲಿ ಅಪರೂಪದ ಶೋಲಾ ಕಾಡುಗಳು, ವನ್ಯಜೀವಿಗಳು ಬೆಂಕಿಗೆ ಆಹುತಿಯಾಗುತ್ತಿದ್ದು, ಅರಣ್ಯ ಇಲಾಖೆ ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ರಾತ್ರಿಯೂ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಸ್ಥಳೀಯರು ಸಿಬ್ಬಂದಿಯೊAದಿಗೆ ಸೇರಿ ಬೆಂಕಿನಿಂದಿಸಲು ಶ್ರಮಿಸುತ್ತಿದ್ದಾರೆ.

Forest fire in a forested hill near Mullayanagiri

Related posts

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025 ಅವಧಿ ವಿಸ್ತರಣೆ

Team Suddigara

ಯುವ ಜನಾಂಗ ಮಾದಕ ವಸ್ತುಗಳ ಚಟಕ್ಕೆ ದಾಸರಾಗಿ ಬಾರದು

Team Suddigara

೩೧ ಕೋಟಿ ರೂ ವೆಚ್ಚದಲ್ಲಿ ಸಖರಾಯಪಟ್ಟಣ-ದೇವನೂರು ಕ್ಷೇತ್ರ ಅಭಿವೃದ್ಧಿ

Team Suddigara

Leave a Comment