ಚಿಕ್ಕಮಗಳೂರು: ಈ ವರ್ಷ ಬೇಸಿಗೆಯಲ್ಲಿ ಸೂರ್ಯನ ತಾಪಮಾನ ಎಂದಿಗಿಂತ ಹೆಚ್ಚು ಇರಲಿದೆ ಎಂದು ಅಂದಾಜಿಸಲಾಗಿದೆ. ಸಾರ್ವಜನಿಕರು ಆರೋಗ್ಯ ಇಲಾಖೆಯ ಸೂಚನೆಗಳನ್ನು ಪಾಲಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥಬಾಬು ತಿಳಿಸಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರು ಅವರು ಬಿಸಿಗಾಳಿ ಹಾಗೂ ನಿರಂತರವಾಗಿ ನಿಸರ್ಗದಲ್ಲಿ ಬದಲಾಗುವ ವಾತಾವರಣದಿಂದ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಬಿಸಿಗಾಳಿ ಮತ್ತು ಸನ್ ಸ್ಟ್ರೋಕ್ ಹೆಚ್ಚಾಗಿ ಕಂಡು ಬರುತ್ತದೆ. ದೇಹದಲ್ಲಿರುವ ಉಷ್ಣಾಂಶಕ್ಕಿಂತ ತಾಪಮಾನ ಏರಿಕೆ ಉಂಟಾದಾಗ ಹೆಚ್ಚು ಬೆವರು, ಸುಸ್ತು, ಬಾಯಾರಿಕೆ, ತಲೆಸುತ್ತುವುದು, ಕಣ್ಣು ಮಂಜಾಗು ವುದು ಕಂಡು ಬರುತ್ತದೆ. ಜೊತೆಗೆ ನಿರ್ಜಲೀಕ ರಣದಿಂದ ಮೂರ್ಛೆ ಬರಬಹುದು. ಆದ್ದರಿಂದ ಪ್ರತಿಯೊ ಬ್ಬರೂ ಪ್ರಖರ ಬಿಸಿಲಿನಿಂದ ಆದಷ್ಟು ದೂರವಿರಬೇಕು ಎಂದು ಪ್ರಕಟಣೆಯಲ್ಲಿ ವಿವರಿಸಿದ್ದಾರೆ.
ಬೆಳಿಗ್ಗೆ ೧೧ರಿಂದ ಸಂಜೆ ೪ರ ತನಕ ಹೆಚ್ಚಿನ ತಾಪಮಾನವಿದ್ದು, ಗರ್ಭಿಣಿಯರು, ಮಕ್ಕಳು, ವೃದ್ಧರು ಮನೆಯಿಂದ ಹೊರಗೆ ಬರುವುದನ್ನು ಆದಷ್ಟು ಕಡಿಮೆ ಮಾಡಬೇಕು. ಸಡಿಲವಾದ ಕಾಟನ್ ಬಟ್ಟೆ, ಕೂಲಿಂಗ್ ಗ್ಲಾಸ್ ಧರಿಸಬೇಕು. ಹೆಚ್ಚಾಗಿ ನೀರು ಕುಡಿಯಬೇಕು ಎಂದು ತಿಳಿಸಿದ್ದಾರೆ.
ಕೆಲಸದ ಸ್ಥಳದಲ್ಲಿ ಕೆಲಸಗಾರರಿಗೆ ಕುಡಿಯಲು ತಣ್ಣನೆಯ ನೀರಿನ ವ್ಯವಸ್ಥೆ ಮಾಡಬೇಕು. ಪ್ರತಿ ೨೦ ನಿಮಿಷಗಳಿಗೊಮ್ಮೆ ಒಂದು ಗ್ಲಾಸ್ ಅಥವಾ ಅದಕ್ಕಿಂತ ಹೆಚ್ಚು ನೀರು ಕುಡಿಯಬೇಕು. ಕೆಲಸಗಾರರು ನೇರವಾದ ಸೂರ್ಯನ ಬೆಳಕಿನಲ್ಲಿ ಕೆಲಸ ನಿರ್ವಹಿಸದಂತೆ ಎಚ್ಚರ ವಹಿಸಬೇಕು.
ಕೆಲಸಗಾರರಿಗೆ ನೆರಳಿ ನಲ್ಲಿ ಕೆಲಸ ಮಾಡಲು ಅನುಕೂಲ ಆಗುವಂತೆ, ತಾತ್ಕಾಲಿಕ ಶೆಡ್ ನಿರ್ಮಿಸಬೇಕು. ಬೆಳಗಿನ ಅಥವಾ ಸಂಜೆಯ ಸಮಯದಲ್ಲಿ ನಿರ್ವಹಿಸುವಂತೆ ವೇಳಾಪಟ್ಟಿ ಸಿದ್ಧಗೊಳಿ ಸಬೇಕು ಎಂದು ಸಲಹೆ ನೀಡಿದ್ದಾರೆ.
ಹೊರಾಂಗಣ ಚಟುವಟಿಕೆಗಳ ಸಂದ ರ್ಭದಲ್ಲಿ ಕೆಲಸಗಾರರಿಗೆ ಪ್ರತಿ ೧ ಗಂಟೆಗೆ ೫ನಿಮಿಷಗಳ ಬಿಡುವು ನೀಡಬೇಕು. ರೇಡಿಯೊ, ಟಿ.ವಿ, ದಿನಪತ್ರಿ ಕೆಗಳು, ಹವಾಮಾನ ಇಲಾಖೆಯ ಜಾಲ ತಾಣದ ಮೂಲಕ ಮಾಹಿತಿ ಪಡೆಯಬ ಹುದು ಎಂದು ವಿವರಿಸಿದ್ದಾರೆ.
ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು ಹೆಚ್ಚಾಗಿ ತಿಳಿ ಬಣ್ಣದ ತುಂಬು ತೋಳಿನ ಅಂಗಿ ಹಾಗೂ ಪ್ಯಾಂಟ್ ಧರಿಸಬೇಕು ಎಂದು ಅಶ್ವತ್ಥಬಾಬು ಸಲಹೆ ನೀಡಿದ್ದಾರೆ. ಸೂರ್ಯನ ಶಾಖದಿಂದ ರಕ್ಷಿಸಿಕೊಳ್ಳಲು ತಲೆಯ ಭಾಗವನ್ನು ಮುಚ್ಚಿಕೊಳ್ಳಬೇಕು. ಬಿಸಿಗಾಳಿ ಮತ್ತು ಉಷ್ಣತೆಯ ಒತ್ತಡದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಕುರಿತು ಕೆಲಸಗಾರರಲ್ಲಿ ಅರಿವು ಮೂಡಿಸಲು ಶಿಬಿರಗಳನ್ನು ಆಯೋಜಿಸಬೇಕು.
ತಾಪಮಾನ ಹಾಗೂ ಮುನ್ಸೂಚನೆ ಕುರಿತು ಮಾಹಿತಿ ನೀಡುವ ವ್ಯವಸ್ಥೆಯನ್ನು ಕೆಲಸದ ಸ್ಥಳಗಳಲ್ಲಿ ಅಳವಡಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Health tips to prevent sunstroke

Leave a Reply