May 18, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಮಹಿಳೆಯರನ್ನು ಹಿಂದಕ್ಕೆ ಇಟ್ಟರೆ ರಾಷ್ಟ್ರದ ಏಳಿಗೆ ಸಾಧ್ಯವಿಲ್ಲ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
ಚಿಕ್ಕಮಗಳೂರು: ಸ್ವಾಮಿ ವಿವೇಕಾನಂದರ ಮಾತಿನಂತೆ, ಸಮಾಜದಲ್ಲಿ ಮಹಿಳೆಯರನ್ನು ಹಿಂದಕ್ಕಿಟ್ಟು ರಾಷ್ಟ್ರವನ್ನು ಮೇಲೆತ್ತಲು ಸಾಧ್ಯವಿಲ್ಲ. ಆದ್ದರಿಂದ ಸಮಾಜದ ಹಿತಕ್ಕಾಗಿ, ಸರ್ವತೋಮುಖ ಅಭಿವೃದ್ಧಿಗಾಗಿ ಮಹಿಳೆಯರು ಸಮಾಜದಲ್ಲಿ ಮುಂದೆ ಬರಲು ಪುರುಷರು ಸ್ವಾತಂತ್ರ್ಯ ಹಾಗೂ ಪೂರಕ ವಾತಾವರಣವನ್ನು ಕಲ್ಪಿಸಿಕೊಡಬೇಕು ಎಂದು ಚಿಕ್ಕಮಗಳೂರು ವಿಧಾನ ಸಭೆ ಶಾಸಕ ಹೆಚ್.ಡಿ ತಮ್ಮಯ್ಯ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಆಯೋಗ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ, ಇವರು ಸಂಯುಕ್ತಾಶ್ರಯದಲ್ಲಿ ಇಂದು ನಗರದ ಕುವೆಂಪು ಕಲಾಮಂದಿರದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರಿಗೆ ಸಿಗಬೇಕಾದ ಸೌಕರ್ಯ ಮತ್ತು ಸ್ವಾತಂತ್ರ್ಯ  ಹಾಗೂ ಕುಟುಂಬದಲ್ಲಿ ಹೆಣ್ಣು ಮಕ್ಕಳಿಗೆ ಪ್ರೋತ್ಸಾಹ ಹಾಗೂ ಸವಲತ್ತುಗಳನ್ನು ನೀಡಿದರೆ ರಾಷ್ಟ್ರ ಮುಂದಕ್ಕೆ ಹೋಗುವುದರಲ್ಲಿ ಅನುಮಾನವಿಲ್ಲ ಎಂದರು.
ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್ ಮಾತನಾಡಿ, ಈ ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಶೋಷಣೆ ತಪ್ಪಿದ್ದಲ್ಲ. ಆಧುನಿಕ ಹೆಣ್ಣು ಮಕ್ಕಳು ಸಹ ನಾನಾ ರೀತಿಯ ಮಾನಸಿಕ ಶೋಷಣೆಗೆ ಒಳಗಾಗುತ್ತಿದ್ದಾರೆ. ಪ್ರತಿ ಹೆಣ್ಣು ಮಕ್ಕಳು ವಿದ್ಯಾವಂತರಾಗಿ, ವೈಚಾರಿಕವಾಗಿ ಬೆಳೆಯಬೇಕು ಆಗ ಹೆಣ್ಣು ಸ್ವತಂತ್ರ್ಯವಾಗಿ ಸಬಲೆಯಾಗಬಲ್ಲಳು, ಸಮಾನತೆಯ ಜೊತೆಗೆ ಒಗ್ಗಟ್ಟಿನಲ್ಲಿ ಸಹ ಮಹಿಳೆಯರು ಸದಾ ಮುಂದಿರುವುದು ದೇಶದ ಆರ್ಥಿಕ ಅಭಿವೃದ್ಧಿಗೆ ಸಾಕ? ಅನುಕೂಲವಾಗಲಿದೆ. ಪ್ರತಿ ವ? ಮಾರ್ಚ್ ೮ರಂದು ಅಂತರರಾಷ್ಟ್ರೀಯ ಮಹಿಳೆಯರ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಮಹಿಳೆಯರ ಸಾಧನೆಗೆ ಮನಃಪೂರ್ವಕ ಗೌರವ ಸೂಚಿಸುವ ದಿನ ಇದಾಗಿದೆ. ಇಂದು ಮಹಿಳೆಯರ ಸಾಧನೆ ಎಲ್ಲಾ ಕ್ಷೇತ್ರಗಳಲ್ಲಿಯೂ ಇದೆ. ಪ್ರಮುಖವಾಗಿ ತಾಂತ್ರಿಕ, ಸಂಶೋಧನಾ ಹಾಗೂ ಉತ್ಪಾದನಾ ಕ್ಷೇತ್ರಗಳಲ್ಲಿ ಮಹಿಳೆಯರು ದೇಶಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಿದ್ದಾರೆ. ತಮ್ಮ ಬುದ್ಧಿಶಕ್ತಿಯಿಂದ ಅದೆ? ಸಮಸ್ಯೆಗಳಿಗೆ ಪರಿಹಾರಗಳನ್ನು ತಂದು ಕೊಟ್ಟಿದ್ದಾರೆ ಎಂದು ಹೇಳಿದರು.
ಮಾಜಿ ಸಚಿವರಾದ ಮೊಟ್ಟಮ್ಮ ಮಾತನಾಡಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಮಹಿಳೆಯ ಪಾತ್ರ ತುಂಬಾ ದೊಡ್ಡದಿರುತ್ತದೆ. ಆಕೆ ತಾಯಿಯಾಗಿ, ಸೋದರಿಯಾಗಿ, ಪತ್ನಿಯಾಗಿ ಬಾಳಿಗೆ ಬೆಳಕಾಗುತ್ತಾಳೆ. ವೈಯಕ್ತಿಕವಾಗಿ ಮನೆಯ ಅರ್ಧ ಜವಾಬ್ದಾರಿಯನ್ನು ಹೊರುವ ಜೊತೆಗೆ ಒಬ್ಬ ಶಿಕ್ಷಕಿಯಾಗಿ, ಇಂಜಿನಿಯರ್ ಆಗಿ, ಪೈಲೆಟ್ ಆಗಿ ಕೂಡ ತನ್ನ ಕೆಲಸ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಾಳೆ. ಸಮಾಜದ ಕಟ್ಟುಪಾಡುಗಳ ಹೊರತಾಗಿಯೂ ಕೂಡ ಈಗಿನ ಆಧುನಿಕ ದಿನಗಳಲ್ಲಿ ಆಕೆ ಸಾಧನೆಯ ಶಿಖರವನ್ನು ಮುಟ್ಟುತ್ತಿದ್ದಾಳೆ. ಹಾಗಾಗಿ ವಿಶ್ವದಾದ್ಯಂತ ಮಹಿಳೆಯರಿಗಾಗಿ ಗೌರವಾನ್ವಿತವಾಗಿ ಈ ಒಂದು ದಿನವನ್ನು “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಯನ್ನಾಗಿ ಆಚರಿಸುವ ಮೂಲಕ ಮೀಸಲಿಡಲಾಗಿದೆ. ಮಹಿಳೆಯರಿಗೆ ಎಲ್ಲಾ ಕ್ಷೇತ್ರದಲ್ಲಿಯೂ ಅವಕಾಶ ಕೊಡುವುದು ಮುಂದಿನ ಮಹತ್ತರ ಬೆಳವಣಿಗೆಗೆ ದಾರಿದೀಪವಾಗಲಿದೆ ಎಂದು ಹೇಳಿದರು.
ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹೆಚ್.ಎಸ್ ಕೀರ್ತಾನ ಮಾತನಾಡಿ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಮಹಿಳೆಯರ ಸಾಧನೆಗಳನ್ನು ಗುರುತಿಸಲು, ಲಿಂಗ ಸಮಾನತೆಯ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಮಹಿಳಾ ಸಬಲೀಕರಣವನ್ನು ಉತ್ತೇಜಿಸಲು ವಾರ್ಷಿಕವಾಗಿ ಆಚರಿಸಲಾಗುತ್ತದೆ. ಈ ಜಾಗತಿಕ ಕಾರ್ಯಕ್ರಮವು ಮಹಿಳೆಯರ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಸಾಧನೆಗಳನ್ನು ಚರ್ಚಿಸಲು ಮತ್ತು ಅವರ ಹಕ್ಕುಗಳನ್ನು ಬೆಂಬಲಿಸುವ ಅಭಿಯಾನಗಳನ್ನು ಒದಗಿಸಲು ಒಂದು ವೇದಿಕೆಯನ್ನು ಒದಗಿಸುತ್ತದೆ ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಉಪ ನಿರ್ದೇಶಕರು ಮಹಾಂತೇಶ್ ಭಜಂತ್ರಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಜಿ. ಪಂ ಉಪಕಾರ್ಯದರ್ಶಿ ಶಂಕರ್ ಕೊರವರ ,ಡಯಟ್ ಉಪನಿರ್ದೇಶಕಿ ಕೆ.ಎಂ ಸುನೀತಾ, ಜಂಟಿ ನಿರ್ದೇಶಕಿ ಸುಜಾತಾ, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಪೂರ್ಣಿಮಾ, ನಗರಾಭಿವೃಧ್ದಿ ಪ್ರಾಧಿಕಾರ ಆಯುಕ್ತರು ನಾಗರತ್ನ, ಹೋಮ್ ಗಾರ್ಡ್ ಅಧಿಕಾರಿ ನಜ್ಹೀಮ್ ತಾಜ್, ಮಹಿಳಾ ಮತ್ತು ಮಕ್ಕಳಾ ಅಭಿವೃಧ್ದಿ ಇಲಾಖೆಯ ಎಲ್ಲಾ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿ ಮತ್ತು ಸಹಾಯಕ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಮಹಿಳಾ ಮೇಲ್ವಿಚಾರಕರು, ಎಲ್ಲಾ ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರು, ಮತ್ತು ಹಲವಾರು ಸಂಘ ಸಂಸ್ಥೆಯ ಮುಖ್ಯಸ್ಥರು ಉಪಸ್ಥಿತರಿದ್ದರು.
International Women’s Day

Related posts

ಪರಿಸರವನ್ನು ಉಳಿಸಿ-ಬೆಳಸಿ ಕಾಪಾಡುವುದು ಎಲ್ಲರ ಕರ್ತವ್ಯ

Team Suddigara

ಸದ್ಗುಣ ಸಚ್ಚಾರಿತ್ರ್ಯದಿಂದ ಬದುಕು ಶ್ರೀಮಂತಗೊಳ್ಳಬೇಕು

Team Suddigara

ಅಪ್ಪ ಸತ್ತಿದ್ದು ಗೊತ್ತೇ ಇಲ್ಲ-ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಗಳು

Team Suddigara

Leave a Comment