May 18, 2026
Suddigaralive News
ಕ್ರೈಂಚಿಕ್ಕಮಗಳೂರುಜಿಲ್ಲಾ ಸುದ್ದಿತಂತ್ರಜ್ಞಾನತಾಲೂಕು

ಬೈಕ್ ಕಳ್ಳತನ ಆರೋಪಿ ಬಂಧನ

ಚಿಕ್ಕಮಗಳೂರು: ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ಆತನಿಂದ ೧೦.೫೦ಲಕ್ಷ ರೂ. ಮೌಲ್ಯದ ಹನ್ನೊಂದು ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ನಗರದ ನಯಾಜ್ ಪಾಷ ಎಂಬುರು ಬೈಕ್ ಕಳ್ಳತನವಾಗಿದ್ದು, ಅವರು ನೀಡಿದ ದೂರಿನನ್ವಯ ಕಾರ್ಯಪ್ರವೃತ್ತರಾದ ಪೊಲೀಸರು ಹಾಸನ ಹುಣಸಿನಕೆರೆ ನಿವಾಸಿ ಸೈಯದ್ ಇಮ್ಹಾದ್ (೨೩) ಈತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಹನ್ನೊಂದು ಬೈಕ್‌ಗಳನ್ನು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

ಬಂಧಿತನಿಂದ ಕಳ್ಳತನವಾಗಿದ್ದ ಹನ್ನೊಂದು ಬೈಕ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಇವುಗಳ ಪೈಕಿ ಆರು ಬೈಕ್‌ಗಳು ಚಿಕ್ಕಮಗ ಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ದೂರು ದಾಖಲಾಗಿದ್ದು ಅವುಗಳಿಗೆ ಸಂಬಂಧಿಸಿದ್ದಾಗಿವೆ. ಒಂದು ಬೈಕ್‌ಗಳು ಬೆಂಗಳೂರು ಶೇಷಾದ್ರಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ್ದಾಗಿದೆ.

ಉಳಿದಂತೆ ನಾಲ್ಕು ಬೈಕ್‌ಗಳು ಬೆಂಗಳೂರು ಒಂದು ಮೈಸೂರು ಒಂದು, ಹಾಸನ ಹೊಳೆನರಸೀಪುರ ಪಟ್ಟಣ ವ್ಯಾಪ್ತಿಯ ಒಂದು, ಒಂದು ಬೈಕ್ ಬೇಲೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದ್ದಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಪೊಲೀಸ್ ಸಿಬ್ಬಂದಿಗಳ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|ವಿಕ್ರಮ್ ಅಮಟೆ ಶ್ಲಾಘೀಸಿದ್ದಾರೆ.

Bike theft suspect arrested

 

Related posts

ಎಸ್ಟಿ ಒಳಮೀಸಲು ಜಾರಿಗೆ ಶಾಂತರಾಂ ಸಿದ್ದಿ ಆಗ್ರಹ

Team Suddigara

ಜಿಲ್ಲೆಯಾದ್ಯಂತ 52 ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಜ್ಜು

Team Suddigara

ಪೊಲೀಸ್‌ ಇಲಾಖೆಯಿಂದ “ಮನೆಮನೆಗೆ ಪೊಲೀಸ್” ನೂತನ ಕಾರ್ಯಕ್ರಮ

Team Suddigara

Leave a Comment