May 18, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಅನ್ನಬಾಗ್ಯ ಯೋಜನೆಯಡಿ ಹಣದ ಬದಲು ೫ ಕೆ.ಜಿ ಹೆಚ್ಚುವರಿ ಅಕ್ಕಿ

ಚಿಕ್ಕಮಗಳೂರು: ರಾಜ್ಯ ಸರ್ಕಾರ ತನ್ನ ಮಾತಿನಂತೆ ಅನ್ನ ಬಾಗ್ಯ ಯೋಜನೆಯಡಿ ಫೆಬ್ರವರಿ ಮತ್ತು ಮಾರ್ಚ್‌ನಿಂದ ಹಣದ ಬದಲಾಗಿ ೫ ಕೆ.ಜಿ ಹೆಚ್ಚುವರಿ ಅಕ್ಕಿಯನ್ನು ನೀಡಲು ಮುಂದಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷ ಶಿವನಾಂದ ಸ್ವಾಮಿ ಹೇಳಿದರು.
ಚಿಕ್ಕಮಗಳೂರು ಉಪವಿಭಾಗದ ಉಪವಿಭಾಗಾಧಿಕಾರಿಗಳ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಇಂದು ಅವರು ಮಾತನಾಡಿ  ತಾಂತ್ರಿಕ ಕಾರಣದಿಂದ ಒಂದು ವರ್ಷದಿಂದ ೫ ಕೆ.ಜಿ ಅಕ್ಕಿಯ ಬದಲು ಹಣವನ್ನು ನೇರವಾಗಿ  ಫಲಾನುಭವಿಗಳ ಖಾತೆಗೆ ವರ್ಗಾಹಿಸಲಾಗುತ್ತಿತು. ಆದರೆ ಕಳೆದ ೨ ತಿಂಗಳಿಂದ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಒಡಂಬಡಿಕೆಯಲ್ಲಿ ಅಕ್ಕಿ ದಾಸ್ತಾನು ಸಿಗುತ್ತಿರುವ ಕಾರಣದಿಂದ ಫೆಬ್ರವರಿ ತಿಂಗಳಿಂದ ಹಣದ ಬದಲು ಅಕ್ಕಿಯನ್ನು ನೀಡಲು ರಾಜ್ಯಾದ್ಯಂತ ಮುಂದಾಗಿದ್ದು ನಮ್ಮ ಜಿಲ್ಲೆಯಲ್ಲಿ ೧೦ ಕೆ.ಜಿ ಅಕ್ಕಿ ನೀಡಲಾಗುತ್ತದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ೨ ಲಕ್ಷ ೪೦ ಸಾವಿರ ಬಿ.ಪಿ.ಎಲ್ ಕಾರ್ಡುಗಳಿದ್ದು, ಈ ಕಾರ್ಡ್‌ಗಳಲ್ಲಿನ ಒಟ್ಟು ಫಲಾನುಭವಿಗಳು ೭ ಲಕ್ಷ ೭೪ ಸಾವಿರದ ೪೧೮ ಬಿ.ಪಿ.ಎಲ್ ಕಾರ್ಡ್ ಫಲಾನುಭವಿಗಳು ಹಾಗೂ ಅಂತ್ಯೋದಯ ಅರವತ್ತೆಂಟು ಸಾವಿರದ ಮೂನ್ನೂರ ನಾಲ್ವತೊಂಭತ್ತು ಫಲಾನುಭವಿಗಳಿಗೆ ೫ ಕೆ.ಜಿ ಅಕ್ಕಿಯನ್ನು ನೀಡಲಾಗುತಿದ್ದು,  ಉಳಿದ  ಪಡಿತರರಿಗೆ ರೂ ೧೭೫ ಗಳನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತಿತ್ತು. ಫೆಬ್ರವರಿ ಮತ್ತು ಮಾರ್ಚ್  ಮಾಹೆಯ ಹಣದ ಬದಲು ಪ್ರತಿ ಒಬ್ಬರಿಗೆ ೧೫ ಕೆ.ಜಿ ಅಕ್ಕಿಯನ್ನು ಫಲಾನುಭವಿಗಳಿಗೆ ಕೊಡಲಾಗುತ್ತದೆ ಎಂದರು.
ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಸರಬರಾಜು ಮತ್ತು ದಾಸ್ತಾನು ಕೊರತೆ ಕಂಡುಬರುವುದಿಲ್ಲ ನ್ಯಾಯ ಬೆಲೆ ಅಂಗಡಿಯವರು ಇಂತಹ ಕಾರಣ ನೀಡಿದರೆ ಜನರು ನಂಬಬಾರದು ಎಂದು ಹೇಳಿದರು. ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಪಡೆದ ಫಲಾನುಭವಿಗಳು ಅಕ್ಕಿಯನ್ನು  ಮಾರುಕಟ್ಟೆಯಲ್ಲಿ ಮಾರಾಟ ಮಾಡುವಂತ್ತಿಲ್ಲ ಇಂತಹ ಘಟನೆಗಳು ಕಂಡುಬಂದಲ್ಲಿ ಅಂತವರ ಕಾರ್ಡ್‌ಗಳನ್ನು ರದ್ದು ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಚಿಕ್ಕಮಗಳೂರು ಉಪವಿಭಾಗದ ಉಪವಿಭಾಗಾಧಿಕಾರಿ ರಶ್ಮಿ ಹಾಗೂ ಗ್ಯಾರಂಟಿ ಯೋಜನೆಗಳ ಸಮಿತಿ ಸದಸ್ಯರು ಹಾಜರಿದ್ದರು.
5 kg additional rice instead of money under Annabagya scheme

Related posts

ಪರಿಸರವನ್ನು ಉಳಿಸಿ-ಬೆಳಸಿ ಕಾಪಾಡುವುದು ಎಲ್ಲರ ಕರ್ತವ್ಯ

Team Suddigara

ಮುಂಬರುವ ಜಿ.ಪಂ-ತಾ.ಪಂ ಚುನಾವಣೆಗೆ ಆಮ್ ಅದ್ಮಿ ಪಕ್ಷ ಸಿದ್ಧತೆ

Team Suddigara

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರ್ಜರಿ ರೋಡ್ ಷೋ:

Team Suddigara

Leave a Comment