June 15, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಗೃಹಬಳಕೆ ವಸ್ತುಗಳ ದರ ಕಡಿಮೆ ಮಾಡಿ ಪುಣ್ಯಕಟ್ಟಿಕೊಳ್ಳಿ

ಚಿಕ್ಕಮಗಳೂರು: : ರಾಜ್ಯಸರ್ಕಾರ ಅಸ್ತತ್ವಕ್ಕೆ ಬಂದ ನಂತರ ಎಲ್ಲಾ ದರಗಳು ಹೆಚ್ಚಾಗುತ್ತಿವೆಯೇ ಹೊರತು ಇಳಿಮುಖ ಕಂಡೇ ಇಲ್ಲ. ಹಾಲಿನ ದರ, ವಿದ್ಯುತ್ ಮಿನಿಮಮ್ ಶುಲ್ಕ ಹೆಚ್ಚಳವಾಗಿದೆ. ಏರಿಸಿ ಪಾಪ ಕಟ್ಟಿಕೊಳ್ಳುವುದಕ್ಕಿಂತ ಇಳಿಸಿ ಪುಣ್ಯ ಕಟ್ಟಿಕೊಳ್ಳಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.

ಅವರು ಇಂದು ತಾಲ್ಲೂಕು ಅತ್ತಿಗುಂಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ
ಸುಮಾರು ೧ ಕೋಟಿ ರೂ ವೆಚ್ಚದಲ್ಲಿ ಆಡಳಿತ ಕಟ್ಟಡದ ನಿರ್ಮಾಣದ ಕಾರ್ಯಕ್ಕೆ ಮುಂದಾಗಿರುವುದನ್ನು ಶ್ಲಾಘಿಸಿದ ಅವರು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿಪ್ರಕಾಶ್ ಅವರು ೫ ಲಕ್ಷ ರೂ ಅನುದಾನವನ್ನು ಎರಡು ಕಂತುಗಳಲ್ಲಿ ಕೊಡುವುದಾಗಿ ಭರವಸೆ ನೀಡಿದ್ದಾರೆ ಎಂದರು.

ಈ ಕಟ್ಟಡ ಜನರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಆಡಳಿತ ಕಚೇರಿ ಮತ್ತು ಬ್ಯಾಂಕಿನ ವಹಿವಾಟುಗಳನ್ನು ಮುಂದುವರೆಸಲು ಉತ್ತಮ ರೀತಿಯಲ್ಲಿ ಕಾಮಗಾರಿ ಕೈಗೊಂಡು ಗುಣಮಟ್ಟದ ಕಟ್ಟಡ ನಿರ್ಮಾಣವಾಗಲಿ ಎಂದು ಶುಭಹಾರೈಸಿದರು.

ಐಡಿ ಪೀಠ ಪಂಚಾಯಿತಿಗೆ ನೀಡಿದ್ದ ಅನುದಾನ ವಾಪಾಸ್ ಪಡೆದಿರುವುದರಿಂದ ಕಾಮಗಾರಿ ಸ್ಥಗಿತವಾಗಿದೆ. ಇದು ಕಾರ್ಯರೂಪಕ್ಕೆ ಬಂದಿದ್ದರೆ ಪ್ರವಾಸೋದ್ಯಮಕ್ಕೆ ಹೆಚ್ಚು ಒತ್ತು ಸಿಗುತ್ತಿತ್ತು. ಪ್ರವಾಸೋದ್ಯಮದಿಂದಲೇ ಈ ಭಾಗದಲ್ಲಿ ನೂರಾರು ಜನರು ಬದುಕು ಕಟ್ಟಿಕೊಳ್ಳಲು ನೆರವಾಗಿದ್ದು, ೨೦೧೯-೨೦ ರಲ್ಲಿ ಹಾಕಿದ್ದ ಈ ಅನುದಾನ ವಾಪಾಸ್ ಹೋಗಿರುವುದನ್ನು ಮರಳಿ ನೀಡಬೇಕೆಂದು ಆಗ್ರಹಿಸಿದರು.

ವಿದ್ಯುತ್ ಕಣ್ಣುಮುಚ್ಚಾಲೆ ಬಗ್ಗೆ ಸಾರ್ವಜನಿಕರು ದೂರು ಸಲ್ಲಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವರೇ ಇಂಧನ ಸಚಿವರಾಗಿರುವುದರಿಂದ ಬೇಸಿಗೆಯಲ್ಲಿ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡಬೇಕು ಎಂದು ಒತ್ತಾಯಿಸಿದ ಅವರು, ಮಳೆಗಾಲದಲ್ಲಿ ಮರ ಬಿದ್ದಿದೆ ಎಂಬ ಕಾರಣ, ಬೇಸಿಗೆಯಲ್ಲಿ ಓಲ್ಟೇಜ್, ಪವರ್ ಸಾಕಾಗುವುದಿಲ್ಲ ಎಂಬ ಸಬೂಬು ಹೇಳಲಾಗುತ್ತಿದೆ. ವಿದ್ಯುತ್ ಬಿಲ್ ದರ ಮಾತ್ರ ಏರಿಕೆಯಾಗುತ್ತಿದೆ ಎಂದು ಆರೋಪಿಸಿದರು.

ಈ ಭಾಗಕ್ಕೆ ಸುಸಜ್ಜಿತ ಬಸ್ ಕೊಡಬೇಕು, ತಳ್ಳುಮಾಡಲ್ ಬಸ್ ನೀಡಿರುವುದು ಜನರ ಬದುಕಿನ ಜೊತೆ ಚೆಲ್ಲಾಟವಾಡಿದಂತಾಗುತ್ತದೆ. ಅತ್ತಿಗುಂಡಿ ಶಾಲೆಯ ಶೌಚಾಲಯ ದುರಸ್ಥಿಯನ್ನು ಮೇ ಅಂತ್ಯದೊಳಗೆ ಪೂರ್ಣಗೊಳಿಸಬೇಕೆಂದು ಒತ್ತಾಯಿಸಿದರು.

ಮಾಜಿ ಜಿ.ಪಂ ಸದಸ್ಯೆ ಜೆಸಂತ ಅನಿಲ್‌ಕುಮಾರ್ ಮಾತನಾಡಿ, ಬಹು ವರ್ಷಗಳ ಕನಸಾಗಿದ್ದ ಕೃಷಿಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಇಂದು ಶಂಕುಸ್ಥಾಪನೆ ನೆರವೇರಿಸುವ ಮೂಲಕ ನನಸಾಗಿದೆ ಎಂದು ಹೇಳಿದರು.

ಈ ಕೃಷಿಪತ್ತಿನ ಸಹಕಾರ ಸಂಘಕ್ಕೆ ನೂತನವಾಗಿ ಆಯ್ಕೆಯಾಗಿರುವ ಅಧ್ಯಕ್ಷರು, ಪದಾಧಿಕಾರಿಗಳು ನೂತನ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಿ ಉತ್ತಮ ಗುಣಮಟ್ಟದ ಕಟ್ಟಡ ನಿರ್ಮಾಣಕ್ಕೆ ಕೈಜೋಡಿಸಬೇಕೆಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಜಯ ಕರ್ನಾಟಕ ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್, ಮುಖಂಡ ಮಂಜು, ಸಂಘದ ಅಧ್ಯಕ್ಷ ಚಂಗಪ್ಪ ಬಿ.ಆರ್, ಉಪಾಧ್ಯಕ್ಷ ಸೈಯದ್ ಮುಕ್ತಿಯಾರ್ ಪಾಷ, ನಿರ್ದೇಶಕರುಗಳಾದ ಶಿವಕುಮಾರ್, ಧರ್ಮೇಶ್, ಹರೀಶ್, ಭಾಗ್ಯ, ಕಮಲ, ಶಾಂತಕುಮಾರ್, ಈಶ್ವರ, ಜಗದೀಶ್, ಅಣ್ಣು, ಅಬೀಬುಲ್ಲಾಖಾನ್ ಮತ್ತಿತರರು ಉಪಸ್ಥಿತರಿದ್ದರು.

Reduce the price of household items and earn merit.

Related posts

ದೇಶ-ಧರ್ಮವಿದ್ದರೆ ನೆಮ್ಮದಿ ಬದುಕಿಗೆ ನಾಂದಿ

Team Suddigara

ಮಾದಕ ವಸ್ತುಗಳ ಸೇವನೆ ಆರೋಗ್ಯದ ಮೇಲೆ ದುಷ್ಪರಿಣಾಮ 

Team Suddigara

ನೆಲ್ಲೂರು ಮಠದ ವಿವಾದ ಸ್ಥಳದ ಕಟ್ಟಡ ತೆರವು – ಬಿಗುವಿನ ವಾತಾವರಣ

Team Suddigara

Leave a Comment