May 18, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ವೃತ್ತಿಪರ ಕುಶಲಕರ್ಮಿ ಯೋಜನೆಯಡಿ ವಿವಿಧ ಸವಲತ್ತುಗಳ ವಿತರಣೆ

ಚಿಕ್ಕಮಗಳೂರು: ರಾಜ್ಯಸರ್ಕಾರ ಹಿಂದುಳಿದವರ, ಬಡವರ, ಶ್ರಮಿಕರ, ಕಾರ್ಮಿಕರ, ರೈತರ ಪರವಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದು ಅನುಷ್ಠಾನ ಮಾಡಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು.

ಅವರು ಇಂದು ಜಿಲ್ಲಾ ಗ್ರಾಮೀಣ ಕೈಗಾರಿಕಾ ಉಪನಿರ್ದೇಶಕರ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ವೃತ್ತಿಪರ ಕುಶಲಕರ್ಮಿ ಯೋಜನೆಯಡಿ ವಿವಿಧ ಸೌಲತ್ತುಗಳನ್ನು ವಿತರಿಸಿ ಮಾತನಾಡಿದರು.

ರಾಜ್ಯಸರ್ಕಾರ ಕುಶಲಕರ್ಮಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಪ್ರತೀ ಫಲಾನುಭವಿಗೆ ೮ ಸಾವಿರ ರೂ ಮೌಲ್ಯದ ಗಾರೆ ಕೆಲಸ, ಮರಗೆಲಸ, ಮಡಿವಾಳ, ಸವಿತಾ ಸಮಾಜ, ಕಮ್ಮಾರಿಕೆ ಮುಂತಾದ ಕಸುಬಿನ ಉಪಕರಣಗಳನ್ನು ಚಿಕ್ಕಮಗಳೂರು ತಾಲ್ಲೂಕಿನ ೧೬೬ ಮಂದಿ ಫಲಾನುಭವಿಗಳಿಗೆ ೧೩೨೮೦೦೦ ರೂ ಮೌಲ್ಯದ ಉಪಕರಣಗಳನ್ನು ವಿತರಿಸುತ್ತಿರುವುದಾಗಿ ಹೇಳಿದರು.

ಇಂದು ಈ ಸೌಲತ್ತುಗಳನ್ನು ಪಡೆದ ಫಲಾನುಭವಿಗಳು ಇದರ ಸದುಪಯೋಗವನ್ನು ಪಡೆದುಕೊಂಡು ಎಲ್ಲರೂ ಆರ್ಥಿಕವಾಗಿ ಸದೃಢರಾಗುವ ಜೊತೆಗೆ ವೃತ್ತಿಪರ ಗೌರವವನ್ನು ಹೆಚ್ಚಿಸಿಕೊಳ್ಳಬೇಕೆಂದು ಕರೆನೀಡಿದರು.

ಮನುಷ್ಯನಿಗೆ ದೇಹದ ಅಂಗಾಂಗಗಳು ಎಷ್ಟು ಮುಖ್ಯವೋ ಅದೇ ರೀತಿ ದೇಶದಲ್ಲಿ ಜನಿಸಿದ ಪ್ರತಿಯೊಬ್ಬ ವ್ಯಕ್ತಿ ಒಂದಲ್ಲಾ ಒಂದು ರೀತಿಯ ವೃತ್ತಿಯನ್ನು ಕೈಗೊಂಡಾಗ ಮಾತ್ರ ಅದೊಂದು ಸಮಗ್ರ ದೇಶ, ರಾಜ್ಯ, ಊರು ಆಗಲಿದೆ ಎಂದು ಹೇಳಿದರು.

ಪ್ರತಿಯೊಬ್ಬರೂ ಕೈಗೊಳ್ಳುವ ಅವರದೇ ಆದ ವೃತ್ತಿ ಕೌಶಲ್ಯಗಳು ಶ್ರೇಷ್ಟವಾಗಿದ್ದು, ತಮ್ಮ ವೃತ್ತಿಯಲ್ಲಿ ದುಡಿದು ಗಳಿಸಿದ ಹಣವನ್ನು ಅನಾವಶ್ಯಕವಾಗಿ ವ್ಯಯ ಮಾಡದೆ ನಿಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಬಳಸಿದಾಗ ಅತ್ಯಂತ ಶ್ರೇಷ್ಟವಾಗುತ್ತದೆ ಎಂದು ತಿಳಿಸಿದರು.

ಮದುವೆಯನ್ನು ವಿಜೃಂಭಣೆಯಿಂದ ಅದ್ದೂರಿಯಾಗಿ ಮಾಡದಿದ್ದರೂ ಪರವಾಗಿಲ್ಲ ಇದಕ್ಕೆ ಬಳಸುವ ಹಣವನ್ನು ಮನೆಯನ್ನು ನಿರ್ಮಿಸಿಕೊಳ್ಳಿ ಎಂದು ಸಲಹೆ ನೀಡಿದ ಅವರು, ಬಡ ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರ ಹಲವು ರೀತಿಯ ಸೌಲಭ್ಯಗಳನ್ನು ನೀಡುತ್ತಿದ್ದು, ಅವುಗಳ ಸದುಪಯೋಗ ಪಡೆದುಕೊಂಡರೆ ಕಾರ್ಮಿಕರ ಮಕ್ಕಳ ಭವಿಷ್ಯ ಉಜ್ವಲಗೊಳ್ಳುತ್ತದೆ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸಿ.ಎಂ. ಮಹೇಶ್ ಕುಮಾರ್, ಗ್ರಾಮೀಣ ಕೈಗಾರಿಕೆಗಳ ಉಪನಿರ್ದೇಶಕ ಎನ್. ಚಂದ್ರಶೇಖರ, ಕೈಮಗ್ಗ ಮತ್ತು ಜವಳಿ ಇಲಾಖೆ ಸಹಾಯಕ ನಿರ್ದೇಶಕ ಇ.ಇ ಅಶೋಕ್ ಹಾಗೂ ಗ್ರಾಮೀಣ ಕೈಗಾರಿಕೆ ಇಲಾಖೆ ಸಿಬ್ಬಂದಿ ಮತ್ತು ಜಿಲ್ಲಾ ಕೈಗಾರಿಕಾ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Distribution of various benefits under the Professional Craftsman Scheme

Related posts

ಎನ್ ಆರ್ ಪುರ ಮುಖ್ಯ ರಸ್ತೆ ಅಭಿವೃದ್ದಿಗೆ 60 ಕೋಟಿ ಮಂಜೂರು ಸಚಿವ ಸಂಪುಟ ಅನುಮೋದನೆ

Team Suddigara

ಸರ್ಕಾರಿ ಶಾಲಾ-ಕಾಲೇಜುಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಸರ್ಕಾರ ಬದ್ಧ

Team Suddigara

ಜೈಭೀಮ್ ವ್ಯಾಯಮ ಶಾಲೆ ಸದ್ಭಳಕೆಯಾಗಲಿ

Team Suddigara

Leave a Comment