May 18, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಸೀತಾಳಯ್ಯನಗಿರಿ-ಮುಳ್ಳಯ್ಯನಗಿರಿ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧ

ಚಿಕ್ಕಮಗಳೂರು: ತಾಲ್ಲೂಕಿನ ಸೀತಾಳಯ್ಯನಗಿರಿಯಿಂದ ಮುಳ್ಳಯ್ಯನಗಿರಿವರೆಗಿನ ರಸ್ತೆಗೆ ಕಾಂಕ್ರೀಟೀಕರಣ ಹಾಗೂ ಮೋರಿ ನಿರ್ಮಾಣ ಕಾಮಗಾರಿ ನಡೆಯಲಿದ್ದು, ಈ ರಸ್ತೆಯಲ್ಲಿ ಎರಡು ತಿಂಗಳ ಕಾಲ ಎಲ್ಲಾ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಈ ರಸ್ತೆಯ ಭಾಗವು ಅತ್ಯಂತ ಕಿರಿದಾಗಿದ್ದು, ಪ್ರವಾಸಿ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ರಸ್ತೆಯಲ್ಲಿ ಸಂಚರಿಸುತ್ತಿರುವುದರಿಂದ ಪ್ರಸ್ತಾಪಿತ ರಸ್ತೆಯ ಅಗಲೀಕರಣ ಹಾಗೂ ಉನ್ನತೀಕರಣ ಅವಶ್ಯಕವಾಗಿದ್ದು, ಸೀತಾಳಯ್ಯನಗಿರಿಯಲ್ಲಿರುವ ದೇವಸ್ಥಾನದಿಂದ ಮುಳ್ಳಯ್ಯನಗಿರಿ ತುದಿಯವರೆಗೂ ಸಂಪರ್ಕಿಸುವ ರಸ್ತೆಯನ್ನು ಅಭಿವೃದ್ಧಿಪಡಿಸಬೇಕಾಗಿದೆ ಎಂದು ಉಪ ವಿಭಾಗಾಧಿಕಾರಿಗಳು ಸಲ್ಲಿಸಿದ ವರದಿ ಹಾಗೂ ಹೆಚ್ಚಾಗಿ ಏರಿಳಿತಗಳಿಂದ ಕೂಡಿರುವ ಈ ರಸ್ತೆಯಲ್ಲಿ ಪ್ರಸ್ತುತ ಮೋರಿ ನಿರ್ಮಾಣದಂತಹ ಕಾಮಗಾರಿಗಳನ್ನು ಕೈಗೊಳ್ಳುವಾಗ ರಸ್ತೆಯನ್ನು ಅಗೆಯಬೇಕಾದ ಅನಿವಾರ್ಯತೆ ಇರುವುದರಿಂದ ವಾಹನ ಸಂಚಾರವನ್ನು ನಿಷೇಧಿಸುವಂತೆ ಲೋಕೋಪಯೋಗಿ ಇಲಾಖೆಯ ಚಿಕ್ಕಮಗಳೂರು ವಿಭಾಗದ ಕಾರ್ಯಪಾಲ ಇಂಜಿನಿಯರ್ ಸಲ್ಲಿಸಿದ ಕೋರಿಕೆ ಆಧರಿಸಿ ಜಿಲ್ಲಾಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.

ಈಗಾಗಲೇ ಜಿಲ್ಲಾ ಪೊಲೀಸ್ ಅಧೀಕ್ಷಕರು ಈ ರಸ್ತೆಯಲ್ಲಿ ಎರಡು ತಿಂಗಳುಗಳ ಕಾಲ ವಾಹನ ಸಂಚಾರ ನಿಷೇಧಿಸಲು ಯಾವುದೇ ಅಭ್ಯಂತರವಿಲ್ಲ. ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಈ ಸಂಬಂಧ ವರದಿ ತರಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಮಾರ್ಚ್ ೧೫ ರಿಂದಲೇ ಈ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದ್ದು, ಒಟ್ಟು ಎರಡು ತಿಂಗಳುಗಳ ಕಾಲ ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ

Vehicular traffic banned on Seethalaiyanagiri-Mullaiyanagiri road

Related posts

ಸ್ವಚ್ಚತೆ ಕುರಿತು ಅರಿವು ಮೂಡಿಸುವುದು ಸ್ವಚ್ಚ ಭಾರತ್ ಮಿಷನ್ ಉದ್ದೇಶ

Team Suddigara

ಆ.3 ರಂದು ‘ಲಕ್ಷ್ಮಣ್ ತುಕಾರಾಂ ಗೋಲೆ’ ನಾಟಕ ಪ್ರದರ್ಶನ

Team Suddigara

ಬುಡಕಟ್ಟು ಜನಾಂಗ ಶಿಕ್ಷಣ-ಆರೋಗ್ಯದತ್ತ ಗಮನಹರಿಸಿ

Team Suddigara

Leave a Comment