ಚಿಕ್ಕಮಗಳೂರು: ಕರ್ನಾಟಕವನ್ನು ದೇಶದಲ್ಲೇ ನಂಬರ್ ಓನ್ ಭ್ರಷ್ಟ ಸರ್ಕಾರವನ್ನಾಗಿ ಮಾಡಿರುವ ಕೀರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ಮಾಡಿರುವ ಕಮಿಷನ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದರು. ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಅವರೇ ರಾಜ್ಯ ಭ್ರಷ್ಟಾಚಾರದಲ್ಲಿ ನಂ.೧ ಎಂದು ಸರ್ಟಿಫಿಕೇಟ್ ನೀಡಿದ್ದಾರೆ ಎಂದು ಹೇಳಿದರು.
ಅಧಿಕಾರಕ್ಕಾಗಿ ೪೦ ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಹಿಂದೆ ಕಾಂಗ್ರೆಸ್ಸಿಗರೇ ಬಿಜೆಪಿ ಸರ್ಕಾರದ ಮೇಲೆ ಅಪಪ್ರಚಾರ ನಡೆಸಿದ್ದರು. ಆದರೆ ಈಗ ಇಡೀ ದೇಶದಲ್ಲಿ ೮೦ ಪರ್ಸೆಂಟ್ ಭ್ರಷ್ಟಾಚಾರದ ಸರ್ಕಾರ ಇದ್ದರೆ ಅದು ಕರ್ನಾಟಕ ಸರ್ಕಾರ ಮಾತ್ರ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಜಾತಿ ಗಣತಿ ಕುರಿತು ಪ್ರತಿಕ್ರಿಯೆ ನೀಡಿದ ವಿಜಯೇಂದ್ರ, ಜಾತಿ ಗಣತಿಯನ್ನು ಸಿಎಂ ಸಿದ್ದರಾಮಯ್ಯ ಅವರು ಗೊಂಬೆ ಆಟದಂತೆ ಮಾಡಿಕೊಂಡಿದ್ದಾರೆ. ಕುರ್ಚಿ ಅಲುಗಾಡಿದಾಗ, ಸರ್ಕಾರಕ್ಕೆ ಗಂಡಾAತರ ಬಂದಾಗ ಜಾತಿ ಗಣತಿ ಬೆದರು ಗೊಂಬೆಯಾಗುತ್ತದೆ. ದೇಶದಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಭ್ರಷ್ಟ ಸರ್ಕಾರ ಎಂದು ಪ್ರಚಾರವಾಗಿದೆ. ವಾಲ್ಮೀಕಿ, ಮೂಡಾ ಹಗರಣ ಸೇರಿ ಕುರ್ಚಿ ಅಲುಗಾಡಿದಾಗ ಜನಗಣತಿ ವಿಚಾರ ಮುನ್ನೆಲೆಗೆ ಬರುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
Karnataka is the No. 1 corrupt government in the country.

Leave a Reply