May 16, 2025
Suddigaralive News
ಅಜ್ಜಂಪುರಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕುರಾಜಕೀಯರಾಜ್ಯ

ಗ್ಯಾರಂಟಿ ಯೋಜನೆಯಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಪ್ರಥಮ ಸ್ಥಾನ.

ಪಂಚ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶದಲ್ಲಿ ಜಿಲ್ಲಾಧ್ಯಕ್ಷ ಶಿವಾನಂದಸ್ವಾಮಿ ಹೇಳಿಕೆ.
ಅಜ್ಜಂಪುರ: ಯಾವುದೇ ಮಧ್ಯವರ್ತಿಗಳಿಲ್ಲದೆ ಪಂಚ ಗ್ಯಾರಂಟಿಗಳು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗುತ್ತಿದ್ದು ಇದರ ಪ್ರಯೋಜನ ಪಡೆಯುವಲ್ಲಿ ಚಿಕ್ಕಮಗಳೂರು ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ ಎಂದು ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷರಾದ ಎಂ,ಸಿ,ಶಿವಾನಂದಸ್ವಾಮಿ ತಿಳಿಸಿದರು.
ಶಿವನಿ ಗ್ರಾಮದಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶ,ವಿಶ್ವ ಮಹಿಳಾ ದಿನಾಚಾರಣೆ,ಮಹಿಳೆಯರಿಗೆ ಸೀಮಂತ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರತಿ ತಿಂಗಳು ಜಿಲ್ಲೆಗೆ ಗ್ಯಾರಂಟಿ ಯೋಜನೆಯಿಂದ ಸರಿ ಸುಮಾರು 70-80 ಕೋಟಿ ಹಣ ಸಂದಾಯವಾಗುತ್ತಿದೆ ಜಿಲ್ಲೆಯಲ್ಲಿ 10 ಲಕ್ಷಕ್ಕೂ ಅಧಿಕ ಜನರು ಒಂದಿಲ್ಲೋಂದು ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ ಇದೊಂದು ವಿಶೇಷ ಕಾರ್ಯಕ್ರಮವಾಗಿದ್ದು ಸ್ವಾವಲಂಬನೆಯ ಬದುಕಿಗೆ ಪೂರಕವಾಗಿದೆ ಎಂದರು.
ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿಯಾಗಲಿದೆ ಎಂದ ಪ್ರತಿಪಕ್ಷಗಳು ಕೂಡ ಬೇರೆ ರಾಜ್ಯದ ಚುನಾವಣೆಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿರುವುದು ಇದರ ಮಹತ್ವವನ್ನು ಹೆಚ್ಚಿಸಿದೆ ಎಂದರು.
ಕೆಡಿಪಿ ಸದಸ್ಯೆ ರಚನಾ ಶ್ರೀನಿವಾಸ್ ಮಾತನಾಡಿ ಜಿ,ಎಚ್,ಶ್ರೀನಿವಾಸ್ ಜನಹಿತಾ ಸೇವಾ ಟ್ರಸ್ಟ್ ಮೂಲಕ ತಾಲೂಕಿನಾದ್ಯಂತ ಗರ್ಭೀಣಿ ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮವನ್ನು ನಮ್ಮ ತಾಯಿಯವರಾದ ವಾಣಿ ಶ್ರೀನಿವಾಸ್ ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದು ಎಲ್ಲೆ ಮೆಚ್ಚುಗೆಗೆ ಪಾತ್ರವಾಗಿದೆ ತಾಲೂಕಿನಾದ್ಯಂತ ಸರ್ಕಾರದ ಸೇವೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸಲು ಕುಟುಂಬ ಸಮೇತರಾಗಿ ಅವಿರತ ಸೇವೆ ಸಲ್ಲಿಸುತ್ತಿದ್ದೆವೆ ನಮ್ಮ ಉದ್ದೇಶ ತರೀಕೆರೆ ಕ್ಷೇತ್ರ ರಾಜ್ಯದಲ್ಲಿಯೇ ಮಾದರಿಯಾಗಬೇಕು ಎಂಬುದು ಎಂದು ತಿಳಿಸಿದರು.
ಶಾಸಕ ಜಿ,ಎಚ್,ಶ್ರೀನಿವಾಸ್ ಮಾತನಾಡಿ ಕ್ಷೇತ್ರದಲ್ಲಿ ಭದ್ರ ಯೋಜನೆಯಿಂದ ಕೆರೆಗಳಿಗೆ ನೀರು ತುಂಬಿಸುವುದು ತರೀಕೆರೆ ಪಟ್ಟಣದಲ್ಲಿ ರಸ್ತೆ ಅಗಲೀಕರಣ, ಅಜ್ಜಂಪುರ ಖಾಸಗಿ ಬಸ್ ನಿಲ್ದಾಣ ಅಭಿವೃದ್ದಿ ಕಾರ್ಯ, ಹಳ್ಳಿಗಳಲ್ಲಿ ರಸ್ತೆ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಮೂಲಕ ಚುನಾವಣಾ ಪೂರ್ವ ನೀಡಿದ್ದ ಭರವಸೆಗಳನ್ನು ಈಡೆರುಸುತ್ತಿರುವುದಾಗಿ ತಿಳಿಸಿದರು.
ಗ್ಯಾಂರಂಟಿ ಯೋಜನೆಗಳ ಮೂಲಕ ಮಹಿಳೆಯರು ಸ್ವಾವಲಂಭಿ ಬದುಕು ಕಟ್ಟಿಕೊಳ್ಳಬೇಕಿದೆ ಆಗ ಈ ಯೋಜನೆಗೆ ನಿಜವಾದ ಅರ್ಥ ಬರಲಿದೆ ಎಂದರು.
ಇದೇ ಸಂಧರ್ಭದಲ್ಲಿ ಗ್ರಾ,ಪಂ, ಅಧ್ಯಕ್ಷರಾದ ಸವಿತಾ, ಅಜ್ಜಂಪುರ ತಾಲೂಕ್ ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಕುಮಾರ್,ತರೀಕೆರೆ ತಾಲೂಕ್ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ರಮೇಶ್, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಪಾಕಿಸ್ತಾನ ಮೋಸದಾಟಕ್ಕೆ ಆಟಲ್‌ಜೀ ತಕ್ಕ ಉತ್ತರ

Team Suddigara

ಶ್ರೀ ರಂಭಾಪುರಿ ಜಗದ್ಗುರುಗಳವರ ಎಪ್ರೀಲ್ ಮಾಹೆಯ ಪ್ರವಾಸ ವಿವರ

Team Suddigara

Why you should run your international company like a small business

admin

Leave a Comment

[t4b-ticker] [t4b-ticker]