June 14, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಮಾನವನ ದುರಾಸೆ-ಯಾಂತ್ರೀಕರಣ ಜೀವನದಿಂದ ಪ್ರಕೃತಿ ಮಲೀನ

ಚಿಕ್ಕಮಗಳೂರು: ಪ್ರಾಕೃತಿಕ ಹಾನಿ, ಧೂಮಕೇತು ಅಪ್ಪಳಿಸುವ ಅಥವಾ ಜ್ವಾಲಮುಖಿಗ ಳಿಂದ ವಿಶಾಲ ಭೂಮಿಗೆ ಹಾನಿ ಸಂಭವಿಸುತ್ತಿಲ್ಲ. ಮಾನವನ ದುರಾಸೆ ಹಾಗೂ ಯಂತ್ರೀಕರಣ ಜೀವನ ಶೈ ಲಿಯಿಂದ ಪ್ರಕೃತಿ ಮಲೀನಗೊಂಡು ಹಂತ ಹಂತವಾಗಿ ಕುಗ್ಗುತ್ತಿದೆ ಎಂದು ಪರಿಸರವಾದಿ ಡಾ|| ಸಂಜೀವ್ ಕುಲಕರ್ಣಿ ಹೇಳಿದರು.

ತಾಲ್ಲೂಕಿನ ತೊಂಗರಿಹಂಕಲ್ ಗ್ರಾಮದಲ್ಲಿ ಅಂತರಾಷ್ಟ್ರೀಯ ರೋಟರಿ ಜಿಲ್ಲೆ-೩೧೮೨ ಹಾಗೂ ರೋಟರಿ ಕಾಫಿಲ್ಯಾಂಡ್ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ಧ ಭೂಮಿಯನ್ನು ಸಂರಕ್ಷಿಸುವ ಕುರಿತು ಜಿಲ್ಲಾ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿಶಾಲ ಬ್ರಹ್ಮಾಂಡದ ಭೂಗರ್ಭದಲ್ಲಿ ಮಾತ್ರ ಜೀವಸಂಕುಲ ಸೃಷ್ಟಿ ಮತ್ತು ವಿಕಸನ ಹೊಂದಿವೆ. ಕಾಲ ಕ್ರಮೇಣ ಮನುಷ್ಯಪ್ರಬೇಧಗಳು ಶುರುವಾದರೂ ಪ್ರಾಕೃತಿಕ ಸಂಪತ್ತು ಏರುಪೇರಾಗಿಲ್ಲ. ಆದರೆ ಕಳೆದ ಮೂ ನ್ನೂರು ವರ್ಷಗಳಿಂದ ಮಾನವ ಆಧುನಿಕತೆಗೆ ಶರಣಾಗಿ ಅರಣ್ಯ ಸಂಪತ್ತನ್ನು ಸರ್ವ ನಾಶಗೊಳಿಸಿ ವಿಶ್ವನ್ನು ಅಳಿನಂಚಿನತ್ತ ಕೊಂಡೊಯ್ಯುತ್ತಿದ್ದಾನೆ ಎಂದು ಹೇಳಿದರು.

ಮೊಟ್ಟಮೊದಲು ಪ್ರಪಂಚದಲ್ಲಿ ಮಾನವ ಎರಡು ಕಾಲಿನಿಂದ ನಿಯಂತ್ರಣ ಕಂಡುಕೊಂಡನು, ಪ್ರಾಣಿ ಪ್ರಬೇಧಗಳು ಕಾಣಿಸಿದವು. ಒತ್ತಡವಿರದ ಪರಿಸರಸ್ನೇಹಿ ವಾತಾವರಣವು ನಿರ್ಮಾಣವಾಯಿತು. ಕಾಲ ಉರು ಳಿದಂತೆ ಮಾನವ ಯಾಂತ್ರೀಕರಣ ಸೃಷ್ಟಿಸಿ, ಕೆಲವೇ ಸಮಯದಲ್ಲಿ ತಂತ್ರಜ್ಞಾನ ಇಡೀ ಪ್ರಪಂಚವನ್ನು ಅತಿ ವೇಗವಾಗಿ ಆವರಿಸಿಕೊಂಡು ಭೂಗರ್ಭವನ್ನು ಸುಡುವಂತಾಯಿತು ಎಂದರು.

ವಿಪರೀತ ಪ್ಲಾಸ್ಟಿಕ್ ಬಳಕೆ, ವೈಯಕ್ತಿಕ ಲಾಭದ ಉದ್ದೇಶದಿಂದ ಅರಣ್ಯ ಸಂಪತ್ತು ನಾಶಮಾಡಿ ವಾಣಿ ಜ್ಯೀಕರಣಗೊಳಿಸಿ ಮನುಷ್ಯ ಭೂಸಿರಿಯನ್ನು ಅಲ್ಲಗೆಳೆದನು. ಯಾವುದೇ ತಂತ್ರಜ್ಞಾನ ಅಥವಾ ರಾಜಕೀ ಯ ದಿಂದ ಪರಿಸರವನ್ನು ಸರಿಪಡಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬ ನಾಗರೀಕರ ಕೈನಲ್ಲಿದೆ. ಹಚ್ಚಹಸಿನಿಂದ ಪರಿಸರ ಕಾಪಾಡುವುದು, ಜಲಮೂಲ ಉಳಿಸುವ ಕಾರ್ಯವಾಗಬೇಕಿದೆ ಎಂದರು.

ದೈನಂದಿನ ಸೇವಿಸುವ ಆಹಾರ ಉತ್ಪನ್ನಗಳು ಎಲ್ಲಿಂದ ಬರಲಿವೆ ಎಂಬ ಆತ್ಮಾವಲೋಕನದ ಪ್ರಶ್ನೆ ಮಾ ಡಿಕೊಳ್ಳಬೇಕು. ಫಲವತ್ತತೆ ಮಣ್ಣನ್ನು ಕಲುಷಿತಗೊಳಿಸುವ ಹಕ್ಕು ಯಾರಿಗೂ ಇಲ್ಲ. ಪರಿಸರ ಕಾಳಜಿ ಪ್ರತಿ ಯೊಬ್ಬರ ಹಕ್ಕು ಎಂಬ ಧ್ಯೇಯ ಸೂತ್ರಗಳನ್ನು ನಾಗರೀಕರು ಬದುಕಿನಲ್ಲಿ ಅಳವಡಿಸಿಕೊಂಡಾಗ ವಿಶಾಲ ಭೂಮಂಡಲ ಸುರಕ್ಷಿತವಾಗಿ ರಕ್ಷಿಸಬಹುದು ಎಂದು ಸಲಹೆ ಮಾಡಿದರು.

ಭೂರಕ್ಷಿಸುವ ಸಂಬಂಧ ರೋಟರಿ ಕಾಫಿಲ್ಯಾಂಡ್ ವಿಶೇಷ ಉಪನ್ಯಾಸ ಹಮ್ಮಿಕೊಂಡು ಕಾರ್ಯೋನ್ಮು ಖವಾಗಿವೆ. ಮಲೆನಾಡು ಪ್ರದೇಶ ಜಿಲ್ಲೆ ವಿಶಿಷ್ಟ ತಾಣವಾಗಿದ್ದು, ನೈಸರ್ಗಿಕವಾಗಿ ಸಂಪತ್ಪರಿತ ಭೌಗೋಳಿಕವಾ ಗಿ ವಿಶಾಲ ವಿಸ್ತೀರ್ಣ ಹೊಂದಿರುತ್ತದೆ. ಪಂಚನದಿಗಳ ಉಗಮ ಸ್ಥಾನವಾಗಿದ್ದು ಇಡೀ ರಾಜ್ಯಕ್ಕೆ ಜೀವ ಜಲದ ನೆಲೆಯಾಗಿರುವುದು ಹೆಮ್ಮೆಯ ಸಂಗತಿ ಎಂದರು.

ರೋಟರಿ ಜಿಲ್ಲಾ ಗವರ್ನರ್ ಸಿ.ಎ.ದೇವಾನಂದ್ ಪ್ರಾಸ್ತಾವಿಕವಾಗಿ ಮಾತನಾಡಿ ಭೂಸಿರಿ ಪ್ರಾಮುಖ್ಯತೆ, ಜವಾಬ್ದಾರಿ ಪ್ರತಿಯೊಬ್ಬ ಕರ್ತವ್ಯ ಪರಿಚಯಿಸುವ ಕಾರ್ಯಕ್ರಮ. ಹಸಿರು, ಮಣ್ಣು ಸಮಗ್ರವಾಗಿ ಬಳಸಿಕೊ ಳ್ಳಲು ರೋಟರಿ ಪ್ರೇರೇಪಿಸುತ್ತಿದೆ. ಸಂಪತ್ಪರಿತ ಭೂಮಿಯನ್ನು ಸಂರಕ್ಷಿಸುವ ಕುರಿತು ಎಲ್ಲರು ಕೈಜೋಡಿಸಬೇ ಕು ಎಂದು ಕಿವಿಮಾತು ಹೇಳಿದರು.

ಈಗಾಗಲೇ ರೋಟರಿ ೪೦೦ಕ್ಕೂ ಹೆಚ್ಚು ಸದಸ್ಯರನ್ನು ಹೊಸದಾಗಿ ಸೇರ್ಪಡೆಗೊಳಿಸಿ ಮುನ್ನೆಡೆ ಸಾಧಿಸು ತ್ತಿರುವುದು ಸಂತೋಷ ವಿಷಯ. ಈ ಶ್ರಮದ ಹಿಂದೆ ಪ್ರತಿಯೊಬ್ಬರ ಬಹಳಷ್ಟು ಕೆಲಸವಿದ್ದು ಮುಂದಿನ ದಿನ ಗಳಲ್ಲಿ ಇನ್ನಷ್ಟು ಹೆಚ್ಚಿನ ಸದಸ್ಯರನ್ನು ನೋಂದಾಯಿಸಿ ಸಾಮಾಜಿಕ ಕಾರ್ಯಗಳತ್ತ ಹೆಜ್ಜೆಹಾಕಬೇಕಿದೆ ಎಂ ದರು.

ಈ ಸಂದರ್ಭದಲ್ಲಿ ಮಂಗಳೂರು ಮೀನುಗಾರಿಕೆ ಕಾಲೇಜು ಮಾಜಿ ಡೀನ್ ಡಾ|| ಶಿವಕುಮಾರ್ ಮಗಲ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ರವೀಶ್ ಕ್ಯಾತನಬೀಡು, ರೋಟರಿ ಜಿಲ್ಲಾ ಸಲಹೆಗಾರ ಅಭಿನಂದನ್ ಎ.ಶೆಟ್ಟಿ, ಕಲಿಕೆ ಸಹಾಯಕ ಬಿ.ರಾಜರಾಂ ಭಟ್, ಸಹಾಯಕ ಗವರ್ನರ್ ನಾಸೀರ್ ಹುಸೇನ್, ರೋಟರಿ ಕಾಫಿಲ್ಯಾಂಡ್ ಅಧ್ಯಕ್ಷ ಪಿ.ತನೋಜ್‌ಕುಮಾರ್, ಕಾರ್ಯದರ್ಶಿ ನಾಗೇಶ್ ಕೆಂಜಿಗೆ, ಭೂಸಂರಕ್ಷ ಅಧ್ಯಕ್ಷ ಕೆ.ಬಿ.ಪ್ರಸನ್ನ, ಪದಾ ಧಿಕಾರಿಗಾಳದ ರಾಮದೇವ್ ಕಾಮತ್, ಎಂ.ಆನಂದ್ ಉಪಸ್ಥಿತರಿದ್ದರು.

Nature is polluted by human greed and mechanized life.

Related posts

ಗೋಹಂತಕರನ್ನು ಹದ್ದುಬಸ್ತಿನಲ್ಲಿಡುವ ಕೆಲಸವ ಹಿಂದೂ ಸಮಾಜ ಬರುತ್ತದೆ

Team Suddigara

ನಾಡಪ್ರಭು ಕೆಂಪೇಗೌಡರು ಮುಂದಾಲೋಚನೆಯ ಅಪ್ರತಿಮ ವ್ಯಕ್ತಿ

Team Suddigara

ಕಬ್ಬಿನ ದರ ಹೆಚ್ಚಳಕ್ಕೆ ಆಗ್ರಹಿಸಿ ರೈತ ಸಂಘ ಪ್ರತಿಭಟನೆ

Team Suddigara

Leave a Comment