May 18, 2026
Suddigaralive News
ಚಿಕ್ಕಮಗಳೂರುಜಿಲ್ಲಾ ಸುದ್ದಿತಾಲೂಕು

ಸಮೀಕ್ಷೆ ಸಂದರ್ಭದಲ್ಲಿ ಬಂಜಾರ/ಲಂಬಾಣಿ ಬರೆಸಲು ಸಲಹೆ

ಚಿಕ್ಕಮಗಳೂರು: ನ್ಯಾಯಮೂರ್ತಿ ಡಾ. ಹೆಚ್.ಎನ್ ನಾಗಮೋಹನ್ ದಾಸ್ ರವರ ಏಕಸದಸ್ಯ ವಿಚಾರಣಾ ಆಯೋಗದ ಶಿಫಾರಸ್ಸಿನಂತೆ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡಗಳ ಕುಟುಂಬದ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆ ಸಂದರ್ಭದಲ್ಲಿ ಸಮುದಾಯದ ಬಾಂಧವರು ಬಂಜಾರ, ಲಂಬಾಣಿ ಈ ಎರಡನ್ನು ಮಾತ್ರ ಮಾಹಿತಿ ನೀಡಬೇಕೆಂದು ಸಂಘದ ಕಾರ್ಯಾಧ್ಯಕ್ಷ ಬಿ.ಟಿ ಗಂಗಾಧರ ನಾಯಕ್ ಮನವಿ ಮಾಡಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆಯನ್ನು ಒಟ್ಟು ಮೂರ ಹಂತಗಳಲ್ಲಿ ನಡೆಸಲಾಗುತ್ತಿದ್ದು, ಮೊದಲನೇ ಹಂತ ಮೇ ೫ ರಿಂದ ೧೭ರ ವರೆಗೆ, ಎರಡನೇ ಹಂತ ಮೇ ೧೯ ರಿಂದ ೨೧, ಮೂರನೇ ಹಂತ ಮೇ ೧೯ ರಿಂದ ೨೩ರ ವರೆಗೆ ಮನೆ-ಮನೆ ಸಮೀಕ್ಷೆಯನ್ನು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನೆಡೆಸಲಾಗುತ್ತದೆ ಎಂದು ಹೇಳಿದರು.

ಜನ ಜಾತಿಗಣತಿಯಲ್ಲಿ ಜನಸಂಖ್ಯೆಗನುಗುಣವಾಗಿ ವರ್ಗೀಕರಣ ಮಾಡಿ ಒಳಮೀಸಲಾತಿ ನೀಡಬೇಕು, ಈ ಸಂಬಂಧ ಸಮೀಕ್ಷೆ ನೆಡೆಸುವ ಶಿಕ್ಷಕರಿಗೆ ತಮ್ಮ ಕುಟುಂಬದ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆಯ ಜೊತೆಗೆ ಸ್ಪಷ್ಟ ಸಮೀಕ್ಷಾ ವರದಿಗೆ ಲಂಬಾಣಿ, ಬಂಜಾರ ಎಂದು ಮಾಹಿತಿ ನೀಡಬೇಕು, ಭೂಮಿಯ ಒಡತನ, ಮನೆ ಆದಾಯ, ಮಾನವ ಅಭಿವೃದ್ಧಿ, ಸರ್ಕಾರದಿಂದ ಪಡೆದಿರುವ ಸೌಲಭ್ಯಗಳ ಬಗ್ಗೆ ಸಮಗ್ರ ಮಾಹಿತಿ ನೀಡಬೇಕೆಂದು ತಿಳಿಸಿದರು.

ಆಧಾರ್ ಸಂಖ್ಯೆ, ಆರ್.ಡಿ ನಂಬರ್ ಕಡ್ಡಾಯವಾಗಿ ನಮೂದಿಸಬೇಕು ಎಂದು ಒತ್ತಾಯಿಸಿದ ಅವರು ಸಮಾಜದ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಈ ಮಹತ್ ಕಾರ್ಯಕ್ಕೆ ಕೈ ಜೋಡಿಸಿ ಸಮುದಾಯದ ಪರವಾಗಿ ಜಿಲ್ಲಾ ಮಟ್ಟದ ತಾಂಡಗಳಲ್ಲಿ ಕಾರ್ಯ ನಿರ್ವಹಿಸುವಂತೆ ಮನವಿ ಮಾಡಿದರು.
ಈ ಸಂಬಂದ ಸಮುದಾಯದ ಜನರಲ್ಲಿ ಅರಿವು ಮೂಡಿಸಲು ನಾಳೆ (ಮೇ ೪) ರಿಂದ ವಾಹನದಲ್ಲಿ ಪ್ರತಿ ಹಳ್ಳಿಗಳಿಗೆ ಬೇಟಿ ನೀಡಿ ಜಾಗೃತಿ ಮೂಡಿಸಲು ನಿರ್ಧರಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಂಜಾರ ಸಂಘದ ಜಿಲ್ಲಾಧ್ಯಕ್ಷ ಟಿ.ಎಲ್ ಲಕ್ಷ್ಮಣ್‌ನಾಯ್ಕ, ಉಪಾಧ್ಯಕ್ಷ ರಾಜನಾಯ್ಕ, ತಾಲ್ಲೂಕು ಅಧ್ಯಕ್ಷ ಶ್ರೀನಿವಾಸ್ ಟಿ.ಎಸ್ ಉಪಸ್ಥಿತರಿದ್ದರು.

Suggestion to write Banjara/Lambani during the survey

Related posts

ರಾಜ್ಯಾಧ್ಯಕ್ಷ ಜಿ.ಎಂ ರಾಜಶೇಖರ್ ಗೆ ಕಡೂರು ಪತ್ರಕರ್ತರ ಗೌರವ

Team Suddigara

ಸ್ವಾತಂತ್ರ್ಯ ಹೋರಾಟದಲ್ಲಿ ತ್ಯಾಗ ಬಲಿದಾನ ಮಾಡಿದವರನ್ನು ಸ್ಮರಿಸಬೇಕು

Team Suddigara

ಅಕ್ರಮ ಗಾಂಜಾ ಸಾಗಾಟ – ಮೂಡಿಗೆರೆಯಲ್ಲಿ ಯುವಕ ಬಂಧನ

Team Suddigara

Leave a Comment