June 15, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಜಿಲ್ಲೆಯಲ್ಲಿ ರೆಡ್ ಅಲರ್ಟ್ : ಕ್ರಮಕ್ಕೆ ಸಾರ್ವಜನಿಕರಿಗೆ ಸೂಚನೆ

ಚಿಕ್ಕಮಗಳೂರು: ಪೂರ್ವ ಮುಂಗಾರು ಮಳೆ ಪ್ರಾರಂಭವಾಗಿದ್ದು, ಮುಂದಿನ ೨ ದಿನಗಳು ಹೆಚ್ಚಿನ ಮಳೆಯಾಗುವ ಸಾದ್ಯತೆ ಇರುವುದರಿಂದ ಜಿಲ್ಲೆಯಲ್ಲಿ ಮೇ ೨೧ ರಂದು ರೆಡ್ ಅಲರ್ಟ್ ಹಾಗೂ ಮೇ ೨೨ ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಹಿಸಬೇಕಿದ್ದು, ಸಾರ್ವಜನಿಕರಿಗೆ ಮುಂದಿನ ಎರಡು ದಿನಗಳು ಅಥವಾ ಮಳೆ ಕಡಿಮೆಯಾಗುವವರೆಗೆ ಈ ಕೆಳಕಂಡ ಸೂಚನೆಗಳನ್ನು ಪಾಲಿಸುವಂತೆ ಕೋರಲಾಗಿದೆ.

ಸಾರ್ವಜನಿಕರು ನದಿಗಳಿಗೆ ಅಥವಾ ತಗ್ಗು ಪ್ರದೇಶಗಳಿಗೆ ತೆರಳದಂತೆ ಕಟ್ಟೆಚ್ಚರ ವಹಿಸುವುದು. ಸಾರ್ವಜನಿಕರು ಜಾನುವಾರುಗಳನ್ನು ಶುಚಿಗೊಳಿಸಲು ಅಥವಾ ಬಟ್ಟೆಗಳನ್ನು ತೊಳೆಯಲು ಹಳ್ಳ. ಕೆರೆ ಕಟ್ಟೆಗಳಿಗೆ ತೆರಳಬಾರದು. ಹಾಗೂ ಮಳೆಯಿಂದಾಗಿ ಧರೆ, ಗುಡ್ಡ ಕುಸಿತ ಉಂಟಾಗುವ ಸಂಭವವಿರುವುದರಿಂದ ಸಾರ್ವಜನಿಕರು ಎಚ್ಚರ ವಹಿಸುವುದು

ಈ ಸೂಚನೆಗಳನ್ನು ಪಾಲಿಸುವ ಮೂಲಕ ಸಾರ್ವಜನಿಕರು ಯಾವುದೇ ಅಪಾಯಕಾರಿ ಘಟನೆಗಳಿಗೆ ಅವಕಾಶ ಕೊಡದೆ ಜಿಲ್ಲಾಡಳಿತಕ್ಕೆ ಸಹಕಾರ ನೀಡಲು ಕೋರಿದೆ ಹೆಚ್ಚಿನ ಮಾಹಿತಿಗಾಗಿ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ-೦೮೨೬೨-೨೩೮೯೫೦ ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಜಿಲ್ಲಾಧಿಕಾರಿ ಹಾಗೂ ಅಧ್ಯಕ್ಷರು ತಿಳಿಸಿದ್ದಾರೆ.

Red alert in the district: Public advised to take action

Related posts

ದೆಹಲಿವಿಧಾನಸಭೆ ಬಿಜೆಪಿಗೆ ಜಯ: ನಗರದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Team Suddigara

ಯುವ ಜನಾಂಗ ಮಾದಕ ವಸ್ತುಗಳ ಚಟಕ್ಕೆ ದಾಸರಾಗಿ ಬಾರದು

Team Suddigara

ವಕ್ಫ್ ಆಸ್ತಿಗಳ ದಾಖಲಾತಿ ಪರಿಶೀಲನಾ ಕಾರ್ಯಗಾರ

Team Suddigara

Leave a Comment