June 15, 2026
Suddigaralive News
ಕ್ರೀಡೆಚಿಕ್ಕಮಗಳೂರುಚಿಕ್ಕಮಗಳೂರು ನಗರತಾಲೂಕು

ಅಂಚೆ ಇಲಾಖೆಯಿಂದ ಕಾಫಿ ತೋಟಗಳ ಚಿತ್ರಣವಿರುವ ವಿಶೇಷ ಮುದ್ರೆ ಬಿಡುಗಡೆ

ಚಿಕ್ಕಮಗಳೂರು: ಅಂಚೆ ಇಲಾಖೆ ಕಾಫಿ ತೋಟಗಳ ಚಿತ್ರಣವಿರುವ ವಿಶೇಷ ಮುದ್ರೆಯನ್ನು ಹೊರತಂದಿದ್ದು, ಇನ್ನು ಮುಂದೆ ಮಲೆನಾಡಿನ ಕಾಫಿ ತೋಟಗಳ ಸೊಬಗು ಅಂಚೆ ಇಲಾಖೆಯ ಮೊಹರಿನಲ್ಲಿ ವಿಜೃಂಭಿಸಲಿದೆ.

ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಇಲಾಖೆಯ ವಿಭಾಗೀಯ ಅಂಚೆ ಅದೀಕ್ಷಕ ಎನ್.ಬಿ. ಶ್ರೀನಾಥ್ ಜಿಲ್ಲೆಯ ಕಾಫಿ ತೋಟಗಳ ಚಿತ್ರಣವಿರುವ ವಿಶೇಷ ಮುದ್ರೆಯನ್ನು ಬಿಡುಗಡೆಗೊಳಿಸಿದರು.

ಈ ವೇಳೆ ಮಾತನಾಡಿದ ಅವರು ಸಾರ್ವಜನಿಕರು ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಇಂದಿನಿಂದ ತಮ್ಮ ಪತ್ರಗಳಿಗೆ ಕಾಫಿ ತೋಟದ ಚಿತ್ರಣವಿರುವ ವಿಶೇಷ ಮೊಹರನ್ನು ಹಾಕಿಸಿಕೊಳ್ಳಬಹುದು ಎಂದು ಹೇಳಿದರು.

ಕಳೆದ ೪೦ ವರ್ಷಗಳ ಹಿಂದೆ ಶೃಂಗೇರಿಯ ಶ್ರೀ ವಿದ್ಯಾಶಂಕರ ದೇವಾಲಯದ ಚಿತ್ರಣ ವಿರುವ ವಿಶೇಷ ಮುದ್ರೆಯನ್ನು ಅಂಚೆ ಇಲಾಖೆ ಹೊರತಂದಿದ್ದು, ಇದೀಗ ಕಾಫಿ ತೋಟಗಳ ಚಿತ್ರಣವಿರುವ ವಿಶೇಷ ಮೊಹರನ್ನು ಹೊರ ತರುವ ಮೂಲಕ ಅಂಚೆ ಇಲಾಖೆ ಜಿಲ್ಲೆಯ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ತಿಳಿಸಿದರು.

ಕಾಫಿ ಮಂಡಳಿ ಉಪನಿರ್ದೇಶಕ ವೆಂಕಟರೆಡ್ಡಿ ಮಾತನಾಡಿ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆ ತನ್ನದೇ ಆದ ವಿಶೇಷ ಅಂಚೆ ಮೊಹರನ್ನು ಹೊಂದಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ಸಹಾಯಕ ಅಂಚೆಪಾಲಕ ಎ.ಎಸ್. ಮುರಳಿಧರ್ ಮಾತನಾಡಿ ಚಿಕ್ಕಮಗಳೂರು ಜಿಲ್ಲೆಯ ಎರಡನೇ ವಿಶೇಷ ಅಂಚೆ ಮೊಹರು ಬಿಡುಗಡೆಗೊಂಡಿರುವುದು ಎಲ್ಲರಿಗೂ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಧಾನ ಅಂಚೆಪಾಲಕ ಸುನಿಲ್ ವಾಸ್ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು.

ಕ್ಕಮಗಳೂರು ಉಪ ವಿಭಾಗದ ಅಂಚೆ ನಿರೀಕ್ಷಕ ಡಿ.ಎನ್. ಗಂಗಾಧರಪ್ಪ, ಮೂಡಿಗೆರೆ ಅಂಚೆ ನಿರೀಕ್ಷಕ ಷಣ್ಮುಖ ಹೆಚ್. ಚವಾಣ್, ಕೊಪ್ಪ ಅಂಚೆ ನಿರೀಕ್ಷಕ ಹರಿಪ್ರಸಾದ್ ರಾವ್, ಅಂಚೆ ಜೀವ ವಿಮಾ ಅಭಿವೃದ್ಧಿ ಅಧಿಕಾರಿ ಗಣೇಶ್ ನಾಯಕ್, ಅಂಚೆ ಮಾರುಕಟ್ಟೆ ಅಧಿಕಾರಿ ದೊಡ್ದೇಶ್, ಶಶಿರೇಖ, ಬಿ.ಎನ್. ಪ್ರದೀಪ್, ಕಾವ್ಯಶ್ರೀ ಉಪಸ್ಥಿತರಿದ್ದರು.

Postal Department releases special stamp depicting coffee plantations

Related posts

ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ – ಇಲಾಖಾವಾರು ಆಂತರಿಕ ದೂರು ಸಮಿತಿ

Team Suddigara

ಜೂ.9 ರಂದು ಚಿಕ್ಕಮಗಳೂರು ನಗರದಲ್ಲಿ ಬೃಹತ್ ರೈತ ಸಮಾವೇಶ

Team Suddigara

ವಿಜೃಂಭಣೆಯಿಂದ ಜರುಗಿದ ಹೊರನಾಡಿನ ಅನ್ನಪೂರ್ಣೇಶ್ವರಿ ರಥೋತ್ಸವ

Team Suddigara

Leave a Comment