May 18, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಅಂಗನವಾಡಿ ಕೇಂದ್ರಗಳಿಂದಲೇ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಚಿಂತನೆ

ಚಿಕ್ಕಮಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಮೊಂಟೆಸ್ಸರಿ, ನರ್ಸರಿ, ಎಲ್.ಕೆ.ಜಿ., ಯು.ಕೆ.ಜಿ. ಮಾದರಿಯ ತರಗತಿಗಳನ್ನು ಈ ವರ್ಷದಿಂದ ತೆರೆದು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಯೋಜನೆಯನ್ನು ಸರ್ಕಾರದಿಂದ ರೂಪಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಆರ್.ಹೆಬ್ಬಾಳ್ಕರ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಂಯುಕ್ತ ಆಶ್ರಯದಲ್ಲಿ ಇಂದು ನಗರದ ಕುವೆಂಪು ಕಲಾಮಂದಿರದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಂಗನವಾಡಿ ಕೇಂದ್ರಗಳು ಆರಂಭವಾಗಿ ೫೦ ವರ್ಷಗಳು ಕಳೆದಿದ್ದು, ಈ ಸುವರ್ಣ ಮಹೋತ್ಸವದ ನೆನಪಿನಲ್ಲಿ ಜಿಲ್ಲೆಯಲ್ಲಿ ಗುರುತಿಸಲಾಗಿರುವ ೧೩೦ ಅಂಗನವಾಡಿ ಕೇಂದ್ರಗಳನ್ನು ಈ ಯೋಜನೆಗೆ ಗುರುತಿಸಲಾಗಿದೆ ಎಂದು ಹೇಳಿದರು.

ನಮ್ಮ ಸರ್ಕಾರ ಇರುವುದೇ ಜನರ ಅಭಿವೃದ್ಧಿಗಾಗಿ. ಮಹಿಳೆಯರನ್ನು ಯಜಮಾನಿ ಎಂದು ಗುರುತಿಸಿದ್ದು ನಮ್ಮ ಸರ್ಕಾರ. ಮಹಿಳೆಯರನ್ನು ಸ್ವಾಭಿಮಾನಿಗಳನ್ನಾಗಿ ಮಾಡಲು ನಮ್ಮ ಸರ್ಕಾರ ಗೃಹಲಕ್ಷ್ಮೀ ಯೋಜನೆಯನ್ನು ಜಾರಿ ಮಾಡಿತು. ನಮ್ಮ ಸರ್ಕಾರ ಯಾವುದೇ ಮಧ್ಯವರ್ತಿಗಳ ಪ್ರವೇಶಕ್ಕೆ ಅವಕಾಶವಿಲ್ಲದೆ ಸರ್ಕಾರದ ಹಣವನ್ನು ಅವರ ಖಾತೆಗೆ ನೇರವಾಗಿ ಜಮೆ ಮಾಡುತ್ತಿದೆ ಎಂದು ಹೇಳಿದರು.

ಇಡೀ ರಾಜ್ಯಕ್ಕೆ ಅನುಕೂಲವಾಗುವಂತೆ ನಮ್ಮ ಸರ್ಕಾರ ಮಾದರಿ ಯೋಜನೆಗಳನ್ನು ರೂಪಿಸಿದ್ದು, ಚಿಕ್ಕಮಗಳೂರು ಜಿಲ್ಲೆ ಗ್ಯಾರಂಟಿ ಯೋಜನೆಗಳ ಅನು?ನದ ವಿಚಾರದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿದೆ. ಇಡೀ ರಾಜ್ಯದಲ್ಲಿ ಈ ಯೋಜನೆಗೆ ಸಂಬಂಧಿಸಿದಂತೆ ಮೂರು ಜಿಲ್ಲೆಗಳು ಅತ್ಯಂತ ಚುರುಕಾಗಿ ಕೆಲಸ ಮಾಡುತ್ತಿವೆ. ಅದರಲ್ಲಿ ಚಿಕ್ಕಮಗಳೂರು ಕೂಡ ಸೇರಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಚಿಕ್ಕಮಗಳೂರು ಕ್ಷೇತ್ರದ ಶಾಸಕ ಹೆಚ್.ಡಿ.ತಮ್ಮಯ್ಯ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳ ಜೊತೆಗೆ ಭೂ ಗ್ಯಾರಂಟಿ ಯೋಜನೆಯನ್ನು ಘೋಷಿಸಿದೆ. ದಶಕಗಳಿಂದ ಕಂದಾಯ ವ್ಯಾಪ್ತಿಗೆ ಬಾರದ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿ ಅದರಲ್ಲಿನ ಕುಟುಂಬಗಳಿಗೆ “ಉಳುವವನೇ ಭೂಮಿಯ ಒಡೆಯ’ ಮಾದರಿಯಲ್ಲಿ “ವಾಸಿಸುವವನೇ ಮನೆಯ ಒಡೆಯ’ ಎಂದು ಹಕ್ಕುಪತ್ರಗಳನ್ನು ವಿತರಿಸುವುದು ಈ ಯೋಜನೆಯ ಉದ್ದೇಶ ಎಂದು ಹೇಳಿದರು.

ಕರ್ನಾಟಕದ ಭೂಮಿಯ ಹಕ್ಕುಪತ್ರ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವ ಮಹತ್ವದ ಯೋಜನೆ ಇದಾಗಿದ್ದು, ಇದರಿಂದ ಲಕ್ಷಾಂತರ ಜನರಿಗೆ ತಮ್ಮ ಭೂಮಿಯ ಅಧಿಕೃತ ಮಾಲೀಕತ್ವ ಸಿಗಲಿದೆ. ಹಕ್ಕುಪತ್ರವು ಕರ್ನಾಟಕ ಸರ್ಕಾರವು ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ನೀಡುವ ಆಸ್ತಿಗಳ ಸ್ವಾಮ್ಯದ ಪತ್ರವಾಗಿದೆ. ಸರಕಾರದ ಸ್ವಾಧೀನದಲ್ಲಿರುವ ಅದರೆ ಬಡವರಿಗಾಗಿ ಒದಗಿಸಿದ ಮನೆಗಳಿಗೆ ಇಂತಹ ಪತ್ರವನ್ನು ಸರ್ಕಾರ ನೀಡುತ್ತದೆ ಎಂದು ಹೇಳಿದರು.

ನಮ್ಮ ಸರ್ಕಾರ ೨೦೦೦ ನಿವೇಶನಕ್ಕಾಗಿ ೪೨ ಎಕರೆ ಜಮೀನನ್ನು ಗುರುತಿಸಿ ರೈತರಿಗೆ, ಬಡವರಿಗೆ ಹಂಚಲು ಮುಂದಾಗಿದೆ. ೧೦ ಕೋಟಿ ರೂ. ವೆಚ್ಚದ ಡಾಂಬರೀಕರಣ ಕಾಮಗಾರಿಯನ್ನು ಮಳೆ ನಿಂತ ಮೇಲೆ ಪ್ರಾರಂಭ ಮಾಡಲಾಗುತ್ತದೆ. ಚಿಕ್ಕಮಗಳೂರಿನಲ್ಲಿ ಇನ್ನೂ ಒಂದೂವರೆ ವರ್ಷದಲ್ಲಿ ೨೦ ಕೋಟಿ ರೂ. ವೆಚ್ಚದಲ್ಲಿ ನೂತನ ಬಸ್ ನಿಲ್ದಾಣ ನಿರ್ಮಿಸಲಾಗುತ್ತದೆ. ಜನರ ತೆರಿಗೆ ಹಣದಿಂದ ಜನರ ಬಾಳನ್ನು ಬೆಳಕಾಗಿಸುವ ಕೆಲಸ ನಾವು ಮಾಡುತ್ತಿದ್ದೇವೆ ಎಂದು ಹೇಳಿದರು.

ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಪ್ರಾಸ್ತಾವಿಕ ನುಡಿಗಳನ್ನಾಡಿ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಆರು ತಿಂಗಳಲ್ಲಿ ಐದು ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದು ಜನರ ಅಭಿವೃದ್ದಿಗೆ ಸಹಕಾರಿಯಾಗಿದೆ. ನಮ್ಮ ಸರ್ಕಾರದ ಗುರಿ ನಮ್ಮ ದೇಶದ ಅಭಿವೃದ್ಧಿ ಜೊತೆಗೆ ಜನರನ್ನು ಕೂಡ ಅಭಿವೃದ್ದಿಪಡಿಸುವ ಕೆಲಸ ನಾವು ಮಾಡಲು ಮುಂದಾಗಿದ್ದೇವೆ ಎಂದು ಹೇಳಿದರು.

ಈ ದೇಶಕ್ಕೆ, ಬೇರೆ-ಬೇರೆ ರಾಜ್ಯಕ್ಕೆ, ವಿಶ್ವ ಸಂಸ್ಥೆಯು ಮೆಚ್ಚುವಂತಹ ಪಂಚ ಗ್ಯಾರಂಟಿಯನ್ನು ನಾವು ಜಾರಿಗೆ ತಂದಿದ್ದೇವೆ. ನಮ್ಮ ಜಿಲ್ಲೆಯಲ್ಲಿ ೨,೬೧,೪೧೫ ಕುಟುಂಬದ ಯಜಮಾನಿಯರಿಗೆ ತಲಾ ರೂ.೨,೦೦೦ ದಂತೆ ಪ್ರತಿ ತಿಂಗಳು ೫೨.೮೦ ಕೋಟಿ ರೂ.ಗಳನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲಾಗುತ್ತಿದೆ. ಇದರ ಮೊತ್ತ ೯೯೩ ಕೋಟಿ ಆಗಿದೆ ಎಂದು ಹೇಳಿದರು. ನಮ್ಮ ಜಿಲ್ಲೆಯಲ್ಲಿ ಹೆಚ್ಚು ಮಳೆ ಇರುವುದರಿಂದ ನಗರದಲ್ಲಿ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಾವು ಈಗಲೇ ಎಚ್ಚರ ವಹಿಸಬೇಕು. ಘನ ತ್ಯಾಜ್ಯಗಳ ಕಸವನ್ನು ಗ್ರಾಮ ಪಂಚಾಯಿತಿಗಳಿಗೆ ಕನಿ? ೨ ಎಕರೆ ಜಾಗವನ್ನು ಸರ್ಕಾರ ನೀಡಿದರೆ, ಇನ್ನೂ ೩೦ ವ?ಗಳಲ್ಲಿ ನಾವು ಘನ ತ್ಯಾಜ್ಯ ಸಮಸ್ಯೆಯಿಂದ ಮುಕ್ತರಾಗಬಹುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮೂಡಿಗೆರೆ ಶಾಸಕಿ ನಯನ ಮೋಟಮ್ಮ, ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್, ಜಿ.ಪಂ. ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ, ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷ ಬಿ.ಹೆಚ್.ಹರೀಶ್, ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ತಾಲ್ಲೂಕು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಂ.ಮಲ್ಲೇಶಸ್ವಾಮಿ, ತಾಲ್ಲೂಕು ತಹಸೀಲ್ದಾರ್ ರೇಷ್ಮಾ, ಮುಂತಾದವರು ಉಪಸ್ಥಿತರಿದ್ದರು.

The idea of ​​providing better education to children through Anganwadi centers

Related posts

ಸರಳ ಸಜ್ಜನಿಕೆ ವ್ಯಕ್ತಿತ್ವದ ರಾಜಕಾರಣಿ ಡಾ.ಜಿ.ಪರಮೇಶ್ವರ್

Team Suddigara

ಕಾಂಗ್ರಸ್ ಸರ್ಕಾರಕ್ಕೆ ಬೆಲೆಏರಿಕೆ ನಿತ್ಯದ ಕೆಲಸ

Team Suddigara

ಎಐ ತಂತ್ರಜ್ಞಾನಗಳು ರೋಬೋಟ್‌ಗಳಿಗೆ ಬುದ್ದಿವಂತಿಕೆಗೆ ಪೂರಕ

Team Suddigara

Leave a Comment