May 18, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

‘ಸರ್ವ ಧರ್ಮಕ್ಕೂ ದಯೆ, ಮಾನವೀಯತೆಯೇ ಮುಕುಟ’

ಬಾಳೆಹೊನ್ನೂರು: ‘ಜಗದಲ್ಲಿ ಒಳ್ಳೆಯದು ಕೆಟ್ಟದ್ದು ಎರಡೂ ಇರುತ್ತದೆ. ನೋಡುವ ದೃಷ್ಟಿ ಅವಲಂಬಿಸಿರುತ್ತದೆ. ಸಕಲ ಧರ್ಮಕ್ಕೂ ದಯೆ ಮತ್ತು ಮಾನವೀಯತೆ ಮುಕುಟಪ್ರಾಯ’ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ಹೇಳಿದರು.

ರಂಭಾಪುರಿ ಪೀಠದಲ್ಲಿ ಬುಧವಾರ ನಡೆದ ಪೌರ್ಣಿಮೆ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

‘ಕಷ್ಟ ಸುಖಗಳ ಬಗ್ಗೆ ಚಿಂತಿಸಿ ಅವುಗಳನ್ನು ಪರಿಹರಿಸುವ ಕಾರ್ಯದಲ್ಲಿ ತೊಡಗುವುದೇ ನಿಜವಾದ ಧರ್ಮ. ಜೀವನಾಧಾರಕ್ಕೆ ನೀರು, ಅನ್ನ, ಗಾಳಿ ಮತ್ತು ಒಳ್ಳೆಯ ಮಾತು ಮುಖ್ಯ. ಸತ್ಯ, ಸಂಸ್ಕೃತಿ ಗೌರವಿಸದಿದ್ದರೆ ಜೀವನ ನಾಶವಾಗುತ್ತದೆ. ವಸ್ತು, ಒಡವೆಗಳ ಹೊರ ರೂಪ ಬದಲಾಗಬಹುದು. ಆದರೆ, ಒಳಗಿರುವ ಮೂಲ ಸತ್ಯ ಬದಲಾಗುವುದಿಲ್ಲ’ ಎಂದರು.

‘ಈ ದೇಹ ನಾಶವಾಗುವ ಸಂಪತ್ತು ಮತ್ತು ಮಾಸಿ ಹೋಗುವ ಸೌಂದರ್ಯ. ಇವುಗಳನ್ನು ನೆಚ್ಚದೆ ಸತ್ಯ ಮತ್ತು ಶುದ್ಧ ಧರ್ಮದ ಮಾರ್ಗದಲ್ಲಿ ನಡೆಯುವುದರಿಂದ ಜೀವನದಲ್ಲಿ ಸಕಲ ಸಂಪತ್ತು, ಶಾಂತಿ ದೊರಕುವುದು ಎಂಬುದನ್ನು ರೇಣುಕಾಚಾರ್ಯರು ಜೀವನ ಸಿದ್ಧಾಂತದಲ್ಲಿ ಬೋಧಿಸಿದ್ದಾರೆ’ ಎಂದು ಹೇಳಿದರು.

‘ನಾವು ಏನು ಪಡೆದಿದ್ದೇವೆ ಎನ್ನುವುದಕ್ಕಿಂತ ಹೇಗೆ ದುಡಿದಿದ್ದೇವೆ ಎಂಬುದು ಮುಖ್ಯ. ಏನು ಗಳಿಸಿದ್ದೇವೆ ಎನ್ನುವುದಕ್ಕಿಂತ ಹೇಗೆ ಬೆಳೆದಿದ್ದೇವೆ ಎಂಬುದು ಮುಖ್ಯ. ಏನು ಹೇಳಿ ಕೇಳಿದೆವು ಎನ್ನುವುದಕ್ಕಿಂತ ಹೇಗೆ ಬಾಳಿದೆವು ಎಂಬುದು ಮುಖ್ಯ. ಅರಿತು ಬಾಳುವುದರಿಂದ ಬಾಳು ವಿಕಾಸಗೊಳ್ಳುತ್ತದೆ’ ಎಂದು ಪ್ರತಿಪಾದಿಸಿದರು.

ನೆಗಳೂರು, ಆಲಮೇಲ, ಸೋನಪೇಟೆ, ಹುಡುಗಿ, ವೆಂಕಟಬೆನ್ನೂರು ಶ್ರೀಗಳು ಪಾಲ್ಗೊಂಡಿದ್ದರು. ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೆ.ಪಿ.ಅಂಶುಮಂತ್, ಬಳ್ಳಾರಿ ಮಹಲಿಂಗಯ್ಯ, ಪ್ರಭುಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.

13 ಜನ ವೀರಮಾಹೇಶ್ವರ ಪಟುಗಳಿಗೆ ಶಿವದೀಕ್ಷಾ ಮತ್ತು ಅಯ್ಯಾಚಾರ ಜರುಗಿತು. ಕ್ಷೇತ್ರದ ಎಲ್ಲಾ ದೈವಗಳಿಗೆ ಹುಣ್ಣಿಮೆ ಪ್ರಯುಕ್ತ ವಿಶೇಷ ಪೂಜಾ ಕಾರ್ಯಗಳು ಜರುಗಿದವು.

ಇದೇ ವೇಳೆ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಆರ್. ಪಾಟೀಲ ಅವರು ರಂಭಾಪುರಿ ಪೀಠಕ್ಕೆ ಭೇಟಿ ನೀಡಿ, ರೇಣುಕಾಚಾರ್ಯರಿಗೆ ಮತ್ತು ಕ್ಷೇತ್ರನಾಥ ವೀರಭದ್ರಸ್ವಾಮಿಗೆ ಪೂಜೆ ಸಲ್ಲಿಸಿದರು. ರಂಭಾಪುರಿ ಶ್ರೀಗಳ ಆಶೀರ್ವಾದ ಪಡೆದರು.

‘Kindness to all religions, humanity is the crown’

Related posts

ಕ್ರೀಡಾಕೂಟಗಳು ಸ್ನೇಹ,ಸಂಬಂಧ ಗಟ್ಟಿಗೊಳಿಸಲಿ

Team Suddigara

ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ ಭಾಗವಹಿಸುವಿಕೆ ಮುಖ್ಯ

Team Suddigara

ಎನ್ ಆರ್ ಪುರ ಮುಖ್ಯ ರಸ್ತೆ ಅಭಿವೃದ್ದಿಗೆ 60 ಕೋಟಿ ಮಂಜೂರು ಸಚಿವ ಸಂಪುಟ ಅನುಮೋದನೆ

Team Suddigara

Leave a Comment