ಆಗಸ್ಟ್ 23 ಕ್ಕೆ ಜಿಲ್ಲಾ ಪ್ರಪ್ರಥಮ ದಲಿತ ಸಾಹಿತ್ಯ ಸಮ್ಮೇಳನ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಪ್ರಪ್ರಥಮ ದಲಿತ ಸಾಹಿತ್ಯ ಸಮ್ಮೇಳನ ಆಗಸ್ಟ್ ೨೩ ರಂದು ಚಿಕ್ಕಮಗಳೂರಿನ ಕುವೆಂಪು ಕಲಾ ಮಂದಿರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿ?ತ್ತು ಮತ್ತು ದಲಿತ ಸಾಹಿತ್ಯ ಪರಿ?ತ್ತು ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್ ಮತ್ತು ಜಿಲ್ಲಾ ದಲಿತ ಸಾಹಿತ್ಯ ಪರಿ?ತ್ತಿನ ಅಧ್ಯಕ್ಷರಾದ ಕುಪ್ಪಾಳು ಶಾಂತಮೂರ್ತಿ ಅವರ ನೇತೃತ್ವದಲ್ಲಿ ಜಿಲ್ಲಾ ದಲಿತ ಸಾಹಿ ತ್ಯ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಕಸಾಪ ಕೋಶಾಧ್ಯಕ್ಷ ಬಿ.ಪ್ರಕಾಶ್ ತಿಳಿಸಿದರು.

ಅಂದು ಸಮ್ಮೇಳನದ ದಿನ ಧ್ವಜಾರೋಹಣ ನಂತರ ಸಮ್ಮೇಳನ ಅಧ್ಯಕ್ಷರ ಮೆರವಣಿಗೆ, ಉದ್ಘಾಟನೆ. ಕಾರ್ಯಕ್ರಮ ನಂತರ ದಲಿತ ಸಾಹಿತ್ಯ ಕುರಿತ ಗೋಷ್ಠಿ ಮತ್ತು ಕವಿಗೋಷ್ಟಿಗಳು ನಡೆಯಲಿದ್ದು ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು ಸಮ್ಮೇಳನದಲ್ಲಿ ನಾಡಿನ ಹಲವಾರು ಸಾಹಿತಿಗಳು ಮತ್ತು ಸಾಹಿತ್ಯ ಆಸಕ್ತರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಜಿಲ್ಲೆಯ ಮೂವರಿಗೆ ಸಾಹಿತ್ಯ ಸಿರಿ ಪ್ರಶಸ್ತಿ ಮತ್ತು ಜಿಲ್ಲೆ ಯ ಸಾಧಕರನ್ನು ಗುರುತಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.

District’s first Dalit literary conference on August 23

Comments

Leave a Reply

Your email address will not be published. Required fields are marked *