ಚಿಕ್ಕಮಗಳೂರು: ಚಿಕ್ಕಮಗಳೂರಿನಿಂದ ತಿರುಪತಿ, ತಿರುಪತಿಯಿಂದ ಚಿಕ್ಕಮಗಳೂರು ನಡುವೆ ಸಂಚರಿಸುವ ರೈಲಿಗೆ ಜು.೧೧ ರಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಚಿಕ್ಕಮಗಳೂರಿನ ರೈಲು ನಿಲ್ದಾಣದಲ್ಲಿ ಹಸಿರುವ ನಿಶಾನೆ ನೀಡಲಿದ್ದಾರೆ ಎಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ದೆಹಲಿಯ ಕಚೇರಿಯಲ್ಲಿ ಸಚಿವ ವಿ.ಸೋಮಣ್ಣ ಅವರನ್ನು ಭೇಟಿ ಚಿಕ್ಕಮಗಳೂರಿನಿಂದ ತಿರುಪತಿ, ತಿರುಪತಿಯಿಂದ ಚಿಕ್ಕಮಗಳೂರು ನಡುವೆ ರೈಲು ಸಂಚಾರಕ್ಕೆ ಅನುಮತಿ ದೊರಕಿಸಿಕೊಟ್ಟ ಹಿನ್ನೆಲೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜನರ ಪರವಾಗಿ ಗೌರವಿಸಿ, ಕೃತಜ್ಞತೆ ತಿಳಿಸಿದ್ದ ಸಂದರ್ಭದಲ್ಲಿ ರೈಲಿಗೆ ಚಾಲನೆ ನೀಡಲು ಆಗಮಿಸುವಂತೆ ಮನವಿ ಮಾಡಿಕೊಂಡಿದ್ದಕ್ಕೆ ಸಚಿವರು ಸ್ಪಂದಿಸಿದ್ದಾರೆ ಎಂದು ಅವರು ಬುಧವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಜು.೧೧ ರಂದು ಬೆಳಗ್ಗೆ ೧೧ ಗಂಟೆಗೆ ವಿಶೇಷ ರೈಲಿನಲ್ಲಿ ಬೆಂಗಳೂರಿನಿಂದ ಚಿಕ್ಕಮಗಳೂರು ನಿಲ್ಲಾಣಕ್ಕೆ ಆಗಮಿಸುವ ಸಚಿವರು ಚಿಕ್ಕಮಗಳೂರು ಮತ್ತು ತಿರುಪತಿ ನಡುವೆ ಸಂಚರಿಸುವ ರೈಲು ಗಾಡಿಗೆ ಹಸಿರುವ ನಿಶಾನೆ ನೀಡಲಿದ್ದಾರೆ ಎಂದು ಹೇಳಿದ್ದಾರೆ.
ಜಿಲ್ಲೆಯ ಜನರ ಬಹು ದಿನಗಳ ಬೇಡಿಕೆಗೆ ಸ್ಪಂದಿಸಿರುವ ಸಚಿವರನ್ನು ಈ ಸಂದರ್ಭದಲ್ಲಿ ಗೌರವಿಸಲಾಗುತ್ತದೆ ಎಂದರು
ಕಾರ್ಯಕ್ರಮದ ಆನಂತರ ಸಚಿವರು ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ. ಬಳಿಕ ವಿಶೇಷ ರೈಲಿನಲ್ಲಿ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ತಿಳಿಸಿದ್ದಾರೆ.
ಚಿಕ್ಕಮಗಳೂರು-ತಿರುಪತಿ ನಡುವೆ ರೈಲು ಸಂಚಾರಕ್ಕೆ ಅನುಮತಿ ದೊರಕಿಸಿಕೊಟ್ಟ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ದೆಹಲಿಯ ಕಚೇರಿಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.
Minister to flag off Chikkamagaluru-Tirupati train on July 11