May 18, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ನಗರದ ನಾಗರೀಕರಿಗೆ ಮೂಲಭೂತ ಸೌಕರ್ಯ ಆದ್ಯತೆ ಮೇಲೆ ಒದಗಿಸಬೇಕು

ಚಿಕ್ಕಮಗಳೂರು: ನಗರಸಭೆ ಕುಡಿಯುವ ನೀರು, ಸ್ವಚ್ಚತೆ, ರಸ್ತೆ, ಚರಂಡಿ, ಬೀದಿದೀಪ ಮುಂತಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಪ್ರಮುಖ ಆದ್ಯತೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ತಿಳಿಸಿದರು.

ಅವರು ಇಂದು ಜಿಲ್ಲಾ ಆಟದ ಮೈದಾನದ ಸುತ್ತ ಹಾಗೂ ನ್ಯಾಯಾಲಯ, ಎಲ್‌ಐಸಿ ರಸ್ತೆಯಲ್ಲಿ ನಗರಸಭೆಯಿಂದ ಏರ್ಪಡಿಸಲಾಗಿದ್ದ ಸ್ವಚ್ಚತೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಅನುದಾನದ ಕೊರತೆ ಮುಂದಿಟ್ಟುಕೊಂಡು ಜನರ ಅನಿಸಿಕೆಗಳಿಗೆ ತೊಂದರೆಯಾಗಬಾರದು, ನಗರಸಭೆ ಸಿಬ್ಬಂದಿಗಳನ್ನು ಬಳಸಿಕೊಂಡು ಈ ಕೆಲಸ ಕಾರ್ಯಗಳನ್ನು ಮಾಡಬಹುದು ಎಂದು ಸಲಹೆ ನೀಡಿದರು.

ಸ್ವಚ್ಚತೆ ಮುಕ್ತ ನಗರ, ಸ್ವಚ್ಚತೆಗೆ ಆದ್ಯತೆ ಈ ಬಗ್ಗೆ ನಾಗರೀಕರಲ್ಲಿ ಅರಿವು ಮೂಡಿಸಿ ನಗರದಲ್ಲಿ ಖಾಲಿ ನಿವೇಶನಗಳಲ್ಲಿ ಬೆಳೆದಿರುವ ಗಿಡಗಂಟಿಗಳನ್ನು ತೆರವು ಮಾಡದಿದ್ದರೆ ೫ ಸಾವಿರ ರೂ ದಂಡ ವಿಧಿಸುವುದಾಗಿ ಸಂಬಂಧಪಟ್ಟ ಮಾಲಿಕರಿಗೆ ಸೂಚನಾ ಪತ್ರ ನೀಡಿ ಎಂದು ಸಲಹೆ ನೀಡಿದರು.

ನಗರದಲ್ಲಿ ಜನಸಂಖ್ಯೆ ಹೆಚ್ಚಳದ ಜೊತೆಗೆ ವಾಹನಗಳ ಸಂಖ್ಯೆಯೂ ಹೆಚ್ಚಿದೆ. ಇದರಿಂದ ಪಾರ್ಕಿಂಗ್ ಸಮಸ್ಯೆ ಎದುರಾಗಿದ್ದು, ಈ ಬಗ್ಗೆ ಜಾಗೃತಿ ಮೂಡಿಸಿ ಜೊತೆಗೆ ಅಂಗಡಿ ಮಾಲಿಕರು ಫುಟ್‌ಪಾತ್ ಮೇಲೆ ವಸ್ತುಗಳನ್ನು ಇಟ್ಟು ಜನರ ಓಡಾಟಕ್ಕೆ ತೊಂದರೆಯಾಗಿದ್ದು, ಈ ಕುರಿತು ಕ್ರಮ ಜರುಗಿಸಬೇಕೆಂದು ಅಧ್ಯಕ್ಷರಿಗೆ ಸೂಚಿಸಿದರು.

ಸಂತೆ ಮಾರ್ಕೆಟ್‌ನಲ್ಲಿ ಜನರ ಓಡಾಟಕ್ಕೆ ತೊಂದರೆಯಾಗುವಂತೆ ಕಟ್ಟೆಯ ಮುಂಭಾಗದಲ್ಲಿ ತರಕಾರಿ ಇಡುತ್ತಿದ್ದಾರೆ. ಇದಕ್ಕೆ ನಗರಸಭೆ ಕಡಿವಾಣ ಹಾಕಬೇಕು, ಸ್ವಚ್ಚತೆಗೆ ಆದ್ಯತೆ ನೀಡಬೇಕು. ಈ ಎಲ್ಲಾ ಕಾರ್ಯಗಳು ಮುಂದಿನ ೯ ತಿಂಗಳ ಅಧಿಕಾರವಧಿಯಲ್ಲಿ ನಿರಂತರವಾಗಿ ಸಾಗಬೇಕು ಎಂದು ಎಚ್ಚರಿಸಿದರು.

ನಗರದ ಅಭಿವೃದ್ಧಿಗೆ ಪಕ್ಷಾತೀತವಾಗಿ ತಾವೂ ಸೇರಿದಂತೆ ಶಾಸಕ ಹೆಚ್.ಡಿ. ತಮ್ಮಯ್ಯ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹಾಗೂ ನಗರಸಭೆ ಸಿಬ್ಬಂದಿಯೊಂದಿಗೆ ನಗರ ಪ್ರದಕ್ಷಣೆ ಕೈಗೊಳ್ಳುತ್ತೇವೆ. ಇದನ್ನು ಸಾರ್ವಜನಿಕವಾಗಿ ತೋರಿಸುವ ಮೂಲಕ ಲಂಚಮುಕ್ತ ನಗರಸಭೆಯನ್ನಾಗಿಸಲು ಸಂಕಲ್ಪ ಮಾಡಬೇಕೆಂದು ಹೇಳಿದರು.

ಪೌರಕಾರ್ಮಿಕರ ಹಲವು ಬೇಡಿಕೆಗಳ ಬಗ್ಗೆ ಶಾಸಕರ ನೇತೃತ್ವದಲ್ಲಿ ನಿಯೋಗ ಹೋಗಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಬಗೆಹರಿಸುವ ಜೊತೆಗೆ ನಗರಸಭೆಗೆ ವಿಶೇಷ ಅನುದಾನ ನೀಡುವಂತೆ ಮನವಿ ಮಾಡುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ನಗರಸಭೆ ನೂತನ ಅಧ್ಯಕ್ಷೆ ಶೀಲಾದಿನೇಶ್ ಮಾತನಾಡಿ, ತಮ್ಮ ಅಧಿಕಾರವಧಿಯಲ್ಲಿ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ಭರವಸೆ ನೀಡಿದ ಅವರು, ಈ ನಮ್ಮ ಕಾರ್ಯಕ್ಕೆ ಪೌರಕಾರ್ಮಿಕರು ಸಾತ್ ನೀಡಿದ್ದು, ನಾಯಕರಾದ ಎಸ್.ಎಲ್ ಭೋಜೇಗೌಡರು ಚಾಲನೆ ನೀಡಿದ್ದಾರೆಂದರು.

ಸದಸ್ಯ ಕುಮಾರ್ ಮಾತನಾಡಿ, ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ಯೋಜನೆ ರೂಪಿಸಲಾಗಿದ್ದು ಜೊತೆಗೆ ಇಂದಿನಿಂದ ಕಸಮುಕ್ತ ನಗರ ಯೋಜನೆಗೆ ಚಾಲನೆ ನೀಡಲಾಗಿದೆ ಎಂದರು.

ಕಸಮುಕ್ತ ನಗರ ಯೋಜನೆಗೆ ಎಲ್ಲಾ ಪೌರ ಕಾರ್ಮಿಕರು ಕೈಜೋಡಿಸಿದ್ದಾರೆ. ಶಾಸಕರು, ಎಂಎಲ್‌ಸಿ ನಮ್ಮೊಂದಿಗಿದ್ದಾರೆ. ಮುಂದಿನ ದಿನಗಳಲ್ಲಿ ಆರೋಗ್ಯಕರ ಪರಿಸರವನ್ನು ಕಾಪಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪೌರಾಯುಕ್ತ ಬಿ.ಸಿ. ಬಸವರಾಜ್, ಆರೋಗ್ಯ ನಿರೀಕ್ಷರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Basic infrastructure should be provided to the citizens of the city on a priority basis.

Related posts

ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದವರ ಮನೆಯನ್ನು ಬುಲ್ಡೋಜರ್ ಬಳಸಿ ದ್ವಂಸ ಮಾಡಬೇಕು

Team Suddigara

ಜಿಲ್ಲೆಯ ಸಹಕಾರ ಸಂಘಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಣೆ

Team Suddigara

ಹೋಟೆಲ್ ಮಾಲೀಕರು ಸ್ವಚ್ಚತೆ ಕಾಪಾಡಿ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿ

Team Suddigara

Leave a Comment