June 15, 2026
Suddigaralive News
ಎನ್ಆರ್ ಪುರಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಜೆಡಿಎಸ್‌ ಮುಖಂಡ ಹೆಚ್.ಟಿ.ರಾಜೇಂದ್ರ ನಿಧನ

ಚಿಕ್ಕಮಗಳೂರು: ಜೆಡಿಎಸ್ ನ ರಾಜ್ಯ ಉಪಾಧ್ಯಕ್ಷರೂ ಅದ ಮಲೆನಾಡಿನ ಅಪರೂಪದ ರಾಜಕಾರಣಿ, ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹೆಚ್.ಟಿ.ರಾಜೇಂದ್ರ(72 ವರ್ಷ) ತಮ್ಮ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಜಿಲ್ಲಾ ಪಂಚಾಯತ್ ಸದಸ್ಯ ಸೇರಿದಂತೆ ರಾಜಕೀಯದಲ್ಲಿ ಅನೇಕ ಹುದ್ದೆಗಳನ್ನು ಅಲಂಕರಿಸಿದ್ದ ಹೆಚ್.ಟಿ. ರಾಜೇಂದ್ರ ಅವರು ಪ್ರಾಮಾಣಿಕ ಮತ್ತು ಪಕ್ಷನಿಷ್ಠೆ ಹೊಂದಿದ ರಾಜಕಾರಣಿಯಾಗಿ ಮಲೆನಾಡಿನಲ್ಲಿ ಪಕ್ಷಾತೀತವಾಗಿ ಪ್ರೀತಿ ಗೌರವಕ್ಕೆ ಅವರು ಪಾತ್ರರಾಗಿದ್ದರು.

ಜಾತ್ಯಾತೀತ ಜನತಾ ದಳದ ಅಭ್ಯರ್ಥಿಯಾಗಿ ಶೃಂಗೇರಿ ವಿಧಾನಸಭಾ ಕ್ಷೇತ್ರದಿಂದ ಹಲವು ಬಾರಿ ಸ್ಪರ್ಧಿಸಿದ್ದರು. ಆದರೆ ಉತ್ತಮ ಪೈಪೋಟಿ ನೀಡಿ ಸೋಲನುಭವಿಸಿದ್ದರು. ಮಾಜಿ ಪ್ರಧಾನಿ ಹೆಚ್.ಡಿ. ದೇವೆಗೌಡರ ಕಟ್ಟಾ ಅನುಯಾಯಿಯಾಗಿದ್ದರು.

ಹೆಚ್.ಟಿ. ರಾಜೇಂದ್ರ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಅವರು ತಮ್ಮ ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ. ಅವರ ತಮ್ಮ ಸಂದೇಶದಲ್ಲಿ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರ ಆಪ್ತರು, ಪಕ್ಷದ ರಾಜ್ಯ ಉಪಾಧ್ಯಕ್ಷರು, ಶೃಂಗೇರಿ ವಿಧಾನಸಭೆ ಕ್ಷೇತ್ರದ ಹಿರಿಯ ನೇತಾರರು ಆಗಿದ್ದ ಶ್ರೀ ಹೆಚ್.ಟಿ. ರಾಜೇಂದ್ರ ಅವರ ನಿಧನದ ವಾರ್ತೆ ಕೇಳಿ ತೀವ್ರ ಆಘಾತವಾಗಿದೆ.

ಅತ್ಯಂತ ನಿಷ್ಠಾವಂತ ಸೇನಾನಿಯಾಗಿ, ತಳಮಟ್ಟದಿಂದ ಸಂಘಟನೆಯನ್ನು ಬಲಿಷ್ಠವಾಗಿ ಕಟ್ಟುವಲ್ಲಿ ಅವಿರತವಾಗಿ ಶ್ರಮಿಸಿದ್ದ ಅವರು, ತಮ್ಮ ಇಡೀ ಬದುಕನ್ನು ಪಕ್ಷಕ್ಕೇ ಸಮರ್ಪಿಸಿಕೊಂಡಿದ್ದರು. ಶ್ರೀಯುತರ ಅಗಲಿಕೆ ಬಹುದೊಡ್ಡ ನಷ್ಟ ಹಾಗೂ ವೈಯಕ್ತಿಕವಾಗಿ ನಾನು ಬಹಳ ದುಃಖಿತನಾಗಿದ್ದೇನೆ.ರಾಜೇಂದ್ರ ಅವರ ಆತ್ಮಕ್ಕೆ ಸದ್ಗತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ಅಭಿಮಾನಿಗಳಿಗೆ ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

Related posts

ಪೈಪ್‌ಲೈನ್ ಕೊರೆದು ಪೆಟ್ರೋಲ್ ಕಳವು-ಆರೋಪಿಗಳು ಪರಾರಿ

Team Suddigara

ಆಶಾಕಿರಣ ಚಾರಿಟಬಲ್ ಟ್ರಸ್ಟ್ ನ ಕಾವೇರಿ ವಸತಿ ಗೃಹ ಉದ್ಘಾಟನೆ

Team Suddigara

ಸೀತಾಳಯ್ಯನಗಿರಿಯ ಶ್ರೀ ಮಲ್ಲಿಕಾರ್ಜುನ ಸ್ವಾಮಿ ರಥೋತ್ಸವ

Team Suddigara

Leave a Comment