ಚಿಕ್ಕಮಗಳೂರು: ನಗರದ ದರ್ಜಿ ಬೀದಿಯಲ್ಲಿರುವ ಪಾಂಡುರಂಗಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಚಾಮುಂಡೇಶ್ವರಿ ಅಮ್ಮನವರ ೨೦ನೇ ವರ್ಷದ ಜಾತ್ರಾ ಮಹೋತ್ಸವವನ್ನು ಇಂದು ವಿಜೃಂಭಣೆಯ ಜೊತೆಗೆ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಗೋಂದೊಳ್ಳಿ ಸಮಾಜದ ಅಧ್ಯಕ್ಷ ಲೋಕೇಶ್ ಮಾತನಾಡಿ, ಭಾವಸಾರ ಕ್ಷತ್ರೀಯ ಸಮಾಜ ಮತ್ತು ಜಿಲ್ಲಾ ಗೋಂದೋಳ್ಳಿ ಸಮಾಜದ ಸಂಯುಕ್ತಾಶ್ರಯದಲ್ಲಿ ಇತಿಹಾಸ ಪ್ರಸಿದ್ದ ಶ್ರೀ ಆಷಾಢಲಕ್ಷ್ಮಿ ಅಮ್ಮನವರ ಪೂಜಾ ಮಹೋತ್ಸವವನ್ನು ಆಚರಿಸಲಾಗುತ್ತಿದೆ ಎಂದು ಹೇಳಿದರು.
ಸಮಾಜದ ಮುಖಂಡರು ಹಾಗೂ ದಾನಿಗಳ ಸಹಕಾರಿದಿಂದ ನಿವೇಶನವನ್ನು ಹೊಂದಿದ್ದು, ಮಾಜಿ ಶಾಸಕ ಸಿ.ಟಿ. ರವಿಯವರು ಕಳೆದ ವರ್ಷ ೨೫ ಲಕ್ಷ ರೂಗಳ ಅನುದಾನವನ್ನು ನೀಡಿದ್ದು, ಸಮಾಜದವರು, ಸಾರ್ವಜನಿಕರು ನೀಡಿರುವ ಧನಸಹಾಯದ ಜೊತೆಗೆ ಸರ್ಕಾರ ಅನುದಾನ ನೀಡಬೇಕೆಂದು ಮನವಿ ಮಾಡಿದರು.
ಈ ಹಣದಲ್ಲಿ ದೇವಸ್ಥಾನ ನಿರ್ಮಾಣ, ಸಮುದಾಯ ಭವನ ನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದು, ಹಾಲಿ ಶಾಸಕ ಹೆಚ್.ಡಿ. ತಮ್ಮಯ್ಯನವರ ಬಳಿ ಸರ್ಕಾರದಿಂದ ಅನುದಾನ ನೀಡುವಂತೆ ಸಮಾಜದ ಪರವಾಗಿ ಮನವಿ ಮಾಡುತ್ತೇವೆಂದು ತಿಳಿಸಿದರು.
Ashada Lakshmi Jatra Festival
