June 15, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಶಾಲಾ ಕಟ್ಟಡಗಳ ದುರಸ್ಥಿಗೆ ಕ್ರಮ ವಹಿಸಲು ಸೂಚನೆ

ಚಿಕ್ಕಮಗಳೂರು:  ತಾಲ್ಲೂಕಿನಲ್ಲಿ ಸೋರುತ್ತಿರುವ ಶಾಲಾ ಕೊಠಡಿಗಳ ದುರಸ್ಥಿ ಹಾಗೂ ಎಲ್ಲಾ ಶಾಲಾ ಕಟ್ಟಡಗಳು ಸುಭದ್ರವಾಗಿವೆ ಎಂಬ ಬಗ್ಗೆ ಪಟ್ಟಿಮಾಡಿ ಪರಿಶೀಲಿಸಿ ವರದಿ ಕೊಡುವಂತೆ ಶಿಕ್ಷಣ ಇಲಾಖೆಯ ಅಧಿಕಾರಿ ಮತ್ತು ಇಂಜಿನಿಯರ್‌ಗೆ ಸೂಚನೆ ನೀಡಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಶಂಕರ್ ಕೊರವ ತಿಳಿಸಿದರು.

ಅವರು ಇಂದು ತಾಲ್ಲೂಕು ಪಂಚಾಯಿತಿ ಅಂಬೇಡ್ಕರ್ ಸಭಾ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿ.ಪಂ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಕೃಷಿ ಇಲಾಖೆಯಲ್ಲಿ ಕಾಲ ಕಾಲಕ್ಕೆ ರಸಗೊಬ್ಬರ, ಬಿತ್ತನೆ ಬೀಜ ಮುಂತಾದ ರೈತರಿಗೆ ಅಗತ್ಯವಾಗಿರುವ ವಸ್ತುಗಳನ್ನು ವಿತರಣೆ ಮಾಡಬೇಕು ಎಂದು ಸೂಚಿಸಲಾಗಿದೆ ಎಂದರು.

ತಾಲ್ಲೂಕಿನ ಕುಡಿಯುವ ನೀರಿನ ಘಟಕಗಳಿಗೆ ಮೆಸ್ಕಾಂ ಇಲಾಖೆ ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮವಹಿಸಬೇಕೆಂದು ತಿಳಿಸಲಾಗಿದೆ ಎಂದು ಹೇಳಿ ಸರ್ಕಾರದ ಯೋಜನೆಗಳನ್ನು ಸಂಬಂಧಿಸಿದ ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಧಿಕಾರಿಗಳು ಶ್ರಮವಹಿಸಬೇಕು ಹಾಗೂ ಗ್ರಾ.ಪಂ ವ್ಯಾಪ್ತಿಯ ಗ್ರಾಮಸಭೆಗಳಲ್ಲಿ ಕಡ್ಡಾಯವಾಗಿ ಭಾಗವಹಿಸುವ ಮೂಲಕ ವರದಿ ನೀಡಬೇಕೆಂದು ಹೇಳಿದರು.

ಮಳೆಗಾಲವಾಗಿರುವ ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ರಸ್ತೆ, ಸೇತುವೆಗಳ ಬಗ್ಗೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಬೇಕೆಂದು ತಿಳಿಸಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಿಜಯ್ ಕುಮಾರ್ ಮಾತನಾಡಿ, ಶಿಕ್ಷಣ ಇಲಾಖೆಯ ಶಾಲಾ ಕೊಠಡಿಗಳನ್ನು ನವೀಕರಣಗೊಳಿಸುವ ಸಂಬಂಧ ಚರ್ಚಿಸಲಾಗಿದ್ದು, ಶಾಲಾ ಕಟ್ಟಡ ದುರಸ್ಥಿಗೆ ತಾ.ಪಂ ಅನುದಾನ ಕೊಡುವ ಬಗ್ಗೆ ಇಂದಿನ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ಮಳೆಗಾಲ ಪ್ರಾರಂಭವಾಗಿರುವುದರಿಂದ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಆದ್ಯತೆ ಮೇಲೆ ಏನು ಕ್ರಮವಹಿಸಬೇಕೆಂಬ ಕುರಿತು ಎನ್‌ಆರ್‌ಇಜಿಎ ಗೆ ಸಂಬಂಧಿಸಿದ ಇಲಾಖೆಗಳ ಸೆಲೆಕ್ಷನ್ ಸೇರಿದಂತೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಮೆಸ್ಕಾಂ ಇಲಾಖೆ ತಾಲ್ಲೂಕಿನ ಕುಡಿಯುವ ನೀರಿನ ಘಟಕಗಳಿಗೆ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಸೂಚನೆ ನೀಡಲಾಗಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಆಹಾರ ಸರಬರಾಜಾಗುತ್ತಿರುವ ಆಹಾರ ಪೊಟ್ಟಣಗಳ ಮೇಲೆ ನಮೂದಾಗಿರುವ ಅವಧಿಯನ್ನು ತಪಾಸಣೆ ಮಾಡಿ ಕ್ರಮವಹಿಸುವಂತೆ ತಿಳಿಸಲಾಯಿತು ಎಂದರು.

ಹಿಂದಿನ ತಾ.ಪಂ ಸಭೆಗೆ ಗೈರು ಹಾಜರಾಗಿದ್ದ ಅಧಿಕಾರಿಗಳಿಗೆ ಸೂಚನೆ ಪತ್ರ ನೀಡಲಾಗಿದ್ದು, ಇಂದು ನಡೆದ ಸಾಮಾನ್ಯ ಸಭೆಗೆ ಬಹುತೇಕ ಎಲ್ಲಾ ಇಲಾಖೆ ಅಧಿಕಾರಿಗಳು ಭಾಗವಹಿಸಿ ವರದಿ ನೀಡಿದ್ದಾರೆ ಎಂದರು.

Instructions to take action for the repair of school buildings

Related posts

ಗೋಹಂತಕರನ್ನು ಹದ್ದುಬಸ್ತಿನಲ್ಲಿಡುವ ಕೆಲಸವ ಹಿಂದೂ ಸಮಾಜ ಬರುತ್ತದೆ

Team Suddigara

ಬಾಳೆಹೊನ್ನೂರಿನಲ್ಲಿ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ

Team Suddigara

ಹುಕ್ಕುಂದ ಗ್ರಾಮದಲ್ಲಿ 17 ಲಕ್ಷ ರೂ ವೆಚ್ಚದ ನೂತನ ಕಟ್ಟಡ ಉದ್ಘಾಟನೆ

Team Suddigara

Leave a Comment