ಯುಪಿಐ ಕ್ಯೂ ಆರ್ ಕೋಡ್ ಸ್ಟಿಕ್ಕರ್ ತೆಗೆಯುತ್ತಿವ ವ್ಯಾಪಾರಿಗಳು

ಬೆಂಗಳೂರು: ಯುಪಿಐ ಮೂಲಕ ವಾರ್ಷಿಕ ₹40 ಲಕ್ಷಕ್ಕಿಂತ ಹೆಚ್ಚು ವಹಿವಾಟು ನಡೆಸಿದ್ದ ಬೇಕರಿ, ಕಾಂಡಿಮೆಂಟ್ಸ್​ ಮತ್ತು ಇತರ ಅಂಗಡಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ನೀಡಿರುವುದು ವ್ಯಾಪಾರಿಗಳಲ್ಲಿ ಆತಂಕ ಸೃಷ್ಟಿಸಿದೆ. ಪರಿಣಾಮ ಪ್ರಮುಖವಾಗಿ ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ಚಿಲ್ಲರೆ ವ್ಯಾಪಾರಿಗಳು ನಗದು ವ್ಯಾಪಾರಕ್ಕೆ ಮರಳುವ ಮನಸ್ಸು ಮಾಡುತ್ತಿದ್ದು, ತಮ್ಮ ಅಂಗಡಿಗಳಿಗೆ ಅಂಟಿಸಿದ್ದ ಯುಪಿಐ ಕ್ಯೂ ಆರ್ ಕೋಡ್ ಸ್ಟಿಕ್ಕರ್ ತೆಗೆಯುತ್ತಿದ್ದಾರೆ.

ಯುಪಿಐ ಪ್ಲಾಟ್‌ಫಾರ್ಮ್‌ಗಳ ಮೂಲಕ್ ಮಾಹಿತಿ ಪಡೆದಿರುವ ಇಲಾಖೆ ರಾಜ್ಯದಲ್ಲಿ ಈವರೆಗೆ ಯುಪಿಐ ಮೂಲಕ ಹಣ ಪಡೆಯುತ್ತಿರುವ 65ಸಾವಿರ ವರ್ತಕರ ಮಾಹಿತಿ ಸಂಗ್ರಹಿಸಿದೆ. ಸುಮಾರು 5900 ವರ್ತಕರಿಗೆ ನೋಟಿಸ್‌ ನೀಡಿದೆ. ಜಿಎಸ್‌ಟಿ ಕಟ್ಟುವಂತೆ, ಜಿಎಸ್‌ಟಿಗೆ ನೋಂದಣಿ ಮಾಡಿಕೊಳ್ಳುವಂತೆ ನೋಟಿಸ್ ನೀಡಲಾಗಿದೆ. ಹಣ ವರ್ಗಾವಣೆ ಸಂದರ್ಭದಲ್ಲಿ ಸಂದೇಹ ಇರುವ ಕೆಲವರ ಮಾಹಿತಿ ನೀಡುವಂತೆ ಬ್ಯಾಂಕ್‌ಗೂ ಕೋರಿದೆ. ಈ ಮಾಹಿತಿ ದೊರೆತ ಬಳಿಕ ಎರಡು-ಮೂರನೇ ಹಂತದಲ್ಲಿ ಇನ್ನಷ್ಟು ಜನರಿಗೆ ನೋಟಿಸ್‌ ಹೋಗಲಿದೆ.

ತೆರಿಗೆ ತಪ್ಪಿಸುವ ಉದ್ದೇಶದಿಂದ ಒಂದೇ ಅಂಗಡಿಗಳಲ್ಲಿ ಐದರಿಂದ ಒಂಬತ್ತು ಯುಪಿಐ ಐಡಿ ಇಟ್ಟುಕೊಂಡು ವಹಿವಾಟು ಮಾಡಿದವರ ಮಾಹಿತಿ ಇದೆ. ಅಲ್ಲದೆ, ಒಂದೇ ವಿಳಾಸದಲ್ಲಿ ನೋಂದಣಿ ಆದ ಹಲವು ಪ್ಯಾನ್ ಕಾರ್ಡ್‌ ಸಿಕ್ಕಿದ್ದು ಇವುಗಳಿಗೆ ಲಿಂಕ್‌ ಆದ ಬ್ಯಾಂಕ್‌ ಖಾತೆಗಳಿಗೆ ನಿರಂತರವಾಗಿ ಹಣ ವರ್ಗಾವಣೆ ಆಗಿದೆ. ಹೀಗಾಗಿ ತೆರಿಗೆ ಇಲಾಖೆಗೆ ಸಂದೇಹ ಇದೆ.

ವಾರ್ಷಿಕ ₹40 ಲಕ್ಷಕ್ಕಿಂತ ಹೆಚ್ಚು ವಹಿವಾಟು ಮಾಡಿದವರಿಗೆ ನೋಟಿಸ್‌ ನೀಡಲಾಗಿದ್ದರೂ ಇದು ಸಣ್ಣಮಟ್ಟದ ವರ್ತಕರಲ್ಲೂ ಆತಂಕಕ್ಕೆ ಕಾರಣವಾಗಿದೆ. ವಿಶೇಷವಾಗಿ ಬೆಂಗಳೂರಲ್ಲಿ ಸಣ್ಣಮಟ್ಟದ, ಬೀದಿ ವ್ಯಾಪಾರಿಗಳು ಕೂಡ ಅಂಗಡಿಗಳ ಮುಂದೆ ಯುಪಿಐ ಸ್ಟಿಕರ್ ಅಂಟಿಸಿಕೊಂಡಿದ್ದಾರೆ. ನಿಂಬೆ ಹಣ್ಣು, ಚಾಕುಲೆಟ್‌ ಖರೀದಿಸಿದ ಗ್ರಾಹಕರೂ ₹10- ₹20 ಪೇಮೆಂಟ್ ಮಾಡುತ್ತಿದ್ದಾರೆ.

Merchants removing UPI QR code stickers

Comments

Leave a Reply

Your email address will not be published. Required fields are marked *