May 20, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಅ.1ಕ್ಕೆ ನಗರದಲ್ಲಿ ‘ವಾಕ್ ವಿತ್ ಕಾಫಿ’ ಕಾರ್ಯಕ್ರಮ

ಚಿಕ್ಕಮಗಳೂರು: ಅಂತರಾಷ್ಟ್ರೀಯ ಕಾಫಿ ದಿನದ ಅಂಗವಾಗಿ ‘ಕಾಫಿ ಬದುಕು ಭವಣೆ’ ಎಂಬ ಘೋಷಣೆಯೊಂದಿಗೆ ಅ.೧ ರಂದು ಬುಧವಾರ ಬೆಳಗ್ಗೆ ೧೧ ಗಂಟೆಗೆ ಅಜಾದ್ ವೃತ್ತದಲ್ಲಿ ‘ವಾಕ್ ವಿತ್ ಕಾಫಿ’ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಬೆಳೆಗಾರರ ಸಂಘದ ಅಧ್ಯಕ್ಷ ಕೆ.ಯು ರತೀಶ್‌ಕುಮಾರ್ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ಬೆಳೆಗಾರರ ಒಕ್ಕೂಟ, ಚಿಕ್ಕಮಗಳೂರು ಜಿಲ್ಲಾ ಬೆಳೆಗಾರರ ಸಂಘ ಹಾಗೂ ಜಿಲ್ಲೆಯ ಎಲ್ಲಾ ಸಹ ಸಂಘಟನೆಗಳ ನೇತೃತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿ ಅಂದು ಬೆಳಗ್ಗೆ ೧೦.೩೦ ಕ್ಕೆ ನಗರದ ತಾಲ್ಲೂಕು ಕಚೇರಿ ಆವರಣದಿಂದ ೭೦೦ ಕ್ಕೂ ಹೆಚ್ಚು ಬೆಳೆಗಾರರನ್ನೊಳಗೊಂಡ ಕಾಫಿ ವಾಕ್ ಜಾಥಾ ಆರಂಭವಾಗಿ ಎಂಜಿ ರಸ್ತೆ ಮೂಲಕ ಸಾಗಿ ಅಜಾದ್ ವೃತ್ತ ತಲುಪಲಿದೆ ಎಂದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹೆಚ್.ಡಿ. ತಮ್ಮಯ್ಯ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ತಾನು ವಹಿಸುತ್ತೇನೆ, ಮುಖ್ಯ ಅತಿಥಿಗಳಾಗಿ ಸಂಸದ ಕೋಟಾ ಶ್ರೀನಿವಾಸಪೂಜಾರಿ, ಶಾಸಕರಾದ ಟಿ.ಡಿ ರಾಜೇಗೌಡ, ನಯನ ಮೋಟಮ್ಮ, ಸಿ.ಟಿ ರವಿ, ಎಸ್.ಎಲ್ ಭೋಜೇಗೌಡ, ಕೆಜಿಎಫ್ ಅಧ್ಯಕ್ಷ ಹಳಸೆ ಶಿವಣ್ಣ, ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ ಪ್ರಾಣೇಶ್, ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ ದಿನೇಶ್, ಮುಖ್ಯ ಕಾರ್ಯದರ್ಶಿ ಡಾ. ಕೂರ್ಮರಾವ್, ಜಿಲ್ಲಾಧಿಕಾರಿ ಸಿ.ಎನ್ ಮೀನಾನಾಗರಾಜ್, ಎಸ್ಪಿ ಡಾ. ವಿಕ್ರಮ ಅಮಟೆ ಮತ್ತಿತರರು ಭಾಗವಹಿಸಲಿದ್ದಾರೆಂದರು.

ಅಂತರಾಷ್ಟ್ರೀಯ ಕಾಫಿ ದಿನಾಚರಣೆಯನ್ನು ಕಳೆದ ೧೦ ವರ್ಷಗಳಿಂದ ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕಾಫಿ ಬೆಳೆಯುವ ಪ್ರದೇಶಗಳಲ್ಲಿ ಆಚರಿಸಲಾಗುತ್ತಿದ್ದು, ಪ್ರವಾಸಿ ತಾಣಗಳಾದ ಬೇಲೂರು, ಹಳೇಬೀಡು ಮತ್ತು ಕಳೆದ ಬಾರಿ ಮೈಸೂರು ದಸರಾ ಉತ್ಸವದಲ್ಲಿ ಉಚಿತ ಕಾಫಿ ವಿತರಿಸಿ ಭಾರತದ ಕಾಫಿ ಪರಂಪರೆಯನ್ನು ಹೆಚ್ಚು ಗ್ರಾಹಕರಿಗೆ ತಲುಪಿಸುವಲ್ಲಿ ಕೆಜಿಎಫ್ ಯಶಸ್ವಿಯಾಗಿದೆ ಎಂದು ಮಾಹಿತಿ ನೀಡಿದರು.

ಕಾಫಿ ಸೇವನೆಯಿಂದ ಆರೋಗ್ಯ ವೃದ್ಧಿಯ ಜೊತೆಗೆ ಹೃದಯ ಸಂಬಂಧಿ ಕಾಯಿಲೆಗಳು ದೂರವಾಗುತ್ತವೆ ಎಂಬ ಆರೋಗ್ಯ ಇಲಾಖೆಯಿಂದ ತಿಳಿದುಬಂದಿದ್ದು, ಬಾಳೇಹೊನ್ನೂರಿನಲ್ಲಿ ಇರುವ ಕಾಫಿ ಸಂಶೋಧನಾ ಕೇಂದ್ರಕ್ಕೆ ೧೦೦ ವರ್ಷಗಳು ತುಂಬುತ್ತಿರುವ ಈ ಸಂದರ್ಭದಲ್ಲಿ ಕಾಫಿ ದಿನವನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ೨೦ ಜನ ಕಾಫಿತೋಟ ಕಾರ್ಮಿಕರನ್ನು ಗೌರವಿಸಿ ಪ್ರಶಂಸನಾ ಪತ್ರ ನೀಡಲಾಗುವುದು. ಧರಗುಣಿ ಗ್ರಾಮದ ತೋಟ ಕಾರ್ಮಿಕರ ಮಗಳು ಕೃತಿಕ ಅವರಿಗೆ ‘ಮಹಿಳಾ ಕಾರ್ಮಿಕರ ಬದುಕು ಭವಣೆ’ ಎಂಬ ಮಹಾ ಪ್ರಬಂಧಕ್ಕೆ ಹಂಪಿ ವಿ.ವಿ ಯಿಂದ ಪಿಹೆಚ್‌ಡಿ ಡಾಕ್ಟರೇಟ್ ಪದವಿ ಪಡೆದಿರುವ ಇವರನ್ನು ಸನ್ಮಾನಿಸಿ ಗೌರವಿಸಲಾಗುವುದೆಂದರು.

ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಬೆಳೆಗಾರರು, ಕಾರ್ಮಿಕ ಬಂಧುಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕೆಂದು ವಿನಂತಿಸಿದರು. ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಹಳಸೆ ಶಿವಣ್ಣ, ಉಪಾಧ್ಯಕ್ಷ ಸುರೇಶ್, ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಕೆರಮಕ್ಕಿ ಮಹೇಶ್ ಉಪಸ್ಥಿತರಿದ್ದರು.

‘Walk with Coffee’ program in the city on October 1st

Related posts

ಶ್ರೀ ಕರಾಳಮ್ಮ, ಅಂತರಘಟ್ಟಮ್ಮ ಮತ್ತು ಪ್ಲೇಗಿನಮ್ಮ ನವರ ವಾರ್ಷಿಕ ಸಿಡಿ ಉತ್ಸವ

Team Suddigara

‌ರಾಜ್ಯ ಸರ್ಕಾರದಿಂದ ಸೂಫಿ ಸಂಸ್ಕೃತಿಗೆ ದ್ರೋಹ

Team Suddigara

ಬಿಜಿಎಸ್ ಆರೋಗ್ಯಪೂರ್ಣ ಸಮಾಜ ನಿರ್ಮಾಣದ ಸಂಕಲ್ಪ ಹೊಂದಿದ್ದರು

Team Suddigara

Leave a Comment