October 19, 2025
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಪೌರಕಾರ್ಮಿಕರ ಆರೋಗ್ಯ ಸದೃಢವಾಗಲು ಯೋಗಾಭ್ಯಾಸ ಅಗತ್ಯ

ಚಿಕ್ಕಮಗಳೂರು: ಪೌರಕಾರ್ಮಿಕರ ಆರೋಗ್ಯ ಮಾನಸಿಕ ಸದೃಢವಾಗಲು ದಿನದ ಒಂದು ಗಂಟೆ ಯೋಗಾಭ್ಯಾಸದ ತರಬೇತಿ ನೀಡುವ ಅಗತ್ಯ ಇದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು.

ಅವರು ಇಂದು ನಗರಸಭೆ ಸಭಾಂಗಣದಲ್ಲಿ ನಗರಸಭೆ, ಕರ್ನಾಟಕ ರಾಜ್ಯ ಪೌರ ನೌಕರರ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಪೌರಕಾರ್ಮಿಕರು ದುಶ್ಚಟಗಳಾದ ಮಾದಕ ವ್ಯಸನಗಳಿಂದ ದೂರವಾಗಿ ಆರೋಗ್ಯ ಕಾಪಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪೌರ ಕಾರ್ಮಿಕರು ಆರೋಗ್ಯವಾಗಿದ್ದಾಗ ಮಾತ್ರ ಎಲ್ಲಾ ನಾಗರಿಕರು ಆರೋಗ್ಯವಾಗಿರಲು ಸಾಧ್ಯ ಎಂದು ಹೇಳಿದರು.

ಕೆಲವು ಪೌರಕಾರ್ಮಿಕರನ್ನು ಸರ್ಕಾರ ಖಾಯಂಗೊಳಿಸಿರುವ ಮಾದರಿಯಲ್ಲಿ ನೀರುಗಂಟಿಗಳನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿಗಳ ಬಳಿಗೆ ನಿಯೋಗ ತೆರಳಿ ಖಾಯಂಗೊಳಿಸುವಂತೆ ಮನವಿ ಮಾಡುವುದಾಗಿ ಭರವಸೆ ನೀಡಿದರು.

ಡಾ. ಬಿ.ಆರ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಆಶಯದಂತೆ ಸಮಸಮಾಜ ನಿರ್ಮಾಣವಾಗಬೇಕೆಂಬ ಅವರ ಕನಸು ಇಂದು ಒಂದೇ ವೇದಿಕೆಯಲ್ಲಿ ಆಸೀನರಾಗಲು ಕಾರಣ ಬುದ್ಧ, ಬಸವ, ಅಂಬೇಡ್ಕರ್ ಸೇರಿದಂತೆ ಶರಣರ ಆಶಯ ಕಾರಣ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಮಾತನಾಡಿ, ಕಾಯಕ ಸಂಸ್ಕೃತಿಗೆ ಗೌರವ ಕೋಡುವ ಉದ್ದೇಶವೇ ಪೌರಕಾರ್ಮಿಕ ದಿನಾಚರಣೆಯ ಉದ್ದೇಶ ಎಂದು ಹೇಳಿದ ಅವರು, ಸ್ವಚ್ಚ ಕಾಯಕ ಮಾಡುವ ಪೌರಕಾರ್ಮಿಕರನ್ನು ಗೌರವದಿಂದ ಕಂಡಾಗ ಮಾತ್ರ ಸಮಾನತೆ, ಆರೋಗ್ಯ ಲಭಿಸುತ್ತದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿಯವರು ಜಾತಿ, ಭೇದಕ್ಕೆ ಆಸ್ಪದವಿಲ್ಲದೆ ದುಡಿಯುವ ವರ್ಗಕ್ಕೆ ಗೌರವ ನೀಡಬೇಕೆಂಬ ಉದ್ದೇಶದೊಂದಿಗೆ ಪೌರಕಾರ್ಮಿಕರ ಪಾದಪೂಜೆ ಮಾಡಿ ಕಾಯಕ ಸಂಸ್ಕೃತಿ ಎತ್ತಿ ಹಿಡಿದಿದ್ದಾರೆಂದು ಶ್ಲಾಘಿಸಿದರು.

೭೪ ಮನೆಗಳಲ್ಲಿ ೨೪ ಬಾಕಿ ಇದ್ದು, ಉಳಿದ ಕಾರ್ಮಿಕರಿಗೂ ಮನೆಗಳನ್ನು ನಿರ್ಮಿಸಿಕೊಡಬೇಕು, ೩೫ ನೌಕರರು ಖಾಯಂ ಮಾಡಿದ್ದು, ಉಳಿದವರನ್ನು ಮಾಡಲು ತಾಂತ್ರಿಕ ಸಮಸ್ಯೆ ಎದುರಾಗಿದೆ. ಕೂಡಲೇ ಇದನ್ನು ನಿವಾರಿಸಿ ಖಾಯಂಗೊಳಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ಪೌರಾಯುಕ್ತ ಬಿ.ಸಿ ಬಸವರಾಜ್ ಸ್ವಾಗತಿಸಿ ಮಾತನಾಡಿ, ಪೌರಕಾರ್ಮಿಕರ ಬೆಳಗಿನ ಉಪಹಾರಕ್ಕೆ ೩೫ ರೂ ಗೌರವಧನ ಸಂಕಷ್ಟ ಭತ್ಯೆ, ವಿಮಾ ಸೌಲಭ್ಯ ಕಲ್ಪಿಸಲಾಗಿದೆ. ಇನ್ನೂ ಮುಂತಾದ ಸೌಲಭ್ಯಗಳನ್ನು ಹಂತ ಹಂತವಾಗಿ ನೀಡುವುದಾಗಿ ಹೇಳಿದರು.

ನಗರಸಭಾಧ್ಯಕ್ಷೆ ಶೀಲಾ ದಿನೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಪಾಧ್ಯಕ್ಷೆ ಲಲಿತಾ ನಾಯ್ಕ್, ಮಾಜಿ ಅಧ್ಯಕ್ಷರುಗಳಾದ ಕವಿತಾ ಶೇಖರ್, ವರಸಿದ್ದಿ ವೇಣುಗೋಪಾಲ್ ಮಾತನಾಡಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರುಗಳಾದ ಎ.ಸಿ ಕುಮಾರ್‌ಗೌಡ, ಲಕ್ಷ್ಮಣ್, ಗುರುಮಲ್ಲಪ್ಪ, ಪರಮೇಶ್ ರಾಜ್ ಅರಸ್, ಸಿ.ಪಿ ಲಕ್ಷ್ಮಣ, ಅರುಣ್‌ಕುಮಾರ್, ಗೋಪಿ, ರೂಪಾ ಕುಮಾರ್, ಶಧಾಬ್ ಅಲಂ ಖಾನ್, ವಿಫುಲ್ ಕುಮಾರ್ ಜೈನ್, ಹುಣಸೇಮಕ್ಕಿ ಲಕ್ಷ್ಮಣ, ಪ್ರಕಾಶ್ ರೈ, ಪೌರ ಕಾರ್ಮಿಕ ಸಂಘದ ಅಧ್ಯಕ್ಷ ಅಣ್ಣಯ್ಯ, ಶಾಖಾ ಅಧ್ಯಕ್ಷ ಶ್ರೀನಿವಾಸ್, ಗೌರವಾಧ್ಯಕ್ಷ ನಾಗರಾಜ್, ಮತ್ತಿತರರು ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ತಾಲ್ಲೂಕು ಕಚೇರಿ ಆವರಣದಿಂದ ಡಾ. ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ರವರ ಭಾವಚಿತ್ರದೊಂದಿಗೆ ಜಾನಪದ ಕಲಾತಂಡಗಳ ಮೂಲಕ ಮೆರವಣಿಗೆ ಹೊರಟ ಪೌರ ಕಾರ್ಮಿಕರು ಹಾಗೂ ನಗರಸಭೆ ಸಿಬ್ಬಂದಿ ಎಂ.ಜಿ ರಸ್ತೆ ಮೂಲಕ ಸಾಗಿ ನಗರಸಭೆ ಆವರಣವನ್ನು ತಲುಪಿದರು.

Yoga is essential for the health of civil servants

Related posts

ಫುಟ್‌ಪಾತ್ ಮೇಲಿನ ವಸ್ತು ತೆರವಿಗೆ ನಿರ್ಧಾಕ್ಷಿಣ್ಯ ಕ್ರಮ ವಹಿಸಿ

Team Suddigara

ಅಕ್ಕಿ ವಿತರಣಾ ಕೇಂದ್ರಗಳಿಗೆ ಗ್ಯಾರಂಟಿ ಯೋಜನೆಗಳ ಅಧ್ಯಕ್ಷರ ಭೇಟಿ

Team Suddigara

ಭದ್ರಾನದಿಯಲ್ಲಿ ಮುಳುಗಿ ರಾಜಸ್ತಾನಿ ಯುವಕರ ಸಾವು

Team Suddigara

Leave a Comment

[t4b-ticker] [t4b-ticker]