ಚಿಕ್ಕಮಗಳೂರು: ಸ್ಥಗಿತಗೊಂಡಿರುವ ನೀರಾವರಿ ಕಾಮಗಾರಿಯನ್ನು ಪುನರಾರಂ ಭಿಸಲು ಆಗ್ರಹಿಸಿ ಸೋಮವಾರ ನಾಗೇನಹಳ್ಳಿ ಹಾಗೂ ಬೆರಟಿಕೆರೆ ನೀರು ತುಂಬಿಸುವ ಹೋರಾಟ ಸಮಿತಿ ವತಿಯಿಂದ ನಗರದ ಆಜಾದ್ಪಾರ್ಕ್ ವೃತ್ತದಲ್ಲಿ ರೈತ ಮುಖಂಡರುಗಳು ಬೃಹತ್ ಪ್ರತಿಭಟನೆ ನಡೆಸಿದರು.
ಈ ವೇಳೆ ಬಿಜೆಪಿ ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಹೆಚ್.ಸಿ.ಕಲ್ಮರುಡಪ್ಪ ಮಾತನಾಡಿ ಹಲವಾ ರು ವರ್ಷಗಳಿಂದ ಹುಲಿಕೆರೆ, ಬೆರಟಿಕೆರೆ ಹಾಗೂ ನಾಗೇನಹಳ್ಳಿ ಗ್ರಾಮದ ನೀರಿನ ಕಟ್ಟೆಗಳು ಬರಗಾಲಕ್ಕೆ ತು ತ್ತಾಗಿದ್ದವು. ಇದನ್ನು ಮನಗಂಡ ಜಿಲ್ಲಾಡಳಿತ ಟ್ಯಾಂಕರ್ ಮೂಲಕ ಗ್ರಾಮಗಳಿಗೆ ಕುಡಿಯುವ ನೀರನ್ನು ಸದ್ಯ ದ ಮಟ್ಟಿಗೆ ಒದಗಿಸುತ್ತಿದೆ ಎಂದು ಹೇಳಿದರು.
ಇದೇ ಗ್ರಾಮದ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ತಾತ್ಕಾಲಿಕ ಲಭ್ಯವಾದರೆ. ಜಾನುವಾರುಗಳು, ಪ್ರಾಣಿ-ಪಕ್ಷಿಗಳಿಗೆ ಕುಡಿಯಲು ನೀರಿಲ್ಲದೇ ಪರಿತಪಿಸುವಂತಾಗಿದೆ. ಅಯ್ಯನಕೆರೆ ಕೋಡಿ ನೀರು ಕಳೆದ ಎರ ಡೂವರೆ ತಿಂಗಳಿನಿಂದ ಹರಿಯತ್ತಿದ್ದರೂ, ಸ್ಥಳೀಯ ರೈತರ ಕೃಷಿ ಚಟುವಟಿಕೆಗೆ ನೀಡದೇ ಸರ್ಕಾರ ವಂಚಿಸು ತ್ತಿರುವ ಕಾರಣ ಗ್ರಾಮವೇ ಬರಗಾಲಕ್ಕೆ ತುತ್ತಾಗುತ್ತಿದೆ ಎಂದರು.
ಸದಾಕಾಲ ಬರಗಾಲಕ್ಕೆ ತುತ್ತಾಗಿರುವ ಗ್ರಾಮಗಳಿಗೆ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಯೋಜನೆಯಾಗಿದ್ದು, ಯಾವುದೇ ನೀರಾವರಿ ಉದ್ದೇಶವಿರುವುದಿಲ್ಲ. ಈ ಯೋಜನೆಯು ಅಯ್ಯನಕೆರೆ ಕೋ ಡಿ ಬಿದ್ದು ಹರಿದ ಸ್ವಲ್ಪ ಪ್ರಮಾಣದ ನೀರನ್ನು ಬಳಸುವ ಯೋಜನೆಯಾಗಿದ್ದು ಕೆರೆಗಳು ತುಂಬಿದ ನಂತರ ಪುನಃ ವೇದಾಹಳ್ಳಕ್ಕೆ ಹರಿಯುವುದರಿಂದ ಯಾರಿಗೂ ಸಮಸ್ಯೆಯಿಲ್ಲ ಎಂದು ತಿಳಿಸಿದರು.
ಹುಲಿಕೆರೆ, ಬೆರಟಿಕೆರೆ ಮತ್ತು ನಾಗೇನಹಳ್ಳಿ ಕಟ್ಟೆಗೆ ನೀರು ತುಂಬಿಸುವ ಯೋಜನೆಗೆ ಸರ್ಕಾರದಿಂದ ಅ ನುಮೋದನೆ ದೊರೆತಿದ್ದು ಅಂದಾಜು ೯.೯೦ ಕೋಟಿ ರೂ. ಮಂಜೂರಾಗಿದ್ದು ಟೆಂಡರ್ ಪ್ರಕ್ರಿಯೆ ಪೂರ್ಣ ಗೊಂಡಿದೆ. ಆದರೆ ಪ್ರಗತಿಯಲ್ಲಿ ಕಾಮಗಾರಿಯನ್ನು ಕೆಲವರ ತಪ್ಪು ಮಾಹಿತಿಯಿಂದ ಸ್ಥಗಿತಗೊಂಡಿರುವುದ ರಿಂದ ರೈತರಿಗೆ ಬಹಳಷ್ಟು ಸಮಸ್ಯೆ ಎದುರಾಗಿದೆ ಎಂದು ತಿಳಿಸಿದರು.
ರೈತ ಸಂಘದ ಮಾಜಿ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಮಾತನಾಡಿ ಜಿಲ್ಲೆ ಪಂಚನದಿಗಳ ಉಗಮ ಸ್ಥಾನವಾ ಗಿದೆ. ನೂರಾರು ಟಿಎಂಸಿ ನೀರು ವಿವಿಧ ಜಿಲ್ಲೆ ಸೇರಿದಂತೆ ಆಂಧ್ರಪದೇಶ ಮತ್ತು ತಮಿಳುನಾಡಿಗೆ ಹರಿಯು ತ್ತಿದೆ. ಆದರೆ ಬಯಲುಸೀಮೆ ರೈತರಿಗೆ ಅಲ್ಪಪ್ರಮಾಣದ ನೀರನ್ನು ಒದಗಿಸದೇ ಸರ್ಕಾರ ರೈತರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಹೇಳಿದರು.
ಕೇವಲ ಮಳೆಯಾಶ್ರಯದಲ್ಲಿ ಬೆಳೆ ಬೆಳೆಯುತ್ತಿದ್ದ ರೈತರಿಗೆ ನೀರಿನ ಬೆಲೆ ಗೊತ್ತಾಗಿದೆ. ಪ್ರಸ್ತುತ ಆಧುನಿ ಕ ಬೇಸಾಯಕ್ಕೆ ನೀರಿನ ಬಳಕೆ ಅತ್ಯವಶ್ಯವಾಗಿದ್ದು ಆ ನಿಟ್ಟಿನಲ್ಲಿ ಸರ್ಕಾರ ಕಟ್ಟುನಿಟ್ಟಿನ ಕಾನೂನು ರೂಪಿಸಿ ಸ್ಥಳೀಯರಿಗೆ ನೀರೋದಗಿಸುವ ಮೊದಲ ಆದ್ಯತೆ ನೀಡಬೇಕು. ಅಯ್ಯನಕೆರೆ ಬೊಗಸೆ ನೀರಿಗಷ್ಟೆ ಆಸೆಪಟ್ಟಿರು ವ ರೈತರಿಗೆ ಜನಪ್ರತಿಧಿಗಳು ಜವಾಬ್ದಾರಿ ಹೊತ್ತು ನ್ಯಾಯ ಒದಗಿಸಿಕೊಡಬೇಕು ಎಂದು ಹೇಳಿದರು.
ಕೆಪಿಸಿಸಿ ವಕ್ತಾರ ರವೀಶ್ ಕ್ಯಾತನಬೀಡು ಮಾತನಾಡಿ ರೈತರು ಸಂಘಟಿತರಾಗಿ ಹೋರಾಟ ರೂಪಿಸಿದಾ ಗ ಮಾತ್ರ ನೀರಾವರಿ ಯೋಜನೆ ಪೂರ್ಣಗೊಳ್ಳಲು ಸಾಧ್ಯ. ಹೀಗಾಗಿ ಜನಪ್ರತಿನಿಧಿಗಳ ಸುಳ್ಳು ಮಾತಿಗೆ ಹಾ ಗೂ ಹಾಡಿಹೊಗಳಿಕೆಗೆ ಮಾರುಹೋಗದಿರಿ. ಒಟ್ಟಿನಲ್ಲಿ ಗ್ರಾಮದ ಕೆರೆಗಳು ನೀರು ತುಂಬಿಸಿ ಜನ-ಜಾನುವಾ ರು, ಪ್ರಾಣಿ-ಪಕ್ಷಿಗಳಿಗೆ ತಲುಪುವಂತಾಗುವುದು ಗುರಿಯಾಗಬೇಕು ಎಂದರು.
ರೈತ ಸಂಘದ ಜಿಲ್ಲಾಧ್ಯಕ್ಷ ಮಹೇಶ್ ಮಾತನಾಡಿ ಬಯಲುಸೀಮೆಯಿಂದ ಬೆಂಗಳೂರಿನವರೆಗೆ ಹರಿ ಯುತ್ತಿರುವ ನೀರನ್ನು ಸರ್ಕಾರ ಸ್ಥಳೀಯರಿಗೆ ಬೊಗಸೆಯಷ್ಟು ಉಳಿಸಿಕೊಡಬೇಕು. ಒಂದು ತಿಂಗಳಿನ ಗಡು ವಿನೊಳಗೆ ನೀರಾವರಿ ಯೋಜನೆ ಪುನರಾರಂಭಿಸದಿದ್ದರೆ, ಶಾಸಕರ ಹಾಗೂ ಜಿಲ್ಲಾಡಳಿತ ಕಚೇರಿ ಎದುರು ಜಾನುವಾರು ಸಮೇತ ರೈತರು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಇದೇ ವೇಳೆ ಪ್ರತಿಭಟನಾ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ನಾರಾಯಣಕನಕ ರಡ್ಡಿ ಹಾಗೂ ತಹಶೀಲ್ದಾರ್ ರೇಷ್ಮಾ ಭೇಟಿ ನೀಡಿ ರೈತರ ಸಮಸ್ಯೆ ಆಲಿಸಿ, ಮನವಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ರೈತ ಮುಖಂಡರು ಗಳಾದ ವಿಜಯ್ಕುಮಾರ್, ರುದ್ರಮೂರ್ತಿ, ಮೋಹನ್ಕುಮಾರ್, ಅಣ್ಣಾನಾಯ್ಕ್, ಉಮೇಶ್, ಸಚಿ ನ್ಎತ್ತಿನಮನೆ, ಚಂದ್ರುಹುಲಿಕೆರೆ, ಮುಳ್ಳಪ್ಪ, ಪುಷ್ಪರಾಜ್ ಮತ್ತಿತರರು ಹಾಜರಿದ್ದರು.
Protest to resume stalled irrigation works
