May 18, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಶೃಂಗೇರಿ ಕಿಲ್ಲರ್ ಕಾಡಾನೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿ

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆಕಟ್ಟೆ ಸಮೀಪದ ಕೆರೆಗದ್ದೆ ಗ್ರಾಮದಲ್ಲಿ ಇಬ್ಬರನ್ನು ಬಲಿ ಪಡೆದು, ಬೆಳೆ ನಾಶ ಮಾಡಿ ಆತಂಕ ಸೃಷ್ಟಿ ಮಾಡಿದ್ದ ಕಾಡಾನೆ ಕೊನೆಗೂ ‌ಸೆರೆಯಾಗಿದೆ. ಭಾನುವಾರ ಸಂಜೆಯಿಂದ ಕಾರ್ಯಾಚರಣೆ ನಡೆಸಿದ್ದ ಅರಣ್ಯ ಇಲಾಖೆ ಕೊನೆಗೂ ಹಂತಕ ಆನೆಯನ್ನು ಲಾಕ್ ಮಾಡಿದೆ.

ಹಂತಕ ಕಾಡಾನೆ ‌ಸೆರೆ ಕಾರ್ಯಾಚರಣೆಗಾಗಿ ದುಬಾರೆ ಆನೆ ಶಿಬಿರದಿಂದ ಏಕಲವ್ಯ ಟೀಮ್ ಶೃಂಗೇರಿ ತಾಲೂಕಿನ ಕೆರೆ ಕಟ್ಟೆ ಕ್ಯಾಂಪ್ಗೆ ಬಂದಿತ್ತು. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿರುವ ಶೃಂಗೇರಿ ತಾಲೂಕಿನ ಭಗವತಿ ಪ್ರದೇಶದ ಸಮೀಪದಲ್ಲೇ ಕುಮ್ಕಿ ಆನಗೆಳಿದ್ದವು. ಇದೇ ಪ್ರದೇಶದ ಸಮೀಪ ಕಾಡಾನೆ ಓಡಾಟ ನಡೆಸಿದ್ದು ಭಾನುವಾರ ಸಂಜೆಯ ಕಾರ್ಯಾಚರಣೆ ವೇಳೆ ತಿಳಿದುಬಂದಿದೆ.

ಕಿಲ್ಲರ್ ‌ಸಲಗದ ಓಡಾಟದ ಸುಳಿವು ‌ ಸಿಗುತ್ತಿದ್ದಂತೆ ಅಲರ್ಟ್ ಆದ ಅರಣ್ಯ ಇಲಾಖೆಯ ಸಿಬ್ಬಂದಿ, ರಾತ್ರಿ ವೇಳೆ ಕಾರ್ಯಾಚರಣೆ ನಡೆಸಿದ್ದಾರೆ. ಭಗವತಿ ಪ್ರದೇಶದ ಬಳಿ ಕಾಡಾನೆಗೆ ಪಶು ವೈದ್ಯರು ಡಾಟ್ ಮಾಡಿದ್ದಾರೆ. ಏಕಲವ್ಯ ನೇತೃತ್ವದ ಹರ್ಷ, ಅಜೇಯ, ಧನಂಜಯ, ಪ್ರಶಾಂತ ಕುಮ್ಕಿ ಆನೆಗಳು ಕಾರ್ಯಾಚರಣೆ ನಡೆಸಿದ್ದು, ಹಂತಕ ಕಾಡಾನೆಯನ್ನು ಲಾಕ್ ಮಾಡಲಾಗಿದೆ. ಸೋಮವಾರ ಬೆಳಗ್ಗೆ ನಡೆಯಬೇಕಿದ್ದಕಾರ್ಯಾಚರಣೆಯನ್ನು ಭಾನುವಾರ ರಾತ್ರಿಯೇ ನಡೆಸಿದ ಅರಣ್ಯ ಇಲಾಖೆ ಕಾಡಾನೆ ಸೆರೆ ಕಾರ್ಯಚರಣೆ ಯಶಸ್ವಿಯಾಗಿದೆ.

Forest Department successful in capturing Sringeri killer elephant

Related posts

ಮಕ್ಕಳು ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿತರಾಗಬಾರದು

Team Suddigara

ದೇವರ ದಾಸಿಮಯ್ಯ ಸರ್ವ ಸಮುದಾಯಗಳಿಗೆ ಮಾದರಿ

Team Suddigara

ಸಮಾಜದಲ್ಲಿ ಪ್ರೌಢಾವಸ್ಥಮಹಿಳೆ ಕುಟುಂಬದ ಆಧಾರಸ್ತಂಭ

Team Suddigara

Leave a Comment