May 18, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಕಬ್ಬಿನ ದರ ಹೆಚ್ಚಳಕ್ಕೆ ಆಗ್ರಹಿಸಿ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಪ್ರತಿ ಟನ್‌ಗೆ ಕಬ್ಬಿಗೆ ₹3,500 ದರ ನಿಗದಿ ಮಾಡಬೇಕು ಎಂದು ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಕಬ್ಬಿನ ಹೊರೆ ಹೊತ್ತು ಬಂದಿದ್ದ ರೈತರು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ರೈತ ಸಂಘದ ಜಿಲ್ಲಾ ಘಟಕ ಅಧ್ಯಕ್ಷ ಡಿ.ಮಹೇಶ್, ‘ಕಬ್ಬಿಗೆ ನಿಗದಿತ ದರ ನೀಡುವಂತೆ ಬೆಳಗಾವಿಯಲ್ಲಿ ಚಳವಳಿ ನಡೆಸುತ್ತಿರುವ ರೈತರನ್ನು ಬೆಂಬಲಿಸಲು ಹೋರಾಟ ನಡೆಸಲಾಗುತ್ತಿದೆ’ ಎಂದರು.

ಕಳೆದ ಒಂದು ವಾರದಿಂದ ಅಹೋರಾತ್ರಿ ಹೋರಾಟ ನಡೆಸುತ್ತಿರುವ ರೈತರಿಗೆ ಸರ್ಕಾರ ನ್ಯಾಯ ದೊರಕಿಸಿಕೊಡಬೇಕು. ಕಬ್ಬು ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್‌ಗೆ ₹3,500 ನೀಡುತ್ತಿಲ್ಲ. ರಾಜ್ಯ ಸರ್ಕಾರ ರೈತರ ಸಮಸ್ಯೆ ಆಲಿಸುತ್ತಿಲ್ಲ. ಸರ್ಕಾರದ ನಡೆ ಗಮನಿಸಿದರೆ ಕಾರ್ಖಾನೆಗಳ ಒತ್ತಡಕ್ಕೆ ಮಣಿದಂತಿದೆ ಎಂದು ಹೇಳಿದರು.

ನೆರೆಯ ಮಹಾರಾಷ್ಟ್ರದ ಸಕ್ಕರೆ ಕಾರ್ಖಾನೆಗಳಲ್ಲಿ ಪ್ರತಿ ಟನ್ ಕಬ್ಬಿಗೆ ₹3,500ರಿಂದ ₹3,600 ದರ ಸಿಗುತ್ತಿದೆ. ಆದರೆ, ಕರ್ನಾಟಕದ ಸಕ್ಕರೆ ಕಾರ್ಖಾನೆ ಮಾಲೀಕರು ಕೇವಲ ₹3,000 ದರದಲ್ಲಿ ಕಬ್ಬು ಖರೀದಿ ಮಾಡುತ್ತಿದ್ದಾರೆ. ಆ ಮೂಲಕ ರಾಜ್ಯದ ರೈತರಿಗೆ ದ್ರೋಹ ಮಾಡುತ್ತಿದ್ದಾರೆ ಎಂದು ದೂರಿದರು.

ಭೂಸ್ವಾಧೀನ ಪರಿಹಾರ ಸಿಗದೆ ಮಂಡ್ಯ ಜಿಲ್ಲೆಯ ಮೂಡನಹಳ್ಳಿ ಗ್ರಾಮದ ರೈತ ಜಿಲ್ಲಾಧಿಕಾರಿ ಕಚೇರಿ ಎದುರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ಇಂದಿಗೂ ಆ ರೈತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುತ್ತಿಲ್ಲ. ಹಾಗಾಗಿ, ರೈತರಿಗೆ ಭೂಸ್ವಾಧೀನ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ರೈತ ಸಂಘದ ಮುಖಂಡ ಗುರುಶಾಂತಪ್ಪ, ಪ್ರಧಾನ ಕಾರ್ಯದರ್ಶಿ ಎಂ.ಬಿ.ಚಂದ್ರಶೇಖರ್, ಗೌರವಾಧ್ಯಕ್ಷ ಎಂ.ಸಿ.ಬಸವರಾಜು, ಉಪಾಧ್ಯಕ್ಷ ಡಿ.ಕುಮಾರಸ್ವಾಮಿ, ಸಂಘಟನಾ ಕಾರ್ಯದರ್ಶಿ ದೇವರಾಜ್, ಖಜಾಂಚಿ ಕೆ.ಬಿ.ಲೋಕೇಶ್ ಭಾಗವಹಿಸಿದ್ದರು.

Farmers’ association protests demanding increase in sugarcane prices

Related posts

ತಾಯಿಹಾಲಿನ ಮಹತ್ವ ತಿಳಿಸುವುದು ಸ್ತನ್ಯಪಾನ ಸಪ್ತಾಹದ ಉದ್ದೇಶ

Team Suddigara

ಪದವಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ತರಬೇತಿ

Team Suddigara

ಕ್ಷೇತ್ರದಲ್ಲಿ 596 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿ

Team Suddigara

Leave a Comment