May 18, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆ ಬಹಿಷ್ಕಾರ

ಚಿಕ್ಕಮಗಳೂರು: ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಜಟಿಲವಾಗಿರುವ ಡೀಮ್ಡ್ ಮತ್ತು ೪(೧) ಅಧಿಸೂಚನೆ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳದಿದ್ದರೆ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಬಹಿಷ್ಕರಿಸಲು ಜಿಲ್ಲಾ ನಾಗರೀಕ ಮತ್ತು ರೈತ ಹೋರಾಟ ಸಮಿತಿ ನಿರ್ಧರಿಸಿದೆ ಎಂದು ಸಮಿತಿಯ ಜಿಲ್ಲಾ ಅಧ್ಯಕ್ಷ ಎಸ್.ವಿಜಯ್‌ಕುಮಾರ್ ಎಚ್ಚರಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸುಪ್ರೀಂಕೋರ್ಟ್ ನಿರ್ದೇಶನದಂತೆ ಡೀಮ್ಡ್ ಫಾರೆಸ್ಟ್ ಪುನರ್ ಪರಿಶೀಲಿಸಿ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಎಸ್‌ಐಟಿ ರಚಿಸಿದೆ. ಎಸ್‌ಐಟಿ ಕಾರ್ಯವೈಖರಿ ಬಗ್ಗೆಯೇ ಸಾರ್ವಜನಿಕರಲ್ಲಿ ಗೊಂದಲಗಳಿವೆ. ಎಸ್‌ಐಟಿ ತನಿಖಾ ವ್ಯಾಪ್ತಿಯನ್ನು ಸಾರ್ವಜನಿಕವಾಗಿ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ಕಳೆದ ಮಾರ್ಚ್ ತಿಂಗಳಲ್ಲಿ ಎಸ್‌ಐಟಿ ರಚನೆಗೆ ಆದೇಶಿಸಿದ್ದು, ನವೆಂಬರ್ ಅಂತ್ಯದೊಳಗೆ ಡೀಮ್ಡ್ ಫಾರೆಸ್ಟ್‌ನ ಪರಿಷ್ಕೃತ ಪಟ್ಟಿಯ ವರದಿ ಸಲ್ಲಿಸುವಂತೆ ತಿಳಿಸಲಾಗಿದೆ. ಆದರೆ, ಇತ್ತೀಚೆಗೆ ಎಸ್‌ಐಟಿ ರಚನೆಯಾಗಿದೆ. ಜಿಲ್ಲೆಯ ೫೨೯೦೦ ಹೆಕ್ಟೇರ್ ಪ್ರದೇಶದಲ್ಲಿರುವ ರೈತರ ಸಮಸ್ಯೆ, ಗ್ರಾ.ಪಂ ಅಗತ್ಯತೆ, ಸಾರ್ವಜನಿಕ ಸ್ಮಶಾನ, ಶಾಲೆ ಅಗತ್ಯತೆಗಳಂತಹ ಸಾರ್ವಜನಿಕ ಉಪಯೋಗಕ್ಕೆ ಬೇಕಾಗುವ ಪ್ರದೇಶಗಳನ್ನು ಗುರುತಿಸಬೇಕಿದೆ ಎಂದು ಹೇಳಿದರು.

ನಿಗಧಿತ ಮರ ಇಲ್ಲದಿರುವ ಪ್ರದೇಶಗಳನ್ನು ಕೈಬಿಡುವುದು ಹಾಗೂ ಅರಣ್ಯ ಪರಿಭಾವಿತ ಪ್ರದೇಶಗಳನ್ನು ಡೀಮ್ಡ್ ಫಾರೆಸ್ಟ್‌ಗೆ ಸೇರಿಸಿ ಸಮೀಕ್ಷೆ ಮಾಡಿ ನವೆಂಬರ್ ಅಂತ್ಯದೊಳಗೆ ಸುಪ್ರೀಂಕೋರ್ಟಿಗೆ ನೈಜ ವರದಿ ನೀಡಬೇಕಿದೆ. ಇಷ್ಟು ಅಲ್ಪ ಅವಧಿಯಲ್ಲಿ ಈ ಕೆಲಸ ಸಾಧ್ಯವಾ ಎಂದು ಪ್ರಶ್ನಿಸಿದ ಅವರು, ಕನಿಷ್ಠ ೬ ತಿಂಗಳು ಕಾಲಾವಕಾಶ ಕೋರಿ ರಾಜ್ಯ ಸರಕಾರ ಸುಪ್ರೀಂಕೋರ್ಟಿಗೆ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಒತ್ತಾಯಿಸಿದರು.

೪(೧) ಅಧಿಸೂಚನೆಯ ನಿಯಮಾವಳಿಗಳನ್ನು ಪಾಲಿಸದೆ ಮನಸೋ ಇಚ್ಛೆ ಕಚೇರಿಗಳಲ್ಲೇ ಕುಳಿತು ಅಧಿಕಾರಿಗಳು ನೊಟೀಫಿಕೇಶನ್ ಮಾಡಿರುವುದನ್ನು ಜುಲೈ ತಿಂಗಳಲ್ಲಿ ನಡೆದ ಉನ್ನತ ಅಧಿಕಾರಿಗಳು, ಕಂದಾಯ, ಅರಣ್ಯ ಸಚಿವರ ಸಭೆಯಲ್ಲಿ ಹೋರಾಟ ಸಮಿತಿಯ ಮುಖಂಡರು ಗಮನ ಸೆಳೆದಿದ್ದಾರೆ. ಇದಕ್ಕೆ ಪರಿಹಾರವನ್ನೂ ಕಂಡುಕೊಳ್ಳಲಾಗಿದೆ. ಅದರೆ, ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಸಮಸ್ಯೆ ಇನ್ನೂ ಜಟಿಲವಾಗಿದ್ದು, ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳದಿದ್ದರೆ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಬಹಿಷ್ಕರಿಸಲು ಇತ್ತೀಚೆಗೆ ನಡೆದ ಸಮಿತಿಯ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಮುಖಂಡರಾದ ಕೆ.ಕೆ.ರಘು, ರತೀಶ್, ಮಹೇಶ್ ಕೆರೆಮಕ್ಕಿ, ಪೂರ್ಣೇಶ್, ಈಶ್ವರ್, ಮಿಥುನ್, ಸತೀಶ್, ಕುಮಾರಸ್ವಾಮಿ ಮತ್ತಿತರರಿದ್ದರು.

Boycott upcoming Gram Panchayat elections

Related posts

ಸಾರ್ವಜನಿಕರ ಪ್ರಶಂಸೆ ವ್ಯಕ್ತವಾದಾಗ ರೋಟರಿ ಸಂಸ್ಥೆಯ ಸೇವೆ ಸಾರ್ಥಕ

Team Suddigara

ಚಿಕ್ಕಮಗಳೂರಿಗೆ ನ್ಯೂರೋ ಸರ್ಜಿಕಲ್ ಕೇಂದ್ರದ ಅಗತ್ಯತೆ ಸಾಕಷ್ಟಿತ್ತು

Team Suddigara

ಶಿಕ್ಷಣ ಪಡೆದ ಶಾಲೆಯ ಋಣ ತೀರಿಸಿದ ಶಾಸಕ ತಮ್ಮಯ್ಯ

Team Suddigara

Leave a Comment