June 26, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ವೈಕುಂಠ ಏಕಾದಶಿಗೆ ದೇವಾಲಯಗಲ್ಲಿ ಜನಸಾಗರ

ವೈಕುಂಠ ಏಕಾದಶಿಗೆ ದೇವಾಲಯಗಲ್ಲಿ ಜನಸಾಗರ

ಚಿಕ್ಕಮಗಳೂರು: ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ನಗರದ ಹಿರೇಮಗಳೂರು ಶ್ರೀ ಕೋದಂಡರಾಮಚಂದ್ರಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ಸಾವಿರಾರು ಭಕ್ತರು ಸರತಿಯಲ್ಲಿ ಬಂದು ಉತ್ತರ ದಿಕ್ಕಿನ ಬಾಗಿಲ ಮೂಲಕ ವೈಕುಂಠ ದ್ವಾರವನ್ನು ಹಾದು ರಾಮನದರ್ಶನ ಪಡೆದರು.

ಸಂಜೆವರೆಗೆ ಭಕ್ತಗಣ ನಿರಂತವಾಗಿ ಹರಿದು ಬರುತ್ತಲೇ ಇತ್ತು. ಕನ್ನಡದಲ್ಲೇ ಪ್ರಾರ್ಥನೆ, ಭಜನೆ ಮಾಡಿ, ಪೂಜೆ, ಪುನಸ್ಕಾರಗಳನ್ನು ನೆರವೇರಿಸಿದರು. ಉತ್ಸವ ಮೂರ್ತಿಗೆ ಪ್ರದಕ್ಷಿಣೆ ಹಾಕಿ, ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ ಪ್ರಧಾನ ಅರ್ಚಕ ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ನೇತೃತ್ವದ ತಂಡವು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿತು.

ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಬೆಳಗ್ಗೆ ೫ ಗಂಟೆಗೆ ಶ್ರೀ ಕೋದಂಡರಾಮಚಂದ್ರಸ್ವಾಮಿಗೆ ಸುಪ್ರಭಾತ ಸೇವೆ, ವೇದಪಠಣ, ಅಭಿಷೇಕ, ವಿಶೇಷ ಪೂಜೆ, ಅಲಂಕಾರ ನಡೆಯಿತು. ಮಹಾಮಂಗಳಾರತಿ ನಂತರ ಬೆಳಗ್ಗೆ ೫.೩೦ ಕ್ಕೆ ಗರ್ಭಗುಡಿಯಿಂದ ಉತ್ಸವ ಮೂರ್ತಿಯನ್ನು ಹೊರತಂದು ದೇವಾಲಯದ ಪ್ರಾಂಗಣದಲ್ಲಿ ಮೆರವಣಿಗೆ ಮಾಡಲಾಯಿತು. ವೈಕುಂಠ ದ್ವಾರಕ್ಕೆ ಪೂಜೆ ಸಲ್ಲಿಸಿದ ಬಳಿಕ ವೈಕುಂಠ ದ್ವಾರದ ಮೂಲಕ ಉತ್ಸವ ಮೂರ್ತಿಯನ್ನು ಕೊಂಡೊಯ್ದು ಮೇಲ್ಬಾಗದಲ್ಲಿ ಪ್ರತಿಷ್ಠಾಪಿಸಿ ಪೂಜಿಸಲಾಯಿತು.

ವರ್ಷಕ್ಕೊಮ್ಮೆ ಮಾತ್ರ ವೈಕುಂಠದ್ವಾರದ ಬಾಗಿಲು ತೆರೆಯುವ ಹಿನ್ನೆಲೆಯಲ್ಲಿ ನಗರ ಮತ್ತು ಸುತ್ತಮುತ್ತಲ ಗ್ರಾಮ ಹಾಗೂ ರಾಜ್ಯದ ವಿವಿಧ ಭಾಗದಿಂದ ಭಕ್ತರು ಆಗಮಿಸಿದ್ದರು. ಮೈಕೊರೆವ ಮಾಗಿ ಚಳಿಯನ್ನು ಲೆಕ್ಕಿಸದೆ ಸರತಿ ಸಾಲಿನಲ್ಲಿ ಕಾಯುತ್ತಾ ನಿಂತು ವೈಕುಂಠ ದ್ವಾರ ತೆರೆಯುತ್ತಿದ್ದಂತೆ ಉತ್ಸವ ಮೂರ್ತಿಯೊಂದಿಗೆ ದ್ವಾರವನ್ನು ಪ್ರವೇಶಿಸಿದರು.

ಭಕ್ತರಿಂದ ಭಜನೆ, ಭಗವದ್ಗೀತೆಯ ಪಠಣ, ನಾಮ ಸಂಕೀರ್ತನೆ ಜರುಗಿತು. ಸಹಸ್ರಾರು ಭಕ್ತರು ರಾಮನಾಮ ಲಿಪಿ ಬರೆದು ರಾಮನಾಮ ಲಿಪಿ ಮಂಟಪಕ್ಕೆ ಸಮರ್ಪಿಸಿದರು. ದೇವಾಲಯದ ವತಿಯಿಂದ ಭಕ್ತರಿಗೆ ಪೊಂಗಲ್ ಪ್ರಸಾದ ವಿತರಿಸಲಾಯಿತು. ಬೆಳಗಿನಿಂದ ರಾತ್ರಿಯವರೆಗೆ ನಗರ ಮತ್ತು ಸುತ್ತಮುತ್ತಲ ಗ್ರಾಮಗಳ ಭಕ್ತರು ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ ವೈಕುಂಠ ದ್ವಾರವನ್ನು ಪ್ರವೇಶಿಸಿ ಸಂಭ್ರಮಿಸಿದರು.

Crowds throng temples on Vaikuntha Ekadashi

Related posts

ಸಮಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರಿಗೂ ಆರ್ಥಿಕ ಶಕ್ತಿ ಅಗತ್ಯ

Team Suddigara

ದೇವರ ದಾಸಿಮಯ್ಯ ಸರ್ವ ಸಮುದಾಯಗಳಿಗೆ ಮಾದರಿ

Team Suddigara

ಸರ್ಕಾರಿ ಶಾಲಾ-ಕಾಲೇಜುಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಸರ್ಕಾರ ಬದ್ಧ

Team Suddigara

Leave a Comment