May 18, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಪರೀಕ್ಷಾ ಕೊಠಡಿಗಳಲ್ಲಿ ಏಕಾಗ್ರತೆ-ಆತ್ಮವಿಶ್ವಾಸ ಮುಖ್ಯ

ಎಐಟಿ ಕಾಲೇಜಿನ ಪಾಲಿಟೆಕ್ನಿಕ್ ಸಭಾಂಗಣದಲ್ಲಿ ವಿಜಯಂಗಮ ಕಾರ್ಯಕ್ರಮ

ಚಿಕ್ಕಮಗಳೂರು: ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳು ಏಕಾಗ್ರತೆ, ಜ್ಞಾಪಕಶಕ್ತಿ ಹಾ ಗೂ ಆತ್ಮವಿಶ್ವಾಸದಿಂದ ಕೂಡಿದ್ದರೆ ಮಾತ್ರ ನಿಗಧಿತ ಅಂಕಗಳಿಸುವ ಮೂಲಕ ತೇರ್ಗಡೆ ಹೊಂದಬಹುದು ಎಂದು ಎಐಟಿ ಕಾಲೇಜು ಪ್ರಾಂಶುಪಾಲ ಡಾ|| ಸಿ.ಟಿ.ಜಯದೇವ್ ಹೇಳಿದರು.

ನಗರದ ಎಐಟಿ ಕಾಲೇಜಿನ ಪಾಲಿಟೆಕ್ನಿಕ್ ಸಭಾಂಗಣದಲ್ಲಿ ವಿಜಯಂಗಮ ಕಾರ್ಯಕ್ರಮ ಪ್ರಯುಕ್ತ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಮತ್ತು ಪರೀಕ್ಷಾ ಸಿದ್ಧತೆ ಕಾರ್ಯಾಗಾರದ ಅಧ್ಯ ಕ್ಷತೆ ವಹಿಸಿ ಭಾನವಾರ ಅವರು ಮಾತನಾಡಿದರು.

ಅಂತಿಮ ಪರೀಕ್ಷೆಗಳಲ್ಲಿ ಪ್ರತಿ ವಿದ್ಯಾರ್ಥಿಗಳಿಗೆ ಆತಂಕ, ಭಯ ಎನ್ನುವುದು ಸಹಜ. ಕಲಿತಂಥ ವಿದ್ಯೆ ಹಾಗೂ ತುಂಬು ಮನಸ್ಸಿನಿಂದ ಪರೀಕ್ಷೆ ಎದುರಿಸಿದರೆ ಪ್ರಶ್ನೆಗಳಿಗೆ ಸಲೀಸಾಗಿ ಉತ್ತರ ಬರೆಯಬಹುದು. ಹೀ ಗಾಗಿ ಪರೀಕ್ಷಾ ಕೊಠಡಿಗಳಲ್ಲಿ ಎಲ್ಲಾ ಭಯವನ್ನು ಬಿಟ್ಟು ಮುಕ್ತವಾಗಿರಬೇಕು ಎಂದು ತಿಳಿಸಿದರು.

ಅಧಿಕ ಅಂಕ ಗಳಿಸಲು ಕೆಲವರು ದಿನವೀಡಿ ಓದುವ ಹವ್ಯಾಸ ರೂಢಿಸಿಕೊಳ್ಳುತ್ತಾರೆ. ಆದರೆ ಪರೀಕ್ಷೆ ವೇಳೆಯಲ್ಲಿ ಜ್ಞಾಪಕಶಕ್ತಿ ಕುಂದಲಿವೆ. ಹೀಗಾಗಿ ಕನಿಷ್ಟ ಐದಾರು ಗಂಟೆಗಳ ಪಠ್ಯವನ್ನು ಅಭ್ಯಾಸಿಸುವ ಮೂ ಲಕ ಮನದಟ್ಟು ಮಾಡಿಕೊಳ್ಳಬೇಕು. ಇದರಿಂದಾಗಿ ಪರೀಕ್ಷೆ ಎದುರಿಸುವ ಆತ್ಮವಿಶ್ವಾಸ ತಾನಾಗಿಯೇ ಮುನ್ನೆ ಲೆಗೆ ಬರಲಿದೆ ಎಂದು ಹೇಳಿದರು.

ಪರೀಕ್ಷಾ ಸಮಯದಲ್ಲಿ ಓದಿನ ಜೊತೆಗೆ ಆರೋಗ್ಯ ಕಡೆ ಹೆಚ್ಚು ಗಮನಹರಿಸಬೇಕು. ಸಮಯಕ್ಕೆ ಸರಿ ಯಾಗಿ ನಿದ್ರೆ, ಊಟ ಸೇವಿಸಬೇಕು. ಮಲಗುವ ಮುನ್ನ ಅಭ್ಯಾಸಿದಂಥ ಪಠ್ಯವನ್ನು ನೆನಪಿಸಿಕೊಳ್ಳಬೇಕು. ಪ್ರಶ್ನೆಗಳು ಪುಸ್ತಕ ಹೊರತಾಗಿ ಇರುವ ಕಾರಣ ಅರ್ಥೈಸಿಕೊಂಡು ಸಕರಾತ್ಮಕ ಮನೋಭಾವದಿಂದ ಎದುರಿ ಸಿದರೆ ಉನ್ನತ ಸ್ಥಾನದಲ್ಲಿ ಹೊರಹೊಮ್ಮಲು ಸಾಧ್ಯ ಎಂದರು.

ಇಟಾಲಿಕ್ ಕೈಬರಹ ತಜ್ಞ ದುಗ್ಗಪ್ಪಗೌಡ ಮಾತನಾಡಿ ಅಂತಿಮ ಪರೀಕ್ಷೆಗಳಲ್ಲಿ ಮಕ್ಕಳು ಶಕ್ತಿವಂತರಾ ಗಬೇಕು. ಪರೀಕ್ಷೆ ಎರಡ್ಮೂರು ತಿಂಗಳ ಮುನ್ನವೇ ಕಲಿಕೆಗೆ ಹೆಚ್ಚು ಪ್ರಾಧಾನ್ಯತೆ ನೀಡಬೇಕು. ಶರೀರಿದ ನರ, ನಾಡಿ ಹಾಗೂ ಮಸ್ತಕದಲ್ಲಿ ಪರೀಕ್ಷೆ ಎದುರಿಸುವ ಸಾಮರ್ಥ್ಯ ಬೆಳೆಸಿಕೊಂಡರೆ ಸುಲಭವಾಗಿ ಮುಂದಿನ ತರ ಗತಿಗೆ ತೇರ್ಗಡೆಯಾಗಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಹಯೋಗ ಮತ್ತು ಪ್ರಚಾರ ವ್ಯವಸ್ಥಾಪಕಿ ಎಸ್.ಡಿ.ಚಂದ್ರಕು ಮಾರಿ ಪರೀಕ್ಷಾ ಕೊಠಡಿಗಳಲ್ಲಿ ಪ್ರಶ್ನೆಪತ್ರಿಕೆ ಕೈಗೆ ದೊರೆತಾಗ ಶಾಂತಿಯಿಂದ ಆಲಿಸಬೇಕು. ಗಾಬರಿಗೊಳ್ಳದೇ ಪ್ರಶ್ನೆಗಳನ್ನು ಅರ್ಥೈಸಿಕೊಂಡು ಮುನ್ನೆಡೆದರೆ ಉತ್ತರಗಳು ಲಭಿಸಲು ಸಾಧ್ಯ. ಹೀಗಾಗಿ ವಿದ್ಯಾರ್ಥಿಗಳು ಹೆಚ್ಚು ಗಾಬರಿಯಾಗದೇ ಸೂಕ್ಷ್ಮವಾಗಿ ಎದುರಿಸಬೇಕು ಎಂದು ತಿಳಿಸಿದರು.

ಆದಿಚುಂಚನಗಿರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಜಿ.ಆರ್.ಚಂದ್ರಶೇಖರ್ ಮಾತನಾಡಿ ಕಡೂರು, ಚಿಕ್ಕಮಗಳೂರು ಹಾಗೂ ಜಾವಳಿ ಭಾಗದ ಸಂಸ್ಥೆಯ ವಿದ್ಯಾರ್ಥಿಗಳನ್ನು ಇಂದು ಒಂದೆಡೆ ಸೇರಿಸಿ ಮಾನಸಿಕ ಆರೋಗ್ಯ ಮತ್ತು ಪರೀಕ್ಷಾ ಸಿದ್ಧತೆ ಕಾರ್ಯಾಗಾರ ಹಮ್ಮಿಕೊಂಡು ಆತ್ಮವಿಶ್ವಾಸ ಮೂಡಿಸುತ್ತಿದೆ ಎಂದರು.

ಈ ಸಂದರ್ಭದಲ್ಲಿ ಬಿಜಿಎಸ್ ಪಿಯು ಕಾಲೇಜಿನ ಪ್ರಾಂಶುಪಾಲ ಜೆ.ಜಿ.ಸುರೇಂದ್ರ, ಪಾಲಿಟೆಕ್ನಿಕ್ ಪ್ರಾಂ ಶುಪಾಲ ಕೆ.ಎಂ.ಸಚ್ಚಿನ್, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

SSLC Exam Preparation Workshop for Students

Related posts

ಶೋಷಿತರನ್ನು ಸಮಾಜದ ಮುನ್ನಲೆಗೆ ತರಲು ಶ್ರಮಿಸಿದ್ದಾರೆ

Team Suddigara

ಶ್ರೀ ಕೋದಂಡರಾಮಚಂದ್ರ ಸ್ವಾಮಿ ದೇವಾಲಯದಲ್ಲಿ ವಾರ್ಷಿಕ ರಾಮನವಮಿ

Team Suddigara

ಇಪಿಎಸ್ ಕಾರ್ಮಿಕರ ಬೇಡಿಕೆ ಹೋರಾಟಕ್ಕೆ ಎನ್‌ಎಸಿ ಜಿಲ್ಲಾ ಘಟಕ ಆರಂಭ

Team Suddigara

Leave a Comment