May 18, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಶ್ರೀ ರಂಭಾಪುರಿ ಜಗದ್ಗುರುಗಳವರ ಎಪ್ರೀಲ್ ಮಾಹೆಯ ಪ್ರವಾಸ ವಿವರ

ಶ್ರೀ ರಂಭಾಪುರಿ ಪೀಠ(ಬಾಳೆಹೊನ್ನೂರು): ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳವರ ೨೦೨೫ನೇ ಸಾಲಿನ ಎಪ್ರೀಲ್ ಮಾಹೆಯ ಪ್ರವಾಸ ಕಾರ್ಯಕ್ರಮ ಈ ಕೆಳಗಿನಂತಿರುವುದಾಗಿ ಶ್ರೀ ಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್.ಬಾಳನಗೌಡ್ರ ತಿಳಿಸಿದ್ದಾರೆ.
ದಿನಾಂಕ ೧ರಂದು ಹುಬ್ಬಳ್ಳಿಯಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಸಮಾರಂಭ, ೨ರಂದು ಹುಬ್ಬಳ್ಳಿ ತಾಲೂಕ ಹಳ್ಳಿಯಾಳದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ರಥೋತ್ಸವ ಸಮಾರಂಭ, ೪ರ ಬೆಳಿಗ್ಗೆ ೧೧ ಗಂಟೆಗೆ ಚಿತ್ತಾಪುರ ತಾಲೂಕ ಹದನೂರು ಗ್ರಾಮದಲ್ಲಿ ನೂತನ ಹಿರೇಮಠದ ಉದ್ಘಾಟನಾ ಸಮಾರಂಭ, ಸಂಜೆ ೬ ಗಂಟೆಗೆ ಕಲಬುರ್ಗಿ ತಾಲೂಕ ಸ್ಟೇಷನ್ ಬಬಲಾದ ಬಾಳೆಹೊನ್ನೂರು ಖಾಸಾ ಶಾಖಾ ಮಠದಲ್ಲಿ ನಿರ್ಮಿಸಿದ ಸಭಾ ಭವನ ಉದ್ಘಾಟನಾ ಸಮಾರಂಭ,
೬ರಂದು ಸೊರಬ ತಾಲೂಕ ದುಗ್ಲಿ ಕ್ಷೇತ್ರದಲ್ಲಿ ಶ್ರೀ ರೇವಣಸಿದ್ಧೇಶ್ವರ ಶಿವಾಚಾರ್ಯರ ದ್ವಾದಶ ಪಟ್ಟಾಧಿಕಾರ ವರ್ಧಂತಿ ಸಮಾರಂಭದ ಸಾನ್ನಿಧ್ಯ ವಹಿಸುವರು. ದಿನಾಂಕ ೭ರಂದು ಮಹಾರಾಷ್ಟ್ರ ರಾಜ್ಯ ಜವಳಿಯಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನ ಕಳಸಾರೋಹಣ ಧರ್ಮ ಸಮಾರಂಭ, ೧೧ರಂದು ಚಿಕ್ಕಮಗಳೂರು ಜಿಲ್ಲೆ ಆಲ್ದೂರಿನಲ್ಲಿ ಶ್ರೀ ಮಹಾಗಣಪತಿ ಸ್ಥಾಪನಾ ಮಂಡಲ ಪೂಜಾ ಸಂದರ್ಭದಲ್ಲಿ ಇಷ್ಟಲಿಂಗ ಮಹಾಪೂಜಾ ನಡೆಸುವರು.
ದಿನಾಂಕ ೧೨ರಂದು ಪೌರ್ಣಿಮೆಯ ನಿಮಿತ್ಯ ಬಾಳೆಹೊನ್ನೂರು ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ವಾಸ್ತವ್ಯ ಇದ್ದು ಭಕ್ತಾದಿಗಳಿಗೆ ದರ್ಶನಾಶೀರ್ವಾದ ನೀಡುವರು. ದಿನಾಂಕ ೧೫ರಂದು ಹಾವೇರಿ ಜಿಲ್ಲೆ ಗುತ್ತಲದಲ್ಲಿ ಶ್ರೀಮದ್ರಂಭಾಪುರಿ ಶಾಖಾ ಹೇಮಿಗಿರಿ ಮಠದ ಉದ್ಘಾಟನಾ ಸಮಾರಂಭ, ೧೬ರಂದು ಬೈಲಹೊಂಗಲದಲ್ಲಿ ಶ್ರೀ ದುರ್ಗಾ ಪರಮೇಶ್ವರಿ ಜಾತ್ರಾ ಅಂಗವಾಗಿ ಪ್ರಶಸ್ತಿ ಪ್ರದಾನ ಧರ್ಮ ಸಮಾರಂಭ, ೧೭ರಂದು ನವಲಗುಂದ ತಾಲೂಕ ಕುಮಾರಕೊಪ್ಪದಲ್ಲಿ ಸಾಮೂಹಿಕ ವಿವಾಹ ಸಮಾರಂಭ,
೧೮ರಂದು ನೆಲಮಂಗಲ ತಾಲೂಕ ಆದಿಹೊಸಳ್ಳಿಯಲ್ಲಿ ಶ್ರೀ ಈಶ್ವರ ದೇವಸ್ಥಾನ ಉದ್ಘಾಟನಾ ಸಮಾರಂಭ, ೧೯ರಂದು ಹಾವೇರಿ ಜಿಲ್ಲೆ ರಟ್ಟಿಹಳ್ಳಿಯಲ್ಲಿ ಶಿವಲಿಂಗ ಶಿವಾಚಾರ್ಯ ಸ್ವಾಮಿಗಳವರ ಷಷ್ಠ್ಯಬ್ಧಿ ಧರ್ಮ ಸಮಾರಂಭ, ೨೦ರಂದು ದಾವಣಗೆರೆಯಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನದ ರಜತ ಮಹೋತ್ಸವ ಧರ್ಮ ಸಮಾರಂಭ,  ೨೧ರಂದು ಮಹಾರಾಷ್ಟ್ರ ರಾಜ್ಯ ಗುಡ್ಡಾಪುರದಲ್ಲಿ ಶ್ರೀಮದ್ರಂಭಾಪುರಿ ಶಾಖಾ ಹಿರೇಮಠದ ಶಿಲಾನ್ಯಾಸ ಸಮಾರಂಭ, ೨೨ರಂದು ಕಮಲಾಪುರ ತಾಲೂಕ ತೆಂಗಟಾದಲ್ಲಿ ಶ್ರೀ ಹನುಮಾನ ದೇವಸ್ಥಾನ ಉದ್ಘಾಟನಾ ಸಮಾರಂಭ, ೨೩ರಂದು ಹುಮನಾಬಾದ ತಾಲೂಕ ಹುಡುಗಿ ಗ್ರಾಮದಲ್ಲಿ ಶ್ರೀಮದ್ರಂಭಾಪುರಿ ಶಾಖಾ ಕಟ್ಟಿಮನಿ ಹಿರೇಮಠದ ಶ್ರೀ ಗುರು ಪಟ್ಟಾಧಿಕಾರ ಮಹೋತ್ಸವ ಧರ್ಮ ಸಮಾರಂಭದಲ್ಲಿ ಪಾಲ್ಗೊಳ್ಳುವರು.
ದಿನಾಂಕ ೨೪ರಂದು ಬೆಳಿಗ್ಗೆ ಲಕ್ಷ್ಮೇಶ್ವರದಲ್ಲಿ ಬಯಲು ಸಭಾ ಭವನ ಉದ್ಘಾಟನಾ ಸಮಾರಂಭ, ಸಂಜೆ ೫ ಗಂಟೆಗೆ ಹೊನ್ನಾಳಿ ತಾಲೂಕ ದೊಡ್ಡೆತ್ತಿನಹಳ್ಳಿಯಲ್ಲಿ ಪುರ ಪ್ರವೇಶ-ಧರ್ಮ ಸಮಾರಂಭ, ೨೫ರಂದು ದೊಡ್ಡೆತ್ತಿನಹಳ್ಳಿಯಲ್ಲಿ ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಉದ್ಘಾಟನಾ ಧರ್ಮ ಸಮಾರಂಭ, ೨೬ರಂದು ಬೆಂಗಳೂರು ಶ್ರೀ ಜಗದ್ಗುರು ರೇಣುಕಾಚಾರ್ಯ ವಿದ್ಯಾ ಸಂಸ್ಥೆಯಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಸಮಾರಂಭ,
೨೭ ಮತ್ತು ೨೮ರಂದು ಹಾಸನ ತಾಲೂಕ ಮುಟ್ಟನಹಳ್ಳಿಯಲ್ಲಿ ಪುರ ಪ್ರವೇಶ ಧರ್ಮ ಸಮಾರಂಭ ಹಾಗೂ ಮಹಾಪೂಜಾ, ೨೯ರಂದು ಚನ್ನಗಿರಿ ತಾಲ್ಲೂಕ ನಲ್ಲೂರಿನಲ್ಲಿ ಲಿಂ.ಶ್ರೀ ರಂಭಾಪುರಿ ಪಂಚಾಕ್ಷರ ಜಗದ್ಗುರುಗಳ ಗದ್ದುಗೆ ಪ್ರತಿಷ್ಠಾಪನೆ-ಕಳಸಾರೋಹಣ ಧರ್ಮ ಸಮಾರಂಭ, ೩೦ರಂದು ಹೂವಿನಹಡಗಲಿ ತಾಲೂಕ ಕೆಂಚಮ್ಮನಹಳ್ಳಿಯಲ್ಲಿ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸುವರು. ಶ್ರೀ ರಂಭಾಪುರಿ ಜಗದ್ಗುರುಗಳವರ ಧಾರ್ಮಿಕ ಕಾರ್ಯಕ್ರಮಗಳ ಲಾಭವನ್ನು ಸಮಸ್ತ ಜನತೆ ಪಡೆದುಕೊಳ್ಳಬೇಕೆಂದು ಅವರು ವಿನಂತಿಸಿದ್ದಾರೆ.
Details of Shri Rambhapuri Jagadguru’s April tour

Related posts

ಬಿಜೆಪಿ ಮೋರ್ಚಾ ವತಿಯಿಂದ ಪ್ರತಿಭಟನೆ

Team Suddigara

ಸಚಿವ ಪ್ರಿಯಾಂಕ್ ಖರ್ಗೆಗೆ ಆಪ್ತನ ಡ್ರಗ್ಸ್ ದಂಧೆ ಬಗ್ಗೆ ಗೊತ್ತಿಲ್ಲವೇ ….?

Team Suddigara

ಭಾರತದಲ್ಲಿ ಹುಟ್ಟಿದ ಯೋಗಕ್ಕೆ ಆರು ಸಾವಿರ ವರ್ಷಗಳ ಇತಿಹಾಸ

Team Suddigara

Leave a Comment