May 18, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಡಾ.ಬಾಬು ಜಗಜೀವನ ರಾಮ್ ಶೋಷಿತರ ಹಕ್ಕಿಗಾಗಿ ಹೋರಾಡಿದವರು

ಚಿಕ್ಕಮಗಳೂರು:  ಮಾಜಿ ಉಪ ಪ್ರಧಾನಿ ಬಾಬು ಜನಜೀವನ ರಾಮ್ ಅವರು ಶೋಷಿತರ ದಮನಿತರ ಪರವಾಗಿ ಹೋರಾಟ ನಡೆಸಿದ ಮಹಾನ್ ಪುರುಷ ಎಂದು ಇಂಧನ ಮತ್ತು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧ್ದಿ ನಿಗಮದ ಸಂಯುಕ್ತ ಆಶ್ರಯದಲ್ಲಿ ಇಂದು ನಗರದ ಕುವೆಂಪು ಕಲಾಮಂದಿರದಲ್ಲಿ ಆಯೋಜಿಸಿದ್ದ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್‌ರವರ ೧೧೮ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಬಾಬು ಜಗಜೀವನ್ ರಾಮ್ ಅವರು ವಿದ್ಯಾರ್ಥಿಯಾಗಿದ್ದ ಸಂದರ್ಭದಲ್ಲಿ ರಾಷ್ಟ್ರೀಯತಾವಾದಿ ಚಳುವಳಿಯಲ್ಲಿ ಸಕ್ರಿಯರಾಗಿದ್ದರು. ಅವರ ಕಾರ್ಯ ವ್ಯಾಪ್ತಿ ಸ್ವಾತಂತ್ರ್ಯ ಹೋರಾಟಕ್ಕೆ ಸೀಮಿತವಾಗಿರಲಿಲ್ಲ. ಅವರು ಶೋಷಿತ ವರ್ಗಗಳ ವಿಮೋಚನೆಗಾಗಿಯೂ ಹೋರಾಟ ಮಾಡಿದವರು. ಅವರು ೧೯೩೪ರಲ್ಲಿ ಬಿಹಾರ ಭೂಕಂಪ ಸಂತಸ್ತರಿಗೆ ಪರಿಹಾರ ಶಿಬಿರಗಳನ್ನು ಸ್ಥಾಪಿಸುವಂತಹ ಸಾಮಾಜಿಕ ಕಾರ್ಯಗಳಲ್ಲಿ ವ್ಯಾಪಕವಾಗಿ ತೊಡಗಿಸಿಕೊಂಡಿದ್ದರು. ನಾಗರಿಕ ಅಸಹಕಾರ ಚಳುವಳಿ, ಉಪ್ಪಿನ ಸತ್ಯಾಗ್ರಹ ಮತ್ತು ಕ್ವಿಟ್ ಇಂಡಿಯಾ ಚಳುವಳಿಯಂತಹ ಮುಖ್ಯ ವಾಹಿನಿಯ ಜನಪ್ರಿಯ ಚಳುವಳಿಗಳಲ್ಲಿ ಭಾಗವಹಿಸಿದ್ದರು. ಈ ಚಳುವಳಿಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಅವರು ಎರಡು ಬಾರಿ ಜೈಲು ಶಿಕ್ಷೆ ಅನುಭವಿಸಿದರು.
ರಾಮ್ ಭಾರತದ ಅತ್ಯಂತ ಪ್ರತಿಭಾನ್ವಿತ ಸಂಸದರಲ್ಲಿ ಒಬ್ಬರು. ೧೯೩೬ ರಲ್ಲಿ ೨೮ ವ? ವಯಸ್ಸಿನಲ್ಲೇ ಬಿಹಾರ ವಿಧಾನ ಪರಿ?ತ್ತಿಗೆ  ಆಯ್ಕೆಯಾದ ಅವರು,  ಕೇಂದ್ರ ಶಾಸಕಾಂಗದ ಸದಸ್ಯರಾಗಿ ಮತ್ತು ನಂತರ ೪೦ ವ?ಗಳಿಗೂ ಹೆಚ್ಚು ಕಾಲ ಸಂಸತ್ತಿನ ಸದಸ್ಯರಾಗಿ ಸೇವೆ ಸಲ್ಲಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದು ಹೇಳಿದರು.
ಚಿಕ್ಕಮಗಳೂರು ಕ್ಷೇತ್ರದ ಶಾಸಕ ಹೆಚ್.ಡಿ.ತಮ್ಮಯ್ಯ ಪ್ರಾಸ್ತ್ತಾವಿಕ ಮಾತನಾಡಿ, ಬಾಬೂಜಿ ಎಂದೇ ಹೆಸರಾಗಿದ್ದ ಬಾಬು ಜಗಜೀವನರಾಮ್ ನಿಸ್ವಾರ್ಥ ಸೇವೆ, ಸ್ವಾತಂತ್ರ್ಯ ಚಳವಳಿ ಮತ್ತು ಸಮರ್ಪಣಾ ಮನೋಭಾವದ ಹೋರಾಟದಿಂದ?ಸಮಾಜಕ್ಕೆ ಆದರ್ಶಪ್ರಾಯ ವ್ಯಕ್ತಿಯಾಗಿದ್ದಾರೆ. ಅವರು ಸೃಷ್ಟಿಸಿದ ಹಸಿರು ಕ್ರಾಂತಿಯಿಂದ?ದೇಶದಲ್ಲಿ ಬಡವರಿಗೆ ಆಹಾರದ ಕೊರತೆ ದೂರವಾಯಿತು. ಹಸಿರು ಕ್ರಾಂತಿಯ ಹರಿಕಾರ ಬಾಬೂಜಿ ಸಮಾಜದ ಕಟ್ಟಕಡೆಯ ವ್ಯಕ್ತಿಯ ಜೀವನಕ್ಕೂ ಆದ್ಯತೆ ಕೊಟ್ಟಿದ್ದರಿಂದ ಇಂದು ಸಮಾಜದಲ್ಲಿ ಆಹಾರ ಪದಾರ್ಥಗಳ ಕೊರತೆಯಿಲ್ಲ.. ಅವರು ಮೂರು ದಶಕಗಳ ಕಾಲ ಕೇಂದ್ರ ಮಂತ್ರಿಮಂಡಲದ ಸದಸ್ಯರಾಗಿ? ಆಡಳಿತದಲ್ಲಿ ಅಪಾರ ಅನುಭವ ಗಳಿಸಿದರು. ಸಾರಿಗೆ, ಆಹಾರ, ರೈಲ್ವೆ, ಕೃಷಿ ಮತ್ತು ಸಮುದಾಯ ಅಭಿವೃದ್ಧಿ, ಕಾರ್ಮಿಕ ಮತ್ತು ಉದ್ಯೋಗ ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಿದ ಹಿರಿಮೆ ಅವರದು ಎಂದರು.
ಬಿಹಾರದ ಬಡ ಕುಟುಂಬದಲ್ಲಿ ಜನಿಸಿದ ಜಗಜೀವನರಾಮ್ ೧೯೩೫ರಲ್ಲಿ ಮೊದಲ ಚುನಾವಣೆ ನಡೆದಾಗ ನಿರ್ಣಾಯಕ ಪಾತ್ರ ವಹಿಸಿದರು. ಕೋಲ್ಕತ್ತಾ ಮತ್ತು ಬನಾರಸ್ ವಿಶ್ವವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮಾಡಿ ದೇಶದ ಹಸಿರು ಕ್ರಾಂತಿಗೆ ಬುನಾದಿ ಹಾಕಿದವರು. ಶಿಕ್ಷಣದಿಂದಲೇ ಸಮಾಜದ ಬದಲಾವಣೆ ಸಾಧ್ಯವೆಂದು ಅವರು ಬಲವಾಗಿ ನಂಬಿದ್ದರು ಎಂದು ಅವರು ಹೇಳಿದರು.
ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅವರು ಮಾತನಾಡಿ ಜಗಜೀವನರಾಮ್ ಜೀವನದಲ್ಲಿ ತುಂಬಾ ಕ?ಪಟ್ಟು ಮೇಲೆ ಬಂದವರು. ಬಡತನವಿದ್ದರೂ ವಿದ್ಯಾಭ್ಯಾಸ ಅರ್ಧಕ್ಕೆ ನಿಲ್ಲಿಸದೆ ಸುಶಿಕ್ಷಿತರಾದರು. ಬಿಹಾರ ಹಿಂದೆ ತೀರಾ ಬಡತನದಿಂದ ಕೂಡಿದ ರಾಜ್ಯವಾಗಿತ್ತು. ಅಲ್ಲಿ ಹುಟ್ಟಿ ಸಾಧನೆ ಮಾಡಿದ ಅವರು ಮಹನೀಯರು, `ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಿ ಬೆಂಬಲಿಸಿ, ಶಿಕ್ಷಣದ? ಒಳ್ಳೆಯ ಮದ್ದು ಬೇರೊಂದಿಲ್ಲ, ಶೈಕ್ಷಣಿಕವಾಗಿ ಮುಂದೆ ಬನ್ನಿ’ ಎಂದು ಅವರು ಕರೆ ನೀಡಿದ್ದರು’ ಎಂದು ಹೇಳಿದರು.
ವಕೀಲ ಆರ್.ರಮೇಶ್ ಅವರು ಉಪನ್ಯಾಸ ನೀಡಿ ಜಗಜೀವನ್ ರಾಮ್ ಬಿಹಾರದ ಚಾಂದ್ವಾದಲ್ಲಿ ದಲಿತ ಕುಟುಂಬದಲ್ಲಿ ಜನಿಸಿದರು. ಅವರ ತಂದೆ ಬ್ರಿಟಿ? ಸೈನ್ಯದಲ್ಲಿದ್ದರು. ನಂತರ ಅದನ್ನು ತೊರೆದು ತಮ್ಮ ಹುಟ್ಟೂರಿನಲ್ಲಿ ಕೃಷಿ ಭೂಮಿಯನ್ನು ಅವಲಂಬಿಸಿದ್ದರು. ಅವರು ಹತ್ತಿರದ ಅರ್ರ್‍ಆ ಪಟ್ಟಣದಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಮುಂದುವರಿಸಿದ ಸಂದರ್ಭ ಮೊದಲ ಬಾರಿಗೆ ತಾರತಮ್ಯವನ್ನು ಎದುರಿಸಿದರು. ಅವರನ್ನು ‘ಅಸ್ಪೃಶ್ಯ’ ಎಂದು ಪರಿಗಣಿಸಿದ ಪರಿಣಾಮವಾಗಿ ಬೇರೆ ಮಡಕೆಯಿಂದ ನೀರು ಕುಡಿಯಬೇಕಾಯಿತು. ಈ ತಾರತಮ್ಯವನ್ನು ವಿರೋಧಿಸಿ ಜಗಜೀವನ್ ರಾಮ್ ಆ ಮಡಕೆಯನ್ನೇ ಒಡೆದು ಹಾಕಿದರು. ಈ ಘಟನೆಯ ಬಳಿಕ ಶಾಲೆಯಲ್ಲಿ ಪ್ರತ್ಯೇಕವಾಗಿ ಇರಿಸಿದ್ದ ಮಡಕೆಯನ್ನು ತೆಗೆದುಹಾಕಲಾಯಿತು ಎಂದು ತಿಳಿಸಿದರು.
೧೯೨೫ರಲ್ಲಿ ವಿದ್ವಾಂಸ ಪಂಡಿತ್ ಮದನ್ ಮೋಹನ್ ಮಾಳವೀಯ ಅವರನ್ನು ಭೇಟಿಯಾದ ಬಳಿಕ ಅವರಿಂದ ಜಗಜೀವನ್ ರಾಮ್ ಬಹಳ ಪ್ರಭಾವಿತರಾದರು. ಮಾಳವೀಯ ಅವರ ಆಹ್ವಾನದ ಮೇರೆಗೆ ಅವರು ಬನಾರಸ್ ಹಿಂದೂ ವಿಶ್ವವಿದ್ಯಾಲಯವನ್ನು ಸೇರಿದರು. ವಿಶ್ವವಿದ್ಯಾನಿಲಯದಲ್ಲಿಯೂ ಸಹ ಜಗಜೀವನ್ ರಾಮ್ ತಾರತಮ್ಯವನ್ನು ಎದುರಿಸಿದರು. ಇದು ಸಮಾಜದ ಒಂದು ವರ್ಗದ ಸಾಮಾಜಿಕ ಬಹಿ?ರದ ವಿರುದ್ಧ ಪ್ರತಿಭಟಿಸಲು ಅವರಿಗೆ ಸ್ಫೂರ್ತಿ ನೀಡಿತು. ಅನ್ಯಾಯದ ವಿರುದ್ಧ ಪ್ರತಿಭಟಿಸಲು ಅವರು ಪರಿಶಿ? ಜಾತಿಯವರನ್ನು ಸಂಘಟಿಸಿದರು. ಬಿಎಚ್‌ಯುನಲ್ಲಿ ತಮ್ಮ ಕೆಲಸದ ಸಮಯದ ನಂತರ, ಅವರು ಕೊಲ್ಕತ್ತಾ ವಿಶ್ವವಿದ್ಯಾಲಯಕ್ಕೆ ಸೇರಿ ೧೯೩೧ ರಲ್ಲಿ ಬಿ.ಎಸ್ಸಿ ಪದವಿ ಪಡೆದರು. ಅವರ ಸಂಘಟನಾ ಕೌಶಲ್ಯಕ್ಕಾಗಿ ಸುಭಾ? ಚಂದ್ರ ಬೋಸ್ ಅವರಿಂದ ಗುರುತಿಸಲ್ಪಟ್ಟರು. ೧೯೩೫ರಲ್ಲಿ ಅವರು ಆಲ್-ಇಂಡಿಯಾ ಡಿಪ್ರೆಸ್ಡ್ ಕ್ಲಾಸಸ್ ಲೀಗ್ ರಚನೆಗೆ ಸಹಾಯ ಮಾಡಿದರು. ಅವರು ಕಾಂಗ್ರೆಸ್ ಪಕ್ಷವನ್ನು ಸೇರಿದರು, ಅಲ್ಲಿ ಅವರು ಡಿಪ್ರೆಸ್ಡ್ ಕ್ಲಾಸಸ್‌ನ ಅದ್ಭುತ ವಕ್ತಾರರಾಗಿ ಮೆಚ್ಚುಗೆ ಪಾತ್ರರಾದರು.
೧೯೩೫ ರಲ್ಲಿ, ಅವರು ಹಿಂದೂ ಮಹಾಸಭಾದ ಅಧಿವೇಶನದಲ್ಲಿ ಕುಡಿಯುವ ನೀರಿನ ಬಾವಿಗಳು ಮತ್ತು ದೇವಾಲಯಗಳು ಅಸ್ಪೃಶ್ಯರಿಗೆ ಮುಕ್ತವಾಗಿರಬೇಕು ಎಂದು ಪ್ರತಿಪಾದಿಸಿದರು. ಅವರು ಸ್ವಾತಂತ್ರ್ಯ ಚಳವಳಿಯಲ್ಲೂ ಭಾಗವಹಿಸಿದ್ದರು ಮತ್ತು ಕ್ವಿಟ್ ಇಂಡಿಯಾ ಚಳವಳಿಯ ಸಮಯದಲ್ಲಿ ಜೈಲುವಾಸ ಅನುಭವಿಸಿದ್ದರು .
ಜವಾಹರಲಾಲ್ ನೆಹರು ತಾತ್ಕಾಲಿಕ ಸರ್ಕಾರವನ್ನು ರಚಿಸಿದಾಗ, ಜಗಜೀವನ್ ರಾಮ್ ಅದರ ಅತ್ಯಂತ ಕಿರಿಯ ಸಚಿವರಾಗಿದ್ದರು. ಸ್ವಾತಂತ್ರ್ಯದ ನಂತರ, ಅವರನ್ನು ದೇಶದ ಮೊದಲ ಕಾರ್ಮಿಕ ಸಚಿವರನ್ನಾಗಿ ನೇಮಿಸಲಾಯಿತು. ಅವರು ರೈಲ್ವೆ, ಆಹಾರ ಮತ್ತು ಕೃಷಿ, ಸಾರಿಗೆ ಮತ್ತು ಸಂವಹನ, ನೀರಾವರಿ ಮತ್ತು ರಕ್ಷಣೆ ಸೇರಿದಂತೆ ವಿವಿಧ ಖಾತೆಗಳನ್ನು ನಿರ್ವಹಿಸಿದ್ದರು. ಅವರು ರಕ್ಷಣಾ ಸಚಿವರಾಗಿದ್ದಾಗ ೧೯೭೧ರ ಭಾರತ-ಪಾಕಿಸ್ತಾನ ಯುದ್ಧ ನಡೆಯಿತು. ತುರ್ತು ಪರಿಸ್ಥಿತಿಯ ನಂತರ ಮೊರಾರ್ಜಿ ದೇಸಾಯಿ ಪ್ರಧಾನಿಯಾದಾಗ ಅವರು ಭಾರತದ ಉಪ ಪ್ರಧಾನ ಮಂತ್ರಿಯೂ ಆಗಿದ್ದರು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ, ಚಿಕ್ಕಮಗಳೂರು ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ನಯಾಜ್ ಅಹಮ್ಮದ್, ಸಮಾಜಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಾಲತಿ ಸ್ವಾಗತಿಸಿ, ಹೆಚ್.ಡಿ.ರೇವಣ್ಣ ವಂದಿಸಿದರು, ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡದ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
118th birth anniversary of former Deputy Prime Minister Dr. Babu Jagjivan Ram

Related posts

ನಗರದ ರಸ್ತೆಗಳ ಅಭಿವೃದ್ಧಿಗೆ ೧೦ ಕೋಟಿ ರೂ ಅನುದಾನ

Team Suddigara

ಭೂರಹಿತ ಭೋವಿ ಮಹಿಳಾ ಕೃಷಿ ಕಾರ್ಮಿಕರಿಗೆ ಜಮೀನು ಖರೀದಿಗೆ ನೆರವು

Team Suddigara

ಪರಿಶಿಷ್ಟ ಜಾತಿ ಕುಟುಂಬಗಳ ಒಳ ಮೀಸಲಾತಿ ಸಮೀಕ್ಷೆಯ ದಿನಾಂಕ ವಿಸ್ತರಣೆ

Team Suddigara

Leave a Comment