May 18, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರತಾಲೂಕು

ವಾಸವಿ ಜಯಂತಿ ಪ್ರಯುಕ್ತ ವಾಸವಿ ಯುವಜನ ಸಂಘದಿಂದ ಸಮಾಜ ಸೇವೆ

ಚಿಕ್ಕಮಗಳೂರು: -ವಾಸವಿ ಜಯಂತಿಯ ಅಂಗವಾಗಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ಸೇವೆ ಸಲ್ಲಿಸುತ್ತಿರುವುದಾಗಿ ವಾಸವಿ ಯುವಜನ ಸಂಘ ಹಾಗೂ ವಾಸವಿ ಕ್ಲಬ್ ಅಧ್ಯಕ್ಷ ದಿನೇಶ್‌ಗುಪ್ತ ತಿಳಿಸಿದರು.

ಅವರು ಇಂದು ವಾಸವಿ ಜಯಂತಿ ಅಂಗವಾಗಿ ಆರ್ಯ ವೈಶ್ಯ ಬಂಧುಗಳು ಸೇರಿ ಕಳೆದ ೪೨ ವರ್ಷಗಳಿಂದ ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡು ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ, ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಮುಂದೆ ಮಜ್ಜಿಗೆ, ಕೋಸಂಬರಿ, ಹೊಸ ವಸ್ತ್ರ ವಿತರಣೆ ಮತ್ತು ರಕ್ತದಾನ ಶಿಬಿರವನ್ನು ಆಯೋಜಿಸಿಕೊಂಡು ಬರುತ್ತಿದ್ದೇವೆ ಎಂದು ಹೇಳಿದರು.

ನಗರದ ಎಂಜಿ ರಸ್ತೆಯಲ್ಲಿರುವ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಇಂದಿನಿಂದ ೧ ವಾರಗಳ ಕಾಲ ಪೂಜೆ, ಹವನ ಇತ್ಯಾದಿ ಧಾರ್ಮಿಕ ಕಾರ್ಯಗಳು ಜರುಗಲಿವೆ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ಮುಕ್ತಾಯಗೊಂಡ ಬಳಿಕ ನಗರದ ರಾಜಬೀದಿಯಲ್ಲಿ ಕನ್ನಿಕಾ ಪರಮೇಶ್ವರಿ ದೇವಿಯ ರಥೋತ್ಸವ ಉತ್ಸವ ಜರುಗಲಿದೆ. ನಂತರ ಪ್ರಸಾದ ವಿನಿಯೋಗ ಪ್ರಾಕಾರೋತ್ಸವ ನಡೆಯಲಿದೆ ಎಂದರು.

ಈ ಸಂದರ್ಭದಲ್ಲಿ ಕ್ಲಬ್‌ನ ಸದಸ್ಯರುಗಳಾದ ಜಿ.ಎನ್. ರಾಮಕೃಷ್ಣ, ಎಂ.ಯು ದೀಪಕ್, ಮಹೇಶ್, ನಿತಿನ್, ಉಮೇಶ್, ಆನಂದ, ರಮೇಶ್, ಮದನ್, ರಘುನಂದನ್ ಮತ್ತಿತರರು ಭಾಗವಹಿಸಿದ್ದರು.

Social service by Vasavi Youth Association on the occasion of Vasavi Jayanti

Related posts

ಕ್ಷೇತ್ರದಲ್ಲಿ 596 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿ

Team Suddigara

‘ಸರ್ವ ಧರ್ಮಕ್ಕೂ ದಯೆ, ಮಾನವೀಯತೆಯೇ ಮುಕುಟ’

Team Suddigara

ಅನುಸೂಚಿತ ಜಾತಿ-ಪಂಗಡಗಳ 108 ದೌರ್ಜನ್ಯ ಪ್ರಕರಣಗಳಿಗೆ 1.44 ಕೋಟಿ ರೂ. ಪರಿಹಾರ

Team Suddigara

Leave a Comment