June 25, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

2 ವರ್ಷಗಳ ಕಾಲ ನಗರದ ಜನರಿಗೆ ಕುಡಿಯುವ ನೀರಿಗೆ ತೊಂದರೆ ಇರುವುದಿಲ್ಲ

ಚಿಕ್ಕಮಗಳೂರು: ನಗರಕ್ಕೆ ನೀರು ಪೂರೈಸುವ ಹಿರೇಕೊಳಲೆ ಕೆರೆಗೆ ಇಂದು ಬೆಳಿಗ್ಗೆ ಶಾಸಕ ಹೆಚ್.ಡಿ.ತಮ್ಮಯ್ಯ ಸಪತ್ನೀಕರಾಗಿ ಬಾಗಿನ ಅರ್ಪಿಸುವ ಮೂಲಕ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಗರಕ್ಕೆ ಸುಮಾರು ೪೦ ವರ್ಷದಿಂದ ಗುರುತ್ವಾಕರ್ಷಣೆ ಮೂಲಕ ಕುಡಿಯುವ ನೀರಿನ ವ್ಯವಸ್ಥೆಯನ್ನು ಯಾವುದೇ ಖರ್ಚಿಲ್ಲದೆ ಸರಬರಾಜು ಮಾಡಲಾಗುತ್ತಿದೆ ಎಂದು ಹೇಳಿದರು.

ರಾಜ್ಯದ ಕೆಲವೇ ಕೆಲವು ನಗರದ ಕುಡಿಯುವ ನೀರು ಸರಬರಾಜು ಮಾಡುವ ಗುರುತ್ವಾಕರ್ಷಣಾ ಕೆರೆಗಳಲ್ಲಿ ಈ ಹಿರೇಕೊಳಲೆ ಕೆರೆಯು ಒಂದು. ನಗರದ ೪೦ ಸಾವಿರ ಜನಸಂಖ್ಯೆಗೆ ಅನುಗುಣವಾಗಿ ಅಂದು ಈ ಕೆರೆಯನ್ನು ನಿರ್ಮಾಣ ಮಾಡಿ ಈ ನೀರನ್ನು ಜನರು ಕುಡಿಯುವುದಕ್ಕೆ ಬಳಸುತ್ತಿದ್ದಾರೆ. ಇಂತಹ ಸುಂದರವಾದ ಕೆರೆ ಇತಿಹಾಸದಲ್ಲಿ ಮೊದಲ ಬಾರಿಗೆ ಜೂನ್ ತಿಂಗಳಲ್ಲಿ ನೀರು ತುಂಬಿ ಕೋಡಿ ಬಿದ್ದಿದೆ ಎಂದು ಹೇಳಿದರು.

ಅಮೃತ್ ಯೋಜನೆಯಡಿ ೨೪ ಗಂಟೆ ನೀರು ಪೂರೈಸಬೇಕಿತ್ತು. ಆದರೆ ತಾಂತ್ರಿಕ ಕಾರಣದಿಂದ ಎರಡು ದಿನಕೊಮ್ಮೆ ಸತತವಾಗಿ ನೀರನ್ನು ಸರಬರಾಜು ಮಾಡುತ್ತಿದ್ದೇವೆ ಎಂದ ಅವರು ಯಗಚಿ ಡ್ಯಾಂ ಹಾಗೂ ಹಿರೇಕೊಳಲೆ ಕೆರೆ ಕೋಡಿ ಬಿದ್ದಿರುವುದರಿಂದ ಇನ್ನು ಎರಡು ವರ್ಷಗಳ ಕಾಲ ನಗರದ ಜನರಿಗೆ ಕುಡಿಯುವ ನೀರಿಗೆ ಯಾವುದೇ ತೊಂದರೆ ಇರುವುದಿಲ್ಲ ಎಂದು ಹೇಳಿದರು.

ನರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್, ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್, ತಹಶೀಲ್ದಾರ್ ರೇಷ್ಮಾಶೆಟ್ಟಿ, ಉಪಾಧಕ್ಷ ಅನುಮಧುಕರ್, ಹಿರೇಕೊಳಲೆ ಗ್ರಾ.ಪಂ ಅಧಕ್ಷೆ ಕವಿತಾ ಹಾಗೂ ಉಪಾಧ್ಯಕ್ಷರು, ಸದಸ್ಯರು, ಗಾಮಸ್ಥರು ಮುಂತಾದವರು ಹಾಜರಿದ್ದರು.

The people of the city will not have any problem with drinking water for 2 years.

Related posts

ಕಸ್ತೂರಿಬಾ ಸದನದಲ್ಲಿ ಸಾಂತ್ವನ ಕೇಂದ್ರ ಮುಂದುವರೆಸಲು ಮನವಿ

Team Suddigara

ಸರ್ವರ ಪ್ರಗತಿಗೆ ಶ್ರಮಿಸುವುದು ಜನಪ್ರತಿನಿಧಿಗಳ ಕರ್ತವ್ಯ

Team Suddigara

ವೃತ್ತಿಪರ ಕುಶಲಕರ್ಮಿ ಯೋಜನೆಯಡಿ ವಿವಿಧ ಸವಲತ್ತುಗಳ ವಿತರಣೆ

Team Suddigara

Leave a Comment