ಚಿಕ್ಕಮಗಳೂರು: ನಗರದ ಅನ್ನಪೂರ್ಣ ಆಸ್ಪತ್ರೆಯ ನಿರ್ಮಾಪಕರಾದ ಡಾ. ಸುಂದರೇಶ್ ಅವರ ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಮ್ಮ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಡಾ. ಸುಂದರೇಶ್ ಅವರು ಅನಾರೋಗ್ಯದಿಂದ ಅಕಾಲಿಕವಾಗಿ ಶಿವೈಕ್ಯರಾದ ವಿ?ಯ ತಿಳಿದು ಅತ್ಯಂತ ವಿ?ದವಾಯಿತು. ಶ್ರೀ ರಂಭಾಪುರಿ ಪೀಠದೊಂದಿಗೆ ನಿಕಟ ಸಂಬಂಧ ಹೊಂದಿದ ಶ್ರೀಯುತರ ಸೇವೆ ಅವಿಸ್ಮರಣೀಯ.
ಧರ್ಮ ನಿಷ್ಠೆ ಕಾಯಕ ನಿಷ್ಠೆ ಹೊಂದಿ ಜೀವನದಲ್ಲಿ ಅದ್ಭುತ ಸಾಧನೆ ಮಾಡಿದ ಶ್ರೀಯುತರ ಅಗಲಿಕೆ ಅತ್ಯಂತ ನೋವನ್ನು ಉಂಟುಮಾಡುತ್ತದೆ.
ಅಗಲಿದ ಅವರ ಪವಿತ್ರ ಆತ್ಮಕ್ಕೆ ಶ್ರೀ ಜಗದ್ಗುರು ರೇಣುಕಾದಿ ಪಂಚಾಚಾರ್ಯರು ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರ ಸ್ವಾಮಿ ಚಿರಶಾಂತಿಯನ್ನು ಅನುಗ್ರಹಿಸಲಿ. ಅವರ ಅಗಲಿಕೆಯಿಂದ ಉಂಟಾದ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬ ವರ್ಗದವರಿಗೆ ಮತ್ತು ಹಿತೈಷಿಗಳಿಗೆ ಭಗವಂತ ಕರುಣಿಸಲೆಂದು ಶ್ರೀ ರಂಭಾಪುರಿ ಜಗದ್ಗುರುಗಳು ತಮ್ಮ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.
Sri Rambhapuri Jagadguru condoles the passing of Dr. Sundaresh

Leave a Reply