May 18, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಕರ್ನಾಟಕ ಗ್ರಾಮೀಣ ಬ್ಯಾಂಕ್ 2500 ಕೋಟಿ ರೂ ವ್ಯವಹಾರ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ೫೨ ಶಾಖೆಗಳನ್ನು ಹೊಂದಿದ್ದು, ಈ ಮೂಲಕ ೨೫೦೦ ಕೋಟಿ ರೂಗಳ ವ್ಯವಹಾರ ವಹಿವಾಟು ನಡೆಸಲಾಗಿದೆ ಎಂದು ಬ್ಯಾಂಕಿನ ಪ್ರಾದೇಶಿಕ ವ್ಯವಸ್ಥಾಪಕ ಶ್ರೀರಾಮಪ್ಪ ತಿಳಿಸಿದರು.

ಅವರು ಬ್ಯಾಂಕಿನಲ್ಲಿ ವ್ಯವಸ್ಥಾಪಕರಾಗಿ ಕಳೆದ ೪೦ ವರ್ಷಗಳ ಸುದೀರ್ಘ ಸೇವೆಯಿಂದ ನಿವೃತ್ತಿ ಹೊಂದಿರುವ ನಾರಾಯಣ್ ನಾಯಕ್‌ರವರಿಗೆ ಬೀಳ್ಕೊಡುಗೆ ನೀಡಿ ಗೌರವಿಸಿ ಮಾತನಾಡಿದರು.

ಕರ್ನಾಟಕ ಗ್ರಾಮೀಣ ಬ್ಯಾಂಕ್ ಈವರೆಗೆ ಶೇ.೯೦ ರಷ್ಟು ರೈತರಿಗೆ ಸಾಲಸೌಲಭ್ಯಗಳನ್ನು ನೀಡಲಾಗಿದ್ದು, ಜಿಲ್ಲೆಯ ಎಲ್ಲಾ ರೈತರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.

ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ದೊರೆಯುವ ಸಾಲಸೌಲಭ್ಯಗಳ ಮಾದರಿಯಲ್ಲಿ ಕಾರು, ಮನೆ, ಶಿಕ್ಷಣ ಸಾಲ, ಬೆಳೆಸಾಲ, ಅಭಿವೃದ್ಧಿ ಸಾಲ ತಮ್ಮ ಬ್ಯಾಂಕಿನಲ್ಲೂ ನೀಡಲಾಗುತ್ತಿದ್ದು, ಈ ನಿಟ್ಟಿನಲ್ಲಿ ಉತ್ತಮ ಗ್ರಾಹಕ ಸೇವೆಯೊಂದಿಗೆ ಕರ್ನಾಟಕ ಗ್ರಾಮೀಣ ಬ್ಯಾಂಕಿನ ೫೨ ಶಾಖೆಗಳಲ್ಲಿಯೂ ವಿಸ್ತರಿಸಲಾಗಿದೆ ಎಂದರು.

ನಿವೃತ್ತರಾದ ನಾರಾಯಣ ನಾಯಕ್ ರವರಿಗೆ ಆಯುಷ್ಯ, ಆರೋಗ್ಯ ಮತ್ತು ನೆಮ್ಮದಿಯನ್ನು ಕೊಡುವಂತೆ ಆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.

ನಿವೃತ್ತರಾದ ನಾರಾಯಣ್‌ನಾಯಕ್ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಸೇವೆಯಲ್ಲಿದ್ದು, ಮಾತನಾಡಲು ಇಂದು ಇದು ಕೊನೆಯ ಅವಕಾಶ. ೧೯೮೫ ರ ಫೆ.೧೯ ರಂದು ಚಿಕ್ಕಮಗಳೂರು-ಕೊಡಗು ಗ್ರಾಮೀಣ ಬ್ಯಾಂಕಿಗೆ ನೇಮಕವಾದೆ. ಬಡತನದಲ್ಲಿ ಶಿಕ್ಷಣ ಮುಗಿಸಿದ ನನಗೆ ಈ ಬ್ಯಾಂಕಿನಲ್ಲಿ ಉದ್ಯೋಗ ಸಿಗಲು ಎಸ್‌ಬಿಐನಲ್ಲಿ ಉದ್ಯೋಗದಲ್ಲಿದ್ದ ಸ್ನೇಹಿತ ಆನಂದ ಎಂಬುವವರು ನನಗೆ ಸಹಾಯ ಮಾಡಿದರು ಎಂದು ಸ್ಮರಿಸಿದರು.

ಬಾಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದ ನಾನು ಕ್ರೀಡಾ ರಂಗದಲ್ಲೇ ಮುಂದುವರೆಯಬೇಕೆಂದುಕೊಂಡಿದ್ದೆ. ಆದರೆ, ಸ್ನೇಹಿತರ ಸಹಾಯದಿಂದ ಬ್ಯಾಂಕಿನಲ್ಲಿ ಉದ್ಯೋಗ ಪಡೆದು ಇಂದಿಗೆ ೪೦ ವರ್ಷ, ಮೂರು ತಿಂಗಳು ಹನ್ನೆರಡು ದಿನಗಳ ಬ್ಯಾಂಕಿನ ಸೇವೆ ತೃಪ್ತಿ ತಂದಿದೆ, ಜಿಲ್ಲೆಯ ೩೨ ಶಾಖೆಗಳಲ್ಲಿ ಪರಿಶೀಲನೆ ಮಾಡಿರುವುದಾಗಿ ಹೇಳಿದರು.

ಇಂದಿನ ಯುವಕರು ಸಮಯ ಪಾಲನೆ ಅಳವಡಿಸಿಕೊಳ್ಳುವ ಜೊತೆಗೆ ಆರ್ಥಿಕ ಶಿಸ್ತು ಇಟ್ಟುಕೊಂಡಾಗ ಜೀವನದಲ್ಲಿ ಮುಂದೆ ಬರಲು ಸಹಕಾರಿಯಾಗುತ್ತದೆ ಎಂದು ಕಿವಿಮಾತು ಹೇಳಿದರು.

ಕೆನರಾ ಬ್ಯಾಂಕ್ ಮೌಲ್ಯಮಾಪಕರ ಸಂಘದ ರಾಜ್ಯಾಧ್ಯಕ್ಷ ರುದ್ರಯ್ಯಾಚಾರ್ ಹಾಗೂ ಪ್ರಧಾನ ಕಾರ್ಯದರ್ಶಿ ರಾಜೇಶ್ ಮಾತನಾಡಿ, ಕರ್ನಾಟಕ ಗ್ರಾಮೀಣ ಬ್ಯಾಂಕಿನ ಸಿಬ್ಬಂದಿಗಳೊಂದಿಗೆ ಸೌಹಾರ್ದತೆಯಿಂದ ನವಯುವಕನಾಗಿ ೪೦ ವರ್ಷಗಳ ಸುದೀರ್ಘ ಉತ್ತಮ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿರುವ ನಾರಾಯಣ್ ನಾಯಕ್ ಅವರಿಗೆ ಸಂಘದ ವತಿಯಿಂದ ಗೌರವ ಸಮರ್ಪಣೆ ಮಾಡುವುದಾಗಿ ತಿಳಿಸಿದರು.

Karnataka Gramin Bank’s business is Rs 2500 crore

Related posts

ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿನೂತನ ಕಾರ್ಯಕ್ರಮ

Team Suddigara

ಯುವಜನತೆ ರಾಷ್ಟ್ರಕವಿ ಕುವೆಂಪು ಆಶಯದಂತೆ ವಿಶ್ವಮಾನವರಾಗಬೇಕು

Team Suddigara

ಕ್ಷೇತ್ರವ್ಯಾಪ್ತಿಯಲ್ಲಿ ಆಶ್ರಯ ನಿವೇಶನಕ್ಕೆ ಭೂಮಿ ಗುರ್ತಿಸಲು ಸೂಚನೆ

Team Suddigara

Leave a Comment