May 19, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಬೀಡಾಡಿ ನಾಯಿಗಳಿಗೆ ಆಹಾರ ಹಾಕಿದಲ್ಲಿ ಕಾನೂನು ಕ್ರಮ

ಚಿಕ್ಕಮಗಳೂರು: ಮನೆಯಲ್ಲಿ ಉಳಿದ ಆಹಾರ ಪದಾರ್ಥಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಬೀಡಾಡಿ ನಾಯಿಗಳಿಗೆ ಹಾಕುತ್ತಿರುವುದು ಕಂಡು ಬಂದಿದ್ದು, ಈ ಬಗ್ಗೆ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಸಂಬಂಧಿಸಿದವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಯುಕ್ತ ಬಿ.ಸಿ.ಬಸವರಾಜು ಅವರು ಎಚ್ಚರಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಅವರು, ನಗರ ವ್ಯಾಪ್ತಿಯಲ್ಲಿ ಬೀಡಾಡಿ ನಾಯಿಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನಾಯಿ ಸಾಕಾಣಿಕೆದಾರರು ತಮ್ಮ ನಾಯಿಗಳನ್ನು ರಸ್ತೆಗೆ ಬಿಡದೆ ತಮ್ಮ ಮನೆ ಆವರಣದಲ್ಲೇ ಬೆಲ್ಟ್ ಅಥವಾ ಹಗ್ಗದಿಂದ ಕಟ್ಟಿಹಾಕಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ತಮ್ಮ ಮನೆಯಲ್ಲಿ ಉಳಿದ ಆಹಾರ ಪದಾರ್ಥಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಬೀಡಾಡಿ ನಾಯಿಗಳಿಗೆ ಆಹಾರವನ್ನು ಹಾಕುತ್ತಿರುವುದು ಕಂಡುಬಂದಿದ್ದು, ಇದು ನಗರ ವ್ಯಾಪ್ತಿಯಲ್ಲಿ ಬೀಡಾಡಿ ನಾಯಿಗಳ ಸಂಖ್ಯೆ ಹೆಚ್ಚಾಗುತ್ತಿರುವುದಕ್ಕೆ ಕಾರಣವಾಗಿದೆ.

ಇದರಿಂದ ಸಾರ್ವಜನಿಕರಿಗೆ ಉಪದ್ರವದೊಂದಿಗೆ ನಾಯಿ ಕಡಿತ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವ ಬಗ್ಗೆ ಸಹ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಈ ಕಚೇರಿಗೆ ಬರುತ್ತಿರುವುದಾಗಿ ಅವರು ತಿಳಿಸಿದ್ದಾರೆ.

Legal action against feeding stray dogs

Related posts

ಶ್ರೀ ಕೋದಂಡರಾಮಚಂದ್ರ ಸ್ವಾಮಿ ದೇವಾಲಯದಲ್ಲಿ ವಾರ್ಷಿಕ ರಾಮನವಮಿ

Team Suddigara

ವೃತ್ತಿಪರ ಕುಶಲಕರ್ಮಿ ಯೋಜನೆಯಡಿ ವಿವಿಧ ಸವಲತ್ತುಗಳ ವಿತರಣೆ

Team Suddigara

ಕೊಪ್ಪದಲ್ಲಿ ಜೆಡಿಎಸ್ ರಸ್ತೆಗುಂಡಿ ಮುಚ್ಚಿ ವಿನೂತನ ಪ್ರತಿಭಟನೆ

Team Suddigara

Leave a Comment