May 18, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

`ಮಹಿಳೆಯರು-ಮಕ್ಕಳ ಶೋಷಣೆ ಕಂಡಲ್ಲಿ ಸಹಾಯವಾಣಿಗೆ ಕರೆ ಮಾಡಿ’

ಚಿಕ್ಕಮಗಳೂರು:  ಮಹಿಳೆಯರ ಮೇಲಿನ ಲೈಂಗಿಕ ಶೋಷಣೆ ಹಾಗೂ ಮಕ್ಕಳನ್ನು ದುಡಿಮೆಗೆ ಹಚ್ಚುವ ಕಾನೂನು ಬಾಹಿರ ಕೃತ್ಯಗಳು ಕಂಡು ಬಂದ ಸಂದರ್ಭದಲ್ಲಿ ಕಾನೂನು ನೆರವಿಗಾಗಿ ಕಾನೂನು ಸೇವೆಗಳ ಸಹಾಯವಾಣಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿ.ಹನುಮಂತಪ್ಪ ತಿಳಿಸಿದರು.

ಮಾನವ ಕಳ್ಳ ಸಾಗಣೆ, ಮಕ್ಕಳ ಹಕ್ಕುಗಳಿಗೆ ಸಂಬಂಧಿಸಿದಂತೆ ಮಾಹಿತಿ ಕಾರ್ಯಾಗಾರ ಹಾಗೂ ಪೋಕ್ಸೋ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ ಮತ್ತು ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಾನವ ಕಳ್ಳ ಸಾಗಣೆ, ಮಕ್ಕಳ ಹಕ್ಕುಗಳು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಪೋಕ್ಸೋ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ ಮತ್ತು ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಬಗ್ಗೆ ಮಕ್ಕಳಲ್ಲಿ ಕಾನೂನು ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಹೇಳಿದರು.

ಮಕ್ಕಳ ಹಕ್ಕುಗಳಿಗೆ ಸಂಬಂಧಿಸಿದಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಂಗನಾಥ್ ಮಾತನಾಡಿ ಮಾಹಿತಿ ನೀಡಿದರಲ್ಲದೆ, ಅಗತ್ಯ ಸಂದರ್ಭಗಳಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ ೧೦೯೮ಕ್ಕೆ ಕರೆ ಮಾಡಬಹುದು ಎಂದು ತಿಳಿಸಿದರು.

ಮಕ್ಕಳ ರಕ್ಷಣಾ ಘಟಕದ ಕಾರ್ಯಕ್ರಮಾಧಿಕಾರಿ ಸಂತೋಷ್ ಮಾತನಾಡಿ, ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಸಖಿ ಒನ್ ಸ್ಟಾಪ್ ಸೆಂಟರ್, ಬಾಲಕರ ಹಾಗೂ ಬಾಲಕಿಯರ ಪ್ರತ್ಯೇಕ ಬಾಲ ಮಂದಿರಗಳು, ಮಹಿಳಾ ಸಾಂತ್ವನ ಕೇಂದ್ರಗಳಲ್ಲಿ ರಕ್ಷಣೆ ಕಲ್ಪಿಸಲಾಗುವುದು. ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಜುಲೈ ೩೦ ರಂದು ನಗರದಲ್ಲಿ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಿ.ವಿರೂಪಾಕ್ಷ ಮಾತನಾಡಿ, ಮಕ್ಕಳು ಉತ್ತಮವಾಗಿ ವ್ಯಾಸಂಗವನ್ನು ಮಾಡುವ ಮೂಲಕ ವಿದ್ಯಾವಂತರಾಗಬೇಕೆಂದು ತಿಳಿಹೇಳಿದರು.

“If you see exploitation of women and children call the helpline”

Related posts

ದೈಹಿಕ-ಮಾನಸಿಕ ಸದೃಢತೆಗೆ ಕ್ರೀಡಾಕೂಟಗಳು ಸಹಕಾರಿ

Team Suddigara

ವಿಮಾನ ನಿಲ್ದಾಣಗಳ ಮಾದರಿಯಲ್ಲಿ ರಾಜ್ಯದ ಎಲ್ಲ ರೈಲುನಿಲ್ದಾಣ ಅಭಿವೃದ್ಧಿ

Team Suddigara

ದಾಸರಹಳ್ಳಿ ಗ್ರಾ.ಪಂ ಅಧ್ಯಕ್ಷರಾಗಿ ಟಿ.ಎಸ್. ಶಿವೇಗೌಡ ಅವಿರೋಧ ಆಯ್ಕೆ

Team Suddigara

Leave a Comment