May 18, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಯುವಪೀಳಿಗೆ ಪ್ರಜಾಪ್ರಭುತ್ವದ ಮಹತ್ವ ಅರಿಯಬೇಕು

ಚಿಕ್ಕಮಗಳೂರು: ಯುವ ಪೀಳಿಗೆ ಪ್ರಜಾಪ್ರಭುತ್ವದ ಮಹತ್ವವನ್ನು ಅರಿಯಬೇಕೆಂಬ ಸದುದ್ದೇಶದಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್,ಎಲ್ ಭೋಜೇಗೌಡ ಹೇಳಿದರು.

ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ನಗರಸಭೆಯ ಸಂಯುಕ್ತ ಆಶ್ರಯದಲ್ಲಿ ಇಂದು ಬೆಳಿಗ್ಗೆ ನಗರದ ನೇತಾಜಿ ಸುಭಾಶ್ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಸೈಕಲ್ ಜಾಥಾಕ್ಕೆ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ ಮತ್ತಿತರ ಅಧಿಕಾರಿಗಳೊಂದಿಗೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.

ದೇಶದ ಏಕತೆ, ಅಖಂಡತೆ, ರಾಷ್ಟ್ರೀಯತೆ ಈ ಎಲ್ಲಾ ವಿಚಾರವನ್ನು ನಮ್ಮ ಸಂವಿಧಾನ ಒಳಗೊಂಡಿದೆ. ಪ್ರಜಾಪ್ರಭುತ್ವದ ಮಹತ್ವವನ್ನು ನಮ್ಮ ಯುವಜನತೆ ಅರಿಯಬೇಕು. ಸಾಮಾಜಿಕ ನ್ಯಾಯ, ಸಮಾನತೆ, ಶಿಕ್ಷಣ ಮತ್ತು ಆರೋಗ್ಯ ಅಂಬೇಡ್ಕರ್ ನೀಡಿರುವ ಸಂವಿಧಾನದ ಆಶಯವಾಗಿದ್ದು, ಈ ಆಶಯದಂತೆ ಪ್ರತಿಯೊಬ್ಬ ಪ್ರಜೆಯು ಅರಿತು ನಡೆದಲ್ಲಿ ಸ್ವಾಸ್ಥ್ಯ ಸಮಾಜ ನಿರ್ಮಾಣವಾಗುತ್ತದೆ ಎಂದು ಹೇಳಿದರು.

ಸಂವಿಧಾನದ ಆಶಯಗಳನ್ನು ಆಧರಿಸಿ ಹಿಂದಿನವರು ಈಗಾಗಲೇ ನಮ್ಮ ನಾಡಿಗೆ ಕೊಟ್ಟಿದ್ದಾರೆ. ಅವೆಲ್ಲವುಗಳನ್ನು ಕೂಡ ಕಾರ್ಯಗತ ಮಾಡುವಲ್ಲಿ ಯಶಸ್ವಿಯಾಗಿದ್ದೇವೆ. ಇನ್ನು ಕೆಲವು ಯಶಸ್ಸಿನ ಹಾದಿಯಲ್ಲಿವೆ. ನಮ್ಮ ಪೀಳಿಗೆಯವರಿಗೆ ಈ ದಿನ ಜಾಗೃತಿ ಮೂಡಿಸುವ ಕೆಲಸ ನಡೆಯಬೇಕಿದೆ. ಮುಂದಿನ ದಿನಗಳಲ್ಲಿ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವ ಕೆಲಸ ಅವರದ್ದಾಗಿದೆ. ಮತದಾನ ನಮ್ಮ ಹಕ್ಕು. ಮತದಾನ ಮಾಡುವಾಗ ಸರಿಯಾದ ರೀತಿಯಲ್ಲಿ ಚಿಂತನೆ ಮಾಡುವುದು ಅಗತ್ಯ. ಈ ವಿಚಾರದಲ್ಲಿ ಬಹಳ ಜಾಗರೂಕತೆ ವಹಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಬಿ.ಮಾಲತಿ ಸ್ವಾಗತಿಸಿ, ಮಾತನಾಡಿ ನಮ್ಮದು ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶ. ಇದಕ್ಕೆ ಮೂಲ ಕಾರಣ ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್. ಅವರು ಸಂವಿಧಾನದಲ್ಲಿ ನೀಡಿದ ಅವಕಾಶಗಳಿಂದಾಗಿ ಮಹಿಳೆ ಇಂದು ಹಲವಾರು ಕ್ಷೇತ್ರದಲ್ಲಿ ತಮ್ಮನ್ನು ತಾವು ಗುರುತಿಸಿಕೊಳ್ಳುವಂತಾಗಿದೆ ಎಂದರು.

ಇಂದು ರಾಜ್ಯಾದ್ಯಂತ ಸೈಕಲ್ ಜಾಥವನ್ನು ಆಯೋಜನೆ ಮಾಡಲಾಗಿದೆ. ಭಾರತದ ಭವ್ಯ ಭವಿಷ್ಯ ಶಾಲಾಕಾಲೇಜುಗಳ ಕೊಠಡಿಗಳಲ್ಲಿ ನಿರ್ಮಾಣವಾಗುತ್ತದೆ ಎಂದು ಕೊಠಾರಿ ಆಯೋಗ ಹೇಳಿದ್ದು,ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆ ಬಗ್ಗೆ ಯುವಜನರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಪರ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ.ಜಯಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕಿ ಮಂಜುಳಾ ಹುಲ್ಲಹಳ್ಳಿ,ಮುಖಂಡರಾದ ಕೆ.ಟಿ ರಾಧಾಕೃಷ್ಣ ಮುಂತಾದವರು ಭಾಗವಹಿಸಿದ್ದರು.

ನೇತಾಜಿ ಸುಭಾಶ್ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಿಂದ ಹೊರಟ ಸೈಕಲ್ ರ್‍ಯಾಲಿಯು ಆಜಾದ್ ಪಾರ್ಕ್, ಹಿರೇಮಗಳೂರು, ಎಐಟಿ ಸರ್ಕಲ್, ದಂಟರಮಕ್ಕಿ, ಎಂ.ಜಿ. ರಸ್ತೆ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ಬಂದು ತಲುಪಿತು.

The younger generation should understand the importance of democracy.

Related posts

ಸಿರಿ ಸಂಪತ್ತುಗಳಿಗಿಂತ ಮನುಷ್ಯನಿಗೆ ನೆಮ್ಮದಿ ಮುಖ್ಯ

Team Suddigara

ಮಳೆಯಿಂದ ಅವಘಡಗಳ ಸರಣಿ: ಬಣಕಲ್ ಬಳಿ ಒಂದೇ ರಸ್ತೆಯಲ್ಲಿ ಮೂರು ಕಾರು ಪಲ್ಟಿ

Team Suddigara

ಅದ್ದೂರಿಯಾಗಿ ಜರುಗಿದ ಶ್ರೀ ಬನಶಂಕರಿ ಅಮ್ಮನವರ ಜಾತ್ರಾ ಮಹೋತ್ಸವ

Team Suddigara

Leave a Comment