Category: ಚಿಕ್ಕಮಗಳೂರು ನಗರ

  • ಭದ್ರಾ ನದಿಗೆ ಬಿದ್ದು ಮಗ –  ಮನನೊಂದು ತಾಯಿ ಕೂಡ ಆತ್ಮಹತ್ಯೆ

    ಭದ್ರಾ ನದಿಗೆ ಬಿದ್ದು ಮಗ – ಮನನೊಂದು ತಾಯಿ ಕೂಡ ಆತ್ಮಹತ್ಯೆ

    ಚಿಕ್ಕಮಗಳೂರು: ಭದ್ರಾ ನದಿಗೆ ಪಿಕ್‌ಅಪ್‌ ವಾಹನ ಬಿದ್ದು ಮಗ ಕಣ್ಮರೆಯಾಗಿದ್ದರಿಂದ ಮನನೊಂದು ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಗಣಪತಿಕಟ್ಟೆ ಶಮಂತ್‌ (22)ಅವರು ಚಾಲನೆ ಮಾಡುತ್ತಿದ್ದ ಪಿಕ್‌ಅಪ್ ವಾಹನ ಕಳಸ– ಕಳಕೋಡು ರಸ್ತೆಯ ಕೊಳಮಗೆ ಬಳಿ ರಸ್ತೆ ಪಕ್ಕದಲ್ಲಿ ಹರಿಯುವ ಭದ್ರಾ ನದಿಗೆ ಗುರುವಾರ ಮಧ್ಯಾಹ್ನ ಉರುಳಿತ್ತು. ಸಂಜೆಯಾ ದರೂ ಶಮಂತ್ ಪತ್ತೆಯಾಗಿಲ್ಲ.

    ಅವರ ತಾಯಿ ರವಿಕಲಾ (45) ಅಪಘಾತ ನಡೆದ ಸ್ಥಳಕ್ಕೆ ತೆರಳಿ ಮಗನಿಗಾಗಿ ಹುಡುಕಾಡಿದ್ದರು. ಕಾಫಿ ತೋಟಕ್ಕೆ ಕಾರ್ಮಿಕರನ್ನು ಕರೆದುಕೊಂಡು ಹೋಗಿ ಕೆಲಸ ಮಾಡಿಸುವ ಮೇಸ್ತ್ರಿಯಾಗಿದ್ದ ರವಿಕಲಾ ಅವರು, ಇದೇ ಉದ್ದೇಶಕ್ಕೆ ಮಗನಿಗೆ ಪಿಕ್ಅಪ್ ವಾಹನವನ್ನು 6 ತಿಂಗಳ ಹಿಂದೆ ಕೊಡಿಸಿದ್ದರು. ಮಗ ವಾಹನದ ಸಮೇತ ಭದ್ರಾ ನದಿಗೆ ಬಿದ್ದಿರುವುದರಿಂದ ರವಿಕಲಾ ಆಘಾತಗೊಂಡಿದ್ದರು.

    ರಾತ್ರಿ 10.30ರ ವೇಳೆಗೆ ಮನೆಯ ಸಮೀಪದ ಕೆರೆಗೆ ರವಿಕಲಾ ಹಾರಿದ್ದಾರೆ. ಅವರನ್ನು ರಕ್ಷಿಸಲು ಸ್ಥಳೀಯರು ಪ್ರಯತ್ನ ಮಾಡಿದರೂ ಅಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ. ತಾಯಿ ಮತ್ತು ಮಗನ ಸಾವಿನಿಂದ ಗಣಪತಿಕಟ್ಟೆ ಪ್ರದೇಶದಲ್ಲಿ ದುಃಖ ಆವರಿಸಿದೆ. ನೂರಾರು ಕಾರ್ಮಿಕರು ಶುಕ್ರವಾರ ಕೆಲಸಕ್ಕೆ ಹೋಗದೆ ರತ್ನಕಲಾ ಅವರ ಮನೆ ಬಳಿ ಜಮಾಯಿಸಿದ್ದರು.

    ಭದ್ರಾ ನದಿಯಲ್ಲಿ ಶಮಂತ್ ಶವ ಹುಡುಕಾಟ ಮುಂದುವರಿದಿದೆ. ನೀರಿನಲ್ಲಿದ್ದ ಪಿಕ್‌ಅಪ್ ವಾಹನವನ್ನು ಮೇಲೆತ್ತಲಾಗಿದೆ. ಮಳೆಯ ನಡುವೆ ನೀರು ರಭಸವಾಗಿ ಹರಿಯುತ್ತಿರುವುದರಿಂದ ಶವ ಪತ್ತೆ ಕಷ್ಟವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ.

    Son falls into Bhadra river – heartbroken mother also commits suicide

  • ಚಿಂತೆ ಚಿಂತನಗೊಂಡಾಗ ಬದುಕು ಸಾರ್ಥಕ

    ಚಿಂತೆ ಚಿಂತನಗೊಂಡಾಗ ಬದುಕು ಸಾರ್ಥಕ

    ಬಾಳೆಹೊನ್ನೂರು: ಹೊರಗಿನ ಮಾಲಿನ್ಯ ಕಳೆಯಲು ಹೊರಟ ಮನುಷ್ಯ ತನ್ನ ಅಂತರಂಗದಲ್ಲಿಯೇ ಕತ್ತಲೆ ತುಂಬಿಕೊಂಡಿದ್ದಾನೆ. ಗುರಿಗಳಿಲ್ಲದ ಜೀವನ ಮತ್ತು ಹಣ ಸಂಪಾದನೆಯನ್ನೇ ಗುರಿಯಾಗಿಟ್ಟುಕೊಂಡ ಮನುಷ್ಯ ಬದುಕಲು ಬೇಕಾದ ಜ್ಞಾನವನ್ನು ಪಡೆಯುತ್ತಿಲ್ಲ. ಚಿಂತೆ ಚಿಂತನಗೊಂಡಾಗ ಮಾನವನ ಬದುಕು ಸಾರ್ಥಕಗೊಳ್ಳುವುದೆಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

    ಅವರು ಗುರುವಾರ ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಕೈಗೊಂಡ ೩೪ನೇ ವರ್ಷದ ಶ್ರಾವಣ ತಪೋನುಷ್ಠಾನದ ಅಂಗವಾಗಿ ಜರುಗಿದ ಪುರಾಣ ಪ್ರವಚನ ಉದ್ಘಾಟನಾ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.

    ಭಾರತೀಯ ಪುಣ್ಯ ಭೂಮಿಯಲ್ಲಿ ಬಹಳಷ್ಟು ಆಚರಣೆಗಳು ಬೆಳೆದು ಬಂದಿವೆ. ಹಿಂದೂಗಳಿಗೆ ಶ್ರಾವಣ ಮಾಸ ಅತ್ಯಂತ ಪವಿತ್ರವಾದದ್ದು. ಮಠ ಮಂದಿರಗಳಲ್ಲಿ ಶಿವನಾಮ ಸ್ಮರಣೆ ಸತ್ಕಥಾ ಶ್ರವಣಗಳು ನಡೆಯುತ್ತಾ ಬಂದಿವೆ. ವಿಚಾರ ವಿಮರ್ಶೆಗಳು ಸಂಸ್ಕೃತಿಯ ಮೇಲೆ ಹೊಸ ಬೆಳಕು ಮೂಡಿಸಬೇಕೇ ಹೊರತು ಜನರನ್ನು ನಾಸ್ತಿಕರನ್ನಾಗಿ ಮಾಡಬಾರದು. ಬುದ್ಧಿ ವಿಕಾಸಗೊಂಡಂತೆ ಭಾವನೆಗಳು ಬೆಳೆದು ಬರುವ ಅವಶ್ಯಕತೆಯಿದೆ. ಸಹನೆಯ ಗುಣ ತಾಳ್ಮೆ ಇದ್ದು ಮನಸ್ಸು ವಿಕಾಸಗೊಳ್ಳಬೇಕು. ಈ ನಾಡಿನ ಸಂಸ್ಕೃತಿಯ ಪಾವಿತ್ರ್ಯತೆಯನ್ನು ಕಾಪಾಡಿಕೊಂಡು ಬರುವುದು ಎಲ್ಲರ ಧ್ಯೇಯವಾಗಬೇಕು. ಶ್ರೀ ಜಗದ್ಗುರು ರೇಣುಕಾಚಾರ್ಯರ ವಿಶ್ವ ಬಂಧುತ್ವದ ಧಾರ್ಮಿಕ ಮತ್ತು ಸಾಮಾಜಿಕ ವಿಚಾರ ಧಾರೆಗಳು ಬಾಳಿ ಬದುಕುವ ಮನುಷ್ಯನಿಗೆ ದಾರಿ ದೀಪವೆಂದರು.

    ನೆಗಳೂರು ಹಿರೇಮಠದ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮಿಗಳು ರೇಣುಕ ವಿಜಯ ಪುರಾಣ ಪ್ರವಚನದಲ್ಲಿ ಮಾತನಾಡಿ ಮನುಷ್ಯನಿಗೆ ಮನುಷ್ಯತ್ವ ಮುಮುಕ್ಷತ್ವ ಮತ್ತು ದೊಡ್ಡವರ ಸಹವಾಸ ದೊರಕಲು ಭಗವಂತನ ಕೃಪೆಯಿದ್ದಾಗ ಮಾತ್ರ ದೊರಕಲು ಸಾಧ್ಯ. ಅರಿವು ಆದರ್ಶಗಳನ್ನು ಬೋಧಿಸಿ ಸನ್ಮಾರ್ಗಕ್ಕೆ ಜನ ಸಮುದಾಯ ಬರುವಂತೆ ಪ್ರೇರಣೆ ನೀಡಿದ ಮಹಾನ್ ಶಕ್ತಿ ಶ್ರೀ ಜಗದ್ಗುರು ರೇಣುಕಾಚಾರ್ಯರು ಎಂದ ಅವರು ಶ್ರಾವಣ ಒಂದು ತಿಂಗಳ ಕಾಲ ಅವರ ಆದರ್ಶ ಚಿಂತನಗಳನ್ನು ಅರಿಯಲು ಎಲ್ಲರಿಗೂ ಸುವರ್ಣಾವಕಾಶ ದೊರೆತಿರಲು ಗುರುವೇ ಕಾರಣಿಭೂತನಾಗಿರುವುನೆಂಬುದನ್ನು ಮರೆಯಬಾರದೆಂದರು.

    ಸುಳ್ಳ ಪಂಚಗೃಹ ಹಿರೇಮಠದ ಶಿವಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮಿಗಳು, ಹುಡಗಿ ಹಿರೇಮಠದ ಸೋಮೇಶ್ವರ ಶಿವಾಚಾರ್ಯ ಸ್ವಾಮಿಗಳು, ಶಿವಮೊಗ್ಗದ ಎಸ್.ಹೆಚ್.ಸಿದ್ಧಣ್ಣ, ನಾಗರನವಿಲೆಯ ಪವನಕುಮಾರ್, ಸಿದ್ದೇಶ್ವರ ಶಾಸ್ತ್ರಿಗಳು, ಶಂಕರನಹಳ್ಳಿ ಸದ್ಭಕ್ತರು ಉಪಸ್ಥಿತರಿದ್ದರು. ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲ ಸಾಧಕರಿಂದ ವೇದಘೋಷ, ಗಂಗಾಧರ ಹಿರೇಮಠ ಇವರಿಂದ ಪ್ರಾರ್ಥನಾ ಗೀತೆ ಜರುಗಿತು. ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲ ಕುಲಪತಿ ಬೆಳಗಾಲಪೇಟೆ ಹಿರೇಮಠದ ಸಿದ್ಧಲಿಂಗಯ್ಯ ಶಾಸ್ತ್ರಿಗಳು ಸ್ವಾಗತಿಸಿದರು. ಶಿಕ್ಷಕ ವೀರೇಶ ಕುಲಕರ್ಣಿ ನಿರೂಪಿಸಿದರು.

    ಬೆಳಿಗ್ಗೆ ಲೋಕಕಲ್ಯಾಣಾರ್ಥವಾಗಿ ಶ್ರೀ ರಂಭಾಪುರಿ ಜಗದ್ಗುರುಗಳು ಬೆಳಿಗ್ಗೆ ಇಷ್ಟಲಿಂಗ ಮಹಾಪೂಜಾ ನೆರವೇರಿಸಿ ಆಶೀರ್ವದಿಸಿದರು. ಶ್ರಾವಣ ನಿಮಿತ್ಯ ಶ್ರೀ ಪೀಠದ ಎಲ್ಲ ದೈವಗಳಿಗೆ ವಿಶೇಷ ಪೂಜೆ ಜರುಗಿತು.

    Life is meaningful when you are free from worry and contemplation.

  • ಬೀಡಾಡಿ ನಾಯಿಗಳಿಗೆ ಆಹಾರ ಹಾಕಿದಲ್ಲಿ ಕಾನೂನು ಕ್ರಮ

    ಬೀಡಾಡಿ ನಾಯಿಗಳಿಗೆ ಆಹಾರ ಹಾಕಿದಲ್ಲಿ ಕಾನೂನು ಕ್ರಮ

    ಚಿಕ್ಕಮಗಳೂರು: ಮನೆಯಲ್ಲಿ ಉಳಿದ ಆಹಾರ ಪದಾರ್ಥಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಬೀಡಾಡಿ ನಾಯಿಗಳಿಗೆ ಹಾಕುತ್ತಿರುವುದು ಕಂಡು ಬಂದಿದ್ದು, ಈ ಬಗ್ಗೆ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಸಂಬಂಧಿಸಿದವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಯುಕ್ತ ಬಿ.ಸಿ.ಬಸವರಾಜು ಅವರು ಎಚ್ಚರಿಸಿದ್ದಾರೆ.

    ಈ ಬಗ್ಗೆ ಪತ್ರಿಕಾ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಅವರು, ನಗರ ವ್ಯಾಪ್ತಿಯಲ್ಲಿ ಬೀಡಾಡಿ ನಾಯಿಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನಾಯಿ ಸಾಕಾಣಿಕೆದಾರರು ತಮ್ಮ ನಾಯಿಗಳನ್ನು ರಸ್ತೆಗೆ ಬಿಡದೆ ತಮ್ಮ ಮನೆ ಆವರಣದಲ್ಲೇ ಬೆಲ್ಟ್ ಅಥವಾ ಹಗ್ಗದಿಂದ ಕಟ್ಟಿಹಾಕಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.

    ತಮ್ಮ ಮನೆಯಲ್ಲಿ ಉಳಿದ ಆಹಾರ ಪದಾರ್ಥಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಬೀಡಾಡಿ ನಾಯಿಗಳಿಗೆ ಆಹಾರವನ್ನು ಹಾಕುತ್ತಿರುವುದು ಕಂಡುಬಂದಿದ್ದು, ಇದು ನಗರ ವ್ಯಾಪ್ತಿಯಲ್ಲಿ ಬೀಡಾಡಿ ನಾಯಿಗಳ ಸಂಖ್ಯೆ ಹೆಚ್ಚಾಗುತ್ತಿರುವುದಕ್ಕೆ ಕಾರಣವಾಗಿದೆ.

    ಇದರಿಂದ ಸಾರ್ವಜನಿಕರಿಗೆ ಉಪದ್ರವದೊಂದಿಗೆ ನಾಯಿ ಕಡಿತ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವ ಬಗ್ಗೆ ಸಹ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಈ ಕಚೇರಿಗೆ ಬರುತ್ತಿರುವುದಾಗಿ ಅವರು ತಿಳಿಸಿದ್ದಾರೆ.

    Legal action against feeding stray dogs

  • ಹದಿಹರೆಯದ ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ಶಿಕ್ಷಣ ಅಗತ್ಯ

    ಹದಿಹರೆಯದ ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ಶಿಕ್ಷಣ ಅಗತ್ಯ

    ಚಿಕ್ಕಮಗಳೂರು:  ಕಾಯ, ವಾಚ, ಮನಸಾ ಪ್ರಾಚಾರ್ಯರು ಮತ್ತು ಉಪನ್ಯಾಸಕರು ಸೇವೆ ಸಲ್ಲಿಸಿ ವೃತ್ತಿ ಇರುವುದೇ ಮಕ್ಕಳ ಅಭಿವೃದ್ಧಿಗಾಗಿ-ಶ್ರೇಯಸ್ಸಿಗಾಗಿ ಅನ್ನುವುದನ್ನು ಅರ್ಥಮಾಡಿಕೊಂಡು ಶ್ರಮವಹಿಸಿದರೆ ಮಕ್ಕಳಲ್ಲಿರುವ ಪ್ರತಿಭೆ ಸಹಕಾರಿ ಎಂದು ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಉಪನಿರ್ದೇಶಕರಾದ ಮಂಜುಳ.ಕೆ ಅಭಿಪ್ರಾಯಿಸಿದರು.

    ಅವರು ಇಂದು ಜೆವಿಎಸ್ ಕಾಲೇಜು ಕುವೆಂಪು ಸಭಾಂಗಣದಲ್ಲಿ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ನಿವೃತ್ತ ಪ್ರಾಚಾರ್ಯರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ ಹದಿಹರೆಯದ ಮಕ್ಕಳಿಗೆ ಸರಿಯಾದ ಮಾರ್ಗದರ್ಶನದ ಶಿಕ್ಷಣ ಕೊಡುವ ಜವಾಬ್ದಾರಿ ಕಾಲೇಜುಗಳಿಗಿದೆ. ವಿದ್ಯಾ ಪ್ರತಿಭೆ, ಕ್ರೀಡಾ, ಸಾಂಸ್ಕೃತಿಕ ಪ್ರತಿಭೆಗಳೂ ಸೇರಿದಂತೆ ಎಲ್ಲವೂ ಹೊರಬರಲು ಕಾರಣವಾಗಿ ಪ್ರತಿಭಾ ಶಕ್ತಿಯಾಗಿ ರೂಪುಗೊಳ್ಳುತ್ತದೆ, ಪ್ರೇರಣೆಯಾಗುತ್ತದೆ ಎಂದು ಹೇಳಿದರು.

    ಕಳೆದ ಎರಡು ವರ್ಷದಲ್ಲಿ ದ್ವಿತೀಯ ಪಿಯುಸಿಯಲ್ಲಿ ವಾಣಿಜ್ಯ, ಕಲಾ, ವಿಜ್ಞಾನ ವಿಭಾಗದಲ್ಲಿ ಶಿಕ್ಷಣ ಪಡೆದು ಅತೀ ಹೆಚ್ಚು ಅಂಕ ಪಡೆದ ಜಿಲ್ಲಾ ಮಟ್ಟ, ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಆಹ್ವಾನಿಸಿ ಪ್ರೋತ್ಸಾಹಧನದೊಂದಿಗೆ ಗೌರವಿಸುವ ಕೆಲಸವನ್ನು ಪ್ರಾಚಾರ್ಯರ ಸಂಘ ಮಾಡುತ್ತಿರುವುದು ಅಭಿನಂದನೀಯ ಎಂದರು.

    ಕಳೆದ ೩೫ ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಪ್ರಾಚಾರ್ಯರನ್ನು ಕರೆದು ಜಿಲ್ಲಾಮಟ್ಟದಲ್ಲಿ ಗೌರವಿಸುತ್ತಿರುವುದು ಅವರಿಗೆ ತೃಪ್ತಿ ನೀಡಿದೆ ಎಂದು ಭಾವಿಸುತ್ತೇನೆ, ಶಿಕ್ಷಣ ಕ್ಷೇತ್ರ ಅತ್ಯಂತ ಪವಿತ್ರವಾಗಿದ್ದು, ಸಮಾಜದ ಒಳಿತಿಗೆ ಈ ನಮ್ಮ ಕ್ಷೇತ್ರ ಪ್ರಮುಖ ಪಾತ್ರ ವಹಿಸಬೇಕು. ಶಿಕ್ಷಕರು, ಉಪನ್ಯಾಸಕರು, ಪ್ರಾಚಾರ್ಯರು ಸನ್ನಡತೆಯಿಂದ ಸದ್ಗುಣ, ಸಹನೆಯಿಂದ ವರ್ತಿಸಿದರೆ ಸಮಾಜವೂ ಕಲಿಯುತ್ತದೆ ಎಂಬುದನ್ನು ನಂಬಿದ್ದೇನೆ ಎಂದು ಹೇಳಿದರು.

    ಸಂಘದ ಅಧ್ಯಕ್ಷೆ ತಸ್ನೀಮಾ ಫಾತೀಮಾ ಮಾತನಾಡಿ, ಸಂಘದ ವತಿಯಿಂದ ಹಲವಾರು ಶಿಕ್ಷಣಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ನಡೆಸುತ್ತಾ ಬರುತ್ತಿದ್ದು, ಕಾಲೇಜಿನಲ್ಲಿ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ಜವಾಬ್ದಾರಿ ಕರ್ತವ್ಯದ ಜೊತೆಗೆ ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆಯೂ ಚಿಂತನೆ ಮಾಡುವುದು ಅಗತ್ಯ ಎಂದರು.

    ಸಂಘದ ಎಲ್ಲರ ಸಹಕಾರದೊಂದಿಗೆ ಬ್ಯಾಂಕಿನಲ್ಲಿ ಪ್ರತ್ಯೇಕ ಉಳಿತಾಯ ಖಾತೆ ತೆರೆದು ೧೨ ಲಕ್ಷ ರೂ ನಿಶ್ಚಿತ ಠೇವಣಿಯನ್ನು ಇಡಲಾಗಿದ್ದು, ಈ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸದೆ ಸಂಘದ ನಿವೇಶನ ಖರೀದಿಗೆ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

    ಕಾರ್ಯದರ್ಶಿ ತೇಜಸ್ವಿನಿ.ಜಿ, ಖಜಾಂಚಿ ಎಚ್.ಎಂ.ನಾಗರಾಜರಾವ್, ರಾಜ್ಯ ಪ್ರಾಂಶುಪಾಲ ಸಂಘದ ಜಿಲ್ಲಾ ಪ್ರತಿನಿಧಿ ರವಿಕಾಂತ್, ಪ.ಪೂ.ಕಾ.ಪ್ರಾ.ಸಂ ಉಪಾಧ್ಯಕ್ಷರಾದ ವಿರೂಪಾಕ್ಷ.ಜಿ.ಬಿ, ಸೋಮಶೇಖರ್.ಎಂ.ಎಲ್, ಉಪಾಧ್ಯಕ್ಷ ಮಿನಿ ಥಾಮಸ್, ಸಹಕಾರ್ಯದರ್ಶಿ ನಾಗಮಣಿ, ಸ.ಪ.ಪೂ ಕಾಲೇಜು ಪ್ರಾಚಾರ್ಯರಾದ ಶಿವಕುಮಾರ್.ಕೆ.ಆರ್, ಜಯಪ್ಪ.ಸಿ.ಆರ್, ಪುಟ್ಟಸ್ವಾಮಿನಾಯ್ಕ್, ಭಾಗೀರಥಿ, ಭೂದೇಶ.ಕೆ.ಆರ್, ಅರುಣ್‌ಕುಮಾರ್.ಟಿ.ಆರ್, ಎಂ.ಆರ್.ಮುರಳೀಧರ, ಹೆಚ್.ಎಂ.ಸದಾಶಿವಯ್ಯ, ಅನಂತಪದ್ಮನಾಭ.ಎ.ಡಿ ಉಪಸ್ಥಿತರಿದ್ದರು.

    Adolescent children need proper guidance and education.

  • ಬುಕ್ಕಾಂಬುಧಿ ಬೆಟ್ಟದಲ್ಲಿ ಅಮವಾಸ್ಯೆ ಪೂಜೆ

    ಬುಕ್ಕಾಂಬುಧಿ ಬೆಟ್ಟದಲ್ಲಿ ಅಮವಾಸ್ಯೆ ಪೂಜೆ

    ಅಜ್ಜಂಪುರ:  ಪರಮ ತಪಸ್ವಿ ಶ್ರೀ ಉಜ್ಜಯಿನಿ ಸಿದ್ಧಲಿಂಗ ಜಗದ್ಗುರುಗಳು ತಪಗೈದ ಬುಕ್ಕಾಂಬುಧಿ ಬೆಟ್ಟದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಒಂದು ತಿಂಗಳ ಕಾಲ ರುದ್ರಾಭಿಷೇಕ ಅಷ್ಟೋತ್ತರ ಮಹಾಮಂಗಲ ಕಾರ್ಯಕ್ರಮಗಳು ಜರುಗುತ್ತವೆ ಎಂದು ಟ್ರಸ್ಟಿನ ಅಧ್ಯಕ್ಷರಾದ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಪ್ರಕಟಪಡಿಸಿದರು.

    ಅವರು ಗುರುವಾರ ತಾಲೂಕಿನ ಬುಕ್ಕಾಂಬುಧಿ ಬೆಟ್ಟದಲ್ಲಿ ಅಮವಾಸ್ಯೆ ಪೂಜೆ ನೆರವೇರಿಸಿ ಶ್ರಾವಣ ಪೂಜಾ ಕಾರ್ಯಕ್ಕೆ ಚಾಲನೆಯಿತ್ತು ಆಶೀರ್ವಚನ ನೀಡಿ
    ವೀರಶೈವ ಧರ್ಮ ಸಂಸ್ಕೃತಿ-ಗುರು ಪರಂಪರೆಯ ಆದರ್ಶ ಮೌಲ್ಯಗಳನ್ನು ಬೆಳೆಸಿದ ಕೀರ್ತಿ ಲಿಂ.ಶ್ರೀ ಉಜ್ಜಯಿನಿ ಸಿದ್ಧಲಿಂಗ ಜಗದ್ಗುರುಗಳಿಗೆ ಸಲ್ಲುತ್ತದೆ. ಮೂರು ತಿಂಗಳ ಕಾಲ ಬುಕ್ಕಾಂಬುಧಿ ಬೆಟ್ಟದ ಮೇಲಿದ್ದು ಉಗ್ರ ತಪಸ್ಸನ್ನಾಚರಿಸಿದರು.

    ಯುಗ ಪುರುಷರಾಗಿ ಸರ್ವ ಭಕ್ತರ ಬಾಳಿಗೆ ಆಧ್ಯಾತ್ಮದ ಚಿಂತನೆಗಳನ್ನು ಬೋಧಿಸಿ ಸನ್ಮಾರ್ಗಕ್ಕೆ ಕರೆತಂದ ಕೀರ್ತಿ ಅವರದಾಗಿದೆ. ಶ್ರೀ ಉಜ್ಜಯಿನಿ ಜಗದ್ಗುರು ಸಿದ್ಧಲಿಂಗ ಶಿವಾಚಾರ್ಯ ಟ್ರಸ್ಟ ಒಂದು ತಿಂಗಳ ಶ್ರಾವಣ ಮಾಸದ ವಿಶೇಷ ಕಾರ್ಯಕ್ರಮ ರೂಪಿಸಿದೆ. ದಿನ ನಿತ್ಯ ಭಕ್ತರ ಸೇವೆಯಲ್ಲಿ ಪೂಜೆ ನೆರವೇರುತ್ತದೆ. ಆಸಕ್ತಿವುಳ್ಳ ಧರ್ಮಾಭಿಮಾನಿಗಳು ತನು ಮನ ಧನ ಪೂರ್ವಕ ಸೇವೆ ಸಲ್ಲಿಸಿ ಲಿಂ. ಶ್ರೀ ಉಜ್ಜಯಿನಿ ಸಿದ್ಧಲಿಂಗ ಜಗದ್ಗುರುಗಳವರ ಕೃಪೆಗೆ ಪಾತ್ರರಾಗಬೇಕೆಂದು ಅವರು ತಿಳಿಸಿದರು.

    ಈ ಸಂದರ್ಭದಲ್ಲಿ ಟ್ರಸ್ಟಿನ ಉಪಾಧ್ಯಕ್ಷ ಶೀಲವಂತರ ವೀರಭದ್ರಪ್ಪ, ಕಾರ್ಯದರ್ಶಿ ಹೆಚ್.ಪಿ..ಸುರೇಶ್ ಮೊದಲ್ಗೊಂಡು ಟ್ರಸ್ಟಿನ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

    Amavasya Puja at Bukkambudhi hill

  • ಮುಂಬರುವ ತಾಪಂ-ಜಿಪಂ ಚುನಾವಣೆ ಎದುರಿಸಲು ಸದಸ್ಯತ್ವ ಅಭಿಯಾನ

    ಮುಂಬರುವ ತಾಪಂ-ಜಿಪಂ ಚುನಾವಣೆ ಎದುರಿಸಲು ಸದಸ್ಯತ್ವ ಅಭಿಯಾನ

    ಚಿಕ್ಕಮಗಳೂರು:  ಜೆಡಿಎಸ್ ಪಕ್ಷವನ್ನು ತಳ ಮಟ್ಟದಿಂದ ಪಕ್ಷ ಸಂಘಟನೆ ಮಾಡುವ ಮೂಲಕ ಮುಂಬರುವ ಗ್ರಾಪಂ, ತಾಪಂ, ಜಿಪಂ ಚುನಾವಣೆಗಳನ್ನು ಸದಸ್ಯತ್ವ ಅಭಿಯಾನದ ಮೂಲಕ ಜೆಡಿಎಸ್ ಪಕ್ಷ ಸಂಘಟನೆಗೆ ಗುರಿ ಹೊಂದಲಾಗಿದೆ ಎಂದು ಪಕ್ಷದ ರಾಜ್ಯ ಮುಖಂಡ ನಿಖಿಲ್ ಕುಮಾರಸ್ವಾಮಿ ಕಾರ್ಯಕರ್ತರಿಗೆ ಕರೆ ನೀಡಿದರು.

    ಅವರು ಇಂದು ಜಿಲ್ಲೆಯ ಶೃಂಗೇರಿ ವಿಧಾನ ಸಭಾ ಕ್ಷೇತ್ರ ಕೊಪ್ಪದ ಒಕ್ಕಲಿಗರ ಸಂಘದ ಭವನದಲ್ಲಿ ಏರ್ಪಡಿಸಲಾಗಿದ್ದ ಜೆಡಿಎಸ್ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿ ಮಲೆನಾಡು ಭಾಗದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೆ ಪಕ್ಷದ ಮೇಲೆ ಅಭಿಮಾನವಿಟ್ಟು ಆಗಮಿಸಿರುವ ಕಾರ್ಯಕರ್ತರು, ಹಿತೈಷಿಗಳ ನಿರೀಕ್ಷೆಗೆ ಚ್ಯುತಿ ಬಾರದಂತೆ ನೆಡೆಯುತ್ತೇವೆ, ಪಕ್ಷ ಸಂಘಟನೆ ಬಲವಾದಷ್ಟು ನಾಯಕ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ರವರಿಗೆ ಧ್ವನಿಯಾಗಿ ಕೆಲಸ ಮಾಡಬೇಕೆಂದು ಮನವಿ ಮಾಡಿದರು.

    ರಾಜ್ಯ ಜೆಡಿಎಸ್ ಮುಖಂಡ ಸುಧಾಕರ ಶೆಟ್ಟಿ ರವರು ಪಕ್ಷ ಸಂಘಟನೆಗೆ ಗಟ್ಟಿಯಾಗಿ ಶ್ರಮವಹಿಸುತ್ತಿರುವುದು ಶ್ಲಾಘನೀಯ ಎಂದ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದಾಗ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿದ್ದ ತಮಗೆ ಮತ ನೀಡಿದವರನ್ನು ಮರೆಯಬಾರದೆಂದು, ಈ ದೃಢ ನಿರ್ಧಾರ ಕೈಗೊಂಡಿದ್ದೀರಿ ಎಂದರು.

    ಪಕ್ಷದ ಕಾರ್ಯಕರ್ತರು ಶೃಂಗೇರಿ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನು ಬಲವಾಗಿ ಕಟ್ಟುವ ಸಂಕಲ್ಪ ಮಾಡಬೇಕಾಗಿದೆ, ಸುಧಾಕರ ಶೆಟ್ಟರವರು ಯಾವುದೇ ಅಪೇಕ್ಷೆ ಇಟ್ಟುಕೊಳ್ಳದೆ ಅಮ್ಮ ಫೌಂಡೇಷನ್ ಮೂಲಕ ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಗಣನೀಯ ಸೇವೆ ಸಲ್ಲಿಸುತ್ತಿದ್ದಾರೆ, ಮಾಜಿ ಶಿಕ್ಷಣ ಸಚಿವ ಗಾಂಧಿವಾದಿ ಹೆಚ್.ಜಿ ಗೋವಿಂದೇ ಗೌಡರ ಕರ್ತವ್ಯ ನಿಷ್ಠೆಯ ಬಗ್ಗೆ ಸ್ಮರಿಸಿದರು.

    ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಮಾರ್ಗದರ್ಶನ, ನಾಯಕರಾದ ಹೆಚ್.ಡಿ ಕುಮಾರಸ್ವಾಮಿ ರವರ ಆದೇಶದ ಮೇರೆಗೆ ಈ ಸದಸ್ಯತ್ವ ಅಭಿಯಾನವನ್ನು ನಡೆಸುತ್ತಿದ್ದು, ಆ. ೨೦ ರೋಳಗೆ ಇದನ್ನು ಮುಕ್ತಾಯಗೊಳಿಸಬೇಕೆಂಬ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರವಾಸ ಕ್ಯಗೊಳ್ಳುವುದಾಗಿ ತಿಳಿಸಿದರು.

    ಜೆಡಿಎಸ್ ಪಕ್ಷದ ಮೇಲೆ ಇಟ್ಟಿರುವ ಅಭಿಮಾನಕ್ಕೆ ಬೆಲೆ ಕಟ್ಟಲಾಗದು, ಪಕ್ಷದ ಕಾರ್ಯಕರ್ತರು ಮಳೆ, ಗಾಳಿ, ಚಳಿ, ಬಿಸಿಲಿಗೆ ಜಗ್ಗುವುದಿಲ್ಲ ಎಂಬುವುದಕ್ಕೆ ಇಲ್ಲಿ ಸೇರಿರುವ ಕಾರ್ಯಕರ್ತರ ಪಡೆ ನಿದರ್ಶನ ಎಂದ ಅವರು ಮೂರು ಬಾರಿ ಚುನಾವಣೆಯಲ್ಲಿ ಪರಾಭವಗೊಂಡಿದ್ದರು ನಗು ಮುಖವನ್ನು ಯಾರು ಕಿತ್ತುಕೊಳ್ಳಲು ಸಾದ್ಯವಿಲ್ಲ, ಪ್ರತಿ ಹಂತದಲ್ಲೂ ಪಕ್ಷ ಸಂಘಟನೆ ಮಾಡಿ ಬೆಂಬಲಿಸುತ್ತಿದ್ದೀರಿ ಎಂದರು.

    ಉಪಾಧ್ಯಕ್ಷ ಸುಧಾಕರ್ ಶೆಟ್ಟಿ ಮಾತನಾಡಿ ಜೆಡಿಎಸ್ ಪಕ್ಷ ಸಂಘಟನೆಗೆ ಯುವ ಕಾರ್ಯಕರ್ತರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿರುವುದು ಬದಲಾವಣೆಯ ದಿಗ್ಸೂಚಿ ಎಂದು ಹೇಳಿದರು. ಸಕಲೇಶಪುರ ಮಾಜಿ ಶಾಸಕ ಹೆಚ್.ಕೆ ಕುಮಾರಸ್ವಾಮಿ ಮಾತನಾಡಿ ಒಂದು ಪಕ್ಷ ರಾಜಕೀಯವಾಗಿ ಸದೃಢವಾಗಬೇಕಾದರೆ ಪ್ರಾಥಮಿಕ ಸದಸ್ಯತ್ವ ನೋಂದಣಿ ಅಗತ್ಯವಾಗಿದ್ದು, ಈ ಮೂಲಕ ಪಕ್ಷ ಸಂಘಟನೆ ಮಾಡಬೇಕು ಎಂದು ಅಭಿಪ್ರಾಯಿಸಿದರು.

    ಯಾವುದೇ ಅಭಿವೃದ್ಧಿ ಕೈಗೊಳ್ಳದ ಜನ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡಲು ಕಾರ್ಯಕರ್ತರು ಮನಸ್ಸು ಮಾಡಿ ಪಕ್ಷಕ್ಕೆ ಶಕ್ತಿ ತುಂಬಬೇಕೆಂದು ಹೇಳಿದ ಅವರು ನೂತನ ಸದಸ್ಯತ್ವ ಪಡೆಯುವಾಗ ಎಲ್ಲಾ ವರ್ಗದ ಜನರಿಗೆ ಅವಕಾಶ ನೀಡಬೇಕು, ಈ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಸಮಿತಿ ರಚಿಸುವ ಅಗತ್ಯ ಇದೆ ಎಂದು ಸಲಹೆ ನೀಡಿದರು,

    ಕಾರ್ಯಕ್ರಮದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ರಂಜನ್ ಅಜಿತ್ ಕುಮಾರ್, ಕೋರ್ ಕಮಿಟಿ ಸದಸ್ಯ ಹೆಚ್.ಜಿ ವೆಂಕಟೇಶ್, ಕ್ಷೇತ್ರ ಸಮಿತಿ ಅಧ್ಯಕ್ಷ ದಿವಾಕರ ಭಟ್, ರಾಜ್ಯ ಮಹಿಳಾ ಘಟಕದ ರಶ್ಮೀ ರಾಮೇಗೌಡ, ಕುಸುಮ ವಾಸಪ್ಪ, ರಾಮಸ್ವಾಮಿ, ಗೋವಿಂದೇಗೌಡ, ಮಂಜುನಾಥ್, ಚಂದ್ರಶೇಖರ್, ಉದಯ ಸುವರ್ಣ, ಅನಿಲ್ ನಾರ್ವೇ, ಬದ್ರಿಯಾ ಮಹ್ಮದ್, ಸುರೇಶ್, ದೇವೇಂದ್ರ, ಶುಭಾಅರುಣ್, ಪುಷ್ವಲತ, ಶಿವದಾಸ್, ಕಳಸಪ್ಪ, ಸಂಜಯ್ ಮತ್ತಿತರರು ಉಪಸ್ಥಿತರಿದ್ದರು, ಮೊದಲಿಗೆ ಪಕ್ಷದ ಮುಖಂಡ ವಿನಯ್ ಕಣಿವೆ ಸ್ವಾಗತಿಸಿದರು.

    Membership campaign to face the upcoming TPA-ZIP elections

  • ಬಾಲ್ಯ ವಿವಾಹ ತಡೆಯಲು ಜನಜಾಗೃತಿ ಅಗತ್ಯ

    ಬಾಲ್ಯ ವಿವಾಹ ತಡೆಯಲು ಜನಜಾಗೃತಿ ಅಗತ್ಯ

    ಚಿಕ್ಕಮಗಳೂರು:  ಬಾಲ್ಯವಿವಾಹ ತಡೆಯಲು ಹಾಗೂ ಈ ಕುರಿತು ಜನಜಾಗೃತಿ ಮೂಡಿಸುವಲ್ಲಿ ಸ್ತ್ರೀಶಕ್ತಿ ಸ್ವ-ಸಹಾಯ ಸಂಘಗಳ ಪಾತ್ರ ಹಿರಿದು ಎಂದು ನಗರಸಭೆ ಪೌರಾಯುಕ್ತ ಬಿ.ಸಿ. ಬಸವರಾಜ್ ಕರೆ ನೀಡಿದರು.

    ಅವರು ಇಂದು ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಸ್ವ-ಸಹಾಯ ಸಂಘಗಳ ಮಹಿಳೆಯರಿಗೆ ವಿವಾಹ ನೋಂದಣಿ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ೧೮ ವರ್ಷ ತುಂಬುವ ಮುನ್ನವೇ ಹೆಣ್ಣುಮಕ್ಕಳಿಗೆ ಹಾಗೂ ೨೧ ವರ್ಷ ತುಂಬುವ ಮೊದಲು ಪುರುಷರಿಗೆ ವಿವಾಹ ಮಾಡುತ್ತಿರುವ ಬಗ್ಗೆ ನಾಗರೀಕರಲ್ಲಿ ಜಾಗೃತಿ ಮೂಡಿಸಬೇಕು. ಸರ್ಕಾರ ನಿಗದಿಪಡಿಸಿರುವ ವಯಸ್ಸಿನ ಮುನ್ನ ಮದುವೆ ಮಾಡಿದರೆ ಅಂಗವಿಕಲ ಮಕ್ಕಳು ಜನಿಸುತ್ತಾರೆ. ಕಠಿಣ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂಬ ತಿಳಿವಳಿಕೆಯನ್ನು ನೀಡಬೇಕಾಗಿದೆ ಎಂದರು.

    ಈ ಸಂಬಂಧ ತಮ್ಮ ವಾರ್ಡಿನಲ್ಲಿ ಬಾಲ್ಯವಿವಾಹವಾಗಿದ್ದರೆ ಅಂತವರಿಗೆ ಜಾಗೃತಿ ಮೂಡಿಸಿ ಹಿರಿಯರು ಮಾಡಿದ ತಪ್ಪಿನಿಂದ ಜೀವನವಿಡೀ ನೋವನ್ನು ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿ ಜಿಲ್ಲೆಯ ಬೇರೆ ತಾಲ್ಲೂಕುಗಳಲ್ಲಿ ಸ್ತ್ರೀಶಕ್ತಿ ಸ್ವ-ಸಹಾಯ ಸಂಘಗಳು ಕ್ರಿಯಾಶೀಲವಾಗಿ ಚಟುವಟಿಕೆ ನಡೆಸುತ್ತಿವೆ. ಆದರೆ, ಜಿಲ್ಲಾ ಕೇಂದ್ರದಲ್ಲಿರುವ ಸಂಘಗಳು ನಿಷ್ಕ್ರಿಯವಾಗಿ ಆಸಕ್ತಿ ವಹಿಸುತ್ತಿಲ್ಲ ಎಂದು ವಿಷಾಧ ವ್ಯಕ್ತಪಡಿಸಿದರು.

    ಜಿಲ್ಲಾಧಿಕಾರಿಗಳ ಕಛೇರಿಯಿಂದ ಪ್ರತೀ ಸ್ಥಳೀಯ ಸಂಸ್ಥೆಗಳಿಗೆ ಸ್ತ್ರೀಶಕ್ತಿ ಸಂಘಗಳಲ್ಲಿ ಉತ್ತಮವಾಗಿ ಕೆಲಸ ಮಾಡುವ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದವರನ್ನು ಕಮ್ಯುನಿಟಿ ಮೊಬೈಲೈಸರ್ ಎಂದು ಆಯ್ಕೆಮಾಡಲು ೨೩ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದರೆ ಕೇವಲ ೨೦ ಜನ ಅರ್ಜಿ ಹಾಕಿದ್ದೀರಿ ಎಂದರು.

    ಈಗಾಗಲೇ ೧೫೦ ಕ್ಕೂ ಹೆಚ್ಚು ಸಂಘಗಳಿದ್ದು, ಅದರಲ್ಲಿ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರುವವರು ಇಲ್ಲವೇ ಎಂದು ಪ್ರಶ್ನಿಸಿದ ಅವರು, ತಿಂಗಳಿಗೆ ೨೦ ಸಾವಿರ ವೇತನ ಸಿಗುವ ಈ ಹುದ್ದೆ ಜೊತೆಗೆ ನಗರಸಭೆಯೊಂದಿಗೆ ಒಡನಾಟ ಇಟ್ಟುಕೊಳ್ಳಬಹುದು. ಆರ್ಥಿಕ ಅಭಿವೃದ್ಧಿಯಾಗಬೇಕೆಂಬ ಆಸಕ್ತಿ ಇಲ್ಲವೇ ಎಂದು ಹೇಳಿದರು.

    ಸಾಮಾಜಿಕವಾಗಿ ಸಾರ್ವಜನಿಕರೊಟ್ಟಿಗೆ ಬೆರೆಯುವ ಜೊತೆಗೆ ನಗರಸಭೆಯಿಂದ ಮನೆ ಕಸ ಬಿಲ್, ಮನೆ ಕಂದಾಯ, ನೀರಿನ ಕರ ವಸೂಲಿ ಸೇರಿದಂತೆ ಮತ್ತಿತರ ಕೆಲಸಗಳಿಗೆ ಸ್ತ್ರೀಶಕ್ತಿ ಸಂಘಗಳಿಂದ ಅರ್ಜಿ ಆಹ್ವಾನಿಸಿದರೆ ಕೇವಲ ೮ ಅರ್ಜಿಗಳು ಬಂದಿವೆ ಎಂದು ಹೇಳಿದರು.

    ಈ ಸಂದರ್ಭದಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯ ಅಧಿಕಾರಿ ಶಿವಲಿಂಗಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬಿಂದ್ಯಾ, ನಗರಸಭೆ ಸಿಬ್ಬಂದಿಗಳಾದ ಕಲಾವತಿ ಚಂದ್ರಶೇಖರ್ ಉಪಸ್ಥಿತರಿದ್ದರು

    Public awareness is needed to prevent child marriage

  • ಸಂತೆ ಮಾರುಕಟ್ಟೆಯಲ್ಲಿ ಸ್ವಚ್ಛತೆ ಕಾಪಾಡಲು ಸೂಚನೆ

    ಸಂತೆ ಮಾರುಕಟ್ಟೆಯಲ್ಲಿ ಸ್ವಚ್ಛತೆ ಕಾಪಾಡಲು ಸೂಚನೆ

    ಚಿಕ್ಕಮಗಳೂರು:  ಕಳೆದ ಎರಡು ವಾರದಿಂದ ನಗರದ ಸಂತೆ ಮಾರುಕಟ್ಟೆ ಸ್ವಚ್ಚತೆ ಹಾಗೂ ವರ್ತಕರಲ್ಲಿ ಜಾಗೃತಿ ಮೂಡಿಸಿದ ಪರಿಣಾಮ ಇಂದು ನಾಗರೀಕರು ಸಂತಸದಿಂದ ವ್ಯಾಪಾರ ಮಾಡಲು ಅನುಕೂಲವಾಗಿದೆ ಎಂದು ನಗರಸಭಾ ಪೌರಾಯುಕ್ತ ಬಿ.ಸಿ. ಬಸವರಾಜ್ ತಿಳಿಸಿದರು.

    ಅವರು ಇಂದು ಸಂತೆ ಮಾರ್ಕೆಟ್‌ಗೆ ಭೇಟಿನೀಡಿ ಸಂತೆಯಲ್ಲಿ ಸ್ವಚ್ಚತೆ ಕಾಪಾಡುವಂತೆ ವರ್ತಕರಿಗೆ ಸೂಚನೆ ನೀಡಿ ಗ್ರಾಹಕರಿಗೆ ಅರಿವು ಮೂಡಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಎಲ್ಲಾ ವರ್ತಕರು ಪ್ರತೀ ವಾರ ಇದೇ ರೀತಿ ವ್ಯಾಪಾರ ವಹಿವಾಟು ನಡೆಸಬೇಕೆಂದು ಸೂಚನೆ ನೀಡಿದ ಅವರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ತರಕಾರಿ ಮುಂತಾದ ಅಗತ್ಯ ವಸ್ತುಗಳನ್ನು ಖರೀದಿಸಬೇಕೆಂದು ಮನವಿ ಮಾಡಿದರು.

    ನಗರದಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ ಮಾಡಿದ್ದು, ಸಂತೆ ಮಾರುಕಟ್ಟೆಯಲ್ಲಿ ಅಲ್ಲಲ್ಲಿ ಪ್ಲಾಸ್ಟಿಕ್‌ನ್ನು ವರ್ತಕರು ಇಟ್ಟುಕೊಂಡು ವ್ಯಾಪಾರ ಮಾಡುತ್ತಿರುವುದು ಕಂಡುಬರುತ್ತಿದ್ದು, ಗ್ರಾಹಕರು ಬಟ್ಟೆ ಬ್ಯಾಗ್‌ಗಳನ್ನು ತರುವ ಮೂಲಕ ನಗರಸಭೆಯೊಂದಿಗೆ ಸಹಕರಿಸಬೇಕೆಂದು ವಿನಂತಿಸಿದರು.

    ಶುದ್ಧಗಂಗಾ ಕುಡಿಯುವ ನೀರಿನ ಘಟಕ ಹಾಗೂ ಶೌಚಾಲಯ ನಿರ್ಮಿಸಬೇಕೆಂಬ ವರ್ತಕರು ಹಾಗೂ ಸಾರ್ವಜನಿಕರ ಬೇಡಿಕೆಗನುಗುಣವಾಗಿ ಮಾರುಕಟ್ಟೆಯಲ್ಲಿ ಹಾಲಿ ಇರುವುದರ ಜೊತೆಗೆ ಶುದ್ಧಗಂಗಾ ಕುಡಿಯುವ ನೀರಿನ ಘಟಕವನ್ನು ನಗರಸಭೆಯಲ್ಲಿ ಅನುಮೋದನೆ ಪಡೆದು ಇನ್ನೊಂದು ತಿಂಗಳಲ್ಲಿ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದರು.

    ಬೀದಿಬದಿ ವ್ಯಾಪಾರಿಗಳಿಗೆ ಹಾಗೂ ತಳ್ಳುವ ಗಾಡಿಗಳಲ್ಲಿ ವ್ಯಾಪಾರ ನಡೆಸುತ್ತಿರುವವರ ಅನುಕೂಲಕ್ಕಾಗಿ ಮಯೂರ ಹೋಟೆಲ್ ಹಿಂಭಾಗದ ಕಟ್ಟೆ ನಿರ್ಮಿಸಿದ್ದು, ತಾತ್ಕಾಲಿಕವಾಗಿ ಮಾರುಕಟ್ಟೆ ನಿರ್ಮಾಣ ಮಾಡಲಾಗಿದೆ. ದಿನದ ೨೪ ಗಂಟೆ ಇಲ್ಲಿಯೇ ವ್ಯಾಪಾರ ಮಾಡಬೇಕೆಂದು ಸೂಚನೆ ನೀಡಿದರು.

    ನಗರಸಭೆ ಸದಸ್ಯೆ ಸಿ.ಎನ್ ಸಲ್ಮಾ ಮಾತನಾಡಿ, ನಗರಸಭೆಯ ನಿರ್ಧಾರದಿಂದಾಗಿ ಸಂತೆ ಮಾರುಕಟ್ಟೆ ಸ್ವಚ್ಚತೆಯಿಂದ ಕೂಡಿದ್ದು, ವರ್ತಕರು ಮತ್ತು ನಾಗರೀಕರು ಇದೇ ರೀತಿ ಸಹಕರಿಸಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಆರೋಗ್ಯ ನಿರೀಕ್ಷಕರಾದ ಈಶ್ವರ್, ಅಣ್ಣಯ್ಯ ಇತರರು ಉಪಸ್ಥಿತರಿದ್ದರು.

    Instructions to maintain cleanliness in the market

  • ಮಳೆಗಾಲ ಮುಗಿದ ಬಳಿಕ ನಗರದ ಎಲ್ಲಾ ರಸ್ತೆಗಳ ಡಾಂಬರೀಕರಣ

    ಮಳೆಗಾಲ ಮುಗಿದ ಬಳಿಕ ನಗರದ ಎಲ್ಲಾ ರಸ್ತೆಗಳ ಡಾಂಬರೀಕರಣ

    ಚಿಕ್ಕಮಗಳೂರು: ಮಳೆಗಾಲ ಮುಗಿದ ಬಳಿಕ ನಗರದ ಎಲ್ಲಾ ರಸ್ತೆಗಳನ್ನು ಸುಮಾರು ೧೨.೫ ಕೋಟಿ ರೂ ವೆಚ್ಚದಲ್ಲಿ ಡಾಂಬರೀಕರಣಗೊಳಿಸಲು ಕ್ರಮ ವಹಿಸುವುದಾಗಿ ಶಾಸಕ ಹೆಚ್.ಡಿ. ತಮ್ಮಯ್ಯ ಭರವಸೆ ನೀಡಿದರು.

    ಅವರು ೧೫ನೇ ಹಣಕಾಸು ಯೋಜನೆಯಡಿ ೯೫ ಲಕ್ಷ ರೂ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ ಮಧ್ಯಭಾಗದಲ್ಲಿ ರಾಂಪುರದಿಂದ ಕತ್ರಿಮಾರಮ್ಮ ದೇವಸ್ಥಾನದವರೆಗೆ ಅಳವಡಿಸಲಾಗಿರುವ ವಿದ್ಯುತ್ ದೀಪಗಳಿಗೆ ಚಾಲನೆ ನೀಡಿ ಮಾತನಾಡಿದರು.

    ಅತೀ ಹೆಚ್ಚು ಮಳೆಯಿಂದ ನಗರದಲ್ಲಿ ರಸ್ತೆಗಳು ಹಾನಿಯಾಗಿದ್ದು, ನಗರಸಭೆ ಇಂಜಿನಿಯರ್‌ಗಳು ರಸ್ತೆ ದುರಸ್ಥಿಗೆ ಬೇಕಾದ ಟೆಂಡರ್ ಪ್ರಕ್ರಿಯೆಯನ್ನು ಅಂತಿಮಗೊಳಿಸಿ ಕಾರ್ಯಾದೇಶ ನೀಡಿದ್ದು, ಈ ಹಿನ್ನೆಲೆಯಲ್ಲಿ ಮಳೆಗಾಲ ಮುಗಿದ ಬಳಿಕ ರಸ್ತೆಗಳನ್ನು ಡಾಂಬರೀಕರಣಗೊಳಿಸಿ ಅಭಿವೃದ್ಧಿಗೊಳಿಸಲಾಗುವುದೆಂದರು.

    ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಶೇಷ ಅನುದಾನ ಘೋಷಣೆ ಮಾಡಿದ್ದು, ಜು.೩೦, ೩೧ ರಂದು ಭೇಟಿಮಾಡಿ ಬಹುಪಾಲು ಅನುದಾನವನ್ನು ಪಡೆದು ನಗರದಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಬದ್ಧವಾಗಿರುವುದಾಗಿ ತಿಳಿಸಿದರು.

    ಬಹಳ ದಿನಗಳ ನಂತರ ನಗರದ ನಾಗರೀಕರಿಗೆ ಕತ್ತಲೆಯಿಂದ ತೊಂದರೆಯಾಗಿದ್ದು, ನಗರದ ಹೆದ್ದಾರಿಯಿಂದ ಸುತ್ತಮುತ್ತಲ ವಾರ್ಡ್‌ಗಳಿಗೆ ತೆರಳುವವರಿಗೆ ಇಂದು ವಿದ್ಯುತ್ ದೀಪಗಳಿಗೆ ಚಾಲನೆ ನೀಡಿರುವುದು ಬೆಳಕಿನೆಡೆಗೆ ತರುವ ಪ್ರಯತ್ನ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು, ಪುರಷರು ದೈರ್ಯವಾಗಿ ಸಂಚರಿಸಬಹುದಾಗಿದೆ ಎಂದು ಹೇಳಿದರು.

    ನಗರದ ಜನತೆಗೆ ಸ್ವಚ್ಚತೆ, ಕುಡಿಯುವ ನೀರು, ಬೀದಿದೀಪ ಮುಂತಾದವುಗಳನ್ನು ಕಲ್ಪಿಸಲು ಮೊದಲ ಆದ್ಯತೆ ನೀಡುತ್ತೇನೆ. ಪ್ರತಿದಿನ ಕಸ ಸಂಗ್ರಹಣೆಗೆ ಗಂಟೆಗಾಡಿ ಬರುತ್ತಿಲ್ಲ ಎಂಬ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಹೊಸ ಟೆಂಡರ್ ಕರೆದು ಪ್ರತೀ ದಿನ ಮನೆಯಲ್ಲಿಯೇ ಒಣ ಕಸ, ಹಸಿ ಕಸ ವಿಂಗಡಿಸಿ ಸಂಗ್ರಹಿಸಲು ಸೂಚನೆ ನೀಡಲಾಗಿದೆ ಎಂದರು.

    ಈ ಕಾರ್ಯ ಯಶಸ್ವಿಯಾಗಬೇಕಾದರೆ ಸಾರ್ವಜನಿಕ ಸಹಭಾಗಿತ್ವ ಅಗತ್ಯ. ಹೌಸಿಂಗ್‌ಬೋರ್ಡ್ ಮತ್ತು ಕಲ್ಯಾಣ ನಗರದಲ್ಲಿ ಸ್ಥಳೀಯರು ವೆಲ್ಫೇರ್ ಟ್ರಸ್ಟ್ ರಚಿಸಿ ಸಹಕಾರ ನೀಡಿದ್ದಾರೆ. ಇದೇ ಮಾದರಿಯಲ್ಲಿ ನಗರದ ಎಲ್ಲಾ ವಾರ್ಡ್‌ಗಳಲ್ಲಿಯೂ ವೆಲ್ಫೇರ್ ಟ್ರಸ್ಟ್ ರಚಿಸುವ ಮೂಲಕ ನಗರಸಭೆಯೊಂದಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.

    ಕಸ ವಿಲೇವಾರಿ ಮಾಡುವುದು ದೇಶದಲ್ಲೇ ಒಂದು ಪಿಡುಗಾಗಿದ್ದು, ಜೊತೆಗೆ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ನಗರಸಭೆ ವಿಧಿಸಿರುವ ಸೂಚನೆಗಳನ್ನು ನಾಗರೀಕರು ಪಾಲಿಸುವ ಮೂಲಕ ಸಾರ್ವಜನಿಕ ಸಹಭಾಗಿತ್ವ ಅಗತ್ಯವಾಗಿದ್ದು, ಪ್ಲಾಸ್ಟಿಕ್ ನಿಯಂತ್ರಣಕ್ಕೆ ಕ್ರಮವಹಿಸಬೇಕೆಂದು ಹೇಳಿದರು.

    ನಗರಸಭಾಧ್ಯಕ್ಷೆ ಶೀಲಾ ದಿನೇಶ್ ಮಾತನಾಡಿ, ಬೀದಿದೀಪ ಉದ್ಘಾಟಿಸಿದ ಶಾಸಕ ಹೆಚ್.ಡಿ. ತಮ್ಮಯ್ಯ ಅವರಿಗೆ ನಗರಸಭೆ ಮತ್ತು ೩೫ ವಾರ್ಡ್ ಸದಸ್ಯರ ಪರವಾಗಿ ಧನ್ಯವಾದಗಳನ್ನು ಸಲ್ಲಿಸಿದರು.

    ಸದಸ್ಯ ಎ.ಸಿ. ಕುಮಾರಗೌಡ ಮಾತನಾಡಿ, ನಮ್ಮ ವಾರ್ಡಿನಲ್ಲಿ ಬೀದಿದೀಪ ಇಲ್ಲದೆ ನಾಗರೀಕರಿಗೆ ತೊಂದರೆಯಾಗುತ್ತಿತ್ತು. ಜೊತೆಗೆ ವಾಹನ ಸಂಚಾರಕ್ಕೂ ಅಡಚಣೆಯಾಗುತ್ತಿತ್ತು. ಈ ಕತ್ತಲೆ ಕೂಪದಿಂದ ಹೊರತಂದ ಶಾಸಕರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದರು.

    ಮುಖ್ಯಮಂತ್ರಿಗಳ ವಿಶೇಷ ಅನುದಾನವನ್ನು ಶಾಸಕರು ತಂದು ನಗರದ ಎಲ್ಲಾ ವಾರ್ಡ್‌ಗಳಲ್ಲಿ ಗುಣಮಟ್ಟದ ಚರಂಡಿ, ಪಾರ್ಕ್, ರಸ್ತೆಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

    ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷೆ ಅನುಮಧುಕರ್, ಸದಸ್ಯರುಗಳಾದ ಪರಮೇಶ್ ರಾಜ್ ಅರಸ್, ರೂಪಾ ಕುಮಾರ್, ಲಕ್ಷ್ಮಣ್, ಅರುಣ್ ಕುಮಾರ್, ಗೋಪಿ, ಗುರುಮಲ್ಲಪ್ಪ, ಸಿ.ಪಿ ಲಕ್ಷ್ಮಣ, ಮಾಜಿ ಸದಸ್ಯರುಗಳಾದ ದಿನೇಶ್, ಶ್ರೀಧರ್ ಉರಾಳ್, ಜೇಮ್ಸ್, ಎಂ.ಸಿ. ಪ್ರಕಾಶ್, ಪೌರಾಯುಕ್ತ ಬಿ.ಸಿ ಬಸವರಾಜು ಮತ್ತಿತರರು ಉಪಸ್ಥಿತರಿದ್ದರು.

    All city roads to be asphalted after the rainy season ends

  • ಹಿಂದುತ್ವದ ಬದುಕು ಪ್ರಾಚೀನ ಸಂಸ್ಕೃತಿ-ನಾಗರೀಕತೆಯ ಭಾಗ

    ಹಿಂದುತ್ವದ ಬದುಕು ಪ್ರಾಚೀನ ಸಂಸ್ಕೃತಿ-ನಾಗರೀಕತೆಯ ಭಾಗ

    ಚಿಕ್ಕಮಗಳೂರು: ಪ್ರಪಂಚದಲ್ಲಿ ಹಿಂದುತ್ವವು ಬದುಕಿನ ಒಂದು ಪದ್ಧತಿಯ ರೂಪದಲ್ಲಿ ಪ್ರಾಚೀನ ಸಂಸ್ಕೃತಿ, ಧರ್ಮ ಮತ್ತು ನಾಗರೀಕತೆಯ ಭಾಗವಾಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಾ ಸಂಘ ದ ದಕ್ಷಿಣ ಕರ್ನಾಟಕ ಪ್ರಾಂತ ಪ್ರಚಾರ ಪ್ರಮುಖ್ ರಾಜೇಶ್ ಪದ್ಮಾರ್ ಹೇಳಿದರು.

    ನಗರದ ಮಧುವನ ಬಡಾವಣೆಯ ಆರ್‌ಎಸ್‌ಎಸ್ ಸಮರ್ಪಣಾ ಕಚೇರಿಯಲ್ಲಿ ಶನಿವಾರ ಸಂಜೆ ಹ ಮ್ಮಿಕೊಂಡಿದ್ಧ ‘ಹಿಂದುತ್ವ ಪುಸ್ತಕ ಬಿಡುಗಡೆ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ ಹಿಂದೂ ಸಂಸ್ಕೃತಿ ಧರ್ಮವನ್ನು ಆಚರಿಸುವ ಪರಂಪರೆ ನಮ್ಮಲ್ಲಿ ರೂಪುಗೊಂಡಿತು. ಸಣ್ಣ ಸಣ್ಣ ಆ ಚಾರ, ಸಂಸ್ಕಾರಗಳನ್ನು ನೀಡಿದೆ. ಹಿಂದುತನದಲ್ಲಿ ಪರಸ್ತ್ರೀಯರನ್ನು ತಾಯಿಯಂತೆ, ಇತರರ ವಸ್ತುವನ್ನು ಮಣ್ಣಿನಂತೆ, ಎಲ್ಲಾ ಜೀವಸಂಕುಲವನ್ನು ತನ್ನಂತೆಯೇ ನೋಡಬೇಕು. ಈ ಆಚರಣೆಗಳಿಂದ ಜೀವನವನ್ನು ವಿಕಾಸ ಮಾಡಿಕೊಳ್ಳಬೇಕು ಎಂದರು.

    ಹಿಂದುತ್ವದ ಪೂಜೆ, ಪುನಸ್ಕಾರಗಳು, ಪದ್ಧತಿಗಳು, ಆಹಾರ ಮತ್ತು ರೀವಾಜುಗಳನ್ನು ಬಂಧಿಸಿಡುವ ಕೆಲವು ಪ್ರಯತ್ನ ನಡೆದಿವೆ. ಹಿಂದುತ್ವವು ಇಷ್ಟೆಕ್ಕೆ ಸೀಮಿತವಾಗಿಲ್ಲ. ರಿಲೀಜನ್ ಎಂದರೆ ಧರ್ಮವಲ್ಲ. ಧರ್ಮ ಅತ್ಯಂತ ವಿಶಾಲ ಅರ್ಥವುಳ್ಳದ್ದು. ನಮ್ಮ ದೇಶದಲ್ಲಿ ಹಿಂದೂ ರಿಲೀಜನ್ ಎಂಬ ಸಂಗತಿಯಿಲ್ಲ, ಅನೇಕ ರಿಲೀ ಜನ್‌ಗಳಿವೆ, ಅವೆಲ್ಲವೂ ಹಿಂದು ಸ್ವಭಾದ ರೀಲೀಜನ್‌ಗಳೇ ಎಂದು ತಿಳಿಸಿದರು.

    ಹಿಂದುತ್ವ ಒಂದು ಇಸಂ ಅಲ್ಲ, ಹಿಂದುತ್ವ ಎಂಬ ಪದವನ್ನು ಇಂಗ್ಲೀಷ್‌ಗೆ ಭಾಷಾಂತರಿಸಿದರೆ ಅದು ಹಿಂದುತನ ಎಂದಾಗುತ್ತದೆ. ಇಸಂ ರೂಢಿಗತ ಅರ್ಥವು ಸೀಮಿತ ಪರಿಕಲ್ಪನೆಯನ್ನು ಹೊಂದಿದೆ. ಆ ಕಲ್ಪನೆ ಯೊಂದಿಗೆ ನೀವು ನಿಮ್ಮನ್ನು ಹೊಂದಿಸಿಕೊಳ್ಳಬೇಕು. ಹಿಂದುತ್ವದ ಜೊತೆ ಇರುವವರು, ತಮ್ಮ ಸಾಮರ್ಥ್ಯ ಕ್ಕೆ ಹಿಂದುತ್ವವನ್ನು ಒಪ್ಪುವವರು ವಿಕಾಸಗೊಳಿಸಲಿದೆ ಎಂದರು.

    ಹಿಂದುತ್ವ ಎನ್ನುವುದನ್ನು ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ಬಹಳ ಉತ್ತಮ ಶಬ್ದಗಳಲ್ಲಿ ತಿಳಿಸಿ ದ್ದಾರೆ. ಏಕರೂಪದ ಸ್ಥಾಯಿಯಾದ ಬದಲಾಯಿಸಲಾಗದ ಹಿಂದು ಧರ್ಮ ಎಂಬುದು ಯಾವುದೂ ಇಲ್ಲ. ಅವರ ಕಾಲದಲ್ಲಿ ಹಿಂದೂಯಿಸಂ ಎಂಬ ಪದವನ್ನೇ ಬಳಸಲಾಗುತ್ತಿತ್ತು. ಆದರೆ ವಾಸ್ತವದಲ್ಲಿ ಅವರು ಹೇಳ ಲು ಪ್ರಯತ್ನಿಸಿರುವುದು ಹಿಂದುತನ ಎನ್ನುವುದು ಹೊರತು, ಇಸಂ ಅಲ್ಲ ಎಂದು ಹೇಳಿದರು.

    ಪ್ರಸ್ತುತ ವಿಶ್ವದಲ್ಲಿ ಸಾಮಾಜಿಕ, ಆರ್ಥಿಕ, ಮಾನಸಿಕ ಸಮಸ್ಯೆಗಳ ರೂಪದಲ್ಲಿ ಕಾಡುತ್ತಿರುವ ಅನೇಕ ಅಸ್ಥಿ ತ್ವದ ಬಿಕ್ಕಟ್ಟುಗಳಿವೆ ಪರಿಹಾರವನ್ನು ನೀಡಲು ಸಾಧ್ಯವಿರುವುದು ಹಿಂದುತ್ವಕ್ಕೆ ಮಾತ್ರ. ವರ್ತಮಾನ ಸಂದರ್ಭ ದಲ್ಲಿ ಹಿಂದುತ್ವದ ದರ್ಶನ, ಸಿದ್ದಾಂತ, ಪರಂಪರೆ, ಆಚಾರ-ವಿಚಾರಗಳನ್ನು ಅರ್ಥಮಾಡಿಕೊಂಡು ಪದ ಬಳಕೆಯೊಂದಿಗೆ ಪ್ರಸ್ತುತಪಡಿಸುವುದು ಎಲ್ಲರಿಗೂ ಸವಾಲಿನ ಕೆಲಸವಾಗಿದೆ ಎಂದರು.

    ಹಿಂದುತ್ವದ ಮೇಲೆ ಕಾಲ್ಪನಿಕ ಆರೋಪಗಳನ್ನು ಹೊರಿಸುವ ಬದಲು ನಿಜವಾದ ಹಿಂದುತ್ವವನ್ನು ಪಾಲಿ ಸಬೇಕು. ಹಿಂದುತ್ವದ ಹೆಸರು ತೆಗೆದುಕೊಳ್ಳದಿದ್ದರೂ ಪರವಾಗಿಲ್ಲ. ನಡವಳಿಕೆಯನ್ನು ಪುರಸ್ಕರಿಸಬೇಕು. ಜಗ ತ್ತಿಗೆ ಧರ್ಮ, ಸಮತೋಲನ ಮತ್ತು ಧೈರ್ಯವನ್ನು ನೀಡುವ, ಎಲ್ಲಾ ವಿರೋಧಗಳನ್ನು ಸರಿದೂಗಿಸಿಕೊಂ ಡು ಪ್ರಗತಿಗೆ ಸಹಾಯ ಮಾಡುವ ಹೊಸ ಜಗತ್ತನ್ನು ರಚಿಸಬೇಕಾದರೆ ಹಿಂದುತ್ವ ಧರ್ಮದಲ್ಲಿ ಸಾಗಬೇಕಿದೆ ಎಂದರು.

    ಹಿಂದುತ್ವ ಯಾವುದೇ ಒಂದು ಜಾತಿಯ ಪ್ರಾಬಲ್ಯದ ಬಗ್ಗೆ ಮಾತನಾಡುವುದಿಲ್ಲ. ನಿಜವಾದ ಹಿಂದು ತ್ವವವನ್ನು ಅನುಸರಿಸುವ ಮೂಲಕ ವಿಕೃತಿ ಭಾವನೆಗಳನ್ನು ಸಂಪೂರ್ಣ ತೊಲಗಿಸಬೇಕು. ನಮ್ಮ ಮುಂದೆ ಸಂತರ ನಡವಳಿಕೆ ಹಾಗೂ ಜೀವನದ ಉದಾಹರಣೆಗಳಿವೆ. ಸಮಾಜದಲ್ಲಿ ಈ ನಡವಳಿಕೆಯ ಪರಿವರ್ತನೆ ಬದಲಾವಣೆಯನ್ನು ತರುವುದು ಅವಶ್ಯಕವಾಗಿದೆ ಎಂದು ಹೇಳಿದರು.

    ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಾ ಸಂಘದ ವಿಭಾಗ ಸಂಘ ಚಾಲಕ ಮಲ್ಲಿಕಾರ್ಜುನ ಉಪ ಸ್ಥಿತರಿದ್ದರು. ನಗರ ಪ್ರಚಾರ ಪ್ರಮುಖ್ ವಿಕ್ರಮ್ ನಿರೂಪಿಸಿದರು. ಮಂಥನ ಸದಸ್ಯರಾದ ಪ್ರವೀಣ್ ಸ್ವಾಗತಿಸಿ ದರು. ಶೃತಿ ವಂದಿಸಿದರು.

    Hinduism is a part of ancient culture and civilization.