Category: ಚಿಕ್ಕಮಗಳೂರು ನಗರ

  • ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಿಜೆಪಿ ನಗರ ಮಂಡಲ ಪ್ರತಿಭಟನೆ

    ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಿಜೆಪಿ ನಗರ ಮಂಡಲ ಪ್ರತಿಭಟನೆ

    ಚಿಕ್ಕಮಗಳೂರು: ವಿವಿಧ ವಸತಿ ಯೋಜನೆಗಳಡಿ ನಿವೇಶನ, ಮನೆ ನೀಡುವಂತೆ ಒತ್ತಾಯಿಸಿ ಇಂದು ಬಿಜೆಪಿ ನಗರ ಮಂಡಲ ವತಿಯಿಂದ ಪ್ರತಿಭಟನೆ ನಡೆಸಿ ಪೌರಾಯುಕ್ತರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

    ಬಿಜೆಪಿ ಜಿಲ್ಲಾ ಕಚೇರಿ ಪಾಂಚಜನ್ಯದಿಂದ ಹೊರಟ ನೂರಾರು ಕಾರ್ಯಕರ್ತರು ನಗರಸಭೆ ಕಚೇರಿವರೆಗೆ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕೂಡಲೇ ಮನೆಗಳನ್ನು ವಿತರಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

    ನಗರಸಭೆ ವ್ಯಾಪ್ತಿಯಲ್ಲಿ ಬಡತನ ರೇಖೆಗಿಂತ ಕೆಳಗಿರುವ ಅರ್ಹ ಫಲಾನುಭವಿಗಳಿಗೆ ಆಶ್ರಯ, ಅಂಬೇಡ್ಕರ್ ಅವಾಜ್ ಯೋಜನೆ, ಪ್ರಧಾನ ಮಂತ್ರಿ ಅವಾಜ್ ಯೋಜನೆಯಡಿಯಲ್ಲಿ ಮನೆಗಳನ್ನು ಮಂಜೂರು ಮಾಡುವ ಜೊತೆಗೆ ಅದಕ್ಕನುಗುಣವಾಗಿ ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿದರು.

    ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ಯೋಜನೆಗಳ ಹಣ ಬಿಡುಗಡೆ ಮಾಡಬೇಕು. ಜಿಲ್ಲೆಯಲ್ಲಿ ೪೬ ಸಾವಿರಕ್ಕೂ ಅಧಿಕ ಅರ್ಹ ಫಲಾನುಭವಿಗಳ ಕಾರ್ಡ್‌ಗಳನ್ನು ರದ್ದುಪಡಿಸಿರುವ ಕ್ರಮವನ್ನು ಖಂಡಿಸಿದ ಅವರು, ಈ ಆದೇಶವನ್ನು ಕೂಡಲೇ ಹಿಂಪಡೆಯಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.

    ೯೪-ಸಿ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ನೀಡಬೇಕು. ಬಡವರ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಬಾರದು, ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕೆಂದು ಆಗ್ರಹಿಸಿದ್ದಾರೆ.

    ೭೦ ವರ್ಷ ಮೇಲ್ಪಟ್ಟ ಎಲ್ಲಾ ವರ್ಗದವರಿಗೂ ಕೇಂದ್ರ ಸರ್ಕಾರದ ಆಯುಷ್ಮಾನ್ ಯೋಜನೆ ಜಾರಿಗೊಳಿಸಿದ್ದರೂ ಕರ್ನಾಟಕದಲ್ಲಿ ಅನುಷ್ಠಾನಗೊಳಿಸದಿರುವುದನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ. ತಕ್ಷಣವೇ ಅನುಷ್ಠಾನಕ್ಕೆ ಕ್ರಮ ಜರುಗಿಸಬೇಕು. ಕೂಡಲೇ ಈ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಒತ್ತಾಯಿಸಿದ್ದಾರೆ.

    ಪ್ರತಿಭಟನೆಯಲ್ಲಿ ಬಿಜೆಪಿ ನಗರಮಂಡಲ ಅಧ್ಯಕ್ಷ ಕೆ.ಎಸ್. ಪುಷ್ಪರಾಜ್, ಪ್ರಧಾನ ಕಾರ್ಯದರ್ಶಿ ಕೌಶಿಕ್, ಮಾಜಿ ನಗರಸಭಾಧ್ಯಕ್ಷರಾದ ಸುಜಾತ ಶಿವಕುಮಾರ್, ಮುತ್ತಯ್ಯ, ಉಪಾಧ್ಯಕ್ಷೆ ಅನುಮಧುಕರ್, ಸದಸ್ಯರಾದ ದೀಪಾ ರವಿಕುಮಾರ್, ಅಮೃತೇಶ್, ರೂಪಾ ಕುಮಾರ್, ಲಲಿತಾಬಾಯಿ, ರಾಜು, ಮಂಜುನಾಥ್ ಮತ್ತು ಬಿಜೆಪಿ ಮುಖಂಡರಾದ ಸಂತೋಷ್ ಕೋಟ್ಯಾನ್, ಕನಕರಾಜ್ ಅರಸ್, ಮಂಜುನಾಥ್, ಜೆಸೆಂತಾ ಅನಿಲ್‌ಕುಮಾರ್, ಕೆ.ಪಿ. ವೆಂಕಟೇಶ್, ವಕ್ತಾರ ಹೆಚ್.ಎಸ್. ಪುಟ್ಟಸ್ವಾಮಿ ಮತ್ತಿತರರು ಭಾಗವಹಿಸಿದ್ದರು

    BJP Nagar Mandal protests demanding fulfillment of various demands

  • ಸರ್ಕಾರ ಬದುಕಿಗೆ ಆದ್ಯತೆ ನೀಡಿ ಮೂಲ ಸೌಕರ್ಯ ಕಲ್ಪಿಸಿದೆ

    ಸರ್ಕಾರ ಬದುಕಿಗೆ ಆದ್ಯತೆ ನೀಡಿ ಮೂಲ ಸೌಕರ್ಯ ಕಲ್ಪಿಸಿದೆ

    ಚಿಕ್ಕಮಗಳೂರು: ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ಬಡವರ್ಗದ ಮಕ್ಕಳಿಗೆ ಸರ್ಕಾರ ಮೂಲ ಸೌಕರ್ಯಗಳನ್ನು ಒದಗಿಸಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು.

    ಅವರು ಇಂದು ತಾಲ್ಲೂಕಿನ ಅಲ್ಲಂಪುರ ಕುವೆಂಪು ಶತಮಾನೋತ್ಸವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಜಿ.ಪಂ, ತಾ.ಪಂ, ಶಾಲಾ ಶಿಕ್ಷಣ ಇಲಾಖೆ, ಶಿಕ್ಷಕರ ಸೇವಾ ಬಳಗ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ನಲಿಕಲಿ ಟೇಬಲ್ ಮತ್ತು ಚೇರ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

    ಆರೋಗ್ಯ, ಶಿಕ್ಷಣ, ಬದುಕಿಗೆ ಆದ್ಯತೆ ನೀಡಿ ಅನುದಾನ ನೀಡುವುದು ಸರ್ಕಾರ ಮತ್ತು ಜನಪ್ರತಿನಿಧಿಗಳ ಕರ್ತವ್ಯವಾಗಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕ ಸಹಭಾಗಿತ್ವ ಅಗತ್ಯ ಎಂದರು.

    ಹುಟ್ಟಿದ ಮೇಲೆ ಒಂದಲ್ಲಾ ಒಂದು ಕ್ಷೇತ್ರದಲ್ಲಿ ಸಾಧನೆ ಮಾಡದಿದ್ದರೆ ಸಾರ್ಥಕತೆ ಆಗುವುದಿಲ್ಲ, ಇಲ್ಲಿ ಸೇರಿರುವ ಪ್ರಾಥಮಿಕ ಶಾಲಾ ಶಿಕ್ಷಕರನ್ನು ವಿದ್ಯಾರ್ಥಿಗಳು ತಮ್ಮ ಬದುಕಿನುದ್ದಕ್ಕೂ ನೆನಪಿನಲ್ಲಿಟ್ಟುಕೊಂಡಿರುತ್ತಾರೆ ಎಂದು ಹೇಳಿದರು.

    ಸರ್ಕಾರಿ ಶಾಲೆಗಳ ಸಬಲೀಕರಣಕ್ಕಾಗಿ ತಾಲ್ಲೂಕಿನ ೭೦ ಸರ್ಕಾರಿ ಪ್ರಾಥಮಿಕ ಹಿರಿಯ ಮತ್ತು ಕಿರಿಯ ಶಾಲೆಗಳಿಗೆ ೧೨ ಲಕ್ಷ ರೂ ವೆಚ್ಚದಲ್ಲಿ ಬೆಂಗಳೂರಿನ ಸಿನೊಪ್ಸಿಸ್ ಮತ್ತು ಇಂಡಿಯಾ ಸುಧಾರ್ ಎಜುಕೇಷನ್ ಅಂಡ್ ಚಾರಿಟೇಬಲ್ ಟ್ರಸ್ಟ್ ಇವರು ನಲಿಕಲಿ ಟೇಬಲ್ ಮತ್ತು ಚೇರ್‌ಗಳನ್ನು ಕೊಡುಗೆಯಾಗಿ ನೀಡಿದ್ದಾರೆ ಎಂದು ಶ್ಲಾಘಿಸಿದರು.

    ಎಲ್ಲವನ್ನೂ ಸರ್ಕಾರದಿಂದಲೇ ಮಾಡಲು ಅಸಾಧ್ಯ, ಆದ್ದರಿಂದ ಪ್ರತೀ ವರ್ಷ ನಗರದಲ್ಲೊಂದು, ಗ್ರಾಮೀಣ ಭಾಗದಲ್ಲೊಂದು ಸರ್ಕಾರಿ ಶಾಲೆಗಳನ್ನು ಆಯ್ಕೆಮಾಡಿಕೊಂಡು ಮೂಲಭೂತ ಸೌಕರ್ಯ ಕಲ್ಪಿಸುವಂತೆ ಮನವಿ ಮಾಡಲು ಬೆಂಗಳೂರಿನಲ್ಲಿ ಉದ್ದಿಮೆದಾರರನ್ನು ಸಂಪರ್ಕಿಸುವುದಾಗಿ ಭರವಸೆ ನೀಡಿದರು.

    ಮಾತನಾಡಲು ಮಾತೃಭಾಷೆ ಕನ್ನಡ, ಬದುಕಲು ಆಂಗ್ಲಭಾಷೆ ಎಂಬ ಘೋಷವಾಕ್ಯದೊಂದಿಗೆ ರಾಜ್ಯಸರ್ಕಾರ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ತಾಲ್ಲೂಕಿನಲ್ಲಿ ೧೭ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಹಾಗೂ ಆಂಗ್ಲ ಮಾಧ್ಯಮ ತರಗತಿಗಳನ್ನು ಆರಂಭ ಮಾಡಲು ಚಿಂತನೆ ನಡೆಸುತ್ತಿದೆ ಎಂದು ಹೇಳಿದರು.

    ಪ್ರತಿದಿನ ಶಾಲೆಗಳಲ್ಲಿ ಡಾ. ಬಿ.ಆರ್. ಅಂಬೇಡ್ಕರ್‌ರವರು ನೀಡಿರುವ ಸಂವಿಧಾನದ ಪೀಠಿಕೆಯನ್ನು ಓದಿಸಬೇಕು, ವಿಶ್ವಗುರು ಬಸವಣ್ಣನವರ ಒಂದು ವಚನವನ್ನು ಹೇಳಿಕೊಡುವ ಮೂಲಕ ಅದರ ಅರ್ಥವನ್ನು ಶಿಕ್ಷಕರು ವಿದ್ಯಾರ್ಥಿಗಳಿಗೆ ತಿಳಿಸಬೇಕು ಎಂದು ಸಲಹೆ ನೀಡಿದರು.

    ಸಿವಿಲ್ ನ್ಯಾಯಾಧೀಶರಾದ ಹನುಮಂತಪ್ಪ ಮಾತನಾಡಿ, ಎದೆಗೆ ಬಿದ್ದ ಅಕ್ಷರ, ಭೂಮಿಗೆ ಬಿದ್ದ ಬೀಜ ಎಂದಾದರೂ ಒಂದು ದಿನ ಫಲ ಕೊಡುತ್ತದೆ ಎಂಬುದನ್ನು ಅರ್ಥಪೂರ್ಣಗೊಳಿಸುವ ಬಹುದೊಡ್ಡ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದ ಅವರು, ಅಂಬೇಡ್ಕರ್, ಬಸವ ಮಾರ್ಗದ ಕ್ರಾಂತಿಗೀತೆಯನ್ನು ಹಾಡಿ ರಂಜಿಸಿದರು.

    ಭ್ರಾತೃತ್ವ ಭಾವನೆ ಬೆಳೆಯದಿದ್ದರೆ ಸಮಾಜದಲ್ಲಿ ಸಮಾನತೆ ಬೆಳೆಯುವುದಿಲ್ಲ, ಈ ನಿಟ್ಟಿನಲ್ಲಿ ಪ್ರಾಥಮಿಕ ಹಂತದಲ್ಲೇ ಮಕ್ಕಳಲ್ಲಿ ಇದನ್ನು ಬಿತ್ತಬೇಕು. ಅಕ್ಷರದಿಂದ ವಂಚಿತರಾಗಿದ್ದ ಸಮುದಾಯದಲ್ಲಿ ಜನಿಸಿದ ಡಾ. ಬಿ.ಆರ್. ಅಂಬೇಡ್ಕರ್ ಅವರು ಇಂದು ವಿಶ್ವದ ಅಗ್ರಗಣ್ಯ ನಾಯಕರಾಗಿದ್ದಾರೆಂದು ಶ್ಲಾಘಿಸಿದರು.

    ಖಾಸಗಿ ಶಿಕ್ಷಣ ಸಂಸ್ಥೆಗಳು ಇಂದು ಸರ್ಕಾರಿ ಶಾಲೆಯನ್ನು ಧಮನ ಮಾಡುವ ಮಟ್ಟಕ್ಕೆ ಬೆಳೆದುನಿಂತಿದೆ. ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ಏಕಲವ್ಯನ ಹೆಬ್ಬೆರಳು ಕತ್ತರಿಸಿದಂತೆ ಆಗಬಾರದು. ಶಿಕ್ಷಣ ಎಲ್ಲರ ಸ್ವತ್ತಾಗಬೇಕೆಂದು ಹೇಳಿದರು.

    ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡಿಮೆಯಾಗದಂತೆ ನೋಡಿಕೊಳ್ಳುವುದು ಶಿಕ್ಷಕರ ಜವಾಬ್ದಾರಿ ಮತ್ತು ಕರ್ತವ್ಯವಾಗಿದೆ. ಇದನ್ನು ರೂಢಿಸಿಕೊಂಡಾಗ ಮಾತ್ರ ಶೇ.೧೦೦ ರಷ್ಟು ಸಾಧನೆ ಮಾಡಲು ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.

    ಶಿಕ್ಷಕಿ ಗೀತಾ ಕೆ.ಹೆಚ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಪ್ಪ ಗ್ರಾಪಂ ಸದಸ್ಯ ರಮೇಶ್‌, ಜಯರಾಜ್‌ ಅರಸ್‌, ಶಂಕರ್‌, ಸುಂದರೇಶ್‌, ಉಪಸ್ಥಿತರಿದ್ದರು. ಮೊದಲಿಗೆ ಮುಖ್ಯ ಶಿಕ್ಷಕ ಜೋಗಪ್ಪ ಸ್ವಾಗತಿಸಿದರು.

    The government has prioritized life and provided infrastructure.

  • ಎನ್ ಆರ್ ಪುರ ಮುಖ್ಯ ರಸ್ತೆ ಅಭಿವೃದ್ದಿಗೆ 60 ಕೋಟಿ ಮಂಜೂರು ಸಚಿವ ಸಂಪುಟ ಅನುಮೋದನೆ

    ಎನ್ ಆರ್ ಪುರ ಮುಖ್ಯ ರಸ್ತೆ ಅಭಿವೃದ್ದಿಗೆ 60 ಕೋಟಿ ಮಂಜೂರು ಸಚಿವ ಸಂಪುಟ ಅನುಮೋದನೆ

    ಎನ್ ಆರ್ ಪುರ: ಎನ್ ಆರ್ ಪುರ ಮುಖ್ಯ ರಸ್ತೆ ಅಗಲೀಕರಣಕ್ಕೆ ಕಳೆದ 5-6 ತಿಂಗಳುಗಳಿಂದ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿ ಮನವಿ ಸಲ್ಲಿಸಲಾಗಿತ್ತು ಕೋರಿಕೆಗೆ ಸ್ಪಂದಿಸಿದ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಇದೀಗ 60 ಕೋಟಿ ಅಂದಾಜು ಮೊತ್ತದ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ರಾಜ್ಯ ಪ್ರವಾಸೋದ್ಯಮ ನಿಗಮ ಅಧ್ಯಕ್ಷರು ಮಾಜಿ ವಿಧಾನ ಪರಿಷತ್ ಸದಸ್ಯರದ ಎಂ,ಶ್ರೀನಿವಾಸ್ ತಿಳಿಸಿದರು.

    ಶುಕ್ರವಾರ ಪತ್ರಿಕೆಯೊಂದಿಗೆ ಮಾತನಾಡಿದ ಅವರು ಇದು ಈ ಭಾಗದ ಜನರ ದಶಕಗಳ ಬೇಡಿಕೆಯಾಗಿತ್ತು ನರಸಿಂಹರಾಜಪುರಕ್ಕೆ ಹಿಂದೆ ಯಡೆಹಳ್ಳಿ ಎಂಬ ಹೆಸರಿತ್ತು ಮೈಸೂರು ಮಹಾರಾಜರು ಬಂದ ಹಿನ್ನಲೆಯಲ್ಲಿ ನರಸಿಂಹರಾಜಪುರ ಎಂಬ ಹೆಸರು ಮರು ನಾಮಕರಣಕ್ಕೆ ಕಾರಣವಾಯಿತು.

    ನೂರು ವರ್ಷದ ನಂತರ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು 2016ರಲ್ಲಿ 68 ಕೆರೆಗಳಗೆ ನೀರು ಒದಗಿಸುವ ಕಡೈನಬೈಲು ಏತ ನೀರಾವರಿ ಉದ್ಘಾಟನೆಗೆ ಬಂದ ಸಂಧರ್ಭದಲ್ಲಿ ಮುಖ್ಯಮಂತ್ರಿಗಳಿಗೆ ನರಸಿಂಹರಾಜಪುರಕ್ಕೆ ಶತಮನೋತ್ಸವ ತುಂಬಿದ ಸಂಧರ್ಭದಲ್ಲಿ ಭೇಟಿ ನೀಡಿರುವುದರಿಂದ ದೊಡ್ಡ ಕೋಡುಗೆ ನೀಡಬೇಕು ಎಂದು ಬೇಡಿಕೆ ಸಲ್ಲಿಸಿದ್ದರು

    ಅದಕ್ಕೆ ಸ್ಪಂದಿಸಿ ಮುಖ್ಯಮಂತ್ರಿಗಳು 35 ಕೋಟಿ ವೆಚ್ಚದಲ್ಲಿ ಹೊನ್ನೆಕುಡುಗೆ ಸೇತುವೆ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಿದರು ನಂತರ ಪಟ್ಟಣದಿಂದ ಸೇತುವೆಗೆ ಸಂಪರ್ಕ ಕಲ್ಪಿಸುವ ರಸ್ತೆಗೆ 5 ಕೋಟಿ ಅನುದಾನ ಒದಗಿಸಿದರು. ಅಲ್ಲದೆ ನರಸಿಂಹರಾಜಪುರದ ರಸ್ತೆ ಸಮುದಾಯ ಭವನ ದೇವಾಲಯ ಸೇರಿದಂತೆ ಹತ್ತು ಹಲವು ಯೋಜನೆಗಳನ್ನು ಕ್ಷೇತ್ರಕ್ಕೆ ತರಲಾಗಿದೆ ಎಂದರು.

    ಇನ್ನೂ ಮುಂದುವರೆದಂತೆ ಇದೀಗ ಮುಖ್ಯ ರಸ್ತೆ ಅಗಲೀಕರಣಕ್ಕೆ 60 ಕೋಟಿ ಅಂದಾಜು ವೆಚ್ಚದ ಕಾಮಗಾರಿಗೆ ಸಚಿವ ಸಂಪಟ ಅನುಮೋದನೆ ನೀಡಿದ್ದು ಮತ್ತೊಂದು ಮಹತ್ವದ ಬೆಳವಣಿಗೆಯಾಗಿದೆ ಶೀಘ್ರದಲ್ಲಿಯೇ ಕಾಮಗಾರಿಗೆ ಚಾಲನೆ ನೀಡಲಾಗುವುದು ಇದಕ್ಕೆ ಸಹಕರಿಸಿದ ಮುಖ್ಯಮಂತ್ರಿಗಳಿಗೆ ಹಾಗೂ ಸಚಿವ ಸಂಪುಟ ಸದಸ್ಯರಿಗೆ ಅಭಿನಂದನೆ ತಿಳಿಸಿದರು.

    ಎನ್ ಆರ್,ಪುರ7: ಎನ್ ಆರ್ ಪುರ ರಸ್ತೆ ಅಗಲೀಕರಣಕ್ಕೆ 60 ಕೋಟಿ ಅಂದಾಜು ವೆಚ್ಚದ ಕಾಮಗಾರಿಗೆ ಸಚಿವ ಸಂಪಟ ಅನುಮೋದನೆ ನೀಡಿದ್ದು ಈ ಹಿನ್ನಲೆಯಲ್ಲಿ ಎಂ,ಶ್ರೀನಿವಾಸ್ ರವರು ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದರು.

    Cabinet approves 60 crore sanction for development of NR Pura main road

  • ನಿವೃತ್ತ ಪಿಂಚಣಿದಾರರಿಗೆ ಯಥಾವತ್ ಸೌಲಭ್ಯ ಪರಿಷ್ಕರಿಸಲು ಮನವಿ

    ನಿವೃತ್ತ ಪಿಂಚಣಿದಾರರಿಗೆ ಯಥಾವತ್ ಸೌಲಭ್ಯ ಪರಿಷ್ಕರಿಸಲು ಮನವಿ

    ಚಿಕ್ಕಮಗಳೂರು:  ಕೇಂದ್ರಸರ್ಕಾರ ಸಂಸತ್‌ನಲ್ಲಿ ಆರ್ಥಿಕ ಬಿಲ್ ಸಲ್ಲಿಸುವಾಗ ೮ನೇ ವೇತನ ಆಯೋಗ ರಚನೆಯಾಗಿ ಕಾರ್ಯಾಚರಣೆಯಲ್ಲಿದ್ದು, ನಿವೃತ್ತ ಪಿಂಚಣಿದಾರರಿಗೆ ಪಿಂಚಣಿ, ಕುಟುಂಬ ಪಿಂಚಣಿ ಹಾಗೂ ತುಟ್ಟಿಭತ್ಯೆ ಪರಿಷ್ಕರಿಸಲು ಕಷ್ಟಸಾಧ್ಯವೆಂದು ಹೇಳಿರುವುದನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲಾ ಶಾಖೆಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

    ೨೦೨೫ ರ ಮಾಚ್.೨೫ ರಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಆರ್ಥಿಕ ಬಿಲ್ ಸಲ್ಲಿಸುವಾಗ ನಿವೃತ್ತ ಸರ್ಕಾರಿ ನೌಕರರ ಪಿಂಚಣಿದಾರರಿಗೆ ೮ನೇ ವೇತನ ಆಯೋಗದಲ್ಲಿ ಹಾಲಿ ಇರುವ ಸೌಲಭ್ಯಗಳನ್ನು ಪರಿಷ್ಕರಿಸಲು ಸಾಧ್ಯವಿಲ್ಲವೆಂದು ಹೇಳಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

    ಈ ನಿಟ್ಟಿನಲ್ಲಿ ರಾಷ್ಟ್ರಮಟ್ಟದ ಎಲ್ಲಾ ನಿವೃತ್ತ ಪಿಂಚಣಿದಾರರ ಒಕ್ಕೂಟಗಳು ಹಾಗೂ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ನಿರ್ದೇಶನದಂತೆ ಜಿಲ್ಲಾ ಮಟ್ಟದ ಸಭೆಯನ್ನು ಆಹ್ವಾನಿಸಿ ಚರ್ಚಿಸಲಾಗಿದ್ದು, ೦೧-೦೪-೨೦೨೫ಕ್ಕಿಂತ ಮುಂಚಿತವಾಗಿ ನಿವೃತ್ತರಾದ ನೌಕರರಾದ ಪಿಂಚಣಿದಾರರಿಗೆ, ಪಿಂಚಣಿ, ಕುಟುಂಬ ಪಿಂಚಣಿ ಮತ್ತು ಕಾಲ ಕಾಲಕ್ಕೆ ನೀಡುವ ತುಟ್ಟಿ ಭತ್ಯೆಗಳನ್ನು ಪುನರ್ ಪರಿಶೀಲಿಸಿ ಯಥಾವತ್ತಾಗಿ ಜಾರಿಮಾಡುವಂತೆ ಮನವಿ ಮಾಡಿದ್ದಾರೆ.

    ಈಗ ನೀಡುತ್ತಿರುವ ಸೌಲಭ್ಯಗಳನ್ನು ೮ನೇ ವೇತನ ಆಯೋಗದಲ್ಲಿಯೂ ಸೇರಿಸಿ ಪಿಂಚಣಿದಾರರಿಗೆ ಅನುಕೂಲ ಮಾಡಿಕೊಡುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

    ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷರಾದ ಕೆ.ಎ. ಗೋಪಾಲಕೃಷ್ಣ, ಪ್ರಧಾನ ಕಾರ್ಯದರ್ಶಿ ಹೆಚ್.ಕೆ. ಕೃಷ್ಣಮೂರ್ತಿ, ರಾಜ್ಯ ಪರಿಷತ್ ಸದಸ್ಯ ಬಿ.ಶಿವಣ್ಣ, ಉಪಾಧ್ಯಕ್ಷರಾದ ಭೋಜೇಗೌಡ, ಹೆಚ್.ಆರ್ ವಿರೂಪಾಕ್ಷಪ್ಪ, ಬಿ.ಎನ್. ಉಮಾಪತಿ, ಖಜಾಂಚಿ ಕಾಳಯ್ಯ, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರ

    Appeal to revise existing benefits for retired pensioners

  • ಅಂಬಳೆಯಲ್ಲಿ ಅಂಬೇಡ್ಕರ್ ವಸತಿ ಶಾಲೆ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ

    ಅಂಬಳೆಯಲ್ಲಿ ಅಂಬೇಡ್ಕರ್ ವಸತಿ ಶಾಲೆ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ

    ಚಿಕ್ಕಮಗಳೂರು: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡಿಮೆಯಾಗುತ್ತಿರುವುದಕ್ಕೆ ಸರ್ಕಾರದ ವಿವಿಧ ವಸತಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುತ್ತಿರುವುದು ಪ್ರಮುಖ ಕಾರಣವಾಗಿದೆ ಎಂದು ಶಾಸಕಿ ನಯನ ಮೋಟಮ್ಮ ತಿಳಿಸಿದರು.

    ಅವರು ಇಂದು ಮಳಲೂರು, ಅಂಬಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಬಳೆ ಗ್ರಾಮದಲ್ಲಿ ಸುಮಾರು ೨೨ ಕೋಟಿ ರೂ ವೆಚ್ಚದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ ಮೊರಾರ್ಜಿ, ಆಶ್ರಮ, ಡಾ. ಬಿ.ಆರ್. ಅಂಬೇಡ್ಕರ್ ಮುಂತಾದ ವಸತಿ ಶಾಲೆಗಳಲ್ಲಿ ಆರ್ಥಿಕ ಪರಿಸ್ಥಿತಿ ಸರಿ ಇಲ್ಲದ ಕೂಲಿ ಕಾರ್ಮಿಕರ ಬಡ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗಬೇಕೆಂದು ಬಯಸುತ್ತಿದ್ದಾರೆಂದು ವಿವರಿಸಿದರು.

    ಹಾಲಿ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದ್ದ ಸಮಾಜ ಕಲ್ಯಾಣ ಇಲಾಖೆ ಹಾಗೂ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ಇವರ ವತಿಯಿಂದ ನಡೆಯುತ್ತಿದ್ದ ವಸತಿ ಶಾಲೆಗೆ ಇಂದು ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ್ದು, ಈ ನಿಟ್ಟಿನಲ್ಲಿ ವಸತಿ ಶಾಲೆಗಳ ಪ್ರಾರಂಭಕ್ಕೆ ಸರ್ಕಾರ ಹೆಚ್ಚು ಒತ್ತು ನೀಡಿದೆ ಎಂದರು.

    ಈ ಸುಸಜ್ಜಿತ ವಸತಿ ಶಾಲಾ ಕಟ್ಟಡ ನಿರ್ಮಾಣವಾದರೆ ಸುಮಾರು ೨೫೦ ವಿದ್ಯಾರ್ಥಿಗಳಿಗೆ ವ್ಯಾಸಂಗ ಮಾಡಲು ಅನುಕೂಲವಾಗಲಿದೆ. ಮೂಡಿಗೆರೆ ವಿಧಾನಸಭಾ ಕ್ಷೇತ್ರವಾದ್ದರಿಂದ ಅರಣ್ಯ ಇಲಾಖೆ ಅನುಮತಿ ಕೊಡುವುದು ವಿಳಂಭವಾಗಿದ್ದರಿಂದ ಆರು ತಿಂಗಳು ತಡವಾಗಿದೆ ಎಂದು ಹೇಳಿದರು.

    ಮುಂದಿನ ದಿನಗಳಲ್ಲಿ ವಸತಿ ಶಾಲೆಗಳಲ್ಲಿಯೇ ಪಿಯುಸಿ ತರಗತಿಗಳು ಪ್ರಾರಂಭವಾಗಬೇಕು ಆಗಮಾತ್ರ ಬಡ ಮಕ್ಕಳಿಗೆ ನೀಟ್ ಸಿಇಟಿ ಪರೀಕ್ಷೆಗಳಿಗೆ ತರಬೇತಿ ಹೊಂದಲು ಸಹಕಾರಿಯಾಗಲಿದೆ. ವಸತಿ ಶಾಲೆಗಳಲ್ಲಿ ಈಗಾಗಲೇ ಊಟ, ವಸತಿ, ಶಿಕ್ಷಣ ಉತ್ತಮವಾಗಿದೆ ಎಂದು ತಿಳಿಸಿದರು.

    ಇನ್ನೊಂದು ವರ್ಷದಲ್ಲಿ ಈ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕ ಲೋಕಾರ್ಪಣೆಯಾಗಲಿದೆ ಎಂದು ಭರವಸೆ ನೀಡಿದ ಅವರು, ತಾವು ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡುವುದರ ಜೊತೆಗೆ ಎಲ್ಲಾ ಮೂಲ ಸೌಕರ್ಯಗಳನ್ನು ಕಲ್ಪಸಿ ಮಲೆನಾಡಿನ ಗ್ರಾಮೀಣ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಸಿಗಬೇಕೆಂದು ಗುರಿಹೊಂದಲಾಗಿದೆ ಎಂದರು.

    ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ವಿ. ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಾಲತಿ, ಕ್ರೈಸ್ ಸಂಸ್ಥೆಯ ಎಇಇ ರಾಮು ಗ್ಯಾರಂಟಿ ಯೋಜನೆಯ ಸದಸ್ಯ ಬಸವರಾಜ್‌, ಅಂಬಳೆ ಗ್ರಾಪಂ ಅಧ್ಯಕ್ಷ ದೊಡ್ಡೇಗೌಡ, ಮಳಲೂರು ಗ್ರಾಪಂ ಅಧ್ಯಕ್ಷೆ ಮೇದನಿ ದೇವಿಕ, ಉಪಾಧ್ಯಕ್ಷೆ ಶ್ವೇತಾ ಪದ್ಮೇಗೌಡ, ಪ್ರಾಂಶುಪಾಲ ನಾಗೇಶ್‌, ಎಂ.ಡಿ.ರವಿ, ಬೀಮಯ್ಯ, .ಮತ್ತಿತರರು ಉಪಸ್ಥಿತರಿದ್ದರು. ಮೊದಲಿಗೆ ಪ್ರಾಂಶುಪಾಲ ನಾಗೇಶ್ ಸ್ವಾಗತಿಸಿದರು.

    Foundation stone laid for new building of Ambedkar Residential School in Ambala

  • ಶಾಲಾ ಕಟ್ಟಡಗಳ ದುರಸ್ಥಿಗೆ ಕ್ರಮ ವಹಿಸಲು ಸೂಚನೆ

    ಶಾಲಾ ಕಟ್ಟಡಗಳ ದುರಸ್ಥಿಗೆ ಕ್ರಮ ವಹಿಸಲು ಸೂಚನೆ

    ಚಿಕ್ಕಮಗಳೂರು:  ತಾಲ್ಲೂಕಿನಲ್ಲಿ ಸೋರುತ್ತಿರುವ ಶಾಲಾ ಕೊಠಡಿಗಳ ದುರಸ್ಥಿ ಹಾಗೂ ಎಲ್ಲಾ ಶಾಲಾ ಕಟ್ಟಡಗಳು ಸುಭದ್ರವಾಗಿವೆ ಎಂಬ ಬಗ್ಗೆ ಪಟ್ಟಿಮಾಡಿ ಪರಿಶೀಲಿಸಿ ವರದಿ ಕೊಡುವಂತೆ ಶಿಕ್ಷಣ ಇಲಾಖೆಯ ಅಧಿಕಾರಿ ಮತ್ತು ಇಂಜಿನಿಯರ್‌ಗೆ ಸೂಚನೆ ನೀಡಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಶಂಕರ್ ಕೊರವ ತಿಳಿಸಿದರು.

    ಅವರು ಇಂದು ತಾಲ್ಲೂಕು ಪಂಚಾಯಿತಿ ಅಂಬೇಡ್ಕರ್ ಸಭಾ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿ.ಪಂ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಕೃಷಿ ಇಲಾಖೆಯಲ್ಲಿ ಕಾಲ ಕಾಲಕ್ಕೆ ರಸಗೊಬ್ಬರ, ಬಿತ್ತನೆ ಬೀಜ ಮುಂತಾದ ರೈತರಿಗೆ ಅಗತ್ಯವಾಗಿರುವ ವಸ್ತುಗಳನ್ನು ವಿತರಣೆ ಮಾಡಬೇಕು ಎಂದು ಸೂಚಿಸಲಾಗಿದೆ ಎಂದರು.

    ತಾಲ್ಲೂಕಿನ ಕುಡಿಯುವ ನೀರಿನ ಘಟಕಗಳಿಗೆ ಮೆಸ್ಕಾಂ ಇಲಾಖೆ ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮವಹಿಸಬೇಕೆಂದು ತಿಳಿಸಲಾಗಿದೆ ಎಂದು ಹೇಳಿ ಸರ್ಕಾರದ ಯೋಜನೆಗಳನ್ನು ಸಂಬಂಧಿಸಿದ ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಧಿಕಾರಿಗಳು ಶ್ರಮವಹಿಸಬೇಕು ಹಾಗೂ ಗ್ರಾ.ಪಂ ವ್ಯಾಪ್ತಿಯ ಗ್ರಾಮಸಭೆಗಳಲ್ಲಿ ಕಡ್ಡಾಯವಾಗಿ ಭಾಗವಹಿಸುವ ಮೂಲಕ ವರದಿ ನೀಡಬೇಕೆಂದು ಹೇಳಿದರು.

    ಮಳೆಗಾಲವಾಗಿರುವ ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ರಸ್ತೆ, ಸೇತುವೆಗಳ ಬಗ್ಗೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಬೇಕೆಂದು ತಿಳಿಸಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಿಜಯ್ ಕುಮಾರ್ ಮಾತನಾಡಿ, ಶಿಕ್ಷಣ ಇಲಾಖೆಯ ಶಾಲಾ ಕೊಠಡಿಗಳನ್ನು ನವೀಕರಣಗೊಳಿಸುವ ಸಂಬಂಧ ಚರ್ಚಿಸಲಾಗಿದ್ದು, ಶಾಲಾ ಕಟ್ಟಡ ದುರಸ್ಥಿಗೆ ತಾ.ಪಂ ಅನುದಾನ ಕೊಡುವ ಬಗ್ಗೆ ಇಂದಿನ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

    ಮಳೆಗಾಲ ಪ್ರಾರಂಭವಾಗಿರುವುದರಿಂದ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಆದ್ಯತೆ ಮೇಲೆ ಏನು ಕ್ರಮವಹಿಸಬೇಕೆಂಬ ಕುರಿತು ಎನ್‌ಆರ್‌ಇಜಿಎ ಗೆ ಸಂಬಂಧಿಸಿದ ಇಲಾಖೆಗಳ ಸೆಲೆಕ್ಷನ್ ಸೇರಿದಂತೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದರು.

    ಮೆಸ್ಕಾಂ ಇಲಾಖೆ ತಾಲ್ಲೂಕಿನ ಕುಡಿಯುವ ನೀರಿನ ಘಟಕಗಳಿಗೆ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಸೂಚನೆ ನೀಡಲಾಗಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಆಹಾರ ಸರಬರಾಜಾಗುತ್ತಿರುವ ಆಹಾರ ಪೊಟ್ಟಣಗಳ ಮೇಲೆ ನಮೂದಾಗಿರುವ ಅವಧಿಯನ್ನು ತಪಾಸಣೆ ಮಾಡಿ ಕ್ರಮವಹಿಸುವಂತೆ ತಿಳಿಸಲಾಯಿತು ಎಂದರು.

    ಹಿಂದಿನ ತಾ.ಪಂ ಸಭೆಗೆ ಗೈರು ಹಾಜರಾಗಿದ್ದ ಅಧಿಕಾರಿಗಳಿಗೆ ಸೂಚನೆ ಪತ್ರ ನೀಡಲಾಗಿದ್ದು, ಇಂದು ನಡೆದ ಸಾಮಾನ್ಯ ಸಭೆಗೆ ಬಹುತೇಕ ಎಲ್ಲಾ ಇಲಾಖೆ ಅಧಿಕಾರಿಗಳು ಭಾಗವಹಿಸಿ ವರದಿ ನೀಡಿದ್ದಾರೆ ಎಂದರು.

    Instructions to take action for the repair of school buildings

  • ಸಚಿವ ಪ್ರಿಯಾಂಕ್ ಖರ್ಗೆಗೆ ಆಪ್ತನ ಡ್ರಗ್ಸ್ ದಂಧೆ ಬಗ್ಗೆ ಗೊತ್ತಿಲ್ಲವೇ ….?

    ಸಚಿವ ಪ್ರಿಯಾಂಕ್ ಖರ್ಗೆಗೆ ಆಪ್ತನ ಡ್ರಗ್ಸ್ ದಂಧೆ ಬಗ್ಗೆ ಗೊತ್ತಿಲ್ಲವೇ ….?

    ಚಿಕ್ಕಮಗಳೂರು: ಎಲ್ಲಾ ವಿಚಾರದ ಬಗ್ಗೆ ಜ್ಞಾನ ಇರುವ ಸರ್ವಜ್ಞನ ರೀತಿ ವರ್ತಿಸುವ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅವರ ಪರಮಾಪ್ತ ಲಿಂಗರಾಜು ಕಣ್ಣಿ ಡ್ರಗ್ಸ್ ದಂಧೆ ನಡೆಸುವ ಬಗ್ಗೆ ಮಾಹಿತಿ ಲಭ್ಯವಾಗದಿರುವುದು ಆಶ್ಚರ್ಯ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವ್ಯಂಗ್ಯವಾಡಿದರು.

    ಬುಧವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಆಪ್ತ, ಕಾಂಗ್ರೆಸ್ ಶಾಸಕ ಅಲ್ಲಮಪ್ರಭು ಪಾಟೀಲರ ಪರಮಾಪ್ತ, ಕಲ್ಬುರ್ಗಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜು ಕಣ್ಣಿ ಡ್ರಗ್ಸ್ ದಂಧೆಯಲ್ಲಿ ಭಾಗಿಯಾದ ಆರೋಪಕ್ಕೆ ಮಹರಾಷ್ಟ್ರ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ. ಆದರೆ ಕರ್ನಾಟಕದ ಪೊಲೀಸರಿಗೆ ಜಾಲದ ಬಗ್ಗೆ ಯಾಕೆ ಗೊತ್ತಾಗಲಿಲ್ಲ ಎಂದು ಪ್ರಶ್ನಿಸಿದರು.

    ಪ್ರಿಯಾಂಕ್ ಖರ್ಗೆ ಜಾಗತಿಕವಾಗಿ ನಡೆಯುವ ವಿದ್ಯಮಾನಗಳ ಬಗ್ಗೆ ಪ್ರತಿಕ್ರಿಯಿಸುತ್ತಾರೆ. ತಮ್ಮ ಮೂಗಿನಡಿ ತಮ್ಮ ಆಪ್ತನ ಡ್ರಗ್ಸ್ ದಂಧೆ ಬಗ್ಗೆ ಅವರಿಗೆ ಗೊತ್ತಿಲ್ಲವೇ ಎಂದು ಪ್ರಶ್ನಿಸಿ, ಬೆಂಗಳೂರು ಸೇರಿದಂತೆ ಕೆಲವು ಮೆಟ್ರೋಪಾಲಿಟನ್ ಸಿಟಿಗಳಿಗೆ ಸೀಮಿತವಾಗಿದ್ದ ಡ್ರಗ್ಸ್ ಜಾಲ ರಾಜ್ಯದ ಉದ್ದಗಲಕ್ಕೂ ವಿಸ್ತರಿಸುತ್ತಿರುವುದು ಕಳವಳಕಾರಿ. ಇದರಿಂದ ಸಂಗ್ರಹವಾಗು ಹಣದಿಂದ ಕೊಲೆ, ಸುಲಿಗೆ, ಭಯೋತ್ಪಾದನೆ, ಲವ್‌ಜಿಹಾದ್ ನಂತಹ ಸಮಾಜ ವಿರೋಧಿ, ರಾಷ್ಟ್ರ ವಿರೋಧಿ ಚಟುವಟಿಕೆಗಳು ಹೆಚ್ಚಾಗಲು ಕಾರಣವಾಗುತ್ತಿದೆ ಎಂದು ದೂರಿದರು.

    ಡ್ರಗ್ಸ್ ಸೇವಿಸುವವರು ತಾವು ಯಾವ ಸ್ಥಿತಿಯಲ್ಲಿದ್ದೇವೆ ಎನ್ನುವ ಅರಿವಿಲ್ಲದೆ ಕೈಂ ಮಾಡುತ್ತಿದ್ದಾರೆ. ಸರ್ಕಾರ ಡ್ರಗ್ಸ್ ದಂಧೆ ಬಗ್ಗೆ ಶೂನ್ಯ ಸಹಿಷ್ಣುತೆ ತೋರಬೇಕು. ಪೊಲೀಸ್ ಇಲಾಖೆಯ ಕೆಲವು ಅಧಿಕಾರಿಗಳ ಅನೈತಿಕ ಆದಾಯದ ಮೂಲವೂ ಇದೇ ಡ್ರಗ್ಸ್ ದಂಧೆ ಎನ್ನುವುದು ಅಪಾಯಕಾರಿ. ಕಲ್ಬುರ್ಗಿಯಲ್ಲಿ ಕೆಲ ತಿಂಗಳ ಹಿಂದೆ ಡ್ರಗ್ಸ್ ಪೆಡ್ಲರ್‌ಗಳನ್ನು ವಶಕ್ಕೆ ಪಡೆದರೂ ಗಂಭೀರ ಕ್ರಮ ಆಗಿಲ್ಲ ಎನ್ನುವ ಆರೋಪ ಇದೆ. ಇದದರ ಹಿಂದೆ ಅಧಿಕಾರಸ್ಥರ ಕೃಪಾಕಟಾಕ್ಷ ಇದೆಯಾ ಎನ್ನುವ ಬಗ್ಗೆ ತನಿಖೆ ಆಗಬೇಕು ಎಂದರು.

    ಬೆಂಗಳೂರಿನಲ್ಲಿ ಟನಲ್ ರಸ್ತೆ ನಿರ್ಮಾಣ ಯೋಜನೆಯಲ್ಲಿ ಕೋಟ್ಯಾಂತರ ರೂ. ಹಣ ಹೊಡೆಯುವ ಹುನ್ನಾರ ನಡೆದಿದೆ. ಸರ್ಕಾರ ಯೋಜನೆಬಗ್ಗೆ ಮರುಪರಿಶೀಲಿಸದೇ ಇದ್ದಲ್ಲಿ ಹೋರಾಟ ಅನಿವಾರ್ಯ ಹೇಳಿದರು.

    ಈ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಅವರು ಈಗಾಗಲೇ ಸರ್ಕಾರದ ಗಮನ ಸೆಳೆದಿದ್ದಾರೆ. ಈ ಯೋಜನೆಗೆ ೧೭೬೬೦ ಕೋಟಿ ರೂ.ನ ಕ್ರಿಯಾ ಯೋಜನೆ ತಯಾರಿಸಲಾಗಿದೆ. ಮುಂದೆ ಇದು ೨೦ ಸಾವಿರ ಕೋಟಿಗೆ ತಲುಪಲಿದೆ. ಆದರೆ ಮುಂಬೈನಲ್ಲಿ ಸಮುದ್ರದ ಮಧ್ಯೆ ನಿರ್ಮಿಸಿರುವ ರಸ್ತೆಗಿಂತಲೂ, ಜಮ್ಮು ಕಾಶ್ಮೀರದಲ್ಲಿ ಪರ್ವತವನ್ನು ಸೀಳಿ ಮಾಡಿರುವ ರಸ್ತೆಗಿಂತ ಹೆಚ್ಚು ಅನುದಾನವನ್ನು ಬೆಂಗಳೂರಿನ ಟನಲ್ ರಸ್ತೆಗೆ ಇಡಲಾಗುತ್ತಿದೆ. ಈಗಾಗಲೇ ಬೆಂಗಳೂರು ನಗರ ಯೋಜನೆಯನ್ನು ಹಳ್ಳ ಹಿಡಿಸಿ ಆಗಿದೆ. ಈಗ ಟನಲ್ ರಸ್ತೆ ಹೆಸರಲ್ಲಿ ಹಣ ನುಂಗುವ ಹುನ್ನಾರ ನಡೆದಿದೆ ಎಂದರು.

    ಸರ್ಕಾರ ನಡೆಸುವವರು ಮುಖ್ಯಮಂತ್ರಿ ಯಾರು ಎನ್ನುವ ಬಗ್ಗೆ ಗಂಭೀರವಾಗಿ ಚರ್ಚಿಸುತ್ತ ರಾಜ್ಯದ ಹಿತವನ್ನು ಕಡೆಗಣಿಸಿದ ಪರಿಣಾಮ ದೊಡ್ಡ ದೊಡ್ಡ ಕಂಪನಿಗಳು ಕರ್ನಾಟಕದಿಂದ ಬೇರೆ ರಾಜ್ಯಗಳಿಗೆ ವಲಸೆ ಹೋಗುತ್ತಿವೆ ಎಂದು  ಆರೋಪಿಸಿ ಜನರು ಆಯ್ಕೆ ಮಾಡಿರುವುದು ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು. ನಾನು ಹೆಚ್ಚು, ನೀನು ಹೆಚ್ಚು ಎಂದು ಜಗಳವಾಡಲು ಅಲ್ಲ. ಆದರೂ ಕಾಂಗ್ರೆಸ್‌ನ ಒಳ ರಾಜಕೀಯ ಆಟದಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ದೂರಿದರು.

    ಟಯೋಟಾ ಕಾರ್ ಕಂಪನಿ ಈಗಾಗಲೇ ಮಹರಾಷ್ಟ್ರಕ್ಕೆ ಹೋಗಿದೆ. ಇಲ್ಲಿ ಅವರಿಗೆ ಮೂಲ ಸೌಕರ್ಯ ಒದಗಿಸಿದ್ದರೆ ನಮ್ಮ ಜನರಿಗೆ ಹೆಚ್ಚು ಉದ್ಯೋಗ ಸಿಗುತ್ತಿತ್ತು. ತೆರಿಗೆ ಹಣದಿಂದ ರಾಜ್ಯದ ಆರ್ಥಿಕ ಸಂಪನ್ಮೂಲ ಹೆಚ್ಚಾಗುತ್ತಿತ್ತು. ಇನ್ಫೋಸಿಸ್ ಕಂಪನಿ ನಮ್ಮ ರಾಜ್ಯದ ಮೂಲದ್ದು ಆದರೂ ಅದರ ಶಾಖೆ ಮೂಲ ಸೌಲಭ್ಯ ವಿಸ್ತರಣೆ ಇಲ್ಲದ ಕಾರಣಕ್ಕೆ ಆಂಧ್ರಕ್ಕೆ ಹೋಯಿತು. ಆಪಲ್ ಕಂಪನಿಯ ಸ್ಮಾರ್ಟ್ ಫೋನ್ ಕಂಪನಿಯೂ ಬೇರೆರಾಜ್ಯಕ್ಕೆ ಹೋಗುವಂತಾಗಿದೆ. ಇದರ ನಡುವೆ ಆಂಧ್ರದ ಸಿಎಂ ಚಂದ್ರಬಾಬು ನಾಯ್ಡು ಅವರ ಪುತ್ರ ಬೆಂಗಳೂರಿಗೆ ಹತ್ತಿರದಲ್ಲೇ ತಮ್ಮ ರಾಜ್ಯದಲ್ಲಿ ೮೦೦೦ ಚದರ ಅಡಿ ಜಾಗ ಹಾಗೂ ಮೂಲ ಸೌಕರ್ಯ ಮತ್ತು ತೆರಿಗೆ ವಿನಾಯಿತಿ ನೀಡುವುದಾಗಿ ತಿಳಿಸಿದ್ದಾರೆ. ಈ ಎಲ್ಲಾ ಕಾರಣದಿಂದ ಬೃಹತ್ ಕಂಪನಿಗಳು ಸ್ಥಳಾಂತರಗೊಳ್ಳುತ್ತಿವೆ. ರಾಜ್ಯ ಸರ್ಕಾರ ಎಚ್ಚರ ವಹಿಸದೇ ಇದ್ದಲ್ಲಿ ಕರ್ನಾಟಕಕ್ಕೆ ನಷ್ಟವಾಗಲಿದೆ ಎಂದರು.

    ಬೆಲೆ ಏರಿಕೆ, ಬ್ರಷ್ಟಾಚಾರಗಳು ಸಾಧನೆ ಆಗುವುದಿಲ್ಲ ಎಂದು ಹೇಳಿದ ಸಿ.ಟಿ.ರವಿ, ಸಾಧನಾ ಸಮಾವೇಶಕ್ಕೆ ಮುಂದಾಗಿರುವ ಕಾಂಗ್ರೆಸ್‌ನ ಕಾಲೆಳೆದರು.
    ಮೈಸೂರಿನಲ್ಲಿ ಕಾಂಗ್ರೆಸ್ ಸಾಧನಾ ಸಮೇವೇಶ ನಡೆಸಲು ಮುಂದಾಗಿದೆ. ಬೆಲೆ ಏರಿಕೆ, ಬ್ರಷ್ಟಾಚಾರ ಮಾಡದೆ ಪಂಚ ಗ್ಯಾರಂಟಿಗಳನ್ನು ಕೊಟ್ಟಿದ್ದರೆ ಸಾಧನೆ ಎಂದು ಒಪ್ಪಬಹುದಾಗಿತ್ತು. ಆದರೆ ಒಂದು ವರ್ಷದಲ್ಲಿ ರಾಜ್ಯ ಸರ್ಕಾರ ೧.೧೬ ಲಕ್ಷ ಕೋಟಿ ರೂ. ಸಾಲ ಮಾಡಿದೆ. ಸರ್ಕಾರದ ಮೇಲೆ ಒಟ್ಟು ಸಾಲ ೭.೩೨ ಲಕ್ಷ ಕೋಟಿ ರೂ. ಇದೆ ಇದು ಸಾಧನೆಯಾ ಎಂದು ಪ್ರಶ್ನಿಸಿದರು.

    ಈ ನಡುವೆ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಅವರು ಸಚಿವರ ಜಮೀರ್ ಅಹಮದ್‌ಗೆ ಭೇಷ್ ಎಂದಿದ್ದಾರೆ. ಅಂದರೆ ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನುವ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ ಅವರ ಆರೋಪಕ್ಕೆ ಭೇಷ್ ಎಂದಂತಾಗಿದೆ ಎಂದು ರವಿ ಟೀಕಿಸಿದರು.

    ಧರ್ಮಸ್ಥಳ ಕ್ಷೇತ್ರದ ಮೇಲೆ ಜನತೆ ಶ್ರದ್ಧೆ, ಭಕ್ತಿ, ನಂಬಿಕೆ ಇಟ್ಟಿದ್ದಾರೆ. ಶ್ರೀಕ್ಷೇತ್ರವು ಗ್ರಾಮೀಣಾಭಿವೃದ್ಧಿ ಜೊತೆಗೆ ಭಕ್ತಿ ಮತ್ತು ಸಮಾನತೆಯನ್ನು ಗಟ್ಟಿಗೊಳಿಸುವ ಕೆಲಸ ಮಾಡುತ್ತಿದೆ. ಅದನ್ನು ಸಹಿಸದ ಕೆಲವರು ವ್ಯಾಪಕವಾಗಿ ಅಪಪ್ರಚಾರ ಮಾಡುತ್ತಾ ನಿಗೂಢ ರೀತಿಯಲ್ಲಿ ಧರ್ಮಸ್ಥಳದಲ್ಲಿ ಏನೋ ನಡೆದಿದೆ ಎಂದು ಬಿಂಬಿಸಲು ಹೊರಟಿದ್ದಾರೆ. ಜನರ ಭಕ್ತಿ ಭಾವವನ್ನು ದುರ್ಬಲಗೊಳಿಸುವ ಸಂಚಿನ ಭಾಗ ಇದಾಗಿದೆ ಎಂದು ದೂರಿದರು.

    Doesn’t Minister Priyank Kharge know about the drug racket of his close aide…?

  • ಆಷಾಢಲಕ್ಷ್ಮಿ ಜಾತ್ರಾ ಮಹೋತ್ಸವ

    ಆಷಾಢಲಕ್ಷ್ಮಿ ಜಾತ್ರಾ ಮಹೋತ್ಸವ

    ಚಿಕ್ಕಮಗಳೂರು:  ನಗರದ ದರ್ಜಿ ಬೀದಿಯಲ್ಲಿರುವ ಪಾಂಡುರಂಗಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಚಾಮುಂಡೇಶ್ವರಿ ಅಮ್ಮನವರ ೨೦ನೇ ವರ್ಷದ ಜಾತ್ರಾ ಮಹೋತ್ಸವವನ್ನು ಇಂದು ವಿಜೃಂಭಣೆಯ ಜೊತೆಗೆ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

    ಈ ಸಂದರ್ಭದಲ್ಲಿ ಗೋಂದೊಳ್ಳಿ ಸಮಾಜದ ಅಧ್ಯಕ್ಷ ಲೋಕೇಶ್ ಮಾತನಾಡಿ, ಭಾವಸಾರ ಕ್ಷತ್ರೀಯ ಸಮಾಜ ಮತ್ತು ಜಿಲ್ಲಾ ಗೋಂದೋಳ್ಳಿ ಸಮಾಜದ ಸಂಯುಕ್ತಾಶ್ರಯದಲ್ಲಿ ಇತಿಹಾಸ ಪ್ರಸಿದ್ದ ಶ್ರೀ ಆಷಾಢಲಕ್ಷ್ಮಿ ಅಮ್ಮನವರ ಪೂಜಾ ಮಹೋತ್ಸವವನ್ನು ಆಚರಿಸಲಾಗುತ್ತಿದೆ ಎಂದು ಹೇಳಿದರು.

    ಸಮಾಜದ ಮುಖಂಡರು ಹಾಗೂ ದಾನಿಗಳ ಸಹಕಾರಿದಿಂದ ನಿವೇಶನವನ್ನು ಹೊಂದಿದ್ದು, ಮಾಜಿ ಶಾಸಕ ಸಿ.ಟಿ. ರವಿಯವರು ಕಳೆದ ವರ್ಷ ೨೫ ಲಕ್ಷ ರೂಗಳ ಅನುದಾನವನ್ನು ನೀಡಿದ್ದು, ಸಮಾಜದವರು, ಸಾರ್ವಜನಿಕರು ನೀಡಿರುವ ಧನಸಹಾಯದ ಜೊತೆಗೆ ಸರ್ಕಾರ ಅನುದಾನ ನೀಡಬೇಕೆಂದು ಮನವಿ ಮಾಡಿದರು.

    ಈ ಹಣದಲ್ಲಿ ದೇವಸ್ಥಾನ ನಿರ್ಮಾಣ, ಸಮುದಾಯ ಭವನ ನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದು, ಹಾಲಿ ಶಾಸಕ ಹೆಚ್.ಡಿ. ತಮ್ಮಯ್ಯನವರ ಬಳಿ ಸರ್ಕಾರದಿಂದ ಅನುದಾನ ನೀಡುವಂತೆ ಸಮಾಜದ ಪರವಾಗಿ ಮನವಿ ಮಾಡುತ್ತೇವೆಂದು ತಿಳಿಸಿದರು.

    Ashada Lakshmi Jatra Festival

  • ಇಂದು ದೇವನಹಳ್ಳಿ ಭೂಸ್ವಾಧೀನ ಮುಖ್ಯಮಂತ್ರಿ ಸಭೆ

    ಇಂದು ದೇವನಹಳ್ಳಿ ಭೂಸ್ವಾಧೀನ ಮುಖ್ಯಮಂತ್ರಿ ಸಭೆ

    ಬೆಂಗಳೂರು: ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯಲ್ಲಿನ ಭೂಸ್ವಾಧೀನಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ರೈತರು, ರೈತ ಸಂಘದ ಮುಖಂಡರು, ಹೋರಾಟಗಾರರ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ (ಜುಲೈ 15) ಸಭೆ ನಡೆಸಲಿದ್ದಾರೆ.

    ಅತ್ಯಾಧುನಿಕ ರಕ್ಷಣಾ ಮತ್ತು ವೈಮಾಂತರಿಕ್ಷ ಪಾರ್ಕ್‌ ಸ್ಥಾಪನೆಗಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ 13 ಗ್ರಾಮಗಳ ವ್ಯಾಪ್ತಿಯ 1,777 ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು 2021ರಲ್ಲಿ ಪ್ರಾಥಮಿಕ ಅಧಿಸೂಚನೆ, 2022ರಲ್ಲಿ ಅಂತಿಮ ಆದೇಶ ಹೊರಡಿಸಲಾಗಿತ್ತು. ಭೂಸ್ವಾಧೀನ ವಿರೋಧಿಸಿ ಅಂದಿನಿಂದಲೂ ರೈತರು ಹೋರಾಟ ಮಾಡುತ್ತಾ ಬಂದಿದ್ದಾರೆ.

    ಚನ್ನರಾಯಪಟ್ಟಣ, ಮಟ್ಟಿಬಾರ್ಲು ಮತ್ತು ಶ್ರೋತ್ರೀಯ ತೆಲ್ಲೋಹಳ್ಳಿಗಳಲ್ಲಿನ ನೀರಾವರಿ, ಕೃಷಿ ಮತ್ತು ಜನವಸತಿಗಳನ್ನು ಪರಿಗಣಿಸಿ, 231.23 ಎಕರೆ, 185.18 ಎಕರೆ ಮತ್ತು 78.21 ಎಕರೆ ಸೇರಿ 495 ಎಕರೆ ಜಮೀನನ್ನು ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವುದಾಗಿ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರು ಜೂನ್‌ 24ರಂದು ಘೋಷಿಸಿದ್ದರು. ಆದರೆ, ರೈತರು ಸರ್ಕಾರದ ನಿರ್ಧಾರವನ್ನು ಒಪ್ಪದೇ ಎಲ್ಲ ಜಮೀನನ್ನು ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವಂತೆ ಆಗ್ರಹಿಸಿ ಸಂಯುಕ್ತ ಹೋರಾಟ–ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ರೈತರು ಹೋರಾಟ ಮುಂದುವರಿಸಿದ್ದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ ಜುಲೈ 5ರಂದು ರೈತ ಸಂಘದ ಮುಖಂಡರು, ಹೋರಾಟಗಾರರು, ಸ್ಥಳೀಯ ರೈತರ ಸಭೆ ಕರೆದಿದ್ದರು. ಕಾನೂನು ತೊಡಕುಗಳಿದ್ದು, ತಜ್ಞರ ಅಭಿಪ್ರಾಯ ಪಡೆದು ತೀರ್ಮಾನ ಕೈಗೊಳ್ಳಲು 10 ದಿನಗಳ ಸಮಯ ಕೇಳಿದ್ದರು. ನಿಗದಿಯಂತೆ ಸಭೆ ಮಂಗಳವಾರ ನಡೆಯಲಿದೆ.

    ಈ ಕುರಿತು ಸುದ್ದಿಗಾರರ ಜತೆ ಮಾತನಾಡಿದ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ, ‘ಕೃಷಿ ಮತ್ತು ಕೈಗಾರಿಕೆ ಎರಡನ್ನೂ ಸರಿದೂಗಿಸಿಕೊಂಡು ಹೋಗಬೇಕು ಎನ್ನುವುದು ಸರ್ಕಾರದ ಕಳಕಳಿ. ಸಿದ್ದರಾಮಯ್ಯ ಅವರು ಸಭೆಯಲ್ಲಿ ಚರ್ಚಿಸಿ, ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ’ ಎಂದಿದ್ದಾರೆ.

    Devanahalli land acquisition chief minister meeting today

  • ಶಕ್ತಿ ಯೋಜನೆ ಯಶಸ್ಸಿನಿಂದ ಹೊಸ ಬಸ್‌ಗಳ ಖರೀದಿ

    ಶಕ್ತಿ ಯೋಜನೆ ಯಶಸ್ಸಿನಿಂದ ಹೊಸ ಬಸ್‌ಗಳ ಖರೀದಿ

    ಚಿಕ್ಕಮಗಳೂರು: ರಾಜ್ಯ ಸರ್ಕಾರ ನೀಡಿದ್ದ ಭರವಸೆಯಂತೆ ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತವಾಗಿ ಸಂಚರಿಸಿದ ಬಾಬ್ತು ಸರ್ಕಾರ ನಿಗಮಕ್ಕೆ ನೀಡಿದ ಹಣದಲ್ಲಿ ಹೊಸ ಬಸ್‌ಗಳನ್ನು ಖರೀದಿಸಲಾಗಿದೆ ಹಾಗೂ ಚಾಲಕರು, ನಿರ್ವಾಹಕರ ನೇಮಕಕ್ಕೆ ಕ್ರಮ ಕೈಗೊಳ್ಳಲು ಸಾಧ್ಯವಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ತಿಳಿಸಿದರು.

    ನಗರದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಇಂದು ಆಯೋಜಿಸಿದ್ದ ಶಕ್ತಿ ಯೋಜನೆಯ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ರಾಜ್ಯಾದ್ಯಂತ ಮಹಿಳೆಯರು ೫೦೦ ಕೋಟಿ ಟ್ರಿಪ್‌ಗಳಲ್ಲಿ ಉಚಿತವಾಗಿ ಸಂಚರಿಸಿದ ಫಲವಾಗಿ ೧೨,೬೬೯ ಕೋಟಿ ರೂ.ಗಳ ಆದಾಯ ನಿಗಮಕ್ಕೆ ಬಂದಿದೆ ಎಂದು ಹೇಳಿದರು.

    ಈಗಾಗಲೇ ರಾಜ್ಯ ಸರ್ಕಾರ ನೀಡಿದ ಭರವಸೆಯಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಶಕ್ತಿ ಯೋಜನೆ ಯಶಸ್ವಿಯಾಗಿ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೇವಣ್ಣ ಅವರ ಕರೆಯ ಮೇರೆಗೆ ರಾಜ್ಯಾದ್ಯಂತ ನಿಗಮದ ಎಲ್ಲ ಬಸ್ ನಿಲ್ದಾಣಗಳಲ್ಲಿ ಸಂಭ್ರಮಾಚರಣೆ ಮಾಡಲಾಗುತ್ತಿದೆ. ನಿಗಮದ ಬಸ್‌ಗಳಲ್ಲಿ ಉಚಿತ ಪ್ರಯಾಣದ ಅವಕಾಶವನ್ನು ಕಲ್ಪಿಸುವ ಮೂಲಕ ಮಹಿಳೆಯರಿಗೆ ಶಕ್ತಿ ತುಂಬಲಾಗಿದೆ. ಇದರಿಂದ ಉತ್ತಮ ಆದಾಯ ಬಂದಿದ್ದು ನಿಗಮಕ್ಕೂ ಶಕ್ತಿ ಬಂದಿದೆ ಎಂದರು.

    ಚಿಕ್ಕಮಗಳೂರು ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಮಲ್ಲೇಶ್‌ಸ್ವಾಮಿ ಮಾತನಾಡಿ, ರಾಜ್ಯ ಸರ್ಕಾರ ನುಡಿದಂತೆ ನಡೆದಿದ್ದು, ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಯೋಜನೆ ಯಶಸ್ವಿಯಾಗಿ ನಡೆಯುತ್ತಿದ್ದು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸಲು ಅವಕಾಶವಾಗಿದೆ ಎಂದು ತಿಳಿಸಿದರು.

    ಮುಖಂಡರಾದ ಹೆಚ್.ಪಿ.ಮಂಜೇಗೌಡ ಮಾತನಾಡಿ, ಪಂಚ ಗ್ಯಾರಂಟಿ ಶಕ್ತಿ ಯೋಜನೆಯಿಂದ ಸರ್ಕಾರದ ಬೊಕ್ಕಸಕ್ಕೂ ಆದಾಯ ಬರುತ್ತಿದ್ದು, ಮಹಿಳೆಯರಿಗೂ ಉತ್ತಮ ಅವಕಾಶ ಒದಗಿಸಿದಂತಾಗಿದೆ. ಮುಂದೆಯೂ ಮೂರು ವರ್ಷ ಐದು ಗ್ಯಾರಂಟಿ ಯೋಜನೆಗಳನ್ನು ರಾಜ್ಯ ಸರ್ಕಾರ ಮುಂದುವರಿಸಲಿದೆ ಎಂದು ಹೇಳಿದರು.

    ಸಾರಿಗೆ ನಿಗಮದ ಚಿಕ್ಕಮಗಳೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್ ಮಾತನಾಡಿ, ಜಿಲ್ಲೆಯ ಎಲ್ಲಾ ಆರು ಘಟಕಗಳ ವಾಹನಗಳಲ್ಲಿ ಇದುವರೆಗೆ ಮಹಿಳೆಯರು ಒಟ್ಟು ೮.೪೩ ಕೋಟಿ ಬಾರಿ ಉಚಿತವಾಗಿ ಸಂಚರಿಸಿದ್ದು, ೩೨೨.೩೮ ಕೋಟಿ ರೂ.ಗಳನ್ನು ವಿನಿಯೋಗಿಸಲಾಗಿದೆ. ಚಿಕ್ಕಮಗಳೂರು ಘಟಕವೊಂದರಲ್ಲೇ ಒಟ್ಟು ೨.೨೫ ಕೋಟಿ ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಸಂಚರಿಸಿದ್ದು, ೭೯.೪೫ ಕೋಟಿ ರೂ.ಗಳನ್ನು ವಿನಿಯೋಗಿಸಲಾಗಿದೆ ಎಂದು ತಿಳಿಸಿದರು.

    ಫಲಾನುಭವಿಗಳ ಪರವಾಗಿ ಶೋಭಾ ಮಾತನಾಡಿ, ಶಕ್ತಿ ಯೋಜನೆಯಿಂದ ಈಗಾಗಲೇ ಮಹಿಳೆಯರು ವಿವಿಧ ದೇವಾಲಯಗಳಿಗೂ ಭೇಟಿ ನೀಡಿದ್ದಾರೆ. ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಯೋಜನೆ ಮಹಿಳೆಯರಿಗೆ ಹೆಚ್ಚು ಅನುಕೂಲವಾಗಿದ್ದು, ಇದು ಹೀಗೇ ಮುಂದುವರಿಯಲಿ ಎಂದು ಆಶಿಸಿದರು.

    ಇದೇ ಸಂದರ್ಭದಲ್ಲಿ ಪ್ರಯಾಣಿಕರಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತಲ್ಲದೆ, ಬಸ್ ಚಾಲಕ ಹಾಗೂ ನಿರ್ವಾಹಕರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.

    Purchase of new buses due to the success of Shakti Yojana