Category: ಚಿಕ್ಕಮಗಳೂರು ನಗರ

  • ಜನವಿರೋಧಿ ರಾಜ್ಯಸರ್ಕಾರದ ಕ್ರಮ ಖಂಡಿಸಿ ಬಿಜೆಪಿ ಪ್ರತಿಭಟನೆ

    ಜನವಿರೋಧಿ ರಾಜ್ಯಸರ್ಕಾರದ ಕ್ರಮ ಖಂಡಿಸಿ ಬಿಜೆಪಿ ಪ್ರತಿಭಟನೆ

    ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ರಾಜ್ಯ ಸರ್ಕಾರ ಅನುಷ್ಠಾನ ಮಾಡದೇ ಇರುವುದನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದು ತಾಲ್ಲೂಕಿನ ಮೂಗ್ತಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು.

    ಇಂದು ಬೆಳಗ್ಗೆ ಪಂಚಾಯಿತಿ ಮುಂಭಾಗದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಗ್ರಾ.ಪಂ ಅಧ್ಯಕ್ಷ ಉಮೇಶ್ ಶೆಟ್ಟಿ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳಾದರೂ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಂಡಿಲ್ಲ. ಕೆಲವರ ಬಿಪಿಎಲ್ ಪಡಿತರ ಚೀಟಿ ರದ್ದುಮಾಡುವ ಮೂಲಕ ಬಡವರ ಹಕ್ಕುಗಳನ್ನು ಧಮನ ಮಾಡುತ್ತಿದೆ ಎಂದು ಆರೋಪಿಸಿದರು.

    ಕೇಂದ್ರ ಸರ್ಕಾರದ ಯೋಜನೆಗಳನ್ನು ಅನುಷ್ಠಾನಕ್ಕೆ ತರದೇ ಇರುವ ಪರಿಣಾಮ ಬಡಜನರು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ನೋಂದಣಿ ಶುಲ್ಕ ಹೆಚ್ಚಳದಿಂದಾಗಿ ಬಡವರು ನಿವೇಶನ, ಮನೆ ಕೊಳ್ಳುವ ಆಸೆಯಿಂದ ವಿಮುಖರಾಗಬೇಕಾಗಿದೆ ಎಂದು ದೂರಿದರು.

    ಗ್ರಾ.ಪಂ ಉಪಾಧ್ಯಕ್ಷೆ ಅಂಬಿಕಾ ಮಾತನಾಡಿ, ಗ್ರಾಮಠಾಣೆ ಜಾಗ ವಿಸ್ತರಣೆ ಮಾಡದ ಪರಿಣಾಮ ನಿವೇಶನಗಳಿಗೆ ಇ-ಸ್ವತ್ತು ಮಾಡಲು ವಿಳಂಭವಾಗುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆಶೋತ್ತರಗಳಿಗೆ ಸ್ಪಂದಿಸಲು ಕಷ್ಟಸಾಧ್ಯವಾಗುತ್ತಿದೆ ಎಂದು ವಿಷಾಧ ವ್ಯಕ್ತಪಡಿಸಿದರು.

    ೬೦ ವರ್ಷ ಮೇಲ್ಪಟ್ಟ ವೃದ್ಧರಿಗೆ ಸಂಧ್ಯಾ ಸುರಕ್ಷಾ ಯೋಜನೆಯಡಿ ಹಣವನ್ನು ಅವರ ಖಾತೆಗೆ ನೇರ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದ ಅವರು, ರಾಜ್ಯಸರ್ಕಾರದಿಂದ ಗ್ರಾಮ ಪಂಚಾಯಿತಿಗಳಿಗೆ ಯಾವುದೇ ಅನುದಾನ ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ತೊಂದರೆಯಾಗುತ್ತಿದೆ ಎಂದು ದೂರಿದರು.

    ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಮಾತನಾಡಿ, ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ ಪಂಚಾಯಿತಿ ಮಟ್ಟದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಧ್ವನಿ ಎತ್ತಬೇಕೆಂಬ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಆಶಯದಂತೆ ಇಂದು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

    ರಾಜ್ಯಸರ್ಕಾರ ಬಡಜನರ, ದಲಿತರ ವಿರೋಧಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಹಿಂದ, ಬಡಜನರ ಪರ ಎಂದು ಕೇವಲ ಮಾತಿಗೆ ಸೀಮಿತವಾಗಿದ್ದಾರೆಂದು ಆರೋಪಿಸಿದರು.

    ಪ್ರತೀ ಪಂಚಾಯಿತಿ ವ್ಯಾಪ್ತಿಯಲ್ಲಿ ನೂರರಿಂದ ಇನ್ನೂರು ಜನರ ಸಂಧ್ಯಾ ಸುರಕ್ಷಾ ಯೋಜನೆಯ ಪಟ್ಟಿಯನ್ನು ಪರಿಷ್ಕರಿಸಿ ಎಂಬ ಸೂಚನೆಯನ್ನು ಅಧಿಕಾರಿಗಳಿಗೆ ನೀಡಿದ್ದಾರೆ. ಇಡೀ ರಾಜ್ಯದಲ್ಲಿ ೪೫ ಲಕ್ಷ ವೃದ್ಧರು ಈ ಯೋಜನೆಯಡಿ ಸೌಲಭ್ಯ ಪಡೆಯುತ್ತಿದ್ದು, ಇವರ ಮೇಲೆ ಸರ್ಕಾರ ಕೋಪ ಮಾಡಿಕೊಂಡು ಐದು ಗ್ಯಾರಂಟಿಗಳಿಗೆ ಹಣ ಒದಗಿಸಲು ಈ ನಿರ್ಧಾರ ಕೈಗೊಂಡಿದ್ದಾರೆಂದು ಟೀಕಿಸಿದರು.

    ಅಕ್ರಮ-ಸಕ್ರಮ ಫಾರಂ ನಂ ೫೩, ೫೭ ಅರ್ಜಿಗಳನ್ನು ಶೀಘ್ರ ವಿಲೇವಾರಿಗೊಳಿಸಬೇಕು, ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ಬಡವರ ಆಶ್ರಯ ಮನೆಗಳಿಗೆ ಮಂಜೂರಾತಿ ನೀಡಿ ಅನುದಾನ ಬಿಡುಗಡೆ ಮಾಡಬೇಕು, ಬಡವರ ಬಿಪಿಎಲ್ ಕಾರ್ಡ್‌ಗಳನ್ನು ಯಾವುದೇ ಕಾರಣಕ್ಕೂ ರದ್ದುಪಡಿಸಬಾರದು, ೭೦ ವರ್ಷ ಮೇಲ್ಪಟ್ಟ ಎಲ್ಲಾ ವರ್ಗದವರಿಗೂ ಕೇಂದ್ರ ಸರ್ಕಾರದ ಆಯುಷ್ಮಾನ್ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೆ ತರಬೇಕೆಂದು ಒತ್ತಾಯಿಸಿದರು.

    ಈ ಸಂದರ್ಭದಲ್ಲಿ ಪಂಚಾಯಿತಿ ಸದಸ್ಯರುಗಳಾದ ಗಿರೀಶ್, ಮಂಜುನಾಥ್ ಗೌಡ, ಸಂದೀಪ್, ಪದ್ಮ, ಕಮಲಾಕ್ಷಿ, ಸವೀತ, ಗ್ರಾಮಸ್ಥರಾದ ಲಕ್ಷ್ಮಣ್‌ಗೌಡ, ಚಂದ್ರೇಗೌಡ, ಸುರೇಶ್, ಹರೀಶ್, ಲಂಬೋದರ, ಪ್ರಸಾದ್, ಶಿವೇಗೌಡ, ಅಶೋಕ್‌ಕುಮಾರ್, ಪದ್ಮಣ್ ಮುಳ್ಳಯ್ಯ, ಪವನ್, ಹಾಲಪ್ಪ, ರಮೇಶ್, ಎಂ.ವಿ. ಆದೇಶ್, ಪಂಚಾಕ್ಷರಿ, ರಾಜು, ಪ್ರಸಾದ್ ಆಚಾರ್ಯ, ಜಯಪ್ಪ, ರಾಜಶೇಖರ್, ಜಗದೀಶ್, ಧರ್ಮೇಗೌಡ, ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು.

    BJP protests against anti-people state government’s actions

  • ವ್ಯಾಪಾರಸ್ಥರು ನಗರಸಭೆ ನಿಬಂಧನೆಗಳ ಪಾಲಿಸಬೇಕು

    ವ್ಯಾಪಾರಸ್ಥರು ನಗರಸಭೆ ನಿಬಂಧನೆಗಳ ಪಾಲಿಸಬೇಕು

    ಚಿಕ್ಕಮಗಳೂರು:  ಜನಸಂಖ್ಯೆಗೆ ಸಂತೆ ಮಾರುಕಟ್ಟೆ ವ್ಯವಸ್ಥೆಯನ್ನು ಸರ್ಕಾರ ಮತ್ತು ನಗರಸಭೆ ಮಾಡಬೇಕು, ಇದರಿಂದ ವ್ಯಾಪಾರಸ್ಥರು ಹಾಗೂ ಗ್ರಾಹಕರಿಗೆ ಅನುಕೂಲವಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ತಿಳಿಸಿದರು.

    ಅವರು ಇಂದು ನಗರದ ಸಂತೆ ಮಾರುಕಟ್ಟೆಗೆ ನಗರಸಭಾಧ್ಯಕ್ಷೆ ಶೀಲಾದಿನೇಶ್ ಹಾಗೂ ಸದಸ್ಯರೊಂದಿಗೆ ಭೇಟಿನೀಡಿ ಸ್ವಚ್ಚತೆ ಬಗ್ಗೆ ಮತ್ತು ಸಾರ್ವಜನಿಕರು ಓಡಾಡುವ ದಾರಿಯಲ್ಲಿ ತರಕಾರಿಗಳನ್ನು ಇಡದೇ ಕಟ್ಟೆಮೇಲೆ ಇಟ್ಟು ವ್ಯಾಪಾರ ಮಾಡಬೇಕೆಂದು ಸೂಚನೆ ನೀಡಿದರು.

    ವ್ಯಾಪಾರಸ್ಥರು ಜನ ತಿರುಗಾಡುವ ದಾರಿಯಲ್ಲಿ ತರಕಾರಿ, ಹಣ್ಣು, ವೀಳ್ಯಾದೆಲೆ, ಹೂವು ಸೇರಿದಂತೆ ಎಲ್ಲವುಗಳನ್ನು ಇಡುತ್ತಿರುವುದರಿಂದ ಸ್ವಚ್ಚತೆಗೆ ಧಕ್ಕೆಯಾಗಿದೆ. ಕಟ್ಟೆ ಮೇಲೆ ಈ ವಸ್ತುಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡುವಂತೆ ತಿಳಿಸಿದರು.

    ಸಂತೆಯ ಒಳಭಾಗದಲ್ಲಿ ವಾಹನಗಳ ಪಾರ್ಕಿಂಗ್, ತಳ್ಳುಗಾಡಿಗಳಲ್ಲಿ ವ್ಯಾಪಾರ ಮಾಡುತ್ತಿರುವುದರಿಂದ ಮಹಿಳೆಯರು ಮತ್ತು ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಇದರಿಂದಾಗಿ ಜೇಬುಕಳ್ಳರ ಹಾವಳಿ ಹೆಚ್ಚಾಗುತ್ತಿದೆ. ಇದಕ್ಕೆ ನಗರಸಭೆ ಕಡಿವಾಣ ಹಾಕಬೇಕೆಂದು ಕಡಕ್ ಸೂಚನೆ ನೀಡಿದರು.

    ನಗರಸಭಾಧ್ಯಕ್ಷೆ ಶೀಲಾದಿನೇಶ್ ಮಾತನಾಡಿ, ಸಂತೆಯಲ್ಲಿ ಶುಚಿತ್ವ ಕಾಪಾಡುವ ಜೊತೆಗೆ ನಗರಸಭೆಯ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ವ್ಯಾಪಾರಸ್ಥರಿಗೆ ಕಡಕ್ ಸೂಚನೆ ನೀಡಿದ್ದು, ಪಾಲಿಸದ ವ್ಯಾಪಾರಸ್ಥರ ವಿರುದ್ಧ ಮುಂದಿನ ವಾರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

    ಸದಸ್ಯ ಎ.ಸಿ. ಕುಮಾರ್‌ಗೌಡ ಮಾತನಾಡಿ, ನಗರದಲ್ಲಿ ಪ್ರತೀ ಬುಧವಾರ ಸಂತೆ ನಡೆಯುತ್ತಿದ್ದು, ನಗರಸಭೆಯಿಂದ ವ್ಯಾಪಾರದ ಕಟ್ಟೆ ವ್ಯವಸ್ಥೆ, ಶೌಚಾಲಯ ನಿರ್ಮಾಣ ಮಾಡಿದ್ದು, ದಾರಿಯಲ್ಲಿ ತರಕಾರಿ ಮಾರಾಟ ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದರು.

    ಮುಂದಿನ ವಾರವೂ ಇದೇ ರೀತಿ ಆಗಿದ್ದರೆ ವ್ಯಾಪಾರಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಂಡು ದಂಡ ವಿಧಿಸುವುದಾಗಿ ಎಚ್ಚರಿಸಿದ ಅವರು, ಸಧ್ಯದಲ್ಲೇ ಸಂತೆಯ ಪ್ರಾಂಗಣದಲ್ಲಿ ಶುದ್ಧಗಂಗಾ ನೀರಿನ ಘಟಕವನ್ನು ಸ್ಥಾಪಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

    ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಬಿ.ಸಿ. ಬಸವರಾಜ್, ಆರೋಗ್ಯ ನಿರೀಕ್ಷರು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

    Business owners must follow municipal regulations

  • ಯುವಜನತೆ ರಾಷ್ಟ್ರಕವಿ ಕುವೆಂಪು ಆಶಯದಂತೆ ವಿಶ್ವಮಾನವರಾಗಬೇಕು

    ಯುವಜನತೆ ರಾಷ್ಟ್ರಕವಿ ಕುವೆಂಪು ಆಶಯದಂತೆ ವಿಶ್ವಮಾನವರಾಗಬೇಕು

    ಚಿಕ್ಕಮಗಳೂರು:  ಇಂದಿನ ಯುವ ಜನತೆ ರಾಷ್ಟ್ರಕವಿ ಕುವೆಂಪು ಅವರ ಆಶಯದಂತೆ ವಿಶ್ವಮಾನವರಾಗಬೇಕು ಎಂದು ಆಶಾಕಿರಣ ಅಂಧಮಕ್ಕಳ ಶಾಲೆಯ ಅಧ್ಯಕ್ಷ ಡಾ.ಜೆ.ಪಿ. ಕೃಷ್ಣೆಗೌಡ ಸಲಹೆ ಮಾಡಿದರು.

    ನಗರದ ಐಡಿಎಸ್‌ಜಿ ಕಾಲೇಜಿನಲ್ಲಿ ಅರ್ಥಶಾಸ್ತ್ರ ಸ್ನಾತಕೋತ್ತರ ವಿಭಾಗದ ಪ್ರಥಮ ವ?ದ ವಿದ್ಯಾರ್ಥಿಗಳು ಅಂತಿಮ ವ?ದ ವಿದ್ಯಾರ್ಥಿಗಳಿಗೆ ಮಂಗಳವಾರ ಏರ್ಪಡಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ಜಗತ್ತಿನಲ್ಲಿಂದು ಮಾನವೀಯ ಮೌಲ್ಯಗಳ ಕೊರತೆಯಿದೆ, ಅದರಿಂದಾಗಿ ದೌರ್ಜನ್ಯ, ಶೋ?ಣೆ, ಅತ್ಯಾಚಾರ, ಕೊಲೆ ಸೇರಿದಂತೆ ಅಪರಾಧ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ, ಎಲ್ಲೆಡೆ ಅಭದ್ರತೆ, ಅಶಾಂತಿ ಕಾಡುತ್ತಿದೆ ಎಂದು ವಿ?ದಿಸಿದ ಅವರು ಈ ಪರಿಸ್ಥಿತಿ ಸರಿ ಹೋಗಬೇಕಾದರೆ ಯುವಜನತೆ ಭಕ್ತಿ ಭಂಡಾರಿ ಬಸವಣ್ಣನವರ ಸಪ್ತ ಸೂತ್ರಗಳನ್ನು ಮೈಗೂಡಿಸಿಕೊಳ್ಳಬೇಕು, ರಾ?ಕವಿ ಕುವೆಂಪು ಅವರ ಆಶಯದಂತೆ ವಿಶ್ವಮಾನವರಾಗಲು ಪ್ರಯತ್ನಿಸಬೇಕು ಎಂದು ಕಿವಿ ಮಾತು ಹೇಳಿದರು.

    ಯುವಜನತೆ ಪ್ರತಿದಿನ ಪತ್ರಿಕೆಗಳನ್ನು ಓದಬೇಕು,, ಆ ಮೂಲಕ ಜಗತ್ತಿನ ಆಗು ಹೋಗುಗಳನ್ನು ತಿಳಿಯಬೇಕು, ಸಾಮಾನ್ಯ ಜ್ಞಾನವನ್ನು ಬೆಳೆಸಿಕೊಳ್ಳಬೇಕು, ಆರೋಗ್ಯ ಮತ್ತು ವಿದ್ಯೆ ಒಂದೇ ನಾಣ್ಯದ ಎರಡು ಮುಖಗಳಾಗಿವೆ, ಹಾಗಾಗಿ ವಿದ್ಯಾರ್ಥಿಗಳು ಆರೋಗ್ಯವಂತರು ಮತ್ತು ವಿದ್ಯಾವಂತರೂ ಆಗಬೇಕು ಎಂದರು.

    ನಾವು ಸಮಾಜಮುಖಿಗಳಾದರೆ, ಸಮಾಜದ ಸೇವೆ ಮಾಡಿದರೆ, ಜನಮಾನಸದಲ್ಲಿ ಚಿರಸ್ಥಾಯಿಗಳಾಗಬಹುದು, ಸಮಾಜ ಸೇವೆಯಿಂದ ಮಾತ್ರ ನಮ್ಮ ಬದುಕು ಸಾರ್ಥಕವಾಗುತ್ತದೆ, ಹಾಗಾಗಿ ಯುವಜನತೆ ಸಮಾಜಮುಖಿಗಳಾಗಬೇಕು ಎಂದು ಹೇಳಿದರು.

    ಡಾ.ವ? ಅಭಿ?ಕ್ ಮಾತನಾಡಿ ವಿದ್ಯಾರ್ಥಿ ಜೀವನ ಬಂಗಾರದ ಜೀವನ, ವಿದ್ಯಾರ್ಥಿಗಳು ಅದನ್ನು ಸದುಪಯೋಗಪಡಿಸಿಕೊಳ್ಳಬೇಕು, ಉನ್ನತವಾದ ಕನಸುಗಳನ್ನು ಕಾಣಬೇಕು, ಅವುಗಳ ನನಸಿಗಾಗಿ ಶ್ರಮಿಸಬೇಕು, ಶಿಕ್ಷಣವಂತರು ದೇಶಕ್ಕಾಗಿ, ಸಮಾಜಕ್ಕಾಗಿ ದುಡಿಯಬೇಕು ಎಂದು ತಿಳಿಸಿದರು.

    ಪ್ರಾಸ್ತಾವಿಕವಾಗಿ ಮಾತನಾಡಿದ ಅರ್ಥಶಾಸ್ತ್ರ ಸ್ನಾತಕೋತ್ತರ ವಿಭಾಗದ ಸಹ ಪ್ರಾಧ್ಯಾಪಕ ಡಾ. ಕೆ.ಎನ್. ಲಕ್ಷ್ಮಿಕಾಂತ್ ೨೦೦೮ರಲ್ಲಿ ಕಾಲೇಜಿನಲ್ಲಿ ಆರಂಭಗೊಂಡ ಸ್ನಾತಕೋತ್ತರ ಕೇಂದ್ರ ಇದುವರೆಗೆ ಸಹಸ್ರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡಿದೆ ಎಂದು ತಿಳಿಸಿದರು.

    ನಾವು ಗಳಿಸಿದ ಪದವಿಗಳು, ನಾವು ಪಡೆದ ವಿದ್ಯೆ ಸಾರ್ಥಕವಾಗಬೇಕಾದರೆ ನಾವು ಸಮಾಜಮುಖಿಗಳಾಗಬೇಕು, ವಿದ್ಯಾರ್ಥಿಗಳು ತಾವು ಕಲಿತ ವಿದ್ಯೆಯನ್ನು ಇತರರಿಗೆ ಹಂಚಬೇಕು, ಉತ್ತಮ ನಾಗರೀಕರಾಗಬೇಕು ಎಂದರು.

    ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಚಾರ್ಯೆ ಡಾ. ಆರ್.ಎ. ಪು? ಭಾರತಿ ವಿದ್ಯಾರ್ಥಿಗಳು ದುರಭ್ಯಾಸಗಳಿಂದ ದೂರವಿರಬೇಕು, ಹೆತ್ತವರು, ಗುರುಗಳು ಮತ್ತು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಬೇಕು, ಪಡೆದ ಪದವಿಯನ್ನು, ವಿದ್ಯೆಯನ್ನು ಸಮಾಜಕ್ಕಾಗಿ ಬಳಸಬೇಕು ಎಂದು ಕಿವಿ ಮಾತು ಹೇಳಿದರು.

    ಅಂತಿಮ ವ?ದ ವಿದ್ಯಾರ್ಥಿಗಳಿಗೆ ಸಮಾರಂಭದಲ್ಲಿ ನೆನಪಿನ ಕಾಣಿಕೆ ನೀಡಲಾಯಿತು, ಅಂತಿಮ ವ?ದ ವಿದ್ಯಾರ್ಥಿಗಳು ತಮ್ಮ ಕಲಿಕೆ ಅವಧಿಯ ಅನುಭವಗಳನ್ನು ವಿವರಿಸಿದರು, ಆಶಾಕಿರಣ ಅಂದ ಮಕ್ಕಳ ಶಾಲೆಯ ಅಧ್ಯಕ್ಷ ಡಾ.ಜೆ.ಪಿ. ಕೃ?ಗೌಡ ಮತ್ತು ಅವರ ಪುತ್ರಿ ಡಾ. ವ? ಅಭಿ?ಕ್ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.

    ಸಹ ಪ್ರಾಧ್ಯಾಪಕರಾದ ಪ್ರೊ. ಎಂ. ತ್ರಿಪುರ ಮಹೇಶ್ವರ, ಡಾ. ಎಸ್. ಮಹೇಶ್, ಉಪನ್ಯಾಸಕರಾದ ಕೆ.ಸಿ. ಆಶಾ, ದೇವಾನಂದ್, ದಿನೇಶ್, ಬಸವರಾಜ್, ಲೋಕೇಶ್, ರಾಘವೇಂದ್ರ, ವಿದ್ಯಾರ್ಥಿಗಳಾದ ಎಂ.ಕೆ. ಭವಾನಿ, ಅಸ್ಮಬಾನು ಉಪಸ್ಥಿತರಿದ್ದರು.

    The youth should become universal human beings as the national poet Kuvempu wished.

  • ಯುವ ಜನಾಂಗ ಮಾದಕ ವಸ್ತುಗಳ ಚಟಕ್ಕೆ ದಾಸರಾಗಿ ಬಾರದು

    ಯುವ ಜನಾಂಗ ಮಾದಕ ವಸ್ತುಗಳ ಚಟಕ್ಕೆ ದಾಸರಾಗಿ ಬಾರದು

    ಚಿಕ್ಕಮಗಳೂರು: ಯುವ ಜನಾಂಗ ಮಾದಕ ವಸ್ತುಗಳ ಚಟಕ್ಕೆ ದಾಸರಾಗಿ ಆರೋಗ್ಯ, ಗೌರವ ಹಾಳು ಮಾಡಿಕೊಳ್ಳುವುದರಿಂದ ನಿಜವಾಗಿ ನೋವು, ಹಿಂಸೆ ಅನುಭವಿಸುವುದು ಪೋಷಕರು ಮಾತ್ರ. ಇದಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಸಿಇಎನ್ ಪೊಲೀಸ್ ಠಾಣೆಯ ಡಿವೈಎಸ್‌ಪಿ ಜೆ.ಎಸ್.ತಿಪ್ಪೇಸ್ವಾಮಿ ತಿಳಿಸಿದರು.

    ಅವರು ಮಂಗಳವಾರ ನಗರದ ಆದಿಚುಂಚನಗಿರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರೇರಣಾ ಕಾರ್ಯಕ್ರಮದಲ್ಲಿ ಸೈಬರ್ ಅಪರಾಧಗಳು ಮತ್ತು ಮಾದಕ ವಸ್ತುಗಳಿಂದುಂಟಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿ ಮಾತಾಡಿ ಧೂಮಪಾನ, ಮದ್ಯಪಾನದ ಜೊತೆಗೆ ವೈಟ್ನರ್, ಥಿನ್ನರ್, ಸಲೂಷನ್, ಅಯೋಡಿಕ್ಸ್ ಇವುಗಳೆಲ್ಲವೂ ಮಾರುಕಟ್ಟೆಯಲ್ಲಿ ಸುಲಭಕ್ಕೆ ಸಿಗುವ ಮಾದಕ ಪದಾರ್ಥಗಳು. ನಂತರದ್ದು ಗಾಂಜಾ, ಜೊತೆಗೆ ಸಿಂಥಟಿಕ್ ಡ್ರಗ್‌ಗಳಾದ ಅಫೀಮು, ಹೆರಾಯಿನ್, ಕೊಕೇನ್ ಹಾಗೆಯೇ ಎಂಡಿಎಂಎ ಎನ್ನುವ ಮಾತ್ರೆ ರೂಪದ ವಸ್ತು, ಹಾಗೂ ಚಾಕೊಲೇಟ್ ಮಾದರಿಯಲ್ಲೂ ಸಿಗುತ್ತಿದೆ ಎಂದು ವಿವರಿಸಿದರು.

    ಈ ಪೈಕಿ ಸುಲಭವಾಗಿ ಸಿಗುವ ಥಿನ್ನರ್ ಮತ್ತು ಸಲೂಷನ್ ಚಟಕ್ಕೆ ಹಲವಾರು ಯುವಕರು ಬಲಿಯಾಗುತ್ತಿದ್ದಾರೆ. ಅದನ್ನು ಮಾರಾಟ ಮಾಡುವುದಕ್ಕೆ ಯಾವುದೇ ನಿರ್ಬಂಧಗಳಿಲ್ಲದಿರುವುದು ಹಾಗೂ ಅದನ್ನು ಸೇವಿಸಿದವರನ್ನು ಪರೀಕ್ಷೆಗೊಳಪಡಿಸಿದರೆ ನೆಗಟೀವ್ ಫಲಿತಾಂಶ ಬರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲು ತಾಂತ್ರಿಕ ಅಂಶಗಳು ಅಡ್ಡಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಅವುಗಳಿಂದಾಗುವ ಅಪಾಯವನ್ನು ಅರಿತು ಯುವಕರು ಮತ್ತು ಪೋಷಕರೇ ನಿಯಂತ್ರಿಸುವ ಕಡೆ ಗಮನ ಹರಿಸಬೇಕು ಎಂದು ಸಲಹೆ ಮಾಡಿದರು.

    ನಮ್ಮ ದೇಶದಲ್ಲಿ ಮಾದಕ ವ್ಯಸನಿಗಳ ಸಂಖ್ಯೆ ಸುಮಾರು ೭.೫೦ ಕೋಟಿಯಷ್ಟಿದೆ ಇದು ನಮ್ಮ ರಾಜ್ಯದ ಒಟ್ಟು ಜನಸಂಖ್ಯೆಯಷ್ಟಾಗುತ್ತದೆ. ಸಂಶೋಧನಾ ವರದಿಗಳು ಈ ಮಾಹಿತಿಯನ್ನು ಬಹಿರಂಗಪಡಿಸಿವೆ. ಮಾದಕ ವಸ್ತು ಸೇವನೆಯಿಂದ ಬಹು ಅಂಗಾಂಗ ವೈಫಲ್ಯಗೊಂಡು ಪ್ರಾಣ ಕಳೆದುಕೊಳ್ಳುವವರು ಸಾಕಷ್ಟಿದ್ದಾರೆ. ಆದರೆ ಪ್ರತಿದಿನ ಹತ್ತುಮಂದಿ ಮಾದಕ ವ್ಯಸನಿಗಳು ನಮ್ಮ ದೇಶದಲ್ಲಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಆ ಹತ್ತು ಜನರ ಪೈಕಿ ೧೮ ವರ್ಷದೊಳಗಿನ ಇಬ್ಬರು ಇರುತ್ತಾರೆ. ಇದು ಆತಂಕಕಾರಿ ಎಂದು ಹೇಳಿದರು.

    ಇದಲ್ಲದೆ ನಮ್ಮ ದೇಶದ ೨೭೨ ಜಿಲ್ಲೆಗಳನ್ನು ಅತೀ ಹೆಚ್ಚು ಮಾದಕ ವ್ಯಸನಿಗಳನ್ನೊಳಗೊಂಡ ಜಿಲ್ಲೆ ಎಂದು ಘೋಷಣೆ ಆಗಿದೆ. ಕರ್ನಾಟಕದಲ್ಲೂ ಇಂತಹ ೭ ಜಿಲ್ಲೆಗಳನ್ನು ಗುರುತಿಸಲಾಗಿದೆ. ಇದರ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಅಷ್ಟೇ ಅಲ್ಲದೆ ಪ್ರತಿಯೊಬ್ಬ ನಾಗರೀಕರು ಯುದ್ಧೋಪಾದಿಯಲ್ಲಿ ಹೋರಾಡಬೇಕಿದೆ ಎಂದು ಕರೆ ನೀಡಿದರು.

    ಇನ್ನು ಅಂತರ್ಜಾಲವನ್ನು ಬಳಸಿಕೊಂಡು ಮೋಸ, ವಂಚನೆ ಮಾಡುವ ಸೈಬರ್ ಅಪರಾಧಗಳು ಈಗ ಹೆಚ್ಚುತ್ತಿವೆ. ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡುವುದು, ಎಟಿಎಂಗಳಲ್ಲಿ ವಂಚಿಸುವುದು ಇನ್ನಿತರೆ ಆರ್ಥಿಕ ಅಪರಾಧಗಳು ಒಂದೆಡೆಯಾದರೆ ಇನ್ಸ್ಟ್ರಾಗ್ರಾಂ, ಫೇಸ್ ಬುಕ್ ಇನ್ನಿತರೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ-ಮಾಹಿತಿಗಳನ್ನು ಕದ್ದು ಅದನ್ನು ಬಳಸಿಕೊಂಡು ಬ್ಲ್ಯಾಕ್‌ಮೇಲ್ ಮಾಡಿ ಹಣ ದೋಚುವ ಪ್ರಸಂಗಗಳು ಹೆಚ್ಚುತ್ತಿವೆ. ಸಾಕಷ್ಟು ಯುವತಿಯರು ಮತ್ತು ಮಹಿಳೆಯರು ಇದರಿಂದ ಮಾನ, ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹಲವರು ಭಯದಿಂದ ದೊಡ್ಡ ಮಟ್ಟದಲ್ಲಿ ಹಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಪರಿಚಿತರೊಂದಿಗೆ ಫೋಟೋ, ವೀಡಿಯೋಗಳನ್ನು ಹಂಚಿಕೊಳ್ಳುವಾಗ ಎಚ್ಚರಿಕೆಯಿಂದಿರಬೇಕು ಎಂದು ಸಲಹೆ ಮಾಡಿದರು.

    ಮಾದಕ ವಸ್ತು ಸೇವನೆ, ಮಾರಾಟ ಪ್ರಕರಣಗಳು ಕಂಡುಬಂದಲ್ಲಿ ಹಾಗೂ ಸೈಬರ್ ಅಪರಾಧಕ್ಕೆ ತುತ್ತಾದಲ್ಲಿ ಕೂಡಲೇ ನಾರ್ಕೊಟಿಕ್ ಕಂಟ್ರೋಲ್ ಬ್ಯುರೋದ ದೂರವಾಣಿ ಟೋಲ್ ಫ್ರೀ ಸಂಖ್ಯೆ ೧೯೦೮ ಹಾಗೂ ಡ್ರಗ್ ಫ್ರೀ ಕರ್ನಾಟಕ ಮೊಬೈಲ್ ಆಪ್‌ನಲ್ಲಿ ಯಾರೇ ಮಾಹಿತಿ ನೀಡಿದರೂ ಕೂಡಲೇ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ಈ ವೇಳೆ ಎಐಟಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಸಚಿನ್ ಕೆ.ಎಂ., ಉಪ ಪ್ರಾಂಶುಪಾಲರಾದ ಸಿದ್ದಣ್ಣ, ಹಿರಿಯ ಉಪನ್ಯಾಸಕಿ ಮಧುರ ವಿ.ಕೆ. ಉಪಸ್ಥಿತರಿದ್ದರು ಸಹಾಯಕ ಬೋಧಕ ಎನ್. ಸಾಯಿ ನಂದನ್ ಅವರು ಸ್ವಾಗತಿಸಿ ನಿರೂಪಿಸಿದರು.

    The youth should not become slaves to drug addiction.

  • ನಗರದ ನಾಗರೀಕರಿಗೆ ಮೂಲಭೂತ ಸೌಕರ್ಯ ಆದ್ಯತೆ ಮೇಲೆ ಒದಗಿಸಬೇಕು

    ನಗರದ ನಾಗರೀಕರಿಗೆ ಮೂಲಭೂತ ಸೌಕರ್ಯ ಆದ್ಯತೆ ಮೇಲೆ ಒದಗಿಸಬೇಕು

    ಚಿಕ್ಕಮಗಳೂರು: ನಗರಸಭೆ ಕುಡಿಯುವ ನೀರು, ಸ್ವಚ್ಚತೆ, ರಸ್ತೆ, ಚರಂಡಿ, ಬೀದಿದೀಪ ಮುಂತಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಪ್ರಮುಖ ಆದ್ಯತೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ತಿಳಿಸಿದರು.

    ಅವರು ಇಂದು ಜಿಲ್ಲಾ ಆಟದ ಮೈದಾನದ ಸುತ್ತ ಹಾಗೂ ನ್ಯಾಯಾಲಯ, ಎಲ್‌ಐಸಿ ರಸ್ತೆಯಲ್ಲಿ ನಗರಸಭೆಯಿಂದ ಏರ್ಪಡಿಸಲಾಗಿದ್ದ ಸ್ವಚ್ಚತೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಅನುದಾನದ ಕೊರತೆ ಮುಂದಿಟ್ಟುಕೊಂಡು ಜನರ ಅನಿಸಿಕೆಗಳಿಗೆ ತೊಂದರೆಯಾಗಬಾರದು, ನಗರಸಭೆ ಸಿಬ್ಬಂದಿಗಳನ್ನು ಬಳಸಿಕೊಂಡು ಈ ಕೆಲಸ ಕಾರ್ಯಗಳನ್ನು ಮಾಡಬಹುದು ಎಂದು ಸಲಹೆ ನೀಡಿದರು.

    ಸ್ವಚ್ಚತೆ ಮುಕ್ತ ನಗರ, ಸ್ವಚ್ಚತೆಗೆ ಆದ್ಯತೆ ಈ ಬಗ್ಗೆ ನಾಗರೀಕರಲ್ಲಿ ಅರಿವು ಮೂಡಿಸಿ ನಗರದಲ್ಲಿ ಖಾಲಿ ನಿವೇಶನಗಳಲ್ಲಿ ಬೆಳೆದಿರುವ ಗಿಡಗಂಟಿಗಳನ್ನು ತೆರವು ಮಾಡದಿದ್ದರೆ ೫ ಸಾವಿರ ರೂ ದಂಡ ವಿಧಿಸುವುದಾಗಿ ಸಂಬಂಧಪಟ್ಟ ಮಾಲಿಕರಿಗೆ ಸೂಚನಾ ಪತ್ರ ನೀಡಿ ಎಂದು ಸಲಹೆ ನೀಡಿದರು.

    ನಗರದಲ್ಲಿ ಜನಸಂಖ್ಯೆ ಹೆಚ್ಚಳದ ಜೊತೆಗೆ ವಾಹನಗಳ ಸಂಖ್ಯೆಯೂ ಹೆಚ್ಚಿದೆ. ಇದರಿಂದ ಪಾರ್ಕಿಂಗ್ ಸಮಸ್ಯೆ ಎದುರಾಗಿದ್ದು, ಈ ಬಗ್ಗೆ ಜಾಗೃತಿ ಮೂಡಿಸಿ ಜೊತೆಗೆ ಅಂಗಡಿ ಮಾಲಿಕರು ಫುಟ್‌ಪಾತ್ ಮೇಲೆ ವಸ್ತುಗಳನ್ನು ಇಟ್ಟು ಜನರ ಓಡಾಟಕ್ಕೆ ತೊಂದರೆಯಾಗಿದ್ದು, ಈ ಕುರಿತು ಕ್ರಮ ಜರುಗಿಸಬೇಕೆಂದು ಅಧ್ಯಕ್ಷರಿಗೆ ಸೂಚಿಸಿದರು.

    ಸಂತೆ ಮಾರ್ಕೆಟ್‌ನಲ್ಲಿ ಜನರ ಓಡಾಟಕ್ಕೆ ತೊಂದರೆಯಾಗುವಂತೆ ಕಟ್ಟೆಯ ಮುಂಭಾಗದಲ್ಲಿ ತರಕಾರಿ ಇಡುತ್ತಿದ್ದಾರೆ. ಇದಕ್ಕೆ ನಗರಸಭೆ ಕಡಿವಾಣ ಹಾಕಬೇಕು, ಸ್ವಚ್ಚತೆಗೆ ಆದ್ಯತೆ ನೀಡಬೇಕು. ಈ ಎಲ್ಲಾ ಕಾರ್ಯಗಳು ಮುಂದಿನ ೯ ತಿಂಗಳ ಅಧಿಕಾರವಧಿಯಲ್ಲಿ ನಿರಂತರವಾಗಿ ಸಾಗಬೇಕು ಎಂದು ಎಚ್ಚರಿಸಿದರು.

    ನಗರದ ಅಭಿವೃದ್ಧಿಗೆ ಪಕ್ಷಾತೀತವಾಗಿ ತಾವೂ ಸೇರಿದಂತೆ ಶಾಸಕ ಹೆಚ್.ಡಿ. ತಮ್ಮಯ್ಯ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹಾಗೂ ನಗರಸಭೆ ಸಿಬ್ಬಂದಿಯೊಂದಿಗೆ ನಗರ ಪ್ರದಕ್ಷಣೆ ಕೈಗೊಳ್ಳುತ್ತೇವೆ. ಇದನ್ನು ಸಾರ್ವಜನಿಕವಾಗಿ ತೋರಿಸುವ ಮೂಲಕ ಲಂಚಮುಕ್ತ ನಗರಸಭೆಯನ್ನಾಗಿಸಲು ಸಂಕಲ್ಪ ಮಾಡಬೇಕೆಂದು ಹೇಳಿದರು.

    ಪೌರಕಾರ್ಮಿಕರ ಹಲವು ಬೇಡಿಕೆಗಳ ಬಗ್ಗೆ ಶಾಸಕರ ನೇತೃತ್ವದಲ್ಲಿ ನಿಯೋಗ ಹೋಗಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಬಗೆಹರಿಸುವ ಜೊತೆಗೆ ನಗರಸಭೆಗೆ ವಿಶೇಷ ಅನುದಾನ ನೀಡುವಂತೆ ಮನವಿ ಮಾಡುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

    ನಗರಸಭೆ ನೂತನ ಅಧ್ಯಕ್ಷೆ ಶೀಲಾದಿನೇಶ್ ಮಾತನಾಡಿ, ತಮ್ಮ ಅಧಿಕಾರವಧಿಯಲ್ಲಿ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ಭರವಸೆ ನೀಡಿದ ಅವರು, ಈ ನಮ್ಮ ಕಾರ್ಯಕ್ಕೆ ಪೌರಕಾರ್ಮಿಕರು ಸಾತ್ ನೀಡಿದ್ದು, ನಾಯಕರಾದ ಎಸ್.ಎಲ್ ಭೋಜೇಗೌಡರು ಚಾಲನೆ ನೀಡಿದ್ದಾರೆಂದರು.

    ಸದಸ್ಯ ಕುಮಾರ್ ಮಾತನಾಡಿ, ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ಯೋಜನೆ ರೂಪಿಸಲಾಗಿದ್ದು ಜೊತೆಗೆ ಇಂದಿನಿಂದ ಕಸಮುಕ್ತ ನಗರ ಯೋಜನೆಗೆ ಚಾಲನೆ ನೀಡಲಾಗಿದೆ ಎಂದರು.

    ಕಸಮುಕ್ತ ನಗರ ಯೋಜನೆಗೆ ಎಲ್ಲಾ ಪೌರ ಕಾರ್ಮಿಕರು ಕೈಜೋಡಿಸಿದ್ದಾರೆ. ಶಾಸಕರು, ಎಂಎಲ್‌ಸಿ ನಮ್ಮೊಂದಿಗಿದ್ದಾರೆ. ಮುಂದಿನ ದಿನಗಳಲ್ಲಿ ಆರೋಗ್ಯಕರ ಪರಿಸರವನ್ನು ಕಾಪಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪೌರಾಯುಕ್ತ ಬಿ.ಸಿ. ಬಸವರಾಜ್, ಆರೋಗ್ಯ ನಿರೀಕ್ಷರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

    Basic infrastructure should be provided to the citizens of the city on a priority basis.

  • ಅಹಿಂದ ವರ್ಗದ ಜನಪರವಾದ ಗಟ್ಟಿ ಧ್ವನಿ ಹೋರಾಟ ಮಾಡಿದವರು ಸಿದ್ದರಾಮಯ್ಯ

    ಅಹಿಂದ ವರ್ಗದ ಜನಪರವಾದ ಗಟ್ಟಿ ಧ್ವನಿ ಹೋರಾಟ ಮಾಡಿದವರು ಸಿದ್ದರಾಮಯ್ಯ

    ಚಿಕ್ಕಮಗಳೂರು: ಅಹಿಂದ ವರ್ಗದ ಜನರ ಪರವಾಗಿ ಗಟ್ಟಿ ಧ್ವನಿಯಿಂದ ಹೋರಾಟ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದಲ್ಲಿ ಎಲ್ಲಾ ವರ್ಗದ ಬಡ ಜನರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು.

    ಅವರು ನಗರದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಅಹಿಂದ ಅಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾದ ತ್ರಿಭುವನ್ ಎತ್ತಿನಮನೆ ಅವರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿ ಅಹಿಂದ ನಾಯಕರಾದ ಸಿದ್ದರಾಮಯ್ಯನವರು ರಾಜ್ಯದಲ್ಲಿ ಎರಡು ಬಾರಿ ದಾಖಲೆಯ ಮುಖ್ಯಮಂತ್ರಿಗಳಾಗಿದ್ದಾರೆ. ಸರ್ವರಿಗೂ ಸಮಪಾಲು, ಸರ್ವರಿಗೂ ಸಮ ಬಾಳು ತತ್ವದಡಿ ೫ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಎಲ್ಲಾ ವರ್ಗದ ಬಡವರ ಬದುಕನ್ನು ಹಸನುಗೊಳಿಸಿದ್ದಾರೆಂದು ಶ್ಲಾಘಿಸಿದರು.

    ಎಐಸಿಸಿ ಯಿಂದ ಸಿದ್ದರಾಮಯ್ಯನವರನ್ನು ಹಿಂದುಳಿದ ನಾಯಕರನ್ನಾಗಿ ಆಯ್ಕೆಮಾಡಿದ್ದಾರೆ ಜೊತೆಗೆ ಶೋಷಿತ ವರ್ಗದ ಜನರ ಪರವಾಗಿ ಅಹಿಂದ ಜನಾಂಗದ ಏಳಿಗೆಗೆ ಶ್ರಮಿಸಲಿ ಎಂದು ಶುಭ ಹಾರೈಸಿದರು.

    ಮಾಜಿ ಸಚಿವ ಬಿ.ಬಿ. ನಿಂಗಯ್ಯ ಮಾತನಾಡಿ, ಜಿಲ್ಲಾ ಅಹಿಂದ ಅಧ್ಯಕ್ಷರಾಗಿ ತ್ರಿಭುವನ್ ಆಯ್ಕೆಯಾಗಿರುವುದು ಎಲ್ಲರಿಗೂ ಸಂತೋಷವಾಗಿದೆ, ದೇಶದಲ್ಲಿ ಧ್ವನಿ ಇಲ್ಲದ ಜನರ ಪರವಾಗಿ ಡಾ. ಬಿ.ಆರ್. ಅಂಬೇಡ್ಕರ್, ಜಗಜ್ಯೋತಿ ಬಸವಣ್ಣ, ದಾಸಶ್ರೇಷ್ಟ ಕನಕದಾಸರು, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕುವೆಂಪುರವರು ಶೋಷಿತರ ಪರವಾಗಿ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ ಮಹನೀಯರಾಗಿದ್ದಾರೆಂದು ಹೇಳಿದರು.

    ಮಾಜಿ ಮುಖ್ಯಮಂತ್ರಿ ಡಿ. ದೇವರಾಜ್ ಅರಸ್ ನಂತರ ಎಲ್ಲಾ ಶೋಷಿತ ಸಮುದಾಯಗಳ ನಾಯಕರಾಗಿ ಸಿದ್ದರಾಮಯ್ಯನವರು ಕೆಲಸ ಮಾಡುತ್ತಿದ್ದಾರೆ. ಇವರ ಅಧಿಕಾರವಧಿಯಲ್ಲಿ ಯಾವುದೇ ಸಮುದಾಯಕ್ಕೆ ಅವಮಾನ ಮಾಡಿಲ್ಲ, ಉದಾಸೀನತೆ ತೋರಿಲ್ಲ ಎಂದರು. ಅಹಿಂದ ರಾಷ್ಟ್ರೀಯ ನಾಯಕರಾಗಿ ಸಿದ್ದರಾಮಯ್ಯನವರನ್ನು ಆಯ್ಕೆಮಾಡಿರುವುದನ್ನು ಬಿಜೆಪಿ ಮುಖಂಡರು ಸಹಿಸಿಕೊಳ್ಳದೆ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವುದನ್ನು ಖಂಡಿಸುತ್ತೇನೆ ಎಂದ ಅವರು, ಸಿದ್ದರಾಮಯ್ಯನವರ ದಾರಿಯಲ್ಲಿ ತ್ರಿಭುವನ್ ಸಾಗಬೇಕು, ನಾವೆಲ್ಲಾ ನಿಮ್ಮೊಂದಿಗೆ ಇರುತ್ತೇವೆಂದು ಭರವಸೆ ನೀಡಿದರು.

    ಕೆಪಿಸಿಸಿ ವಕ್ತಾರ ಹೆಚ್.ಹೆಚ್. ದೇವರಾಜ್ ಮಾತನಾಡಿ, ಸಾಮಾಜಿಕ ನ್ಯಾಯದ ಪರಿಕಲ್ಪನೆಯಡಿಯಲ್ಲಿ ಹಿಂದುಳಿದ ವರ್ಗ ಇಂದು ಜನಪರವಾದ ಕೆಲಸ ಮಾಡುತ್ತಿದೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಮಾಜವಾದಿ ನೆಲೆಯಿಂದ ಬಂದವರು. ಅಹಿಂದ ಸಂಘಟನೆ ಸ್ಥಾಪನೆ ಮಾಡಿ ಈ ರಾಜ್ಯಕ್ಕೆ ಹೊಸ ನಾಂದಿ ಹಾಡಿದರು ಎಂದು ಹೇಳಿದರು. ಸಿದ್ದರಾಮಯ್ಯನವರು ರಾಜ್ಯ ಮತ್ತು ರಾಷ್ಟ್ರಕಂಡ ಅಪ್ರತಿಮ ನಾಯಕ, ರೈತ ಕಾರ್ಮಿಕ, ದಲಿತ, ಅಲ್ಪಸಂಖ್ಯಾತರ ನಾಯಕರಾಗಿದ್ದು, ಅದೇ ರೀತಿ ಜೊತೆ ಎಲ್ಲಾ ವರ್ಗದ ಜನರ ವಿಶ್ವಾಸವನ್ನು ಗಳಿಸಬೇಕು, ಚಿಕ್ಕ ವಯಸ್ಸಿನಲ್ಲೇ ದೊಡ್ಡ ಜವಾಬ್ದಾರಿ ಲಭಿಸಿದೆ. ಅಹಿಂದ ರಾಷ್ಟ್ರೀಯ ಅಧ್ಯಕ್ಷರಾಗಿ ಸಿಎಂ ಸಿದ್ದರಾಮಯ್ಯ ಆಯ್ಕೆಯಾಗಿ ಹೊರಹೊಮ್ಮಿರುವ ಬೆನ್ನಲ್ಲೇ ನಿಮಗೆ ಈ ಅವಕಾಶ ಸಿಕ್ಕಿದೆ ಎಂದು ಬಣ್ಣಿಸಿದರು.

    ಸೈದ್ಧಾಂತಿಕ ಹಿನ್ನೆಲೆಯಲ್ಲಿ ಸಂಘಟನೆ ಮಾಡಬೇಕು. ಅದಕ್ಕೆ ಪೂರಕವಾದ ಎಲ್ಲಾ ರೀತಿಯ ಬೆಂಬಲ ಕೊಡುತ್ತೇವೆ, ಅಹಿಂದ ಅಂದರೆ ಒಂದು ಜಾತಿಗೆ ಸೀಮಿತವಾಗದೆ ತುಳಿತಕ್ಕೊಳಗಾದ ಎಲ್ಲಾ ವರ್ಗದ ಜನರನ್ನು ಸಂಘಟನೆ ಮಾಡಿ, ಎಲ್ಲೂ ಅತೀರೇಖಕ್ಕೆ ಹೋಗದೆ ಶಾಂತಿಯಿಂದ ವರ್ತಿಸಬೇಕೆಂದು ಕಿವಿಮಾತು ಹೇಳಿದರು.

    ಮಾಜಿ ವಿಧಾನ ಪರಿಷತ್ ಸದಸ್ಯೆ ಗಾಯಿತ್ರಿ ಶಾಂತೇಗೌಡ ಮಾತನಾಡಿ, ಸಿಎಂ ಸಿದ್ದರಾಮಯ್ಯನವರು ಹಿಂದುಳಿದ ವರ್ಗಗಳ ಒಕ್ಕೂಟಗಳ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಇದೇ ಸಂದರ್ಭದಲ್ಲಿ ಅಹಿಂದ ಜಿಲ್ಲಾಧ್ಯಕ್ಷರಾಗಿ ತ್ರಿಭುವನ್ ಆಯ್ಕೆಯಾಗಿರುವುದು ಸಂತೋಷದ ವಿಚಾರ ಎಂದರು. ಈ ಸಂಘಟನೆಯನ್ನು ಗಟ್ಟಿಗೊಳಿಸುವ ಜೊತೆಗೆ ಎಲ್ಲಾ ವರ್ಗದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನೆ ರೂಪಿಸಲು ಮುಂದಾಗಬೇಕೆಂದು ಸಲಹೆ ನೀಡಿದರು.

    ಸರ್ವ ಜನರ ಪ್ರೀತಿಗೆ ಪಾತ್ರರಾಗಿರುವ ಸಿದ್ದರಾಮಯ್ಯ ಅವರನ್ನು ಬಿಜೆಪಿ ಮುಖಂಡರು ಅವಹೇಳನ ಮಾಡಿರುವುದು ಖಂಡನೀಯ, ಸಿದ್ದರಾಮಯ್ಯನವರ ಆಚಾರ-ವಿಚಾರಗಳನ್ನು ಎಲ್ಲಾ ರಾಜಕಾರಣಿಗಳು ಮೈಗೂಡಿಸಿಕೊಳ್ಳುವ ಅಗತ್ಯ ಇದೆ ಎಂದು ಹೇಳಿದರು.

    ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಅಹಿಂದ ಸಂಘಟನೆಗಳನ್ನು ಸ್ಥಾಪನೆ ಮಾಡಿ, ಹಿರಿಯರ ಮಾರ್ಗದರ್ಶನ ಪಡೆದು ಮುಂದುವರೆಯಿರಿ ಎಂದು ತಿಳಿಸಿದರು.
    ನೂತನ ಅಧ್ಯಕ್ಷ ತ್ರಿಭುವನ್ ಮಾತನಾಡಿ, ಅಹಿಂದ ಸಂಘಟನೆ ರಥವನ್ನು ಎಳೆಯಲು ಅವಕಾಶ ಮಾಡಿಕೊಟ್ಟ ಎಲ್ಲಾ ನನ್ನ ಹಿರಿಯರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಜಿಲ್ಲೆಯಲ್ಲಿ ಅಹಿಂದ ಸಂಘಟನೆಯನ್ನು ಗಟ್ಟಿಗೊಳಿಸಲು ಶ್ರಮಿಸುವುದಾಗಿ ಭರವಸೆ ನೀಡಿದರು.

    ಇದೇ ಸಂದರ್ಭದಲ್ಲಿ ಮುಖಂಡರಾದ ಎ.ಎನ್. ಮಹೇಶ್, ರೇಖಾ ಹುಲಿಯಪ್ಪಗೌಡ, ನಯಾಜ್ ಅಹಮದ್ ಮಾತನಾಡಿದರು. ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದು ನೂತನ ಅಧ್ಯಕ್ಷರಿಗೆ ಶುಭಾಶಯ ಕೋರಿದರು.

    Siddaramaiah was the one who fought loudly for the people of the non-Hind community.

  • ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿ ಜಾರಿಗೊಳಿಸಲು ಮನವಿ

    ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿ ಜಾರಿಗೊಳಿಸಲು ಮನವಿ

    ಚಿಕ್ಕಮಗಳೂರು: ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿ ಕಡ್ಡಾಯಗೊಳಿಸಬೇಕು ಹಾಗೂ ತೃತೀಯ ಭಾಷೆ ಹಿಂದಿಯನ್ನು ಪಠ್ಯಕ್ರಮದಿಂದ ಹೊರಗಿಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಪದಾಧಿಕಾರಿಗಳು ಜಿಲ್ಲಾಡಳಿತ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

    ಈ ಕುರಿತು ಮಾತನಾಡಿದ ವೇದಿಕೆ ಜಿಲ್ಲಾಧ್ಯಕ್ಷ ಕೆಂಪನಹಳ್ಳಿ ಅಶೋಕ್ ತೃತೀಯ ಭಾಷೆಯಾದ ಹಿಂದಿ ಯು ರಾಜ್ಯದ ವಿದ್ಯಾರ್ಥಿಗಳಿಗೆ ಅನಗತ್ಯವಾಗಿ ಹೇರಲಾಗುತ್ತಿದೆ. ಕಳೆದ ೨೦೨೪ನೇ ಸಾಲಿನ ಎಸ್ ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ೯೦,೭೯೪ ವಿದ್ಯಾರ್ಥಿಗಳು ಹಿಂದಿ ವಿ?ಯದಲ್ಲಿ ಅನುತ್ತೀರ್ಣರಾಗಿದ್ದು, ಈ ವ? ವು ಸಂಖ್ಯೆ ಲಕ್ಷಕ್ಕಿಂತ ಅಧಿಕವಾಗಿದ್ದು ಹಿಂದಿಯ ಕಡ್ಡಾಯ ಶಿಕ್ಷಣದಿಂದ ಮಕ್ಕಳಿಗೆ ಉಂಟಾಗುತ್ತಿರುವ ಒತ್ತಡವನ್ನು ತೋರಿಸುತ್ತದೆ ಎಂದರು.

    ತಮಿಳುನಾಡಿನಲ್ಲಿ ೧೯೬೮ ರಿಂದಲೇ ತ್ರಿಬಾಷಾ ನೀತಿಯನ್ನು ತಿರಸ್ಕರಿಸಿದೆ. ತಮಿಳು ಮತ್ತು ಇಂಗ್ಲೀಷ್ ಭಾಷೆಗಳನ್ನು ಒಳಗೊಂಡ ದ್ವಿಭಾಷಾ ನೀತಿಯನ್ನು ಅಳವಡಿಸಿಕೊಂಡಿದೆ. ಮಹಾರಾಷ್ಟ್ರ ಕೂಡಾ ತ್ರಿಭಾಷಾ ನೀತಿಯನ್ನು ರದ್ದುಗೊಳಿಸಿ ನಿರ್ಧಾರವನ್ನು ಕೈಗೊಂಡಿದೆ. ಹೀಗಾಗಿ ರಾಜ್ಯದಲ್ಲಿಯೂ ತ್ರಿಭಾಷಾ ನೀತಿಯಿಂದ ಯಾವುದೇ ಲಾಭವಿಲ್ಲ. ಜೊತೆಗೆ ಕನ್ನಡಿಗರಿಗೆ ಉದ್ಯೋಗವು ಲಭಿಸುವುದಿಲ್ಲ ಎಂದರು.

    ತೃತೀಯ ಭಾಷೆ ಹಿಂದಿ ತೆಗೆದುಹಾಕುವುದರಿಂದ ವಿದ್ಯಾರ್ಥಿಗಳು ಕನ್ನಡ, ಇಂಗ್ಲೀಷ್ ಭಾಷೆಗಳ ಜೊತೆ ಗೆ ಇತರ ವಿಷಯಗಳ ಮೇಲೆ ಹೆಚ್ಚಿನ ಗಮನಹರಿಸುತ್ತಾರೆ. ಕನ್ನಡ ಭಾಷೆಗೆ ಆದ್ಯತೆ ನೀಡುವುದರಿಂದ ರಾಜ್ಯ ದ ಭಾಷಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೆ ಉಳಿಸಿದಂತಾಗುತ್ತದೆ ಎಂದು ತಿಳಿಸಿ ದರು.

    ದ್ವಿಭಾಷಾ ನೀತಿಯು ಶಿಕ್ಷಣ ಸಂಪನ್ಮೂಲಗಳನ್ನು ಕನ್ನಡ ಮತ್ತು ಇಂಗ್ಲೀಷ್ ಕೇಂದ್ರೀಕರಿಸಲು ಅನುವು ಮಾಡಿಕೊಡುತ್ತದೆ. ಇದರಿಂದ ಶಿಕ್ಷಣದ ಗುಣಮಟ್ಟ ಸುಧಾರಿಸುತ್ತದೆ. ಉತ್ತರ ಭಾರತದ ಅನೇಕ ರಾಜ್ಯಗಳು ದ್ವಿಭಾಷಾ ನೀತಿಯನ್ನು ಅನುಸರಿಸುತ್ತಿದ್ದು ರಾಜ್ಯಕ್ಕೂ ಈ ರೀತಿಯ ಸಮಾನತೆಯನ್ನು ಒದಗಿಸಬೇಕು ಎಂದು ಹೇಳಿದರು.

    ರಾಜ್ಯದ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳಲ್ಲಿಯೂ ಪ್ರಥಮ ಭಾಷೆಯಾಗಿ ಕನ್ನಡವನ್ನೇ ಕಡ್ಡಾ ಯಗೊಳಿಸಬೇಕು. ಕನ್ನಡ ಮಾಧ್ಯಮ ಶಾಲೆಗಳನ್ನು ಬಲಪಡಿಸಿ, ಉತ್ತಮ ಗುಣಮಟ್ಟದ ಇಂಗ್ಲೀಷ್ ಶಿಕ್ಷಣ ವನ್ನು ನೀಡಬೇಕು. ತ್ರಿಭಾಷಾ ನೀತಿಯಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಉಂಟಾಗುತ್ತಿರುವ ಅನಗತ್ಯ ಒತ್ತಡ ವನ್ನು ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು.

    ಈ ಸಂದರ್ಭದಲ್ಲಿ ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಮಾರ್ ಆರ್.ಶೆಟ್ಟಿ, ಉಪಾಧ್ಯಕ್ಷ ದಶರಥ ರಾಜ್‌ಅರಸ್, ಸಂಘಟನಾ ಕಾರ್ಯದರ್ಶಿ ರುದ್ರೇಶ್, ತಾಲ್ಲೂಕಲು ಅಧ್ಯಕ್ಷೆ ಪೂರ್ಣಿಮಾ, ಕಡೂರು ಅಧ್ಯಕ್ಷ ಅಶೋಕ್‌ಶೆಟ್ಟಿ, ಮುಖಂಡರುಗಳಾದ ಯುವರಾಜ್, ಮಹಮ್ಮದ್ ಹನೀಫ್, ಪಂಚಾಕ್ಷರಿ ಇದ್ದರು.

    Appeal to implement bilingual policy in the state’s education system

  • ಶ್ಯಾಮಪ್ರಸಾದ್ ಮುಖರ್ಜಿ ಜನ್ಮದಿನ – ಸಸಿನೆಟ್ಟು ಆಚರಣೆ

    ಶ್ಯಾಮಪ್ರಸಾದ್ ಮುಖರ್ಜಿ ಜನ್ಮದಿನ – ಸಸಿನೆಟ್ಟು ಆಚರಣೆ

    ಚಿಕ್ಕಮಗಳೂರು: ರಾಷ್ಟ್ರದಲ್ಲಿ ಭಾಜಪ ತನ್ನ ಬೇರುಗಳನ್ನು ಭದ್ರವಾಗಿ ನೆಲೆಯೂರಿಸಲು ಸಾಧ್ಯವಾಗಿದ್ದರೆ ಅದು ಡಾ|| ಶ್ಯಾಮಪ್ರಸಾದ್ ಮುಖರ್ಜಿಯವರ ತ್ಯಾಗ ಮತ್ತು ಬದ್ಧತೆಯಿಂದ ಎಂದು ಬಿಜೆ ಪಿ ನಗರಾಧ್ಯಕ್ಷ ಕೆ.ಎಸ್.ಪುಷ್ಪರಾಜ್ ಹೇಳಿದರು.

    ನಗರದ ಕೆಂಪನಹಳ್ಳಿ ಸಮೀಪದಲ್ಲಿ ಬಿಜೆಪಿ ನಗರ ಮಂಡಲದಿಂದ ನಡೆದ ಡಾ|| ಶ್ಯಾಮ ಪ್ರಸಾದ್ ಮುಖರ್ಜಿ ಜನ್ಮದಿನ ಅಂಗವಾಗಿ ಭಾನುವಾರ ಸಸಿ ನೆಟ್ಟು ಅವರು ಮಾತನಾಡಿ ಭಾರತೀಯ ಸಂಸ್ಕೃತಿಯ ಆಧಾರದ ಮೇಲೆ ದೇಶವನ್ನು ಪುನರ್ ನಿರ್ಮಾಣ ಮಾಡುವ ಹಾಗೂ ಜಗ ತ್ತಿನಲ್ಲಿ ಭಾರತವನ್ನು ಪ್ರಬಲ ರಾಷ್ಟ್ರವನ್ನಾಗಿಸುವ ಗುರಿ ಇಟ್ಟುಕೊಂಡು, ಆ ಮಹಾನ್ ಕಾರ್ಯಕ್ಕೆ ತಮ್ಮ ಬದು ಕನ್ನು ಸವೆಸಿದ ಮುಖರ್ಜಿ ಅವರು ಶ್ರೇಷ್ಟ ವಿದ್ವಾಂಸರು, ರಾಜನೀತಿ ತಜ್ಞರಾಗಿದ್ದರು ಎಂದರು.

    ನೆರೆದೇಶದ ಹಿಂದುಗಳ ಮೇಲೆ ನಡೆದ ದೌರ್ಜನ್ಯಕ್ಕೆ ಕಿಡಿಕಾಡಿದ ಅವರು ಮಂತ್ರಿ ಮಂಡಲಕ್ಕೆ ರಾಜೀ ನಾಮೆ ನೀಡಿದ್ದರು. ನೀತಿ, ತತ್ವದ ಆಧಾರದ ಮೇಲೆ ಮಂತ್ರಿ ಪದವಿ ತ್ಯಾಗ ಮಾಡಿದ ಸ್ವಾತಂತ್ರ್ಯ ಭಾರತದ ಪ್ರಮುಖ ನಾಯಕರು ಎಂದ ಅವರು ಭಾರತೀಯ ರಾಜಕೀಯ ಕ್ಷೇತ್ರಕ್ಕೆ ಮುಖರ್ಜಿಯವರು ನೀಡಿದ ಕೊ ಡುಗೆ ಅಪಾರವಾಗಿದೆ ಎಂದರು.

    ದೇಶದ ಪರಿಸ್ಥಿತಿ ಅಧೋಗತಿಗೆ ಇಳಿದಾಗ, ರಾಜಕೀಯ ಅಸ್ಥಿರತೆ, ಆಡಳಿತ ದೋಷ ಕಂಡಾಗ ಅವಿರ ತವಾಗಿ ಶ್ರಮಿಸಿ ರಾಷ್ಟ್ರದಲ್ಲಿ ಜನಸಂಘ ಎಂಬ ಹೊಸ ಪಕ್ಷಕ್ಕೆ ನಾಂದಿ ಹಾಡಿದವರು ಮುಖರ್ಜಿ. ೧೯೫೩ ರಲ್ಲಿ ಕಾಶ್ಮೀರವನ್ನು ಭಾರತದಲ್ಲಿ ಉಳಿಸಲು ನಡೆಸಿದ ಹೋರಾಟದಲ್ಲಿ ಮುಖರ್ಜಿಯವರು ನಿಗೂಢ ರೀತಿಯಲ್ಲಿ ಸಾವನ್ನಪ್ಪಿದರು ಎಂದರು.

    ನಗರಸಭೆ ಸದಸ್ಯೆ ಲಲಿತಾ ರವಿನಾಯ್ಕ್ ಮಾತನಾಡಿ ಮುಖರ್ಜಿಯವರ ಆದರ್ಶ, ತ್ಯಾಗ, ಬಲಿದಾನ ವ್ಯರ್ಥವಾಗದಂತೆ ದೇಶದ ಅಖಂಡತೆಯನ್ನು ಉಳಿಸಿ, ದೇಶವನ್ನು ಕಟ್ಟಿಬೆಳೆಸುವ ಪ್ರಯತ್ನ ಪ್ರತಿಯೊಬ್ಬರು ಮಾಡಿದಾಗ ಮುಖರ್ಜಿಯವರ ಶ್ರಮಕ್ಕೆ ಪ್ರತಿಫಲ ದೊರೆಯಲಿದೆ ಎಂದರು.

    ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರುಗಳಾದ ರವಿನಾಯ್ಕ್, ಇಂದಿರಾ, ಜಯಪ್ರಕಾಶ್, ವಿಶಾಲ, ಚೇತನ್, ವಿನಯ್, ರಂಗಸ್ವಾಮಿ, ನವೀನ್, ಮರಿಯಪ್ಪ ಮತ್ತಿತರರಿದ್ದರು.

    Shyama Prasad Mukherjee’s Birthday – Planting a sapling and celebrating

  • ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಅಪ್ಪು ಉದ್ಯಾನವ ಉದ್ಘಾಟನೆ

    ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಅಪ್ಪು ಉದ್ಯಾನವ ಉದ್ಘಾಟನೆ

    ಚಿಕ್ಕಮಗಳೂರು: ನಗರದ ಹೌಸಿಂಗ್ ಬೋರ್ಡ್‌ನ ೫ ನೇ ಹಂತದಲ್ಲಿ ಗೃಹಮಂಡಳಿ ಅಭಿವೃದ್ಧಿ ವೇದಿಕೆ ವತಿಯಿಂದ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಅಭಿವೃದ್ಧಿಪಡಿಸಲಾಗಿರುವ ಅಪ್ಪು ಉದ್ಯಾನವನವನ್ನು ಶಾಸಕ ಎಚ್.ಡಿ.ತಮ್ಮಯ್ಯ ಭಾನುವಾರ ಉದ್ಘಾಟಿಸಿದರು.

    ಈ ವೇಳೆ ಮಾತನಾಡಿದ ಶಾಸಕರು, ನಗರದ ಹೌಸಿಂಗ್ ಬೋರ್ಡ್ ಮತ್ತು ಕಲ್ಯಾಣ ನಗರ ಬಡಾವಣೆಗಳು ಅತೀ ವೇಗವಾಗಿ ಬೆಳೆಯುತ್ತಿವೆ.,  ಸ್ತೀರ್ಣದಲ್ಲೂ ವಿಶಾಲವಾಗಿರುವುದರಿಂದ ವಾರ್ಡ್ ಸದಸ್ಯರು ಹಾಗೂ ಶಾಸಕರುಗಳಿಗೆ ಅಭಿವೃದ್ಧಿ ಪಡಿಸುವುದು ಸವಾಲಿನ ಕೆಲಸವಾಗಿರುತ್ತದೆ. ಕಳೆದ ೨೦ ವರ್ಷ ಶಾಸಕರಾಗಿದ್ದಾಗ ಸಿ.ಟಿ.ರವಿ ಅವರು ಕೈಗೊಂಡಿದ್ದ ಅಭಿವೃದ್ಧಿ ಕೆಲಸಗಳನ್ನು ಯಾವುದೇ ಪಕ್ಷ ಬೇಧವಿಲ್ಲದೆ, ಮತ್ಸರವಿಲ್ಲದೆ ಅಭಿನಂದಿಸುತ್ತೇವೆ ಎಂದರು.

    ನಾವು ಆಯ್ಕೆಯಾಗಿ ಎರಡು ವರ್ಷಗಳಾಗಿದೆ. ಈಗಾಗಲೇ ಆಧ್ಯತೆ ಮೇರೆಗೆ ಕಲ್ಯಾಣ ನಗರ ಮತ್ತು ಗೃಹ ಮಂಡಳಿ ಬಡಾವಣೆಯನ್ನು ಅಭಿವೃದ್ಧಿಗೆ ಕೈಗೆತ್ತಿಕೊಂಡಿದ್ದೇವೆ. ಅದರ ಫಲಿತಾಂಶ ಬರಲು ಇನ್ನೆರಡು ವರ್ಷ ಕಾಯಬೇಕಾಗುತ್ತದೆ. ಆ ಸಂದರ್ಭದಲ್ಲಿ ನಾವು ಮಾಡಿದ ಕೆಲಸವನ್ನು ನೆನಪಿಸಿಕೊಳ್ಳಬೇಕು ಎಂದು ಕೋರಿದರು.

    ಉದ್ಯಾನವನಗಳನ್ನು ಸಾರ್ವಜನಿಕ ಪಾಲುದಾರಿಕೆಯಲ್ಲಿ ಅಭಿವೃದ್ಧಿಪಡಿಸುವುದು ಹೆಮ್ಮೆಯ ವಿಚಾರ. ಈಗಾಗಲೆ ಎರಡೂ ಬಡಾವಣೆಯಲ್ಲಿ ಅಭಿವೃದ್ಧಿಗಾಗಿ ನಾಗರೀಕ ಸಮಿತಿಗಳನ್ನು ಮಾಡಿಕೊಂಡಿವೆ. ಇವೆರಡೂ ಸ್ವಚ್ಛತೆ ವಿಚಾರದಲ್ಲೂ ನಗರಸಭೆಗೆ ಸಾಕಷ್ಟು ಸಹಕಾರ ನೀಡುತ್ತಿವೆ. ಇದು ನಗರದ ೩೫ ವಾರ್ಡ್‌ಗಳಿಗೂ ಮಾದರಿ ಎಂದರು.

    ಕಣಿವೆ ಯಿಂದ ಕತ್ರಿಮಾರಮ್ಮ ದೇವಸ್ಥಾನದ ವರೆಗೆ ಬೀದಿ ದೀಪ ಅಳವಡಿಸುವ ಕಾಮಗಾರಿ ತಾಂತ್ರಿಕ ಕಾರಣದಿಂದಾಗಿ ಮುಂದಕ್ಕೆ ಹೋಗಿದೆ. ಸಧ್ಯದಲ್ಲೇ ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದರು.

    ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ, ಸಣ್ಣ ಕೆಲಸಕ್ಕೂ ನಗರಸಭೆ ಸದಸ್ಯರು, ಆಯುಕ್ತರು, ಶಾಸಕರು, ಸರ್ಕಾರವನ್ನು ಹುಡುಕಿಕೊಂಡು ಹೋಗುವ ಸಂದರ್ಭದಲ್ಲಿ ಇಲ್ಲಿನ ನಾಗರೀಕ ಸಮಿತಿ ತಾವೇ ಆಸಕ್ತಿ ವಹಿಸಿ ಅಪ್ಪು ಉದ್ಯಾನವನವನ್ನು ಅಭಿವೃದ್ಧಿ ಪಡಿಸಿ ನಂತರ ನಮ್ಮನ್ನು ಕರೆಸಿದ್ದಾರೆ. ಅದಕ್ಕಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

    ನಗರಸಭೆ ನಿಧಿಯಲ್ಲಿ ಬೇಲಿ ಮತ್ತು ಇಂಟರ್ ಲಾಕಿಂಗ್ ಬ್ರಿಕ್ಸ್‌ಗಳನ್ನು ಹಾಕಿಸಿಕೊಡಲು ಸೂಚಿಸಿದ್ದೇವೆ. ನಂತರದ ನಿರ್ವಹಣೆಯನ್ನು ಸಮಿತಿ ಮಾಡಲಿದೆ. ಜನರ ಸಹಭಾಗಿತ್ವ ಕೊಡುತ್ತಿರುವುದರಿಂದ ಈಗ ನಗರಸಭೆ ಸಹಕಾರಿಯಾಗಿ ನಿಲ್ಲಬೇಕಿದೆ ಎಂದರು. ಸರ್ಕಾರ ನೀತಿ ರೂಪಿಸಿ, ನೆರವನ್ನೂ ಕೊಡಬಹುದು ಆದರೆ ಎಲ್ಲವನ್ನೂ ಮಾಡಲಿಕ್ಕೆ ಆಗದು. ಜನರ ಸಹಭಾಗಿತ್ವವೂ ಇದ್ದಲ್ಲಿ ಯಶಸ್ವಿಯಾಗಲು ಸಾಧ್ಯವಿದೆ ಎಂದು ಹೇಳಿದರು.

    ನಮ್ಮ ದೇಶಕ್ಕೆ ಹತ್ತಾರು ವರ್ಷಗಳ ವೈಭವದ ಇತಿಹಾಸವೂ ಇದೆ. ಹಾಗೇ ಭವಿಷ್ಯವೂ ಇದೆ. ರಾಷ್ಟ್ರವಾಗಿ, ಸಮಾಜವಾಗಿ ನಾವು ಒಂದಾಗಿ ನಿಲ್ಲದಿದ್ದರೆ ನಾವು ಸುಲಭದ ತುತ್ತಾಗುತ್ತೇವೆ ಎನ್ನುವುದಕ್ಕೆ ಇತಿಹಾಸದ ಪಾಠವೂ ಇದೆ ಎಂದರು.

    ನಗರಸಭಾ ಸದಸ್ಯೆ ಕವಿತಾ ಶೇಖರ್ ಮಾತನಾಡಿ, ಬಡಾವಣೆಯ ಸ್ಮಶಾನದ ಅಭಿವೃದ್ಧಿಗೆ ಜಾಗ ಮೀಸಲಿಡಲಾಗಿದೆ. ಅದಕ್ಕೆ ಸೂಕ್ತ ಅನುದಾನವನ್ನು ಕೊಟ್ಟು ಪೂರ್ಣಗೊಳಿಸಿಕೊಡಬೇಕು ಎಂದು ಶಾಸಕರಲ್ಲಿ ಮನವಿ ಮಾಡಿದರು.

    ಗೃಹಮಂಡಳಿ ಅಭಿವೃದ್ಧಿ ವೇದಿಕೆ ಮುಖಂಡ ನಿವೃತ್ತ ಪ್ರಾಧ್ಯಾಪಕ ಶೇಖರ್ ಮಾತನಾಡಿ, ವೇದಿಕೆಯಿಂದ ಬಡಾವಣೆಯಲ್ಲಿ ಹತ್ತಾರು ಅಭಿವೃದ್ಧಿ ಮತ್ತು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದೀಗ ಅಪ್ಪು ಉದ್ಯಾನವನವನ್ನು ಅಭಿವೃದ್ಧಿ ಪಡಿಸಲಾಗಿದೆ. ಇನ್ನೂ ಹತ್ತಾರು ಸಮಾಜ ಸೇವೆಯಲ್ಲಿ ವೇದಿಕೆ ತೊಡಗಿಸಿಕೊಳ್ಳಲಿದೆ ಎಂದರು.

    ವೇದಿಕೆಯ ಮತ್ತೋರ್ವ ಪ್ರಮುಖರಾದ ಪ್ರಾಧ್ಯಾಪಕ ಡಾ.ಕೆ.ಎನ್.ಲಕ್ಷ್ಮೀಕಾಂತ್ ಸ್ವಾಗತಿಸಿದರು. ನಗರಸಭೆ ನಾಮನಿರ್ದೇಶಿತ ಸದಸ್ಯ ಕೀರ್ತಿಶೇಟ್, ಆಯುಕ್ತ ಬಿ.ಸಿ.ಬಸವರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ, ಎಐಟಿ ಕಾಲೇಜಿನ ಸುಬ್ಬರಾವ್, ಸಮಿತಿ ಸದಸ್ಯರಾದ ಗೋಪಾಲಗೌಡ, ದಿನೇಶ್, ನಂಜುಡಪ್ಪ, ಸಂತೋಷ್, ನಿಶಾಂತ್, ರವಿ, ರವಿಕುಮಾರ್, ಗಂಗಾಧರ್, ವಿಜಯ್‌ಕುಮಾರ್, ಲೋಕೇಶ್, ನಂಧೀಶ್, ಲೋಕೇಶ್, ರಂಗಣ್ಣ ಉಪಸ್ಥಿತರಿದ್ದರು ದೊಡ್ಡಮಲ್ಲಪ್ಪ ನಿರೂಪಿಸಿ, ನಂಜುಂಡಪ್ಪ ವಂದಿಸಿದರು.

    Inauguration of Appu Park in memory of Puneeth Rajkumar

  • ಕೆಪಿಟಿಸಿಎಲ್‌ನಿಂದ ಒದಗಿಸಲಾದ ನೂತನ ಬಸ್‌ಗೆ  ಚಾಲನೆ

    ಕೆಪಿಟಿಸಿಎಲ್‌ನಿಂದ ಒದಗಿಸಲಾದ ನೂತನ ಬಸ್‌ಗೆ ಚಾಲನೆ

    ಚಿಕ್ಕಮಗಳೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಕೆಪಿಟಿಸಿಎಲ್‌ನಿಂದ ಒದಗಿಸಲಾದ ನೂತನ ಬಸ್‌ಗೆ ಇಂದು ಮಧ್ಯಾಹ್ನ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಚಾಲನೆ ನೀಡಿದರು.

    ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್, ಜಿ.ಪಂ. ಸಿಇಒ ಎಚ್.ಎಸ್.ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥಬಾಬು, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜೆ.ಮಂಜೇಗೌಡ ಹಾಜರಿದ್ದರು.

    New bus provided by KPTCL launched