Category: ಚಿಕ್ಕಮಗಳೂರು ನಗರ

  • ಜುಲೈ 4 ರಂದು “ಕ್ಯಾಪಿಟಲ್ ಸಿಟಿ” ಸಿನಿಮಾ ರಿಲೀಸ್

    ಜುಲೈ 4 ರಂದು “ಕ್ಯಾಪಿಟಲ್ ಸಿಟಿ” ಸಿನಿಮಾ ರಿಲೀಸ್

    ಚಿಕ್ಕಮಗಳೂರು: ಜಿಂದಗಿ ಖ್ಯಾತಿಯ ರಗಡ್ ಸ್ಟಾರ್ ರಾಜೀವ್ ಹಾಗೂ ಖ್ಯಾತ ಖಳನಟ ರವಿಶಂಕರ್ ಅಭಿನಯದ ಕ್ಯಾಪಿಟಲ್ ಸಿಟಿ ಸಿನಿಮಾ ಜುಲೈ 4 ರಂದು ಅತಿಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲಿದೆ, ಎಂದು ಚಿತ್ರತಂಡ ಮಾಧ್ಯಮ ಘೋಷ್ಠಿಯಲ್ಲಿ ತಿಳಿಸಿದರು.

    ಜಿಂದಗಿ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದೇನೆ. ಸುದೀಪ್ ನಟನೆಯ ಮಸ್ತ ಮಜಾ ಮಾಡಿ ನೋಡಿ, ಶಿವರಾಜ್ ಕುಮಾರ್ ಅಭಿನಯದ ನಂದಾ ಅತಿಹೆಚ್ಚು ಸಕ್ಸಸ್ ನೀಡಿದ ನಿರ್ದೇಶಕ ಅನಂತ್ ರಾಜು ಕ್ಯಾಪಿಟಲ್ ಸಿಟಿಗೆ ಆಕ್ಷನ್ ಕಟ್ ಹೇಳಿದ್ದಾರೆ. ಅಕ್ಕ- ತಮ್ಮ, ತಂದೆ- ಮಗಳ ಸೆಂಟಿಮೆಂಟ್ ನೊಂದಿಗೆ ಬೆಂಗಳೂರಿನ ಭೂಗತ ಲೋಕದ ಕಥೆಯನ್ನು ಕ್ಯಾಪಿಟಲ್ ಸಿಟಿ ಯಲ್ಲಿ ಪ್ರೇಕ್ಷಕರಿಗೆ ಹೆಚ್ಚು ಎಂಟರ್ ಟೇನ್ ಮೆಂಟ್ ನೀಡಲಿದೆ, ಎಂದು ರಗಡ್ ಸ್ಟಾರ್ ರಾಜೀವ್ ಹೇಳಿದರು.

    ಕ್ಯಾಪಿಟಲ್ ಸಿಟಿ ನನ್ನ 11 ನೇ ಸಿನಿಮಾ. ಈ ಸಿನಿಮಾ ಆಕ್ಷನ್ ಓರಿಯೆಂಟೆಡ್ ಸಿನಿಮಾವಾದರು ಸಮಾಜಕ್ಕೆ ಅತ್ಯತ್ತುಮ ಸಂದೇಶವಿದೆ. ಕ್ಯಾಪಿಟಲ್ ಸಿನಿಮಾ 5 ಭಾಷೆಗಳಲ್ಲಿ ಮೂಡಿ ಬಂದಿದ್ದು ಮೊದಲು ಕನ್ನಡದಲ್ಲಿ ಬಿಡುಗಡೆ ಮಾಡಲಿದ್ದೇವೆ. ನಂತರ 5 ಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು ಮೊದಲು ಕನ್ನಡಿಗರು ಸಿನಿಮಾ ನೋಡಿ ಎಂದು ಅನಂತರಾಜು ತಮ್ಮ ಸಿನಿಮಾ ಬಗ್ಗೆ ಮಾತನಾಡಿದರು.

    ಕ್ಯಾಪಿಟಲ್ ಸಿನಿಮಾದಲ್ಲಿ ರವಿಶಂಕರ್, ತೆಲುಗಿನ ಸುಮಂತ್ , ಶರತ್ ಲೋಹಿತಾಶ್ವ, ಕಾಮೆಡಿ ಕಿಲಾಡಿಗಳು ಖ್ಯಾತಿಯ ರಿತೇಶ್ ಸೇರಿದಂತೆ ದೊಡ್ಡ ತಾರ ಬಳಗವಿದೆ. ಕನ್ನಡ ಭಾಷೆಯಲ್ಲಿ 200 ಕ್ಕೂ ಹೆಚ್ಚು ಚಿತ್ರಂದಿರಗಳಲ್ಲಿ ರಿಲೀಸ್ ಆಗಲಿದ್ದು ಪ್ರೇರಣಾ ಸಿನಿಮಾದ ನಾಯಕಿಯಾಗಿ ಪ್ರತಿಭೆ ತೋರಿಸಿದ್ದಾರೆ.

    ಕ್ಯಾಪಿಟಲ್ ಸಿಟಿ ಸಿನಿಮಾ ನಿರ್ಮಾಣಕ್ಕೆ ಇನ್ ಫಿನಿಟಿ ಕ್ರಿಯೇಷನ್ಸ್ ಬ್ಯಾನರ್ ಹಲವು ನಿರ್ಮಾಪಕರು ಒಗ್ಗಟ್ಟಿನಿಂದ ಕೆಲಸ ಮಾಡಿದ್ದಾರೆ. ಶಿವಪ್ಪ ಕುಡ್ಲೂರು ಈ ಸಿನಿಮಾಕ್ಕೆ ಕೈ ಜೋಡಿಸಿ ಖಳನಟನಾಗಿ ಅಭಿನಯಿದ್ದಾರೆ. ಬಾಬು ರೆಡ್ಡಿ, ಆನೇಕಲ್ ನಾಗರಾಜ್, ಕೃಷ್ಣಮೂರ್ತಿ, ಕೆ.ಟಿ.ಮುನಿರಾಜು,ಹಾಗೂ ಗುಣಶೇಖರನ್ ಕ್ಯಾಪಿಟಲ್ ಸಿನಿಮಾದಲ್ಲಿ ಅಭಿನಯಿಸಿ, ನಿರ್ಮಾಣದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಹಾಸನದ ಹುಲಿ ವಸಂತ ಮಾಧವನ್ ಸಿನಿಮಾದಲ್ಲಿ ಅಭಿನಯಿಸಿ, ಸಹ ನಿರ್ಮಾಪಕರಾಗಿದ್ದಾರೆ. ಹಾಸನದ ಕೆ.ಎಮ್.ಶ್ರೀನಿವಾಸ್ ಕ್ಯಾಪಿಟಲ್ ಸಿಟಿ ಸಿನಿಮಾದ ಪ್ರಮೋಷನ್ ನಲ್ಲಿ ಭಾಗವಹಿಸಿದ್ದಾರೆ.

    “Capital City” movie release on July 4th

  • ಆಶ್ರಯ ಆಸ್ಪತ್ರೆ ರೋಗಿಗಳ ಸಮಗ್ರ ಚಿಕಿತ್ಸೆಗೆ ಹೆಚ್ಚಿನ ಮಹತ್ವ

    ಆಶ್ರಯ ಆಸ್ಪತ್ರೆ ರೋಗಿಗಳ ಸಮಗ್ರ ಚಿಕಿತ್ಸೆಗೆ ಹೆಚ್ಚಿನ ಮಹತ್ವ

    ಚಿಕ್ಕಮಗಳೂರು: ವೈದ್ಯಕೀಯ ಲೋಕದಲ್ಲಿ ಚಿಕಿತ್ಸೆಗೆ ಅನುಕೂಲವಾಗಲು ಹೊಸ ವಿಭಾಗಗಳನ್ನು ಸ್ಥಾಪಿಸುವ ಮೂಲಕ ಆಶ್ರಯ ಆಸ್ಪತ್ರೆ ರೋಗಿಗಳ ಸಮಗ್ರ ಚಿಕಿತ್ಸೆಗೆ ಹೆಚ್ಚಿನ ಮಹತ್ವ ನೀಡುತ್ತಿದೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು.

    ನಗರದ ಆಶ್ರಯ ಆಸ್ಪತ್ರೆಯಲ್ಲಿ ನರವಿಜ್ಞಾನ ವಿಭಾಗದ ಕೇಂದ್ರವನ್ನು ಸೋಮವಾರ ಉದ್ಘಾಟಿಸಿ ಮಾತ ನಾಡಿದ ಅವರು ಆಧುನಿಕತ ಜಗತ್ತಿನಲ್ಲಿ ರೋಗಿಗಳ ಆರೋಗ್ಯ ಸುಧಾರಿಸಲು ಹೊಸ ತಂತ್ರಜ್ಞಾನದಡಿ ಹೆಜ್ಜೆ ಇಡುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

    ಜಿಲ್ಲೆಯಲ್ಲೇ ಮೊಟ್ಟಮೊದಲ ರೋಗಿಗಳ ಅನುಕೂಲಕ್ಕೆ ಸಕಲ ಸಲವತ್ತು ಹಾಗೂ ವ್ಯವಸ್ಥೆಯಿತ ರೂಪ ದಲ್ಲಿ ಆರೈಕೆ ನೀಡುತ್ತಿರುವ ಆಶ್ರಯ ಆಸ್ಪತ್ರೆ ಎಂದ ಅವರು ಇದೀಗ ನೂತನವಾಗಿ ನರರೋಗಿಗಳ ಚಿಕಿತ್ಸೆಗೆ ಅನುಕೂಲವಾಗಲು ನರವಿಜ್ಞಾನ ಕೇಂದ್ರ ಸ್ಥಾಪಿಸಿರುವುದು ಜನತೆಗೆ ಬಹಳಷ್ಟು ಒಳಿತಾಗಲಿದೆ ಎಂದರು.

    ಜನಸಾಮಾನ್ಯರು ಆರೋಗ್ಯದ ವಿಷಯದಲ್ಲಿ ಅಸಡ್ಡೆ ವಹಿಸದೇ ಜವಾಬ್ದಾರಿಯಾಗಿ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ. ಆದರೆ ಆಕಸ್ಮಿಕವಾಗಿ ಜರುಗುವ ಕೆಲವು ಅನಾರೋಗ್ಯ ಸಮಸ್ಯೆಗಳಿಗೆ ಸ್ಥಳೀಯವಾಗೇ ಚಿಕಿತ್ಸೆಗಳು ಲಭ್ಯವಾದರೆ ವ್ಯಕ್ತಿಯ ಜೀವ ಉಳಿಸಲು ಸಾಧ್ಯವಾಗಲಿದೆ ಎಂದು ಹೇಳಿದರು.

    ಮನುಷ್ಯನ ಪ್ರಾಣ ಉಳಿಸುವ ವೈದ್ಯರನ್ನು ದೇವರಿಗೆ ಒಲಿಸುತ್ತೇವೆ. ವೈದ್ಯರು ಹಣ ಗಳಿಕೆ ಎನ್ನದೇ ಸೇವಾ ಮನೋಭಾವದಲ್ಲಿ ಕಾರ್ಯನಿರ್ವಹಿಸಬೇಕು. ಈ ಹಿಂದೆ ಕೋವಿಡ್ ಸಮಯದಲ್ಲಿ ಪ್ರಾಣದ ಹಂಗು ತೊರೆದು ಕೆಲಸ ನಿರ್ವಹಿಸಿರುವ ವೈದ್ಯರು, ದಾದಿಯರು ಸೇವೆ ಮರೆಯುವಂತಿಲ್ಲ ಎಂದು ಸ್ಮರಿಸಿದರು.

    ಜಿಲ್ಲಾ ಆರೋಗ್ಯಾಧಿಕಾರಿ ಡಾ|| ಅಶ್ವಥ್‌ಬಾಬು ಮಾತನಾಡಿ ಬಹುತೇಕ ಚಿಕಿತ್ಸೆಯ ಎಲ್ಲಾ ವಿಭಾಗಗಳ ನ್ನು ಸ್ಥಾಪಿಸುವ ಮೂಲಕ ಆಶ್ರಯ ಆಸ್ಪತ್ರೆ ಮಲ್ಟಿಸ್ಪೆಷಾಲಿಟಿಯಾಗಿ ಪರಿವರ್ತನೆಯಾಗಿದೆ. ಜೊತೆಗೆ ಸ್ವಚ್ಚತೆ, ವೈದ್ಯರು, ಸಿಬ್ಬಂದಿಗಳ ಸೇವೆ ಉತ್ತಮವಾಗಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಗತಿ ಸಾಧಿಸಲಿ ಎಂದು ಆಶಿಸಿದರು.

    ನರರೋಗ ತಜ್ಞ ಡಾ|| ಎಂ.ಎಸ್.ಸುಮುಖ್ ಮಾತನಾಡಿ ನರರೋಗ ಎಂಬುದು ಬಹುದಿನಗಳ ಕಾಡು ವ ಕಾಯಿಲೆಯಾದ ಕಾರಣ ದೂರದೂರಿಗಳಿಗೆ ಚಿಕಿತ್ಸೆ ತೆರಳಲು ಜಿಲ್ಲೆಯ ಜನತೆಗೆ ಕಷ್ಟಸಾಧ್ಯ. ತಾವು ಕೂ ಡಾ ಇದೇ ಜಿಲ್ಲೆಯವರಾದ ಕಾರಣ ನರರೋಗ ಸಮಸ್ಯೆಗಳಿಗೆ ಚಿಕಿತ್ಸೆ ನೀಡಿದರೆ ಸ್ಥಳೀಯರಿಗೆ ಅನುಕೂಲ ವಾಗಲಿದೆ ಎಂದು ತಿಳಿಸಿದರು

    ಆಶ್ರಯ ಆಸ್ಪತ್ರೆ ಸಂಸ್ಥಾಪಕ ಡಾ|| ಡಿ.ಎಲ್.ವಿಜಯ್‌ಕುಮಾರ್ ಮಾತನಾಡಿ ಪ್ರಸ್ತುತ ಆಸ್ಪತ್ರೆ ೮೮ರ ಕಾಲ ಘಟ್ಟದಲ್ಲಿ ಕೇವಲ ೧೫ ಬೆಡ್‌ಗಳೊಂದಿಗೆ ಆರಂಭಿಸಿ ಇದೀಗ ೧೫೦ ಬೆಡ್‌ಗಳು ಸ್ಥಾಪಿಸಿ ಚಿಕಿತ್ಸೆ ಪೂರಕವಾಗಿದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಪರಿವರ್ತನೆಯಾಗುವ ಮೂಲಕ ಜನತೆಯ ಅವಶ್ಯಕತೆಗೆ ಅನುಗುಣವಾ ಗಿ ಚಿಕಿತ್ಸೆ ನೀಡುತ್ತಿದೆ ಎಂದರು.

    ಆಸ್ಪತ್ರೆಯ ಡಾ|| ಅನಿಕೇತ್ ಮಾತನಾಡಿ ಆಸ್ಪತ್ರೆಯಲ್ಲಿ ರೋಗಿಗಳ ಚಿಕಿತ್ಸೆಗಳ ಅನುಕೂಲಕ್ಕೆ ಒಟ್ಟು ೧೬ ವಿಭಾಗಗಳು ಚಾಲ್ತಿಯಲ್ಲಿದ್ದು, ಇದೀಗ ಸೂಪರ್ ಸ್ಪೆಷಾಲಿಟಿಯಡಿ ೯ನೇ ವಿಭಾಗವಾಗಿ ನರವಿಜ್ಞಾನ ಕೇಂದ್ರ ಸ್ಥಾಪಿಸುವ ಮುಖೇನಾ ಆಸ್ಪತ್ರೆ ಹಂತ ಹಂತವಾಗಿ ಮೇಲ್ದಜೇಗೇರುತ್ತಿದೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯೆ ಎ.ವಿ.ಗಾಯತ್ರಿ ಶಾಂತೇಗೌಡ, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮೊಹಮ್ಮದ್ ನಯಾಜ್, ಆಸ್ಪತ್ರೆಯ ಸಂಸ್ಥಾ ಪಕರಾದ ಡಾ|| ಶುಭ ವಿಜಯ್, ಆಡಳಿತ ವ್ಯವಸ್ಥಾಪಕ ಜಿ.ಪುರುಷೋತ್ತಮ್, ವಿವಿಧ ವಿಭಾಗದ ವೈದ್ಯಾಧಿಕಾರಿಗಳು, ಸಿಬ್ಬಂದಿ ವರ್ಗದವರು ಇದ್ದರು.

    Greater importance is given to comprehensive treatment of shelter hospital patients.

  • 2 ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ

    2 ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ

    ಚಿಕ್ಕಮಗಳೂರು: ಶಿಕ್ಷಣ, ಆರೋಗ್ಯ, ಜನರ ಬದುಕಿನ ಬಗ್ಗೆ ಎಲ್ಲರಿಗೂ ಸಮಾನ ಅವಕಾಶ ನೀಡುವುದೇ ಕಾಂಗ್ರೆಸ್ ಸರ್ಕಾರದ ಗುರಿ ಮತ್ತು ಉದ್ದೇಶ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು.

    ಅವರು ಇಂದು ಕ್ಷೇತ್ರದ ವ್ಯಾಪ್ತಿಯ ದೇವಗೊಂಡನಹಳ್ಳಿ, ಬೆಳವಾಡಿ, ಕಳಸಾಪುರ, ಮಾಚಗೊಂಡನಹಳ್ಳಿ, ಜೋಡಿಲಿಂಗದಹಳ್ಳಿ ಈ ಗ್ರಾಮ ಪಂಚಾಯಿತಿಗಳ ಸುಮಾರು ೨ ಕೋಟಿ ರೂ ವೆಚ್ಚದಲ್ಲಿ ಗ್ರಾಮಗಳ ರಸ್ತೆ ಅಭಿವೃದ್ಧಿ ಬೀದಿದೀಪ, ಚರಂಡಿ, ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

    ದೇಶಕ್ಕೆ ಮಾದರಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜನಪ್ರಿಯಗೊಂಡಿದ್ದು, ಮಾಜಿ ಪ್ರಧಾನಿ ಇಂದಿರಾಗಾಂಧಿಯವರ ಹದಿನಾರು ವರೆ ವರ್ಷಗಳ ಸುದೀರ್ಘ ಆಡಳಿತ ನಡೆಸಿದ ಉಕ್ಕಿನ ಮಹಿಳೆ ಎಂದು ಬಣ್ಣಿಸಿದರು.

    ಗುಜರಾತ್ ರಾಜ್ಯದ ಮಾದರಿಯಲ್ಲಿ ಕರ್ನಾಟಕವನ್ನು ಅಭಿವೃದ್ಧಿ ಮಾಡುತ್ತೇವೆ ಎಂಬುದನ್ನು ಜಾಹಿರಾತು ಮೂಲಕ ನೋಡಿದ್ದ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರದ ಗ್ಯಾರಂಟಿ ಯೋಜನೆಯ ಮಾದರಿ ನೋಡಿ ಉತ್ತರ ಭಾರತ, ಹರಿಯಾಣ, ಮಹಾರಾಷ್ಟ್ರದಲ್ಲಿ ಚುನಾವಣೆ ನಡೆಸಿವೆ ಎಂದು ಹೇಳಿದರು.

    ೨೦ ಅಂಶಗಳ ಕಾರ್ಯಕ್ರಮದ ಮೂಲಕ ಶೋಷಿತ, ಬಡ ವರ್ಗದ ಎಲ್ಲಾ ಜನರನ್ನು ಸಮಾನವಾಗಿ ಕಂಡು ಸರ್ವರೂ ಸಮಾಜದ ಮುನ್ನಲೆಗೆ ತರಬೇಕೆಂಬ ಪರಿಕಲ್ಪನೆಯನ್ನು ಇಂದಿರಾ ಗಾಂಧಿಯವರು ಹೊಂದಿದ್ದರು ಎಂದು ತಿಳಿಸಿದರು.

    ಉಳುವವನೇ ಭೂಮಿಯ ಒಡೆಯ ಯೋಜನೆಯನ್ನು ಜಾರಿಗೆ ತಂದು ಇಂದಿರಾ ಗಾಂಧಿ, ಡಿ. ದೇವರಾಜ್ ಅರಸ್ ಭೂ ರಹಿತರಿಗೆ ಭೂಮಿಯನ್ನು ಮಂಜೂರು ಮಾಡಿದ್ದರು ಎಂದು ವಿವರಿಸಿದರು.

    ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ ಕಂದಾಯ ಗ್ರಾಮಗಳನ್ನು ಆಯ್ಕೆಮಾಡುವ ಮೂಲಕ ವಾಸಿಸುವವನಿಗೆ ಹಕ್ಕುಪತ್ರ ನೀಡಿ ಮನೆ ಕೊಡುವ ಭರವಸೆಯನ್ನು ಕೊಟ್ಟು, ವಾಸಿಸುವವನೇ ಮನೆಯ ಒಡೆಯ ಎಂಬ ಕಾನೂನು ಜಾರಿಗೆ ತಂದವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣಭೈರೇಗೌಡ ಎಂದು ತಿಳಿಸಿದರು.

    ವಿರೋಧ ಪಕ್ಷದ ಆರೋಪಗಳಿಗೆ ಜನ ಮೆಚ್ಚುವ ರೀತಿ ಅಭಿವೃದ್ಧಿ ಮಾಡುವುದಾಗಿ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದ್ದು, ಜಾತ್ಯಾತೀತ ಪಕ್ಷವಾಗಿರುವ ಕಾಂಗ್ರೆಸ್ ಪಕ್ಷ ಎಲ್ಲಾ ಧರ್ಮದವರನ್ನು ಸಮಾನವಾಗಿ ಪ್ರೀತಿಯಿಂದ ಕಾಣುತ್ತದೆ ಎಂದು ತಿಳಿಸಿದರು.

    ಮಾಜಿ ವಿಧಾನ ಪರಿಷತ್ ಸದಸ್ಯೆ ಗಾಯಿತ್ರಿ ಶಾಂತೇಗೌಡ ಮಾತನಾಡಿ, ಸುಮಾರು ೨ ಕೋಟಿ ರೂ ವೆಚ್ಚದ ಅನುದಾನದಲ್ಲಿ ಬೀದಿದೀಪ, ಚರಂಡಿ, ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದು, ಸರ್ಕಾರದ ಈ ಸೌಲಭ್ಯವನ್ನು ಗ್ರಾಮಸ್ಥರು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.
    ಸರ್ಕಾರ ಬಂದು ಎರಡು ವರ್ಷಗಳಾಗಿದ್ದು, ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ವಿರೋಧ ಪಕ್ಷಗಳ ಟೀಕೆಗೆ ಈ ರೀತಿಯ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುವ ಮೂಲಕ ತಕ್ಕ ಉತ್ತರ ನೀಡುತ್ತಿದ್ದೇವೆ ಎಂದು ಹೇಳಿದರು.

    ಕಳೆದ ೨೫ ವರ್ಷಗಳಿಂದ ಅಭಿವೃದ್ಧಿ ಕಾಣದೇ ಇದ್ದ ಈ ರಸ್ತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಾಸಕ ಹೆಚ್.ಡಿ. ತಮ್ಮಯ್ಯ ಅಭಿವೃದ್ಧಿ ಕಾರ್ಯಗಳಿಗೆ ಮುಂದಾಗಿದ್ದಾರೆ. ಚುನಾವಣಾ ಪೂರ್ವದಲ್ಲಿ ಜೋಡಿ ಲಿಂಗದಹಳ್ಳಿ ದೇವಗೊಂಡನಹಳ್ಳಿ, ಬೆಳವಾಡಿ, ಕಳಸಾಪುರ, ಮಾಚಗೊಂಡನಹಳ್ಳಿ, ಗ್ರಾಮಸ್ಥರು ನೀಡಿದ ಪ್ರೀತಿ, ವಿಶ್ವಾಸ ಮತ್ತು ಕಾಂಗ್ರೆಸ್ ಪಕ್ಷದ ಶಾಸಕರ ಆಯ್ಕೆಗೆ ಶ್ರಮಿಸಿದ ಕಾರ್ಯಕರ್ತರನ್ನು ಇದೇ ಸಂದರ್ಭದಲ್ಲಿ ಸ್ಮರಿಸಿದರು.

    ಈ ಸಂದರ್ಭದಲ್ಲಿ ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್ ಅಹಮದ್, ಕೃಷ್ಣಮೂರ್ತಿ, ಅಮೀರ್, ಜಗದೀಶ್, ಶಾಂತಕುಮಾರ್, ಸಂತೋಷ್, ಕುಮಾರ್, ಗುರು, ಮಧು, ಯೋಗೀಶ್, ಹರ್ಷದ್, ಪ್ರವೀಣ ಮತ್ತಿತರರು ಉಪಸ್ಥಿತರಿದ್ದರು.

    Road development at a cost of Rs 2 crore

  • ನಾನು ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ

    ನಾನು ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ

    ಚಿಕ್ಕಮಗಳೂರು: ಇದುವರೆಗೆ ನಾನು ಅಪೇಕ್ಷೆ ಪಟ್ಟು ಪಕ್ಷದಲ್ಲಿ ಯಾವುದೇ ಹುದ್ದೆ ಪಡೆದಿಲ್ಲ. ಹಾಗೆ ಈಗಲೂ ನಾನು ಯಾವುದೇ ಹುದ್ದೆಯ ಆಕಾಂಕ್ಷಿಯೂ ಅಲ್ಲ. ಪಕ್ಷ ಯಾರಿಗೆ ಜವಾಬ್ದಾರಿ ಕೊಡುತ್ತದೆಯೋ ಅವರ ಜೊತೆಗೆ ಕೆಲಸ ಮಾಡುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ತಿಳಿಸಿದರು.

    ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಕಟ್ಟಲು ನಾವು ಒಂದು ಟೀಮ್ ಆಗಿ ಕೆಲಸ ಮಾಡಬೇಕು. ಹೀಗಾಗಿ ನಾವು ಟೀಮ್ ಆಗಿ ಕೆಲಸ ಮಾಡುತ್ತೇವೆ. ಬಿ.ವೈ.ವಿಜಯೇಂದ್ರ ಅವರು ನಮ್ಮ ರಾಜ್ಯಾಧ್ಯಕ್ಷರು ಎಂದು ತಿಳಿಸಿದರು.

    ನಾವು ವಿಚಾರದ ಜೊತೆ ಇದ್ದೇವೆ. ಪಕ್ಷ ಸಂಘಟನೆಗೆ ನಾವು ಸದಾ ಸಿದ್ದರಿದ್ದೇವೆ. ಒಂದು ತಂಡವಾಗಿ ನಾವು ಪಕ್ಷ ಸಂಘಟನೆ ಮಾಡುತ್ತೇವೆ ಎಂದು ಹೇಳಿದರು. ಬಿ.ವೈ.ವಿಜಯೇಂದ್ರ ಅವರು ನಮ್ಮ ರಾಜ್ಯಾಧ್ಯಕ್ಷರು. ಪಕ್ಷ ಕಟ್ಟಲು ನಾವು ಒಂದು ಟೀಮ್ ಆಗಿ ಕೆಲಸ ಮಾಡುತಿದ್ದೇವೆ. ಬದಲಾವಣೆ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ತಿಳಿಸಿದರು.

    ನನಗೆ ಯಾವುದೇ ಮಾಹಿತಿ ಇಲ್ಲ. ನಾನು ಇತ್ತೀಚೆಗೆ ದೆಹಲಿ ಹೋಗಿ ವರಿಷ್ಟರ‌ನ್ನು ಭೇಟಿ ಮಾಡಿಲ್ಲ. ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ ಅದೊಂದು ಜವಾಬ್ದಾರಿ. ಯಾವ ಕಾಲಕ್ಕೆ ಯಾರಿಗೆ ಜವಾಬ್ದಾರಿ ನೀಡಬೇಕು ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ಯಾರೆ ಅಧ್ಯಕ್ಷರಾದರು ಅವರ ಜೊತೆ ಇದ್ದು ನಾನು ಕೆಲಸ ಮಾಡುತ್ತೇವೆ.

    ರಾಜಣ್ಣ ಅವರು ಯಾವ ಉದ್ದೇಶದಿಂದ ಕ್ರಾಂತಿ ಪದ ಬಳಸಿದ್ದಾರೆಯೋ ಗೊತ್ತಿಲ್ಲ. ಒಂದು ವೇಳೆ ಅದು ಸಂಕ್ರಾಂತಿ ಆದರೆ ಎಲ್ಲರಿಗೂ ಒಳ್ಳೆಯದೇ ಆಗುತ್ತದೆ. ಅದು ಸಂಕ್ರಾಂತಿ ಆಗದಿದ್ದರೆ ನಾಡಿಗೂ ಒಳ್ಳೆಯದಾಗುವುದಿಲ್ಲ. ಜೊತೆಗೆ ಯಾರಿಗೂ ಒಳ್ಳೆಯದಾಗುವುದಿಲ್ಲ. ಆದರೆ ಪ್ರತಿದಿನ ಭ್ರಷ್ಟಾಚಾರ, ಹಗರಣ ಪ್ರತಿ ದಿನ ಕಾಡುತ್ತಿವೆ. ಇದು ಮುಂದುವರೆದರೆ ಜನರೇ ಕ್ರಾಂತಿಗೆ ಮುನ್ನುಡಿ ಬರೆಯಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.

    I am not a candidate for any position.

  • ನಾಡಪ್ರಭು ಕೆಂಪೇಗೌಡರು ಮುಂದಾಲೋಚನೆಯ ಅಪ್ರತಿಮ ವ್ಯಕ್ತಿ

    ನಾಡಪ್ರಭು ಕೆಂಪೇಗೌಡರು ಮುಂದಾಲೋಚನೆಯ ಅಪ್ರತಿಮ ವ್ಯಕ್ತಿ

    ಸಖರಾಯಪಟ್ಟಣ: ನಾಡಪ್ರಭು ಕೆಂಪೇಗೌಡರು ಮುಂದಾಲೋಚನೆಯಿಂದ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸಿದ ಅಪ್ರತಿಮ ವ್ಯಕ್ತಿ ಎಂದು ಒಕ್ಕಲಿಗ ಸಂಘದ ಹೋಬಳಿ ಘಟಕದ ಅಧ್ಯಕ್ಷ ಎಸ್.ಆರ್.ಯೋಗೀಂದ್ರ ಹೇಳಿದರು.

    ಸಖರಾಯಪಟ್ಟಣದಲ್ಲಿ ಒಕ್ಕಲಿಗರ ಸಂಘದ ವತಿಯಿಂದ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಬೆಂಗಳೂರು ನಗರಕ್ಕೆ ಗಡಿ ಗೋಪುರ ನಿರ್ಮಿಸುವ ಮೂಲಕ ಭವಿಷ್ಯದ ನಗರದ ರೂಪರೇಷೆಯನ್ನು ಅಂದೇ ನಿರ್ಮಿಸಿದ್ದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ ಎಂದರು.

    ನಿವೃತ್ತ ಲೆಕ್ಕಪರಿಶೋಧಕ ವೆಂಕಟೇಶ್ , ವಿಜಯನಗರದ ಅರಸರ ಮೇಲ್ಪಂಕ್ತಿಯನ್ನು ಅನುಸರಿಸಿದ ಕೆಂಪೇಗೌಡರು, ತಮ್ಮ ಆಡಳಿತದಲ್ಲಿ ಕೃಷಿ ಮತ್ತು ವ್ಯಾಪಾರಕ್ಕೆ ಅನುಕೂಲ ಕಲ್ಪಿಸಿ ಬೆಂಗಳೂರಿನ ಇತಿಹಾಸದಲ್ಲಿ ಅಜರಾಮರರಾದರು ಎಂದರು.

    ಪಟ್ಟಣದ ಬಸ್ ನಿಲ್ದಾಣದ ಮುಂಭಾಗದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ನಂತರ ಬೈಕ್ ಜಾಥಾ ನಡೆಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಜಮ್ಮ, ಸದಸ್ಯರಾದ ಚೇತನ್, ಗಣೇಶಗೌಡ, ಅರುಣ್‌ಗೌಡ, ದೊಡ್ಡಮ್ಮ, ಮುಖಂಡರಾದ ರಾಮಲಿಂಗು, ಪುಟ್ಟಸ್ವಾಮಿ, ಸ. ರಾ. ಸತೀಶ್, ಮಿಥುನ್, ದರ್ಶನ್, ಉಲ್ಲಾಸ್, ಧರಣೇಶ್, ಪ್ರಮೋದ್, ಗ್ರಾಮಸ್ಥರು ಭಾಗವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು.

    Nadaprabhu Kempegowda is an unparalleled figure of forward thinking.

  • ಗುರುಗಳ ಸಮಸ್ಯೆ ಬಗೆಹರಿಸಲು ಜನಪ್ರತಿನಿಧಿಗಳು ಶ್ರಮಿಸಬೇಕು

    ಗುರುಗಳ ಸಮಸ್ಯೆ ಬಗೆಹರಿಸಲು ಜನಪ್ರತಿನಿಧಿಗಳು ಶ್ರಮಿಸಬೇಕು

    ಚಿಕ್ಕಮಗಳೂರು: ಯಾರೇ ಆಗಲಿ ಐಎಎಸ್ ಅಧಿಕಾರಿ ಆಗಲು ಅದಕ್ಕೆ ಮೂಲ ಕಾರಣಕರ್ತರು ಶಿಕ್ಷಕರು, ಉಪನ್ಯಾಸಕರೇ ಆಗಿರುತ್ತಾರೆ. ದೇಶವನ್ನೇ ರೂಪಿಸುವ ಗುರುಗಳ ಸಮಸ್ಯೆಗಳನ್ನು ಬಗೆಹರಿಸಲು ಎಲ್ಲಾ ಜನಪ್ರತಿನಿಧಿಗಳು ಸೇರಿದಂತೆ ಸರ್ಕಾರ ಶ್ರಮಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.

    ನಗರದ ಎಂಇಎಸ್ ಸಭಾಂಗಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯ ಅನುದಾನಿತ ಪದವಿಪೂರ್ವ ಕಾಲೇಜುಗಳ ನೌಕರರ ಸಂಘದ ರಾಜ್ಯ ಕಾರ್ಯಕಾರಣಿ ಸಭೆ ಹಾಗೂ ಜಿಲ್ಲಾ ಘಟಕದ ಉದ್ಘಾಟನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿಧಾನ ಪರಿಷತ್ ಸದಸ್ಯರು ಆರು ವರ್ಷಗಳ ಕಾಲ ತಮ್ಮ ಅಧಿಕಾರ ಮುಗಿಸಿ ಹೋದ ನಂತರ ಪಿಂಚಣಿ ನೀಡುತ್ತಾರೆ. ಆದರೆ ಅನುದಾನಿತ ಶಾಲೆ ಹಾಗೂ ಕಾಲೇಜುಗಳ ಸಿಬ್ಬಂದಿ ೪೦ ವರ್ಷ ಸೇವೆ ಸಲ್ಲಿಸಿದರು ಪಿಂಚಣಿ ಸಿಗುತ್ತಿಲ್ಲ. ಅವರು ಯಾರು ಐಷಾರಾಮಿ ಜೀವನ ನಡೆಸಲು ಪಿಂಚಣಿ ಕೇಳುತ್ತಿಲ್ಲ ಎಂದು ಹೇಳಿದರು.

    ಸುದೀರ್ಘ ಕೆಲಸ ಮಾಡಿದವರಿಗೆ ನೆಮ್ಮದಿಯ ಬದುಕು ನೀಡಲು ಪಿಂಚಣಿ ನೀಡಲೇಬೇಕು. ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಸುಧೀರ್ಘ ಸೇವೆ ಸಲ್ಲಿಸಿದರು ಎನ್‌ಪಿಎಸ್ ಅಥವಾ ಓಪಿಎಸ್ ಸಿಗುತ್ತಿಲ್ಲ. ಇದನ್ನು ಪ್ರತಿಯೊಬ್ಬ ಜನಪ್ರತಿನಿಧಿಯೂ ಪ್ರಶ್ನೆ ಮಾಡಬೇಕಿದೆ ಎಂದರು.

    ನಿಮ್ಮ ಹಕ್ಕುಗಳಿಗಾಗಿ ನೀವು ಹೋರಾಟ ಆರಂಭಿಸಿದಾಗ ಅಂದು ಯಾರು ವಿರೋಧ ಪಕ್ಷದಲ್ಲಿ ಇರುತ್ತಾರೋ ಅವರು ಬಂದು ನಿಮ್ಮ ಸಮಸ್ಯೆ ಆಲಿಸುತ್ತಾರೆ. ಸಮಸ್ಯೆ ಆಲಿಸುವುದು ಮುಖ್ಯವಲ್ಲ ಸಮಸ್ಯೆ ಬಗೆಹರಿಸುವುದು ಮುಖ್ಯವಾಗಬೇಕು ಎಂದರು.

    ಗೋವಾ ಹಾಗೂ ಆಂಧ್ರಪ್ರದೇಶದಲ್ಲಿ ಅನುದಾನಿತ ಶಾಲಾ ಶಿಕ್ಷಕರು ಹಾಗೂ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರನ್ನು ಸರ್ಕಾರ ವಿಲೀನ ಮಾಡಿಕೊಂಡಿದೆ. ಇದನ್ನೇ ಕರ್ನಾಟಕದಲ್ಲಿಯೂ ಅನ್ವಯಿಸಲು ಯಾವುದೇ ಸಮಸ್ಯೆ ಇಲ್ಲ. ಈ ಬಗ್ಗೆ ಸರ್ಕಾರ ಗಮನಹರಿಸಬೇಕು ಎಂದು ಒತ್ತಾಯ ಮಾಡಿದರು.

    ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ಶಿಕ್ಷಕರು ಎಂದೆಂದಿಗೂ ಗುರುಗಳೇ. ಗುರುಗಳು ಮಾಡುವ ಸೇವೆಯನ್ನು ಸೇವೆ ಎಂದು ಪರಿಗಣಿಸುವ ಜೊತೆಗೆ ಅವರಿಗೆ ಸಿಗಬೇಕಾದ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

    ಜಟಿಲ ಸಮಸ್ಯೆಗಳಿಂದ ಹೊರಬರಲು ಸಂಘಟನೆ ಅಗತ್ಯ. ಸಂಘಟನೆ ಗಟ್ಟಿಯಾದಾಗ ಸಮಸ್ಯೆಗಳನ್ನು ಸರ್ಕಾರದ ಮುಂದೆ ತಂದು ಬಗೆಹರಿಸಿಕೊಳ್ಳಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಅನುದಾನಿತ ಕಾಲೇಜುಗಳ ಉಪನ್ಯಾಸಕರ ಸಂಘ ಆರಂಭಗೊಂಡಿರುವುದು ಸ್ವಾಗತಾರ್ಹ ಎಂದರು.

    ರಾಜ್ಯದಲ್ಲಿ ಶಿಕ್ಷಕರ ಹಾಗೂ ಉಪನ್ಯಾಸಕರ ಪರವಾಗಿ ವಿಧಾನ ಪರಿಷತ್ ಸದಸ್ಯ ಎಸ್. ಎಲ್.ಭೋಜೇಗೌಡ ಗಟ್ಟಿಯಾದ ಧ್ವನಿ ಎತ್ತಿದ್ದಾರೆ. ಯಾವುದೇ ಸರ್ಕಾರ ಅಧಿಕಾರದಲ್ಲಿದ್ದರೂ ಶಿಕ್ಷಣ, ಆರೋಗ್ಯ ಹಾಗೂ ಬದುಕಿನ ಬಗ್ಗೆ ಹೆಚ್ಚು ಒತ್ತು ಕೊಡುತ್ತವೆ. ಈ ನಿಟ್ಟಿನಲ್ಲಿ ಅನುದಾನಿತ ಕಾಲೇಜುಗಳ ಉಪನ್ಯಾಸಕರ ಸಮಸ್ಯೆ ಬಗ್ಗೆ ಹರಿಸಲು ವಿಧಾನ ಮಂಡಲದಲ್ಲಿ ವಿಷಯ ಪ್ರಸ್ತಾಪಿಸುವ ಭರವಸೆ ನೀಡಿದರು.

    ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಮಾತನಾಡಿ, ಆಂಧ್ರ ಪ್ರದೇಶ ಹಾಗೂ ಗೋವಾದಲ್ಲಿ ಅನುದಾನಿತ ಶಿಕ್ಷಕರು ಹಾಗೂ ಉಪನ್ಯಾಸಕರನ್ನು ಸರ್ಕಾರಿ ಹುದ್ದೆಗಳಿಗೆ ವಿಲೀನಗೊಳಿಸಲಾಗಿದೆ. ಅಲ್ಲಿ ಹೇಗೆ ವಿಲೀನ ಕೊಡಿಸಲಾಗಿದೆ ಎಂಬ ಬಗ್ಗೆ ಮಾಹಿತಿ ತರಿಸಿಕೊಂಡು ನಾವು ಚರ್ಚೆ ಮಾಡಿ ನಮ್ಮ ರಾಜ್ಯದಲ್ಲಿಯೂ ಅದನ್ನು ಅನುಷ್ಠಾನಕ್ಕೆ ತರಲು ಕ್ರಮ ಕೈಗೊಳ್ಳಬೇಕಿದೆ ಎಂದರು.

    ಅನುದಾನಿತ ಶಾಲೆಗಳ ಶಿಕ್ಷಕರು ಹಾಗೂ ಕಾಲೇಜುಗಳ ಉಪನ್ಯಾಸಕರನ್ನು ವಿಲೀನಗೊಳಿಸಿಕೊಂಡಾಗ ಆರ್ಥಿಕ ಹೊರೆಯಾಗುತ್ತದೆಯೇ? ಅಥವಾ ಇನ್ನೇನಾದರೂ ಸಮಸ್ಯೆ ಇದೆಯೇ ಎಂಬುವ ಬಗ್ಗೆ ಚರ್ಚೆ ಮಾಡಬೇಕಿದೆ. ಈ ಬಗ್ಗೆ ವಿಧಾನ ಮಂಡಲದ ಅಧಿವೇಶನದಲ್ಲಿ ಚರ್ಚೆ ನಡೆಸುವ ಭರವಸೆ ನೀಡಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಅನುದಾನಿತ ಪದವಿಪೂರ್ವ ಕಾಲೇಜುಗಳ ನೌಕರರ ಸಂಘದ ಅಧ್ಯಕ್ಷ ಡಾ. ಎಚ್.ಹರೀಶ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಜಂಟಿ ನಿರ್ದೇಶಕ ಮಹಾಲಿಂಗಯ್ಯ, ಸಂಘದ ಜಿಲ್ಲಾಧ್ಯಕ್ಷ ಲೋಹಿತ್, ಪ್ರಮುಖರಾದ ನಾಗರಾಜರಾವ್ ಕಲ್ಕಟ್ಟೆ, ತಸ್ಲಿಮಾ ಫಾತಿಮಾ ಮತ್ತಿತರರಿದ್ದರು.

    Public representatives should work hard to resolve the problems of teachers

  • ಡಾ.ಸುಂದರೇಶ ಅಗಲಿಕೆಗೆ ಶ್ರೀ ರಂಭಾಪುರಿ ಜಗದ್ಗುರುಗಳ ಸಂತಾಪ

    ಡಾ.ಸುಂದರೇಶ ಅಗಲಿಕೆಗೆ ಶ್ರೀ ರಂಭಾಪುರಿ ಜಗದ್ಗುರುಗಳ ಸಂತಾಪ

    ಚಿಕ್ಕಮಗಳೂರು: ನಗರದ ಅನ್ನಪೂರ್ಣ ಆಸ್ಪತ್ರೆಯ ನಿರ್ಮಾಪಕರಾದ ಡಾ. ಸುಂದರೇಶ್ ಅವರ ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಮ್ಮ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

    ಡಾ. ಸುಂದರೇಶ್ ಅವರು ಅನಾರೋಗ್ಯದಿಂದ ಅಕಾಲಿಕವಾಗಿ ಶಿವೈಕ್ಯರಾದ ವಿ?ಯ ತಿಳಿದು ಅತ್ಯಂತ ವಿ?ದವಾಯಿತು. ಶ್ರೀ ರಂಭಾಪುರಿ ಪೀಠದೊಂದಿಗೆ ನಿಕಟ ಸಂಬಂಧ ಹೊಂದಿದ ಶ್ರೀಯುತರ ಸೇವೆ ಅವಿಸ್ಮರಣೀಯ.

    ಧರ್ಮ ನಿಷ್ಠೆ ಕಾಯಕ ನಿಷ್ಠೆ ಹೊಂದಿ ಜೀವನದಲ್ಲಿ ಅದ್ಭುತ ಸಾಧನೆ ಮಾಡಿದ ಶ್ರೀಯುತರ ಅಗಲಿಕೆ ಅತ್ಯಂತ ನೋವನ್ನು ಉಂಟುಮಾಡುತ್ತದೆ.

    ಅಗಲಿದ ಅವರ ಪವಿತ್ರ ಆತ್ಮಕ್ಕೆ ಶ್ರೀ ಜಗದ್ಗುರು ರೇಣುಕಾದಿ ಪಂಚಾಚಾರ್ಯರು ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರ ಸ್ವಾಮಿ ಚಿರಶಾಂತಿಯನ್ನು ಅನುಗ್ರಹಿಸಲಿ. ಅವರ ಅಗಲಿಕೆಯಿಂದ ಉಂಟಾದ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬ ವರ್ಗದವರಿಗೆ ಮತ್ತು ಹಿತೈಷಿಗಳಿಗೆ ಭಗವಂತ ಕರುಣಿಸಲೆಂದು ಶ್ರೀ ರಂಭಾಪುರಿ ಜಗದ್ಗುರುಗಳು ತಮ್ಮ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.

    Sri Rambhapuri Jagadguru condoles the passing of Dr. Sundaresh

  • ಕಾಂಗ್ರೆಸ್ ನಾಯಕರ ಬಗ್ಗೆ ಬಿಜೆಪಿ ಅವಹೇಳನ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

    ಕಾಂಗ್ರೆಸ್ ನಾಯಕರ ಬಗ್ಗೆ ಬಿಜೆಪಿ ಅವಹೇಳನ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

    ಚಿಕ್ಕಮಗಳೂರು:  ಭಾರತ ದೇಶದಲ್ಲಿ ಸುದೀರ್ಘ ಆಡಳಿತ ನಡೆಸಿದ ಉಕ್ಕಿನ ಮಹಿಳೆ ಪ್ರಿಯದರ್ಶಿನಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಬಗ್ಗೆ ಹಗುರವಾಗಿ ಮಾತನಾಡಿರುವ ಬಿಜೆಪಿ ಮುಖಂಡರ ನಡೆಯನ್ನು ಖಂಡಿಸಿ ಇಂದು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.

    ನಗರದ ಅಜಾದ್ ವೃತ್ತದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಕೇಂದ್ರ ಸರ್ಕಾರ ಮತ್ತು ಬಿಜೆಪಿ ಮುಖಂಡರ ನಡೆಯನ್ನು ಖಂಡಿಸಿ ಘೋಷಣೆ ಕೂಗಿ ಹಿಟ್ಲರ್ ಎಂದು ಇಂದಿರಾ ಗಾಂಧಿಯವರನ್ನು ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಅವಮಾನಿಸಿರುವುದನ್ನು ಖಂಡಿಸಿದರು.

    ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ ಮಂಜೇಗೌಡ, ದೇಶದ ಅಭಿವೃದ್ಧಿಗೆ ಇಂದಿರಾ ಗಾಂಧಿಯವರು ಪ್ರಧಾನಿಯಾಗಿದ್ದಾಗ ೨೦ ಅಂಶಗಳ ಕಾರ್ಯಕ್ರಮಗಳನ್ನು ಜಾರಿಗೆ ತಂದು ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ ಇವರ ಬಗ್ಗೆ ಬಿಜೆಪಿ ಮತ್ತು ಕೇಂದ್ರಸರ್ಕಾರ ಅವಹೇಳನ ಮಾಡಿದ್ದಾರೆಂದು ಆರೋಪಿಸಿದರು.

    ಬ್ರಿಟೀಷ್ ಆಡಳಿತದಿಂದ ಖಾಲಿ ಖಜಾನೆಯಾಗಿದ್ದ ಭಾರತ ದೇಶದಲ್ಲಿ ಸರ್ವರಿಗೂ ಸಮಾನತೆ ತಂದುಕೊಟ್ಟ ಧೀಮಂತ ನಾಯಕಿಯಾಗಿದ್ದಾರೆ. ಇಂತಹವರ ಬಗ್ಗೆ ಕ್ಷುಲ್ಲಕ ರಾಜಕೀಯಕ್ಕಾಗಿ ಅವಹೇಳನ ಮಾಡಿರುವುದನ್ನು ಖಂಡಿಸಿದರು.

    ಬಿಜೆಪಿ ಸೋಲಿನ ಭೀತಿಯಿಂದ ಹತಾಶೆಗೊಂಡು ಸಿ.ಟಿ. ರವಿ ಅವರು ಮನಬಂದಂತೆ ಮಾತನಾಡುತ್ತಿದ್ದಾರೆ, ಇಂದಿರಾ ಗಾಂಧಿ, ಸೋನಿಯಾ ಗಾಂಧಿ, ರಾಜೀವ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿ ಇವರುಗಳನ್ನು ಕೀಳಾಗಿ ಕಾಣುವ ಮೂಲಕ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದ್ದಾರೆಂದು ದೂರಿದರು.

    ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಇಂದಿರಾ ಗಾಂಧಿ, ರಾಜೀವ್ ಗಾಂಧಿಯವರ ದೇಶಪ್ರೇಮವನ್ನು ಬಿಜೆಪಿ ಮುಖಂಡರಿಗೆ ಸಹಿಸಿಕೊಳ್ಳಲಾಗದೆ ಅವಹೇಳನಕಾರಿ ಹೇಳಿಕೆಯಲ್ಲಿ ತಲ್ಲೀನರಾಗಿದ್ದಾರೆಂದು ಟೀಕಿಸಿದ ಅವರು, ದೇಶಕ್ಕೆ ನಿಮ್ಮ ಕೊಡುಗೆ ಏನು ಎಂದು ಪ್ರಶ್ನಿಸಿದರು.

    ಸಿ.ಟಿ. ರವಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ನಾಯಕರ ಬಗ್ಗೆ ಅವಾಚ್ಯವಾಗಿ ಮಾತನಾಡಿ, ಅವರ ಬೂಟ್ ನೆಕ್ಕುವ ಪದ ಬಳಸಿದರೆ ರವಿಯವರ ಎಲ್ಲಾ ಕಾರ್ಯಕ್ರಮಗಳಿಗೆ ಕಪ್ಪು ಬಾವುಟ ಪ್ರದರ್ಶಿಸುವುದಾಗಿ ಎಚ್ಚರಿಸಿದರು.

    ಕಾಂಗ್ರೆಸ್ ಪಕ್ಷ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರು ಹಾಕಿಕೊಟ್ಟಂತ ಸಂವಿಧಾನದ ಆಶಯದಂತೆ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬಂತೆ ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗ ಮೂರು ಅಂಗಗಳಲ್ಲಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.

    ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸುತ್ತೇವೆ ಎಂಬ ಹೇಳಿಕೆಯಿಂದಾಗಿ ಚುನಾವಣೆ ಸಂದರ್ಭದಲ್ಲಿ ಜನರಿಂದ ತಿರಸ್ಕಾರಗೊಂಡಿರುವ ಸಿ.ಟಿ. ರವಿ ಸಂವಿಧಾನದ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದು ಲೇವಡಿ ಮಾಡಿದರು.

    ಧಾರ್ಮಿಕ ಭಾವನೆಗಳನ್ನು ಕೆರಳಿಸಿ ಜಾತಿ-ಜಾತಿಗಳ ಮಧ್ಯೆ ವಿಶಬೀಜ ಬಿತ್ತಿ ಅಧಿಕಾರಕ್ಕಾಗಿ ಆಸೆಪಡುತ್ತಿರುವ ನೀವು ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿದ್ದೀರಿ ಎಂದು ಕುಟುಕಿದರು.

    ಸಂವಿಧಾನ ಮತ್ತು ದೇಶದ ಜನರನ್ನು ರಕ್ಷಣೆ ಮಾಡುವುದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂಬುದನ್ನು ಮನಗಾಣಬೇಕು ಎಂದು ಹೇಳಿದರು.
    ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಲಾಕೇಶ್. ಆರ್, ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಹಿರೇಮಗಳೂರು ರಾಮಚಂದ್ರ, ಜಗದೀಶ್, ಮಲ್ಲೇಶ್ ಸ್ವಾಮಿ, ಗಂಗಾಧರ್, ಲಕ್ಯಾ ಸಿದ್ದೇಶ್, ಹಿರೇಗೌಜ ಶಿವು, ನವೀನ್ ಎತ್ತಿನಮನೆ, ಅಭಿಷೇಕ್, ಆದರ್ಶ್ ಬಹುಜನ್, ಮದನ್, ಪವನ್ ಮತ್ತಿತರರು ಉಪಸ್ಥಿತರಿದ್ದರು.

    Youth Congress protests against BJP’s insults towards Congress leaders

  • ಚಿಕ್ಕಮಗಳೂರಿನಿಂದ ಹಿಂದೂಗಳ ಶ್ರದ್ಧಾಕೇಂದ್ರ ತಿರುಪತಿಗೆ ಹೊಸ ರೈಲು

    ಚಿಕ್ಕಮಗಳೂರಿನಿಂದ ಹಿಂದೂಗಳ ಶ್ರದ್ಧಾಕೇಂದ್ರ ತಿರುಪತಿಗೆ ಹೊಸ ರೈಲು

    ಚಿಕ್ಕಮಗಳೂರು:  ಕಾಫಿನಾಡಿನ ಜನರಿಗೆ ರೈಲ್ವೇ ಇಲಾಖೆ ಸಿಹಿ ಸುದ್ದಿ ನೀಡಿದೆ. ಚಿಕ್ಕಮಗಳೂರಿನಿಂದ ಹಿಂದೂಗಳ ಶ್ರದ್ಧಾಕೇಂದ್ರ ತಿರುಪತಿಗೆ ಹೊಸ ರೈಲು ಸಂಚಾರಕ್ಕೆ ಅನುಮೋದನೆ ನೀಡಿದೆ. ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅವರ ಅವಿರತ ಪ್ರಯತ್ನದ ಫಲವಾಗಿ ಜಿಲ್ಲೆಯ ಜನರ ಬಹುದಿನದ ಕನಸು ಇದೀಗ ನನಸಾಗಿದೆ.

    ರಾಜ್ಯ ರೈಲ್ವೆ ಖಾತೆ ಸಚಿವ ಸೋಮಣ್ಣರವರ ಸಹಕಾರದೊಂದಿಗೆ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಚಿಕ್ಕಮಗಳೂರು-ಬೆಂಗಳೂರು-ತಿರುಪತಿ ಎಕ್ಸ್ ಪ್ರೆಸ್ ರೈಲಿಗೆ ಅನುಮೋದನೆ ನೀಡಿದ್ದಾರೆ. ಸಧ್ಯ ಈ ರೈಲು ಪ್ರಾಯೋಗಿಕವಾಗಿ ವಾರಕ್ಕೊಂದು ಬಾರಿ ಸಂಚಾರ ನಡೆಸಲಿದ್ದು, ಪ್ರತಿ ಶುಕ್ರವಾರ ಸಂಜೆ ೫.೩೦ ಕ್ಕೆ ಚಿಕ್ಕಮಗಳೂರು ಬಿಟ್ಟು, ಶನಿವಾರ ಬೆಳಗ್ಗೆ ೭.೪೦ ಕ್ಕೆ ತಿರುಪತಿ ತಲುಪಲಿದೆ.

    ತಿರುಪತಿಯಿಂದ ಚಿಕ್ಕಮಗಳೂರಿಗೆ ಪ್ರತಿ ಗುರುವಾರ ರಾತ್ರಿ ೯ ಕ್ಕೆ ರೈಲು ಹೊರಡಲಿದ್ದು, ಶುಕ್ರವಾರ ಬೆಳಗ್ಗೆ ೧೦.೩೦ ಕ್ಕೆ ಚಿಕ್ಕಮಗಳೂರು ತಲುಪಲಿದೆ.
    ಚಿಕ್ಕಮಗಳೂರು ನಿಲ್ದಾಣದಿಂದ ಹೊರಡುವ ರೈಲು ಮಾರ್ಗ ಮಧ್ಯೆ ಸಖರಾಯಪಟ್ಟಣ, ಬಿಸಲೇಹಳ್ಳಿ, ಕಡೂರು, ಬೀರೂರು, ದೇವನೂರು, ಅರಸೀಕರೆ, ತಿಪಟೂರು, ತುಮಕೂರು, ಚಿಕ್ಕಬಾಣಾವರ, ಬೆಂಗಳೂರು, ಕೆ.ಆರ್.ಪುರಂ. ವೈಟ್ ಫೀಲ್ಡ್, ಬಂಗಾರಪೇಟೆ, ಕುಪ್ಪಂ, ಜೋಲಾರ್‌ಪೇಟ್, ಕಟ್ಪಾಡಿ, ಚಿತ್ತೂರು ಹಾಗೂ ಪಾಕಲಾದಲ್ಲಿ ನಿಲುಗಡೆ ನೀಡಲಿದೆ.

    ತಿರುಪತಿಗೆ ನೇರ ರೈಲು ಬಿಟ್ಟಿರುವುದರಿಂದ ಚಿಕ್ಕಮಗಳೂರು ತಾಲ್ಲೂಕು ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಜನತೆಗೆ ಅನುಕೂಲವಾಗಲಿದೆ. ಮಲೆನಾಡಿನ ೫ ತಾಲ್ಲೂಕುಗಳ ಜನರು ಜಿಲ್ಲಾ ಕೇಂದ್ರ ಚಿಕ್ಕಮಗಳೂರಿನಿಂದ ರೈಲು ಹತ್ತಲು ಅನುಕೂಲವಾದರೆ, ಬಯಲಿನ ೪ ತಾಲ್ಲೂಕುಗಳ ಜನರು ಕಡೂರು ಅಥವಾ ಬೀರೂರು ರೈಲ್ವೇ ನಿಲ್ದಾಣದಿಂದ ಪ್ರಯಾಣ ಬೆಳೆಸಲು ಅನುಕೂಲವಾಗಿದೆ.

    ಪ್ರಯಾಣಿಕರ ಬೇಡಿಕೆಯ ಮೇರೆಗೆ ನಂತರದ ದಿನಗಳಲ್ಲಿ ವಾರಕ್ಕೆ ಮೂರು ದಿನ ರೈಲು ಓಡಿಸುವ ಯೋಜನೆಯನ್ನು ಸಿದ್ಧಪಡಿಸಲಾಗಿದೆ.
    ಈ ರೈಲಿನ ಪ್ರಯೋಜನವನ್ನು ಬಳಸಿಕೊಳ್ಳುವಂತೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಮನವಿ ಮಾಡಿದ್ದಾರೆ. ಚಿಕ್ಕಮಗಳೂರಿಗೆ ಹೊಸ ರೈಲು ಘೋಷಣೆ ಆಗಿರುವುದರಿಂದ ಸಂಸದರಿಗೆ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ.

    New train from Chikkamagaluru to Tirupati the Hindu pilgrimage center

  • ಬೆಂಗಳೂರು ನಿರ್ಮಾಣಕ್ಕೆ ಕೆಂಪೇಗೌಡರ ಕೊಡುಗೆ ಅಪಾರ

    ಬೆಂಗಳೂರು ನಿರ್ಮಾಣಕ್ಕೆ ಕೆಂಪೇಗೌಡರ ಕೊಡುಗೆ ಅಪಾರ

    ಚಿಕ್ಕಮಗಳೂರು:  ಬೆಂಗಳೂರು ನಗರ ನಿರ್ಮಾಣಕ್ಕೆ ನಾಡಪ್ರಭು ಕೆಂಪೇಗೌಡರ ಕೊಡುಗೆ ಅಪಾರ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ತಿಳಿಸಿದರು.

    ಜಿಲ್ಲಾಡಳಿತದ ವತಿಯಿಂದ ಇಂದು ನಗರದ ಕುವೆಂಪು ಕಲಾ ಮಂದಿರದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಕೆಂಪೇಗೌಡ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.

    ೧೬ನೇ ಶತಮಾನದ ವಿಜಯನಗರ ಸಾಮ್ರಾಜ್ಯದ ಆಡಳಿತ ಕಾಲದಲ್ಲಿದ್ದಂತೆ ಬೆಂಗಳೂರು ನಗರವನ್ನು ನಿರ್ಮಿಸಬೇಕೆಂಬ ದೂರದೃಷ್ಟಿ ಇಟ್ಟುಕೊಂಡಿದ್ದರು. ತಮ್ಮದೇ ಆದ ಕೊಡುಗೆ ನೀಡಿ ಈ ನಗರವನ್ನು ನಿರ್ಮಿಸಿ ತಮ್ಮ ಕನಸಿನ ನಗರಿಯನ್ನಾಗಿ ಮಾಡಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ. ಅವರು ಕಟ್ಟಿದ ಕೆರೆಗಳು. ರಸ್ತೆಗಳು, ಮಾರುಕಟ್ಟೆ ವ್ಯವಸ್ಥೆ ಇಂದಿಗೂ ನಮ್ಮ ಬೆಂಗಳೂರಿಗೆ ವಿಶೇಷ ಮೆರುಗು ತಂದುಕೊಟ್ಟಿವೆ. ಬೆಂಗಳೂರನ್ನು ಸಿಲಿಕಾನ್ ವ್ಯಾಲಿ ಆಫ್ ದಿ ವರ್ಲ್ಡ್ ಎಂದು ಕರೆದರೂ ತಪ್ಪಾಗಲಾರದು. ಈ ರೀತಿ ಬೃಹದಾಕಾರದಲ್ಲಿ ಬೆಳೆಯಲು ಹಾಗೂ ಈ ನಗರ ಇಂದು ವಿಶ್ವಮಾನ್ಯತೆ ಪಡೆಯಲು ಅವರು ಹಾಕಿಕೊಟ್ಟ ಮೇಲ್ಪಂಕ್ತಿಯೇ ಕಾರಣ ಎಂದರು.

    ಇಂದು ಸುಭದ್ರವಾದ ಬೆಂಗಳೂರು ನಿರ್ಮಾಣದ ಜೊತೆಗೆ ಜನಪರ ಕಾರ್ಯಕ್ರಮಗಳನ್ನು ಕೈಗೊಂಡರು. ಬಾಲ್ಯದಲ್ಲಿ ಚುರುಕಾಗಿಯೇ ಇದ್ದ ಅವರು ಗುರುಕುಲದಲ್ಲಿ ಸಾಮಾನ್ಯ ಶಿಕ್ಷಣದ ಜೊತೆಗೆ ರಾಜ ನೀತಿ, ಆರ್ಥಿಕ ತಿಳುವಳಿಕೆ, ಕುಸ್ತಿ, ಯುದ್ಧ ಕಲೆಗಳನ್ನು ಕಲಿತಿದ್ದರು. ವಿಜಯನಗರದ ಧಾರ್ಮಿಕ ಮತ್ತು ಸಾಂಸ್ಕೃತಿಕ ಸಿರಿಯನ್ನು ಕಣ್ಣಾರೆ ಕಂಡಿದ್ದ ಅವರು ಎಲ್ಲ ವೈಭವಗಳನ್ನು ಪುನರ್ ಪ್ರತಿಷ್ಠಾಪಿಸುವ ಬಯಕೆ ಹೊಂದಿದ್ದರು. ರಾಜಧಾನಿ ಕಟ್ಟಿದ ನಂತರ ಅಲ್ಲಿ ನಾಲ್ಕು ಮಹಾದ್ವಾರಗಳನ್ನು ರಚಿಸಿದರು ಎಂದು ಹೇಳಿದರು. ವ್ಯಾಪಾರಿಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟು ಅವರ ವೃತ್ತಿಗನುಸಾರವಾಗಿ ಅಕ್ಕಿಪೇಟೆ, ರಾಗಿಪೇಟೆ, ಕುಂಬಾರಪೇಟೆ, ಬಳೆಪೇಟೆ ಹೀಗೆ ಅನೇಕ ಪೇಟೆಗಳನ್ನು ನಿರ್ಮಿಸಿದರು ಎಂದು ತಿಳಿಸಿದರು.

    ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ನಾಡ ಪ್ರಭು ಕೆಂಪೇಗೌಡರು ಉತ್ತಮ ಕೃಷಿ ಚಟುವಟಿಕೆಗಳಿಗೆ ಹಾಗೂ ಜನ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಹಲವಾರು ಕೆರೆಗಳನ್ನು ನಿರ್ಮಿಸಿದರು. ಧಾರ್ಮಿಕತೆಗೆ ಪ್ರತೀಕವಾಗಿ ದೇವಸ್ಥಾನಗಳನ್ನು ಕಟ್ಟಿಸಿದರಲ್ಲದೇ ವಿವಿಧ ಉದ್ಯಾನವನಗಳನ್ನು ನಿರ್ಮಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಬೆಂಗಳೂರನ್ನು ಜಾಗತಿಕವಾಗಿ ಗುರುತಿಸಲು ಕೆಂಪೇಗೌಡರ ಕೊಡುಗೆ ಅವಿಸ್ಮರಣೀಯವಾದದ್ದು. ನಾಡಪ್ರಭು ಕೆಂಪೇಗೌಡರ ಆದರ್ಶಗಳು ಇಂದು ನಮಗೆಲ್ಲರಿಗೂ ದಾರಿ ದೀಪವಾಗಿವೆ ಎಂದು ತಿಳಿಸಿದ ಅವರು ಇಂದು ವಿಶ್ವ ಭೂಪಟದಲ್ಲಿ ಬೆಂಗಳೂರು ರಾರಾಜಿಸುತ್ತಿರುವುದಕ್ಕೆ ಕೆಂಪೇಗೌಡರ ದೂರದೃಷ್ಟಿಯೇ ಕಾರಣ ಎಂದು ಹೇಳಿದರು.

    ಬಸವನಹಳ್ಳಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಹಿರಿಯ ಕನ್ನಡ ಉಪನ್ಯಾಸಕ ಡಾ.ಎಚ್.ಎಸ್.ಸತ್ಯನಾರಾಯಣ ಉಪನ್ಯಾಸ ನೀಡಿ, ಮಾನವ ಸಂಪನ್ಮೂಲವೇ ಒಂದು ನಾಡಿನ ಅತ್ಯಮೂಲ್ಯ ಸಂಪನ್ಮೂಲ ಎಂದು ಅರಿತಿದ್ದ ಕೆಂಪೇಗೌಡರು, ನಾಡಿನ ಕುಶಲಕರ್ಮಿಗಳ ಕೌಶಲವನ್ನು ದೇಶದ ಒಳಿತಿಗೆ ಹಾಗೂ ಪ್ರಗತಿಗೆ ಬಳಸಿದಾಗ ದೇಶವು ಪ್ರಗತಿಯ ಪಥದಲ್ಲಿ ಸಾಗುತ್ತದೆ ಎಂದು ಮನಗಂಡಿದ್ದರು. ಹೀಗಾಗಿಯೇ, ತಮ್ಮ ಕಾಲಮಾನದ ಎಲ್ಲ ಕ್ಷೇತ್ರದ ಅತ್ಯುತ್ತಮ ಪ್ರತಿಭೆಗಳನ್ನು ಗುರುತಿಸಿ ಆಶ್ರಯ ನೀಡಿದರು. ಅವರ ದೂರದೃಷ್ಟಿಯ ಫಲದಿಂದಾಗಿಯೇ ಬೆಂಗಳೂರಿಗೆ ಜಾಗತಿಕ ಮಟ್ಟದಲ್ಲಿ ‘ಸಿಲಿಕಾನ್ ಸಿಟಿ’ ಎಂಬ ಅಭಿದಾನ ದಕ್ಕಿತು ಎಂದರು.

    ಅಪ್ರತಿಮ ಕರ್ತೃತ್ವ ಶಕ್ತಿ ಹೊಂದಿದ್ದ ಧೀಮಂತ ನಾಯಕರಾದ ಅವರು, ಪ್ರಾಚೀನ ಕಾಲದಿಂದಲೂ ವಾಣಿಜ್ಯ ಪಥಗಳು ಸಾಗುತ್ತಿದ್ದ ಭೌಗೋಳಿಕವಾಗಿ ಆಯಕಟ್ಟಿನ ಪ್ರದೇಶದಲ್ಲಿ ಬೆಂಗಳೂರು ನಿರ್ಮಿಸಿದರು. ಕ್ರಿ.ಶ. ೧೫೩೭ರಲ್ಲಿ ಕೆಂಪೇಗೌಡರು ‘ದೇವರಾಯಪಟ್ಟಣ’ ಎಂಬ ಹೆಸರಿನಲ್ಲಿ ಉತ್ಪಾದನೆ ಮತ್ತು ವಾಣಿಜ್ಯ ಕೇಂದ್ರವಾಗಿ ರೂಪಿಸಿದ ತಮ್ಮ ಹೊಸ ರಾಜಧಾನಿ ಬೆಂಗಳೂರು ನಗರವನ್ನು ಕಟ್ಟಿ, ಅದಕ್ಕೆ ನಾಲ್ಕು ದಿಕ್ಕಿನಲ್ಲಿ ನಾಲ್ಕು ಗುಡಿ ಗೋಪುರಗಳನ್ನು ನಿರ್ಮಿಸಿದರು. ನಗರದ ಸುತ್ತ ಕಂದಕವುಳ್ಳ ಮಣ್ಣಿನ ಕೋಟೆ ನಿರ್ಮಿಸಿ, ಅದರ ಎಲ್ಲ ದಿಕ್ಕಿನಲ್ಲಿ ಕೆರೆಗಳನ್ನು ಕಟ್ಟಿಸಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಿದರು. ಕುಶಲಕರ್ಮಿಗಳಿಗೆ ಅಗತ್ಯವಾದ ವೈವಿಧ್ಯಮಯ ವಸ್ತುಗಳ ಉತ್ಪಾದನೆ ಮತ್ತು ಮಾರಾಟಕ್ಕೆ ವ್ಯವಸ್ಥೆ ಮಾಡಿದ್ದು ನಗರದ ಅಭಿವೃದ್ಧಿಗೆ ಕಾರಣವಾಯಿತು ಎಂದು ಹೇಳಿದರು.

    ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಟಿ.ರಾಜಶೇಖರ್, ಆಶಾಕಿರಣ ಅಂಧ ಮಕ್ಕಳ ಶಾಲೆಯ ಅಧ್ಯಕ್ಷ ಡಾ.ಜೆ.ಪಿ.ಕೃಷ್ಣೇಗೌಡ, ನಗರಸಭೆ ಹಂಗಾಮಿ ಅಧ್ಯಕ್ಷೆ ಅನು ಮಧುಕರ್, ಕುವೆಂಪು ಕಲಾ ಸೇವಾ ಸಂಘದ ಅಧ್ಯಕ್ಷ ಕೆ.ಮೋಹನ್, ಮುಖಂಡರಾದ ಕೆ.ಟಿ.ರಾಧಾಕೃಷ್ಣ, ಎಐಟಿ ಕಾಲೇಜಿನ ಪ್ರಾಂಶುಪಾಲ ಡಾ.ಸಿ.ಟಿ.ಜಯದೇವ್, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ.ಜಯಕುಮಾರ್, ತಹಸೀಲ್ದಾರ್ ರೇಷ್ಮಾಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

    Kempegowda’s contribution to the construction of Bangalore is immense.