Category: ಚಿಕ್ಕಮಗಳೂರು ನಗರ

  • ಆಧುನಿಕ ನಗರೀಕರಣದ ಅಡಿಪಾಯವೇ ಕೆಂಪೇಗೌಡರು

    ಆಧುನಿಕ ನಗರೀಕರಣದ ಅಡಿಪಾಯವೇ ಕೆಂಪೇಗೌಡರು

    ಚಿಕ್ಕಮಗಳೂರು:  ವಿಶ್ವಮಟ್ಟದಲ್ಲಿ ಬೆಂಗಳೂರನ್ನು ಪ್ರಗತಿಯತ್ತ ಕೊಂಡೊಯ್ಯಲು ಹಾ ಗೂ ಆಧುನಿಕ ನಗರೀಕರಣಕ್ಕೆ ಮೊಟ್ಟಮೊದಲ ಅಡಿಪಾಯ ಹಾಕಿದವರೇ ನಾಡುಪ್ರಭು ಕೆಂಪೇಗೌಡರು ಎಂ ದು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಟಿ.ರಾಜಶೇಖರ್ ಹೇಳಿದರು.

    ನಗರದ ಜಿಲ್ಲಾ ಬಿಜೆಪಿ ಪಾಂಚಜನ್ಯ ಕಚೇರಿಯಲ್ಲಿ ಶುಕ್ರವಾರ ನಡೆದ ನಾಡುಪ್ರಭು ಶ್ರೀ ಕೆಂಪೇಗೌಡರ ೫೧೬ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ ವಿಜಯನಗರ ಸಾಮ್ರಾಜ್ಯದ ಹಂಪಿಯ ವೈಭವವನ್ನು ಕಂಡು ಬೆರಗಾಗಿದ್ದ ಕೆಂಪೇಗೌಡರು ದೂರದೃಷ್ಠಿ ಯಿಂದ ನಿರ್ಮಿಸಿದ ಬೆಂಗಳೂರು ನಗರ ಕರ್ನಾಟಕ ರಾಜ್ಯದ ರಾಜಧಾನಿಯಾಗಿರುವುದಲ್ಲದೆ ಭಾರತದ ಪ್ರ ಮುಖ ನಗರಗಳಲ್ಲಿ ಒಂದಾಗುವ ಜೊತೆಗೆ ಗಾರ್ಡನ್‌ಸಿಟಿಯಾಗಿ ಪರಿವರ್ತನೆಯಾಗಿದೆ ಎಂದರು.

    ರಾಜಧಾನಿಯಲ್ಲ್ಲಿ ನೂರಾರು ದೇವಾಲಯ, ಬೆಂಗಳೂರನ್ನು ನಾಲ್ಕು ದಿಕ್ಕನ್ನು ಪ್ರತಿಬಿಂಬಿಸಲು ಕೋಟೆ ಗಳ ನಿರ್ಮಾಣ, ಸರ್ವ ಜನಾಂಗದ ಅಭಿವೃಧ್ದಿ ದೃಷ್ಟಿಯಿಂದ ಆಯಾ ಸಮಾಜಕ್ಕೆ ಮೀಸಲಿರಿಸಿದ ಹೆಸರಿನಲ್ಲಿ ಬಡಾವಣೆ ಹಾಗೂ ಹದಿನೇಳಕ್ಕೂ ಹೆಚ್ಚು ಪೇಟೆಗಳ ನಿರ್ಮಾಣಕ್ಕೆ ಮೂಲವೇ ಕೆಂಪೇಗೌಡರು ಎಂದು ಬಣ್ಣಿ ಸಿದರು.

    ಪ್ರಸ್ತುತ ದಿನಗಳಲ್ಲಿ ಬೆಂಗಳೂರು ಐಟಿಬಿಟಿ, ಯಾತ್ರಿಕ ನಗರೀಕರಣ ವಿಶ್ವಾದಾದ್ಯಂತ ಹೆಸರು ಸಂಪಾ ದಿಸಲು ಕೆಂಪೇಗೌಡರ ಕೊಡುಗೆ ಬಹಳಷ್ಟಿದೆ. ಅಲ್ಲದೇ ವರಮಾನ ವಿಚಾರದಲ್ಲೂ ತೆರಿಗೆ ರೂಪದಲ್ಲಿ ರಾಜ್ಯ ದಿಂದ ಬಹುದೊಡ್ಡ ಸಾಧನೆಯಿದೆ. ಇಂದಿಗೂ ರಾಜಧಾನಿಯಲ್ಲಿ ಕೋಟ್ಯಾಂತರ ಕುಟುಂಬ ಬೆಳಕು ಕಾಣ ಲು ಕೆಂಪೇಗೌಡರ ನಿರ್ಧಾರಗಳೇ ಕಾರಣ ಎಂದರು.

    ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್‌ಶೆಟ್ಟಿ ಮಾತನಾಡಿ ಕೆಂಪೇಗೌಡರು ಸ್ವಾರ್ಥಕ್ಕೆ ಆಸೆಪಡದೇ ಸ ಮಾಜದ ಹಿತದೃಷ್ಟಿಯಿಂದ ಸಾವಿರಾರು ಎಕರೆಯನ್ನು ಬೃಹತ್ ಬೆಂಗಳೂರು ನಿರ್ಮಾಣಕ್ಕೆ ಮೀಸಲಿಟ್ಟ ಯು ಗಪುರುಷ ಎಂದರೆ ತಪ್ಪಾಗಲಾರದು ಎಂದ ಅವರು ಇಂದಿನ ಯುವಪೀಳಿಗೆ ಕೆಂಪೇಗೌಡರ ಚರಿತ್ರೆ ಅಧ್ಯಯ ನಡೆಸಿ ಇತಿಹಾಸ ಅರಿಯಬೇಕಿದೆ ಎಂದು ಹೇಳಿದರು.

    ಕೆಂಪೇಗೌಡರ ಆಲೋಚನೆಗಳಿಂದ ನೂರಾರು ಕೆರೆಗಳು ಅಭಿವೃದ್ದಿಗೊಂಡರೆ, ಕೆಲವು ರಾಜಕಾರಣಿಗಳ ದುರಾಸೆಯಿಂದ ಕೆರೆಗಳನ್ನು ಮುಚ್ಚಿಸಿ ಸಾಮ್ರಾಜ್ಯವಾಗಿಸಿದ ಕಾರಣ ಮಳೆಗಾಲದಲ್ಲಿ ಬೆಂಗಳೂರಿನ ಕೆಲವು ಬಡಾವಣೆಗಳು ಜಲಾವೃತಗೊಳ್ಳುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಬಿಜೆಪಿ ಜಿಲ್ಲಾ ವಕ್ತಾರ ಸಿ.ಹೆಚ್.ಲೋಕೇಶ್ ಮಾತನಾಡಿ ಬೆಂಗಳೂರಿನಲ್ಲಿ ಸುಮಾರು ೧೦೦ ಕೆರೆಗಳ ಅಭಿವೃದ್ದಿ, ಬೃಹತ್ ನಾಲ್ಕು ಉದ್ಯಾನವನ ನಿರ್ಮಿಸಿ ವಾಯುವಿಹಾರಿಗಳಿಗೆ ಅನುಕೂಲ, ರಾಜಧಾನಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗಲು ಮೂಲವೇ ಕೆಂಪೇಗೌಡ ಮುಂದಾಲೋಚನೆಯಾಗಿದೆ ಎಂದರು.

    ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಅನುಮಧುಕರ್, ಬಿಜೆಪಿ ನಗರಾಧ್ಯಕ್ಷ ಕೆ.ಎಸ್.ಪುಷ್ಪರಾಜ್, ರಾಜ್ಯ ಎಸ್ಸಿ ಮೋರ್ಚಾ ಕಾರ್ಯದರ್ಶಿ ಸೀತರಾಮಭರಣ್ಯ, ಜಿಲ್ಲಾಧ್ಯಕ್ಷ ಕುರುವಂಗಿ ವೆಂಕಟೇಶ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್‌ಕೋಟ್ಯಾನ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಜಸಂತಾ ಅನಿಲ್‌ಕು ಮಾರ್, ಮುಖಂಡರುಗಳಾದ ನಾರಾಯಣಗೌಡ, ಗೌತಮ್‌ಜೈನ್, ಜಯಣ್ಣ, ಸಚಿನ್‌ಗೌಡ, ವೈ.ಜಿ.ಸುರೇ ಶ್, ಓಂಕಾರೇಗೌಡ, ಬಸವರಾಜ್, ಹೆಚ್.ಕೆ.ಕೇಶವಮೂರ್ತಿ, ದುರ್ಗೇಶ್ ಮತ್ತಿತರರು ಉಪಸ್ಥಿತರಿದ್ದರು.

    Kempegowda is the foundation of modern urbanization.

  • ತುರ್ತು ಪರಿಸ್ಥಿತಿ ಘೋಷಣೆ  ಸಂವಿಧಾನದ ಹತ್ಯೆ ಮಾಡಿರುವ ದಿನ

    ತುರ್ತು ಪರಿಸ್ಥಿತಿ ಘೋಷಣೆ ಸಂವಿಧಾನದ ಹತ್ಯೆ ಮಾಡಿರುವ ದಿನ

    ಚಿಕ್ಕಮಗಳೂರು: ತುರ್ತು ಪರಿಸ್ಥಿತಿ ಘೋಷಣೆ, ಪ್ರಜಾತಂತ್ರ ವ್ಯವಸ್ಥೆಯ ಕತ್ತನ್ನು ಹಿಚುಕಿದ. ಸಂವಿಧಾನದ ಹತ್ಯೆ ಮಾಡಿರುವ ದಿನ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ್‌ ಪೂಜಾರಿ ಅವರು ಹೇಳಿದರು.
    ನಗರದ ರಂಗಣ್ಣನವರ ಛತ್ರದಲ್ಲಿ ಸಿಟಿಜನ್ಸ್‌ ಫಾರ್‌ ಸೋಶಿಯಲ್ ಜಸ್ಟೀಸ್‌ ವತಿಯಿಂದ ಗುರುವಾರ ಆಯೋಜಿಸಲಾಗಿದ್ದ ತುರ್ತು ಪರಿಸ್ಥಿತಿ – ಒಂದು ಕರಾಳ ನೆನಪು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತುರ್ತು ಪರಿಸ್ಥಿತಿ ಅತ್ಯಂತ ಘೋರವಾದ ಪ್ರಜಾಪ್ರಭುತ್ವದ ದಕ್ಕೆ ತರುವ ಘಟನೆಯಾಗಿದೆ ಎಂದರು.

    ಬಡವರ ಕೇರಿಗಳಿಗೆ ನುಗ್ಗಿ ಗಂಡಸರ ಸಂತಾನಹರಣ ಮಾಡಿಸುವಂತಹ ಘೋರ ಕೃತ್ಯ ಮಾಡಿದರು. ಸುಮಾರು ಒಂದು ಕೋಟಿ ಜನರಿಗೆ ಬಲವಂತವಾಗಿ ಸಂತಾನಹರಣ ಮಾಡಿದರು. ಕರ್ನಾಟಕದಲ್ಲಿ ಐದು ಜನ ಜೈಲಿನಲ್ಲಿ ಸಾವನ್ನಪಿದರು. ಭಾರತದಲ್ಲಿ 2 ಸಾವಿರಕ್ಕೂ ಹೆಚ್ಚು ಮಂದಿ ಜೈಲಿನಲ್ಲಿಯೇ ಸತ್ತರು. ಅಧಿಕಾರವನ್ನು ಉಳಿಸಿಕೊಳ್ಳಲು ತುರ್ತು ಪರಿಸ್ಥಿತಿ ಹೇರಿದರು. ಪ್ರಜಾಪ್ರಭುತ್ವದ ದೇಗುಲವಾಗಿರುವ ಪಾರ್ಲಿಮೆಂಟ್‌, ವಿಧಾನಸಭೆ, ವಿಧಾನಪರಿಷತ್‌ ಆಳುವವರ ಆಟದ ಅಂಗಳವಾದವು ಎಂದು ಹೇಳಿದರು.
    ಸಂವಿಧಾನ ಹತ್ಯೆ ಮಾಡಿದರು, ಕೋರ್ಟ್‌ಗಳ ಬಾಯಿ ಬಂದ್‌ ಮಾಡಿದರು, ಪತ್ರಿಕೆಗಳನ್ನು ನಿರ್ಬಂಧಿಸಿದವರು ಇಂದು ಸಂವಿಧಾನವನ್ನು ಕೈಯಲ್ಲಿ ಹಿಡಿದು ಸಂವಿಧಾನದ ರಕ್ಷಣೆ ಮಾಡಿ ಎಂದು ಹೇಳುತ್ತಿದ್ದಾರೆ. ಸಂವಿಧಾನ ಗಂಡಾಂತರದಲ್ಲಿ ಇಲ್ಲ, ಇವರು ಗಂಡಾಂತರದಲ್ಲಿ ಇದ್ದಾರೆ ಎಂದರು.

    ಪ್ರಧಾನ ಭಾಷಣ ಮಾಡಿದ ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಚನ್ನಬಸಪ್ಪ ಅವರು, 1975 ರ ಕರಾಳ ದಿನಗಳು ಇಂದಿನ ಯುವ ಪೀಳಿಗೆಗೆ ಗೊತ್ತಿಲ್ಲ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನ ಯಾವ ಯಾವ ಹಂತದಲ್ಲಿ ಕಗ್ಗೊಲೆ ಮಾಡಬಹುದು ಎಂಬುದನ್ನು ಆಗಿನ ಪ್ರಧಾನ ಮಂತ್ರಿ ಇಂದಿರಾಗಾಂಧಿಯವರು ಕಾಂಗ್ರೆಸ್‌ ನಾಯಕರಿಗೆ ಹೇಳಿಕೊಟ್ಟಿದ್ದಾರೆ ಎಂದರು.

    ಆರ್‌ಎಸ್‌ಎಸ್‌ ಸ್ಥಾಪನೆ ಆಗದೆ ಹೋಗಿದ್ದರೆ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ನಾವು ಎಲ್ಲಿಗೋ ಹೋಗುತ್ತಿದ್ದೇವು, ಇಂದಿರಾಗಾಂಧಿಯವರು ತುರ್ತು ಪರಿಸ್ಥಿತಿ ಹೇರಿ ಸುಮ್ಮನೆ ಕೋರಲಿಲ್ಲ. ಹೋರಾಟವನ್ನು ಹತ್ತಿಕ್ಕುವ ಕೆಲಸ ಅವರು ಮಾಡಿದರು. ಜಯಪ್ರಕಾಶ್‌ ನಾರಾಯಣ ನೇತೃತ್ವದ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡಿದರು. 1.25 ಲಕ್ಷ ಜನ ಕೈದಿಯಲ್ಲಿ ಇರಬೇಕಾದ ಜೈಲಿನಲ್ಲಿ 1.75 ಲಕ್ಷ ಜನರನ್ನು ತುಂಬುವ ಕೆಲಸ ಮಾಡಿದರು ಎಂದು ಹೇಳಿದರು.

    ವಿಧಾನಪರಿಷತ್‌ ಸದಸ್ಯ ಸಿ.ಟಿ. ರವಿ ಮಾತನಾಡಿ, ನೆರೆಯ ರಾಷ್ಟ್ರಗಳು ಯುದ್ಧ ಘೋಷಣೆ ಮಾಡಿಲ್ಲ, ಭೂಕಂಪ ಪ್ರಳಯ ನೆರೆ ಪ್ರಾಕೃತಿಕ ವಿಕೋಪಗಳು ಸಹ ತಲೆದೋರಿಲ್ಲ, ಆದರೂ ತುರ್ತು ಪರಿಸ್ಥಿತಿ ಹೇರಿದರು. ಇಂದಿರಾಗಾಂಧಿ ಅವರು ಆಯ್ಕೆ ಸಂಬಂಧ ಅಲಹಬಾದ್‌ ನ್ಯಾಯಾಲಯ ತೀರ್ಪು ನೀಡಿತು. ಗುಜರಾತ್‌ನಲ್ಲಿ ಕಾಂಗ್ರೆಸ್‌ ವಿರುದ್ಧ ಜನತಾ ತೀರ್ಪು ಬಂದಿತ್ತು. ಒಂದೆಡೆ ಜನತಾ ತೀರ್ಪು, ಇನ್ನೊಂದೆಡೆ ನ್ಯಾಯಾಲಯದ ತೀರ್ಪು. ಹೀಗಾಗಿ ಜನ ಆಕ್ರೋಶ, ವಿದ್ಯಾರ್ಥಿಗಳು ಹೋರಾಟಕ್ಕೆ ಇಳಿದರು. ಇಂದಿರಾಗಾಂಧಿಯವರು ದೇಶದ ರಕ್ಷಣೆಗಾಗಿ ಅಲ್ಲ, ತನ್ನ ಖುರ್ಚಿಯ ರಕ್ಷಣೆಗಾಗಿ ತುರ್ತು ಪರಿಸ್ಥಿತಿ ಹೇರಿದರು ಎಂದರು.
    ತುರ್ತು ಪರಿಸ್ಥಿತಿ ಹೇರಿ ಸಂವಿಧಾನದ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದರು.

    ಸಂವಿಧಾನ ಕೋಮ ಸ್ಥಿತಿಯಲ್ಲಿತ್ತು. ಇಂದಿರಾಗಾಂಧಿ ನೇತೃತ್ವದ ಕಾಂಗ್ರೆಸ್‌ ನಡೆಸಿದ ಮಾರಣಾಂತಿಕ ಹಲ್ಲೆ ಕಾರಣದಿಂದ ಸಂವಿಧಾನ ಕೋಮದಲ್ಲಿತ್ತು. ದೇಶಕ್ಕಿಂತ ತಾವು ದೊಡ್ಡವರೆಂದು ಕೆಲವರು ಭಾವಿಸಿದ್ದಾರೆ. ದೇಶಕ್ಕಿಂತ ಯಾರೂ ಕೂಡ ದೊಡ್ಡವರು ಇಲ್ಲ. ಆದರೆ, ಕಾಂಗ್ರೆಸ್ಸಿಗರು ಭಾವಿಸಿದ್ದರೂ, ಸಂವಿಧಾನಕ್ಕಿಂತ ತಾವು ದೊಡ್ಡವರೆಂದು ಇಂದಿರಾಗಾಂಧಿ ಭಾವಿಸಿದ್ದರು ಎಂದು ಹೇಳಿದರು.

    ಪ್ರಧಾನಮಂತ್ರಿ, ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಲೋಕಸಭೆ ಅಧ್ಯಕ್ಷರನ್ನು ಯಾವುದೇ ನ್ಯಾಯಾಲಯ ಪ್ರಶ್ನಿಸುವಂತ್ತಿಲ್ಲ. ಪೂರ್ವಾನ್ವ ಯವಾಗುವಂತೆ, ಸಂವಿಧಾನಕ್ಕಿಂತ ತಾವು ದೊಡ್ಡವರೆಂದು ಇಂದಿರಾಗಾಂಧಿ ಭಾವಿಸಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್‌ ಪಕ್ಷದವರಿಂದ ಕ್ಷಮಾಪಣೆ ಬರುತ್ತದೆ ಎಂದಿದ್ದೇವೆ. ಆದರೆ, ಬರಲಿಲ್ಲ, ಹುಟ್ಟು ಗುಣ ಸುಟ್ಟರೂ ಹೋಗುವುದಿಲ್ಲ ಎಂದರು.

    ಕುರ್ಚಿ ಉಳಿಸಲು ಅಲ್ವ ಸರ್ವಾಧಿಕಾರಿಯಂತೆ ವರ್ತಿಸಿದರು. ಜಗಜೀವನ್‌ರಾಂ ಕಾಂಗ್ರೆಸ್‌ ಯಾಕೆ ಬಿಟ್ರೂ ಗೊತ್ತಾ ಖರ್ಗೆಯವರೇ, ರಾಜಕೀಯ ನೇತಾರರು, ವಕೀಲರು, ಡಾಕ್ಟರ್‌ಗಳನ್ನು ಜೈಲಿಗೆ ಹಾಕಿದ್ರಲಾ ನಿಮಗೆ ನಾಚಿಕೆಯಾಗಬೇಕು. ಅಂಬೇಡ್ಕರ್‌ ಬದುಕಿದ್ರೆ ಈ ಕಾಂಗ್ರೆಸ್ಸಿಗರು ಅವರನ್ನು ಸಹ ಜೈಲಿಗೆ ಹಾಕುತ್ತಿದ್ದರು. ಇವರುಗಳು ಸಂವಿಧಾನದ ಭಕ್ಷಕರು. ನಿರಂತರ ಜಾಗೃತಿ ಮಾತ್ರ ಸಂವಿಧಾನದ ರಕ್ಷಣೆ ಮಾಡುತ್ತದೆ ಎಂದು ಹೇಳಿದರು.

    ಜಿಲ್ಲಾ ಬಿಜೆಪಿ ಅಧ್ಯಕ್ಷ ದೇವರಾಜ್‌ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ನಗರಾಧ್ಯಕ್ಷ ಪುಷ್ಪರಾಜ್‌ ಸ್ವಾಗತಿಸಿದರು. ಬಿಜೆಪಿ ರೈತ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಸಿ. ಕಲ್ಮರುಡಪ್ಪ ಕಾರ್ಯಕ್ರಮ ನಿರೂಪಿಸಿದರು.

    The day the Constitution was assassinated, the state of emergency declared

  • ಜಂಟಿಸರ್ವೇ ಬಳಿಕ ಪ್ಲಾಂಟೇಶನ್ ಭೂಮಿ ಗುತ್ತಿಗೆ ಅರ್ಜಿ ವಿಲೇವಾರಿ

    ಜಂಟಿಸರ್ವೇ ಬಳಿಕ ಪ್ಲಾಂಟೇಶನ್ ಭೂಮಿ ಗುತ್ತಿಗೆ ಅರ್ಜಿ ವಿಲೇವಾರಿ

    ಚಿಕ್ಕಮಗಳೂರು: ಪ್ಲಾಂಟೇಶನ್ ಭೂಮಿಯನ್ನು ಗುತ್ತಿಗೆಗೆ ನೀಡುವ ಯೋಜನೆಗೆ ಅರ್ಜಿ ಸಲ್ಲಿಸಲು ಮತ್ತಷ್ಟು ಕಾಲಾವಕಾಶ ನೀಡಲಾಗಿದ್ದು, ಜಂಟಿ ಸರ್ವೇ ಪೂರ್ಣಗೊಂಡು ಅರಣ್ಯ ಮತ್ತು ಕಂದಾಯ ಭೂಮಿಯ ನಿಖರ ಮಾಹಿತಿ ಲಭ್ಯವಾದ ಬಳಿಕ ಅರ್ಜಿ ವಿಲೇವಾರಿ ಪ್ರಕ್ರಿಯೆಯನ್ನು ಅಭಿಯಾನದ ಮಾದರಿಯಲ್ಲಿ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

    ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ಜಿಲ್ಲೆಯ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಹಳ ದಿನಗಳಿಂದ ಜಂಟಿ ಸರ್ವೇ ಆಗದೆ ಬಾಕಿ ಉಳಿದಿದೆ. ಇದೀಗ ಜಂಟಿ ಸರ್ವೇ ಕೈಗೊಳ್ಳಲು ಅರಣ್ಯ ಇಲಾಖೆಯೊಂದಿಗೆ ಸೇರಿ ನಿಯಮಾವಳಿಗಳನ್ನು ರೂಪಿಸಿ, ಸುತ್ತೋಲೆಗಳನ್ನು ಹೊರಡಿಸಿ, ಹಿಂದಿನಿಂದಲೂ ಉಳಿದಿದ್ದ ಕೆಲಸಕ್ಕೆ ಚಾಲನೆ ನೀಡಲಾಗಿದ್ದು, ಜಂಟಿ ಸರ್ವೇಯನ್ನು ಕಾರ್ಯ ರೂಪಕ್ಕೆ ತಂದಿರುವುದಾಗಿ ತಿಳಿಸಿದರು.

    ಜಂಟಿ ಸರ್ವೇ ಆಗದೆ ಅರ್ಜಿ ವಿಲೇವಾರಿ ಮಾಡಲು ಸಾಧ್ಯವಿಲ್ಲ. ಅರಣ್ಯ ಮತ್ತು ಕಂದಾಯ ಜಮೀನಿನ ನಿಖರತೆ ತಿಳಿಯದಿದ್ದಲ್ಲಿ ಅರ್ಜಿ ವಿಲೇವಾರಿ ಪ್ರಕ್ರಿಯೆ ಸಾಧ್ಯವಾಗದು. ಹಿಂದೆ ಆಗಿರುವಂತೆ ಕಂದಾಯ ಜಮೀನೆಂದು ಅರಣ್ಯ ಭೂಮಿಯನ್ನು ಮಂಜೂರು ಮಾಡಿರುವಂತಹ ತಪ್ಪುಗಳು ಪುನರಾವರ್ತನೆಯಾಗಬಹುದು. ಹೀಗಾಗಿ ಜಂಟಿ ಸರ್ವೇ ಪೂರ್ಣಗೊಂಡ ಬಳಿಕವಷ್ಟೇ ಪ್ಲಾಂಟೇಶನ್ ಭೂಮಿ ಗುತ್ತಿಗೆಗೆ ನೀಡುವ ಕುರಿತ ಅರ್ಜಿಗಳನ್ನು ವಿಲೇವಾರಿ ಮಾಡಲಾಗುತ್ತದೆ. ಎರಡು ವರ್ಷಗಳಲ್ಲಿ ಸಾಕಷ್ಟು ಕಾರ್ಯಗಳು ನಡೆದಿದ್ದು, ಇನ್ನೂ ಸಾಕಷ್ಟು ಕೆಲಸಗಳು ಆಗದೆ ಬಾಕಿ ಉಳಿದಿವೆ. ಹಿಂದೆ ಭೂಮಿ ಮಂಜೂರಾದ ಪ್ರಕರಣಗಳಲ್ಲಿ ಕಾಲ ಕಾಲಕ್ಕೆ ದಾಖಲಾತಿಗಳನ್ನು ನೀಡುವ ಕಾರ್ಯ ನಡೆದಿದ್ದಲ್ಲಿ ಇಷ್ಟೊಂದು ಸಮಸ್ಯೆಯಾಗುತ್ತಿರಲಿಲ್ಲ ಎಂದರು.

    ಪೌತಿ ಖಾತೆ ಬದಲಾವಣೆ ಮಾಡುವ ಪ್ರಕ್ರಿಯೆ ಹಿಂದಿನಿಂದಲೂ ಕಾಲ ಕಾಲಕ್ಕೆ ಆಗಬೇಕಿತ್ತು. ಅದು ಬಾಕಿ ಉಳಿದಿವೆ. ಅವುಗಳ ಖಾತೆಯನ್ನೂ ನಾವು ಬದಲಾವಣೆ ಮಾಡಬೇಕಾಗಿದೆ. ಕಳೆದ ಎರಡು ವರ್ಷಗಳಲ್ಲಿ ಸಾಕಷ್ಟು ಖಾತೆ ಬದಲಾವಣೆ ಮಾಡಲಾಗಿದ್ದರೂ ಇನ್ನೂ ಸಾಕಷ್ಟು ಪ್ರಕರಣಗಳು ನಮ್ಮ ಮುಂದಿವೆ. ನಮ್ಮ ಸಿಬ್ಬಂದಿಗೆ ಕೆಲಸದ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಇ-ಆಫೀಸ್ ವ್ಯವಸ್ಥೆಯನ್ನು ತಾಲ್ಲೂಕು ಕಚೇರಿ ಹಾಗೂ ನಾಡ ಕಚೇರಿವರೆಗೂ ವಿಸ್ತರಿಸಿದ್ದೇವೆ. ಗ್ರಾಮ ಲೆಕ್ಕಿಗರಿಗೆ ಲ್ಯಾಪ್‌ಟಾಪ್ ಒದಗಿಸಲಾಗಿದ್ದು, ಅವರು ಕ್ಷೇತ್ರದಲ್ಲಿ ಕಾರ್ಯನಿರತರಾಗಿದ್ದಾಗಲೇ ನೇರವಾಗಿ ಅಲ್ಲಿಂದಲೇ ಅಪ್‌ಲೋಡ್ ಮಾಡುವಂತಾದರೆ ಅವರಿಗೂ ಕೆಲಸದ ಒತ್ತಡ ಕಡಿಮೆಯಾಗಲಿದೆ. ಆಗಬೇಕಾಗಿರುವ ಕೆಲಸಗಳಿಗೆ ಹೆಚ್ಚಿನ ಗಮನವನ್ನು ನೀಡಬೇಕಾಗಿದೆ ಎಂದರು

    ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡ ನಿರ್ಮಾಣ ಆಗಬೇಕೆನ್ನುವುದು ಬಹುದಿನಗಳ ಬೇಡಿಕೆ. ಇದೀಗ ನಿಂತು ಹೋಗಿರುವ ಕಾಮಗಾರಿಯ ಎರಡನೇ ಹಂತಕ್ಕೆ ಅಗತ್ಯ ಅನುದಾನ ಮಂಜೂರಾದಲ್ಲಿ ಈ ಜಿಲ್ಲೆಯ ಬಹುದಿನಗಳ ನಿರೀಕ್ಷೆ ಈಡೇರಲಿದೆ. ಜಿಲ್ಲೆಯಲ್ಲಿ ಹೊಸ ತಾಲ್ಲೂಕುಗಳ ರಚನೆಗೆ ಪೂರಕವಾಗಿ ಕಳಸ ಹಾಗೂ ಅಜ್ಜಂಪುರಕ್ಕೆ ತಾಲ್ಲೂಕು ಆಡಳಿತ ಕಚೇರಿಯನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.

    ಹತ್ತಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಪ್ರಕರಣಗಳನ್ನು ಹೊರ ತೆಗೆದು ಅವುಗಳಿಗೆ ಶಾಶ್ವತ ಪರಿಹಾರವನ್ನು ಒದಗಿಸುವ ಮೂಲಕ ಜನರು ನೆಮ್ಮದಿಯಿಂದ ಬದುಕಬೇಕು ಎನ್ನುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುತ್ತಿದೆ. ಹಿಂದೆ ೧೦, ೩೦, ೪೦, ೫೦ ವರ್ಷಗಳಿಂದ ಮಂಜೂರಾಗಿರುವ ಭೂಮಿಗಳಿಗೆ ಇಂದಿಗೂ ಪೋಡಿ ಮಾಡಿಕೊಡದೇ ಇರುವುದರಿಂದ ಆ ಜನರು ಕಚೇರಿಗಳಿಗೆ ಅಲೆಯುತ್ತಿದ್ದಾರೆ. ಹಿಂದೆ ಜಮೀನು ಮಂಜೂರು ಮಾಡುವತ್ತ ಮಾತ್ರ ಗಮನ ಹರಿಸಲಾಗಿತ್ತು. ಅಂದೇ ಪೋಡಿಗಳನ್ನು ದುರಸ್ತಿಪಡಿಸಿ ದಾಖಲಾತಿಗಳನ್ನು ಒದಗಿಸಿದ್ದರೆ ಇಂದು ಇಷ್ಟೊಂದು ಕಡತಗಳು ಕಳೆದುಹೋಗಿವೆ ಎನ್ನುವ ಸಮಸ್ಯೆಗಳು ಎದುರಾಗುತ್ತಿರಲಿಲ್ಲ. ಅಂಥವುಗಳನ್ನು ಹುಡುಕಿ ಅವುಗಳನ್ನು ಅಭಿಯಾನದ ರೂಪದಲ್ಲಿ ಕಾರ್ಯಗತಗೊಳಿಸುವ ಕಾರ್ಯವನ್ನು ಇಲಾಖೆ ಕೈಗೆತ್ತಿಕೊಂಡಿದೆ ಎಂದು ಹೇಳಿದರು.

    ಹಿಂದೆ ಅರ್ಜಿ ಕೊಟ್ಟವರಿಗೆ ಮಾತ್ರ ಪೋಡಿ ಮಾಡಿಕೊಡಲಾಗುತ್ತಿತ್ತು. ಇದರಿಂದ ಯಾರು ಶಕ್ತರಿದ್ದಾರೆ ಅಂಥವರು ಮಾತ್ರ ಪ್ರಯೋಜನ ಪಡೆದುಕೊಳ್ಳುತ್ತಿದ್ದರು. ಇದೀಗ ನಾವೇ ರೈತರ ಮನೆ ಬಾಗಿಲಿಗೆ ಹೋಗಿ ಪೋಡಿ ಮಾಡಿಕೊಡುವ ಪ್ರಕ್ರಿಯೆಯನ್ನು ಆರಂಭಿಸಿದ್ದೇವೆ. ಹಿಂದಿನ ದಾಖಲೆಗಳನ್ನು ಪರಿಶೀಲಿಸಿದಾಗ, ಮೂರು ವರ್ಷದಲ್ಲಿ ಕೇವಲ ೫೮೦೦ ಪ್ರಕರಣಗಳು ಮಾತ್ರ ಪೋಡಿ ದುರಸ್ತಿಯಾಗಿದ್ದವು. ಅಭಿಯಾನ ಆರಂಭವಾಗಿ ಕಳೆದ ಏಳೆಂಟು ತಿಂಗಳಲ್ಲಿ ನಾವು ರೈತರಿಗೆ ಮಂಜೂರಾದ ೮೨ ಸಾವಿರ ಜಮೀನುಗಳನ್ನು ಅಳತೆ ಮಾಡಲಾಗಿದೆ. ನಮ್ಮ ಇಲಾಖೆಯ ಅಧಿಕಾರಿಗಳೇ ಮನೆ ಬಾಗಿಲಿಗೆ ಹೋಗಿ ಈ ಕೆಲಸ ಮಾಡಿಕೊಟ್ಟಿದ್ದಾರೆ. ಇದರಿಂದಾಗಿ ಅವರಿಗೆ ದೊರೆಯದಿದ್ದ ಎಲ್ಲಾ ಹಕ್ಕುಗಳು ದೊರಕಿವೆ ಎಂದು ತಿಳಿಸಿದರು.

    ಕಂದಾಯ ಗ್ರಾಮ ಉಪ ಗ್ರಾಮಗಳನ್ನು ಮಾಡಿರುವುದರಿಂದ ಕಳೆದ ಎರಡು ವರ್ಷಗಳಲ್ಲಿ ಸುಮಾರು ೧.೧೧ ಲಕ್ಷಗಳಷ್ಟು ಜನರಿಗೆ ಹಕ್ಕುಪತ್ರಗಳನ್ನು ನೀಡಲಾಗಿದೆ. ಈ ಜಿಲ್ಲೆಯಲ್ಲಿ ೩೦೦ ಗ್ರಾಮಗಳನ್ನು ೩೦೦ ಉಪ ಗ್ರಾಮಗಳನ್ನು ಅರ್ಹವಾಗಿರುವವೆಂದು ಗುರುತಿಸಲಾಗಿದೆ. ಅವೆಲ್ಲವನ್ನು ಸರಿಪಡಿಸಿದರೆ ಸುಮಾರು ಈಗಾಗಲೇ ಆಗಿರುವ ಪ್ರಕರಣಗಳ ಹೊರತಾಗಿ ಇನ್ನೂ ೬೦೦ ವಸತಿ ಪ್ರದೇಶಗಳಿಗೆ ದಾಖಲೆ ಒದಗಿಸುವಂತಹ ಕಾರ್ಯ ಆಗಲಿದೆ. ಅದನ್ನು ಮುಂದಿನ ಆರು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ ಎಂದರು.

    ಮಲೆನಾಡು ಪ್ರದೇಶಗಳಲ್ಲಿ ಹೆಚ್ಚು ಮಳೆ ಬೀಳುವ ಸಂದರ್ಭದಲ್ಲಿ ಗುಡ್ಡದ ಮೇಲೆ ಹಾಗೂ ಗುಡ್ಡದ ಕೆಳಗೆ ವಾಸಿಸುವ ಜನರನ್ನು ಮುಂಚಿತವಾಗಿ ಬೇರೆಡೆಗೆ ವಾಸಿಸಲು ವ್ಯವಸ್ಥೆ ಮಾಡಬೇಕು. ಸಮಸ್ಯೆಯಾಗುವ ಮೊದಲೇ ಪ್ರಾಣಹಾನಿಯಾಗುವುದನ್ನು ತಡಗಟ್ಟಲು ಕ್ರಮ ವಹಿಸಬೇಕು. ಮಲೆನಾಡು ಹಾಗೂ ಕರಾವಳಿ ಪ್ರದೇಶಗಳ ಗುಡ್ಡ ಕುಸಿತವನ್ನು ತಡೆಯಲು ೪೦೦ ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅನುದಾನ ಬಂದ ತಕ್ಷಣ ಹಣ ಬಿಡುಗಡೆ ಮಾಡಲಾಗುವುದು. ಟೆಂಡರ್ ಕರೆದು ಕಾಮಗಾರಿ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

    ಸಭೆಯಲ್ಲಿ ಶಾಸಕ ಹಾಗೂ ಕ್ರೆಡಿಲ್ ಅಧ್ಯಕ್ಷ ಟಿ.ಡಿ.ರಾಜೇಗೌಡ, ಶಾಸಕರುಗಳಾದ ಜಿ.ಹೆಚ್.ಶ್ರೀನಿವಾಸ್, ಕೆ.ಎಸ್.ಆನಂದ್, ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್., ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ, ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಬಾಬು, ಭದ್ರಾವತಿ ಉಪವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ಆಶಿಶ್ ರೆಡ್ಡಿ, ಕೊಪ್ಪ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಲ್.ನಂದೀಶ್ ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ, ಉಪವಿಭಾಗಾಧಿಕಾರಿಗಳಾದ ಕಾಂತರಾಜ್, ಸುದರ್ಶನ್ ಬಿ.ಕೆ., ಎಲ್ಲಾ ತಾಲ್ಲೂಕುಗಳ ತಹಸೀಲ್ದಾರರು ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

    Disposal of plantation land lease application after joint survey

  • ರಾಜ್ಯಾದ್ಯಂತ ತೆರೆಕಂಡ ‘ಎಕ್ಸ್ ಅಂಡ್ ವೈ’ ಚಲನಚಿತ್ರ

    ರಾಜ್ಯಾದ್ಯಂತ ತೆರೆಕಂಡ ‘ಎಕ್ಸ್ ಅಂಡ್ ವೈ’ ಚಲನಚಿತ್ರ

    ಚಿಕ್ಕಮಗಳೂರು : ರಾಮಾ ರಾಮಾ ರೇ, ಒಂದಲ್ಲ ಎರಡಲ್ಲ ‘ಮ್ಯಾನ್ ಆಫ್ ದಿ ಮ್ಯಾಚ್ ಚಲನಚಿತ್ರಗಳ ಖ್ಯಾತಿಯ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಡಿ. ಸತ್ಯಪ್ರಕಾಶ್ ನಿರ್ಮಿಸಿ ನಿರ್ದೇಶಿಸಿರುವುದರ ಜೊತೆಗೆ ಪ್ರಮುಖ ಪಾತ್ರಗಳಲ್ಲೂ ನಟಿಸಿರುವ ಬಹು ನಿರೀಕ್ಷಿತ ‘ಎಕ್ಸ್ ಅಂಡ್ ವೈ’ ಚಲನಚಿತ್ರ ಇಂದು ರಾಜ್ಯಾದ್ಯಂತ ತೆರೆ ಕಂಡಿದೆ.

    ಚಿತ್ರದ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದ್ದು, ಇತ್ತೀಚಿಗಷ್ಟೇ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಇದರಲ್ಲಿ ನಿರ್ದೇಶಕರು ಪ್ರೇಕ್ಷಕರ ಮನಃ ಸೆಳೆದಿದ್ದಾರೆ. ಚಿತ್ರವನ್ನು ನೋಡುವ ಕಾತರವನ್ನು ಪ್ರೇಕ್ಷಕರಲ್ಲಿ ಹೆಚ್ಚಿಸಿದ್ದಾರೆ, ವಿಭಿನ್ನ ಕಂಟೆಂಟ್ ಹೊಂದಿರುವ ಈ ಚಿತ್ರದ ಟ್ರೈಲರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ.

    ರಾಜ್ಯಾದ್ಯಂತ ‘ಎಕ್ಸ್ ಅಂಡ್ ವೈ’ ಚಲನಚಿತ್ರ ಇಂದು ಎಲ್ಲಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ನಿರ್ದೇಶಕ ಡಿ. ಸತ್ಯಪ್ರಕಾಶ್ ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ಈ ಚಿತ್ರಕ್ಕೆ ಲವಿತ್ ಛಾಯಾಗ್ರಹಣ, ಬಿ.ಎಸ್. ಕೆಂಪರಾಜು ಸಂಕಲನ, ಕೌಶಿಕ್ ಹರ್ಷ ಸಂಗೀತ ನಿರ್ದೇಶನ ಹಾಗೂ ವರದರಾಜ್ ಕಾಮತ್ ಅವರ ಕಲಾ ನಿರ್ದೇಶನವಿದೆ.

    ಈ ಚಲನಚಿತ್ರವನ್ನು ಸತ್ಯ ಪಿಕ್ಚರ್‍ಸ್ ನಿರ್ಮಿಸಿ ಡಿ. ಸತ್ಯಪ್ರಕಾಶ್, ಬೃಂದಾ ಆಚಾರ್ಯ, ಅಥರ್ವ ಪ್ರಕಾಶ್, ಅಯನ, ದೊಡ್ಡಣ್ಣ, ಸುಂದರ್, ವೀಣಾ ಸುಂದರ್, ಹರಿಣಿ, ಧರ್ಮಣ್ಣ ಕಡೂರು, ತೇನಪ್ಪನ್ ಮುಂತಾದವರು ಈ ಚಿತ್ರದ ತಾರಾಗಣದಲ್ಲಿದ್ದಾರೆ.

    The movie ‘X and Y’ opened across the state

  • ಪೈಪ್‌ಲೈನ್ ಕೊರೆದು ಪೆಟ್ರೋಲ್ ಕಳವು-ಆರೋಪಿಗಳು ಪರಾರಿ

    ಪೈಪ್‌ಲೈನ್ ಕೊರೆದು ಪೆಟ್ರೋಲ್ ಕಳವು-ಆರೋಪಿಗಳು ಪರಾರಿ

    ಚಿಕ್ಕಮಗಳೂರು: ಟ್ರೋಲ್ ಪೈಪ್‌ಲೈನ್ ಕೊರೆದು ಪೆಟ್ರೋಲ್ ಕಳ್ಳತನ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.ಸುಮಾರು ೨ ಸಾವಿರ ಲೀಟರ್ ಪೆಟ್ರೋಲ್ ಕಳ್ಳತನವಾಗಿದ್ದು, ಮೂಡಿಗೆರೆ ತಾಲೂಕಿನ ಹಿರೇಶಿಗರ ಗ್ರಾಮದ ಬಳಿ ಲಾರಿ ಪತ್ತೆಯಾಗಿದೆ.

    ಕಳ್ಳತನದ ಲಾರಿಗೆ ನಂಬರ್ ಪ್ಲೇಟ್ ಕೂಡ ಇಲ್ಲ. ಲಾರಿ ಬಿಟ್ಟು ಪೆಟ್ರೋಲ್ ಕಳ್ಳರು ಪರಾರಿಯಾಗಿದ್ದಾರೆ.ಮೂಡಿಗೆರೆ ತಾಲೂಕಿನಲ್ಲಿ ಪೆಟ್ರೋಲ್ ಪೈಪ್‌ಲೈನ್ ಕೊರೆದ ಮಾಹಿತಿ ಇಲ್ಲದಿದ್ದು,

    ಬೇರೆ ಕಡೆ ಪೈಪ್ ಕೊರೆದು ಪೆಟ್ರೋಲ್ ಕದ್ದು ಸಾಗಿಸುತ್ತಿರುವ ಅನುಮಾನ ಬಂದಿದೆ. ಲಾರಿಯನ್ನ ವಶಕ್ಕೆ ಪಡೆದಿರುವ ಗೋಣಿಬೀಡು ಪೊಲೀಸರು ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ

    Petrol stolen by drilling pipeline – accused flee

  • ಪೌರ ಕಾರ್ಮಿಕರ ಸಮಸ್ಯೆ ತಾಲೂಕು ಮಟ್ಟದಲ್ಲೇ ಪರಿಹರಿಸಲು ಸೂಚನೆ

    ಪೌರ ಕಾರ್ಮಿಕರ ಸಮಸ್ಯೆ ತಾಲೂಕು ಮಟ್ಟದಲ್ಲೇ ಪರಿಹರಿಸಲು ಸೂಚನೆ

    ಚಿಕ್ಕಮಗಳೂರು:  ಪೌರ ಕಾರ್ಮಿಕರ ಸಮಸ್ಯೆಯನ್ನು ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಹಂತದಲ್ಲಿ ಪರಿಹರಿಸಲು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಸೂಚಿಸಿದರು.

    ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ನೇಮಕಾತಿ ನಿ?ಧ ಮತ್ತು ಅವರ ಪುನರ್ವಸತಿ ಅಧಿನಿಯಮ ೨೦೧೩ ರನ್ವಯ ಜಿಲ್ಲಾ ಮಟ್ಟದ ಜಾಗೃತಿ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಪೌರ ಕಾರ್ಮಿಕರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಬೇಕು. ಅವರಿಗೆ ಸವಲತ್ತುಗಳನ್ನು ಕಲ್ಪಿಸುವತ್ತ ಗಮನ ಹರಿಸಬೇಕು ಎಂದ ಅವರು, ಸರ್ಕಾರ ಪೌರ ಕಾರ್ಮಿಕರಿಗಾಗಿ ನೀಡಿರುವ ಸವಲತ್ತುಗಳನ್ನು ಕೊಡುವಲ್ಲಿ ಅಧಿಕಾರಿಗಳು ವಿಳಂಬ ಮಾಡಬಾರದು ಎಂದರು.

    ಪೌರಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಅವರಿಗೆ ನಿಯಮಿತವಾಗಿ ಆರೋಗ್ಯ ತಪಾಸಣೆಯನ್ನು ಮಾಡಿಸಬೇಕು, ಗುರುತಿನ ಚೀಟಿಯನ್ನು ಕಡ್ಡಾಯವಾಗಿ ನೀಡಬೇಕೆಂದ ಅವರು, ಪುರುಷರು ಹಾಗೂ ಮಹಿಳೆಯರಿಗೆ ಪ್ರತ್ಯೇಕವಾದ ವಿಶ್ರಾಂತಿ ಗೃಹಗಳನ್ನು ನಗರಸಭೆ ಹಾಗೂ ಪುರಸಭೆ ವ್ಯಾಪ್ತಿಯಲ್ಲಿ ಮಾಡಬೇಕಲ್ಲದೆ, ಸರ್ಕಾರಿ ಆಸ್ಪತ್ರೆಗಳಲ್ಲೂ ಕೂಡ ಅವರಿಗೆ ವಿಶ್ರಾಂತಿ ಗೃಹಗಳನ್ನು ಕಲ್ಪಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

    ಕಸ ಸಂಗ್ರಹಣೆಗಾಗಿ ಬರುವ ಪೌರ ಕಾರ್ಮಿಕರಿಗೆ ಕಡಿಮೆ ವೇತನ ನೀಡಲಾಗುತ್ತಿದ್ದು, ಕನಿಷ್ಠ ವೇತನವನ್ನಾದರೂ ನೀಡುವಂತೆ ಸಮಿತಿಯ ಸದಸ್ಯರಾದ ವೆಂಕಟೇಶ್ ಅವರು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಈ ಮೊದಲು ಕಸ ಸಂಗ್ರಹಣೆಗೆ ಗುತ್ತಿಗೆ ನೀಡಲಾಗಿತ್ತು. ಗುತ್ತಿಗೆ ಅವಧಿ ಇನ್ನೂ ಒಂದು ತಿಂಗಳಲ್ಲಿ ಮುಗಿಯುತ್ತದೆ. ನಂತರ ಈ ಕುರಿತು ಕ್ರಮ ವಹಿಸುವಂತೆ ಪೌರಾಯುಕ್ತರಿಗೆ ಸೂಚಿಸಿದರು.

    ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಪ್ರತಿ ಮಾಹೆ ೫ನೇ ತಾರೀಖಿನೊಳಗೆ ವೇತನ ಪಾವತಿಸಲು ಕ್ರಮ ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ತಿಳಿಸಿದ ಅವರು, ಪೌರ ಕಾರ್ಮಿಕರಿಗೆ ರಜೆ ಮಂಜೂರು ಮಾಡಲು ಸಂಬಂಧಿಸಿದ ತಾಲ್ಲೂಕು ವೈದ್ಯಾಧಿಕಾರಿಗಳಿಗೆ ಕ್ರಮ ವಹಿಸುವಂತೆ ತಿಳಿಸಿದರು.

    ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಮಾಲತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥಬಾಬು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಮಿತಿಯ ಸದಸ್ಯರುಗಳು ಹಾಜರಿದ್ದರು.

    Instructions to resolve the problem of civic workers at the taluk level

  • ಸರ್ಫೇಸಿ ಕಾಯ್ದೆಯಡಿ ಇ-ಹರಾಜು ನಿಲ್ಲಿಸದಿದ್ದರೆ ಅನಿರ್ದಿಷ್ಟಾವಧಿ ಹೋರಾಟಕ್ಕೆ ಕೆಜಿಎಫ್ ನಿರ್ಧಾರ

    ಸರ್ಫೇಸಿ ಕಾಯ್ದೆಯಡಿ ಇ-ಹರಾಜು ನಿಲ್ಲಿಸದಿದ್ದರೆ ಅನಿರ್ದಿಷ್ಟಾವಧಿ ಹೋರಾಟಕ್ಕೆ ಕೆಜಿಎಫ್ ನಿರ್ಧಾರ

    ಚಿಕ್ಕಮಗಳೂರು:  ಸ್ವಾಭಿಮಾನಿ ರೈತ ಬೆಳೆಗಾರರ ಫಲವತ್ತಾದ ಭೂಮಿಯನ್ನು ಸರ್ಫೇಸಿ ಕಾಯ್ದೆ ಅಡಿ ಕೆಲವು ಬ್ಯಾಂಕ್ ಅಧಿಕಾರಿಗಳು ದುರುದ್ದೇಶದಿಂದ ಇ-ಹರಾಜು ಮಾಡುವುದನ್ನು ನಿಲ್ಲಿಸದಿದ್ದರೆ ಈ ಪಿಡುಗಿನ ವಿರುದ್ಧ ಬ್ಯಾಂಕ್‌ಗಳ ಮುಂದೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದೆಂದು ಕರ್ನಾಟಕ ಬೆಳೆಗಾರರ ಒಕ್ಕೂಟ ಎಚ್ಚರಿಸಿದೆ.

    ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕೆಜಿಎಫ್ ಅಧ್ಯಕ್ಷ ಹೆಚ್.ಬಿ. ಶಿವಣ್ಣ, ಬೆಳೆಗಾರರ ಸಾಲ ತೀರುವಳಿ ಆದ ನಂತರವೂ ಕೆನರಾ ಬ್ಯಾಂಕ್ ಮೂಡಿಗೆರೆ ಶಾಖೆಯ ಮೂಲ ದಾಖಲೆಗಳನ್ನು ಬೆಳೆಗಾರರಿಗೆ ಹಿಂದಿರುಗಿಸದೇ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿದರು.

    ಕಳೆದ ಮೂರು ವರ್ಷಗಳಿಂದ ಕಾಫಿ ಬೆಳೆಗಾರರ ಸಾಲ ವಸೂಲಾತಿಗಾಗಿ ಸರ್ಫೇಸಿ ಕಾಯ್ದೆ ಅಡಿಯಲ್ಲಿ ಬ್ಯಾಂಕ್‌ಗಳು ಇ-ಹರಾಜು ಮಾಡಲು ಮುಂದಾಗಿರುವ ಬಗ್ಗೆ ಪ್ರತಿರೋಧಿಸಿದ್ದು, ಇಂದೂ ಸಹ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು.

    ಮೂಡಿಗೆರೆ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಡುವಿನ ಮೊಳಕಲ್ ಗ್ರಾಮದ ಬೆಳೆಗಾರರಾದ ಕೆ.ಕೆ. ಸುರೇಶ್ ಇವರು ತೋಟದ ನಿರ್ವಹಣೆಗಾಗಿ ಸಾಲ ಪಡೆದುಕೊಂಡಿದ್ದು, ಹಲವಾರು ಕಾರಣಗಳಿಂದ ಸಾಲ ಮರುಪಾವತಿ ಮಾಡುವುದು ವಿಳಂಭವಾಗಿದ್ದು, ಕೆನರಾ ಬ್ಯಾಂಕ್‌ನ ಸೂಚನೆಯಂತೆ ಸುಮಾರು ೪೩ ಲಕ್ಷ ರೂಪಾಯಿಗಳನ್ನು ಜನವರಿ ತಿಂಗಳಿನಲ್ಲಿ ಮರುಪಾವತಿ ಮಾಡಿದ್ದರೂ ಇದೂವರೆಗೂ ಈ ಬೆಳೆಗಾರರಿಗೆ ಸಾಲದ ಭದ್ರತೆಗಾಗಿ ನೀಡಿದ್ದ ತೋಟದ ಮೂಲ ದಾಖಲೆಗಳನ್ನು ಹಿಂದುರಿಗಿಸದೇ ಬ್ಯಾಂಕ್ ಅಧಿಕಾರಿಗಳು ಅನುಚಿತ ವರ್ತನೆ ತೋರಿದ್ದಾರೆಂದು ದೂರಿದರು.

    ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಬೆಳೆಗಾರರ ಸಂಘಟನೆಗಳು, ಜನಪ್ರತಿನಿಧಿಗಳು ಹಾಗೂ ಎಲ್ಲಾ ಬ್ಯಾಂಕ್‌ಗಳ ಹಿರಿಯ ಅಧಿಕಾರಿಗಳ ಸಭೆಯನ್ನು ಕರೆಯಲಾಗಿತ್ತು, ಈ ಸಭೆಯಲ್ಲಿ ಸಂಸದರು ಸರ್ಫೇಸಿ ಕಾಯ್ದೆ ಅಡಿಯಲ್ಲಿ ರೈತ ಬೆಳೆಗಾರರ ಭೂಮಿಯನ್ನು ಹರಾಜು ಹಾಕುವುದನ್ನು ಸುಮಾರು ಆರು ತಿಂಗಳ ಕಾಲ ತಡೆ ಹಿಡಿಯುವಂತೆ ಹಾಗೂ ಬೆಳೆಗಾರರಿಗೆ ಬ್ಯಾಂಕ್‌ಗಳು ಓಟಿಎಸ್ ಮೂಲಕ ಸೌಹಾರ್ದಯುತವಾಗಿ ತಮ್ಮ ಸಾಲ ತೀರುವಳಿಯನ್ನು ಮಾಡಲು ಅವಕಾಶ ಕಲ್ಪಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದರು ಎಂದು ಹೇಳಿದರು.

    ಬೆಂಗಳೂರಿನ ಕಾಫಿ ಮಂಡಳಿಯಲ್ಲಿ ಅಧ್ಯಕ್ಷ ಎಂ.ಜೆ. ದಿನೇಶ್ ಅವರ ನೇತೃತ್ವದಲ್ಲಿ ರಾಜ್ಯಮಟ್ಟದ ಬ್ಯಾಂಕರ್‌ಗಳ ಸಭೆಯನ್ನು ಕರೆಯಲಾಗಿದ್ದು, ಅಲ್ಲಿಯೂ ಕೂಡ ಬೆಳೆಗಾರರ ತೋಟಗಳನ್ನು ಇ-ಹರಾಜು ಮಾಡುವುದನ್ನು ಬಿಟ್ಟು ಬ್ಯಾಂಕ್ ಹಾಗೂ ಬೆಳೆಗಾರರು ಪರಸ್ಪರ ಮಾತುಕತೆ ಮೂಲಕ ಋಣಮುಕ್ತರಾಗಲು ಅವಕಾಶ ಕಲ್ಪಿಸಿಕೊಡುವುದಾಗಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿತ್ತು ಎಂದು ಮಾಹಿತಿ ನೀಡಿದರು.

    ಇತ್ತೀಚಿನ ಬೆಳವಣಿಗೆಗಳಲ್ಲಿ ಕೆಲವು ಬ್ಯಾಂಕ್ ಹಿರಿಯ ಅಧಿಕಾರಿಗಳು ಸುಸ್ತಿದಾರರಾಗಿರುವ ಬೆಳೆಗಾರರ ಸಾಲವನ್ನು ಮಾತುಕತೆಗಳ ಮೂಲಕ ತೀರ್ಮಾನ ಮಾಡುವುದನ್ನು ಪರಿಗಣಿಸದೇ ಕೆಲವು ರಿಯಲ್ ಎಸ್ಟೇಟ್ ಬಂಡವಾಳ ಶಾಹಿಗಳ ಕೈಗೊಂಬೆಯಂತೆ ವರ್ತಿಸಿದ್ದಾರೆಂದು ಟೀಕಿಸಿದರು.

    ಈ ಘಟನೆಗಳನ್ನು ಸಧ್ಯದಲ್ಲೇ ನಿಯಂತ್ರಿಸದಿದ್ದಲ್ಲಿ ರೈತ ಬೆಳೆಗಾರರು ಜೀವನಾಧಾರವಾಗಿರುವ ತಮ್ಮ ಅಮೂಲ್ಯವಾದ ಭೂಮಿಯನ್ನು ರಿಯಲ್ ಎಸ್ಟೇಟ್ ಉದ್ದಿಮೆದಾರರಿಗೆ ಅನಿವಾರ್ಯವಾಗಿ ಒಪ್ಪಿಸಬೇಕಾಗಿರುತ್ತದೆ. ಇದಕ್ಕೆ ದುರಾಲೋಚನೆ ಮನಸ್ಥಿತಿಯ ಬ್ಯಾಂಕ್ ಅಧಿಕಾರಿಗಳು ಕಾರಣ ಎಂದು ಲೇವಡಿ ಮಾಡಿದರು.

    ಈ ಕೂಡಲೇ ಡಿಎಲ್‌ಬಿಸಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಲೀಡ್ ಬ್ಯಾಂಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಾದ ಸೂಚನೆಗಳನ್ನು ನೀಡಿ ಬೆಳೆಗಾರರಿಗೆ ನ್ಯಾಯ ಒದಗಿಸಿಕೊಡಬೇಕೆಂದು ಆಗ್ರಹಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಮೂಡಿಗೆರೆ ತಾಲ್ಲೂಕು ಬೆಳೆಗಾರರ ಸಂಘದ ಅಧ್ಯಕ್ಷ ಬಾಲಕೃಷ್ಣ, ಮುಖಂಡರಾದ ಜಯರಾಂ, ಸುರೇಶ್ ಗೌಡ, ಅಶೋಕ್ ಕುಮಾರ್, ಹಾಲಪ್ಪ, ರತೀಶ್ ಕುಮಾರ್, ಸುರೇಂದ್ರ, ಬಿಜೆಪಿ ಮುಖಂಡ ದೀಪಕ್ ದೊಡ್ಡಯ್ಯ ಮತ್ತಿತರರು ಉಪಸ್ಥಿತರಿದ್ದರು.

    KGF decides to continue indefinite protest if e-auctions under SARFAESI Act are not stopped

  • ಮಾದಕ ವಸ್ತುಗಳ ನಿಯಂತ್ರಣಕ್ಕೆ ಬಿಜೆಪಿ ಯುವ ಮೋರ್ಚಾ ಒತ್ತಾಯ

    ಮಾದಕ ವಸ್ತುಗಳ ನಿಯಂತ್ರಣಕ್ಕೆ ಬಿಜೆಪಿ ಯುವ ಮೋರ್ಚಾ ಒತ್ತಾಯ

    ಚಿಕ್ಕಮಗಳೂರು: ಜಿಲ್ಲೆಯಲ್ಲಿ ವ್ಯಾಪಕವಾಗಿರುವ ಗಾಂಜಾ ಮಾರಾಟ ಹಾಗೂ ಸೇವನೆ ಸೇರಿದಂತೆ ಮಾದಕ ವಸ್ತುಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮಂಗಳವಾರ ಎಸ್ಪಿ ವಿಕ್ರಮ ಅಮಟೆ ಅವರಿಗೆ ಮನವಿ ಸಲ್ಲಿಸಿದರು.

    ಇತ್ತೀಚಿನ ದಿನಗಳಲ್ಲಿ ಜಿಲ್ಲೆಯ ಹಲವೆಡೆ ಯುವಜನತೆ ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗಿ ಗಲವೆ ಸೃಷ್ಟಿ ಮಾಡಿ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿದ್ದಾರೆ. ಇಂಥವರ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

    ಚಿಕ್ಕಮಗಳೂರು ನಗರದ ಸಾಯಿ ಮಧುವನ ಬಡಾವಣೆಯಲ್ಲಿರುವ ಪಾರ್ಕ್, ಗೌರಿ ಕಾಲುವೆ ನರಿಗುಡ್ಡನಹಳ್ಳಿ ವೃತ್ತದಲ್ಲಿರುವ ಖಾಲಿ ನಿವೇಶನಗಳು, ಎಐಟಿ ವೃತ್ತ, ವಾಜಪೇಯಿ ಲೇಔಟ್, ರೈಲ್ವೆ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರತಿದಿನ ಗಾಂಜಾ ಸೇವಿಸಿ ಕೆಲವರು ಬೈಕ್ ವೀಲಿಂಗ್ ಮಾಡುವ ಜೊತೆಗೆ ರಸ್ತೆಯಲ್ಲಿ ನಡೆದಾಡುವ ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಸಮಾಜದ ಸ್ವಾಸ್ಥ್ಯ ಕೆಡಿಸುವ ಇಂತಹ ಕೃತ್ಯಗಳು ಇನ್ನಷ್ಟು ಹೆಚ್ಚುವ ಮೊದಲೇ ಪೊಲೀಸ್ ಇಲಾಖೆ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

    ಮನವಿ ಸ್ವೀಕರಿಸಿ ಮಾತನಾಡಿದ ಎಸ್ಪಿ ವಿಕ್ರಮ ಅಮಟೆ, ಎಲ್ಲಿಯಾದರೂ ಮಾದಕ ವಸ್ತುಗಳ ಮಾರಾಟ ಹಾಗೂ ಸೇವನೆ ಬಗ್ಗೆ ಮಾಹಿತಿ ತಿಳಿದಲ್ಲಿ ಸಾರ್ವಜನಿಕರು ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋ ಸಹಾಯವಾಣಿ 1908ಗೆ ಕರೆಮಾಡಿ ಮಾಹಿತಿ ನೀಡಬೇಕು. ಅಥವಾ ಡ್ರಗ್ ಫ್ರೀ ಕರ್ನಾಟಕ ಆಪ್ ಮೂಲಕ ಮಾಹಿತಿ ನೀಡಿದಲ್ಲಿ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದರು.

    ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರು ಸೇರಿ ಸಮಾಜದಲ್ಲಿ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಬೇಕು. ಇದೊಂದು ಸಾಮಾಜಿಕ ಪಿಡುಗು. ಮಾದಕ ವಸ್ತು ಮಾರಾಟದ ಮೂಲ ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವ ಕೆಲಸ ನಿರಂತರವಾಗಿ ಮಾಡುತ್ತಿದ್ದೇವೆ. ಜನರು ಇನ್ನಷ್ಟು ಮುಕ್ತವಾಗಿ ಈ ಬಗ್ಗೆ ಮಾಹಿತಿ ನೀಡಿದಲ್ಲಿ ಪರಿಣಾಮಕಾರಿಯಾಗಿ ಮಾದಕ ವಸ್ತು ನಿಯಂತ್ರಣ ಸಾಧ್ಯವಾಗುತ್ತದೆ ಎಂದು ಹೇಳಿದರು.

    ಮಾದಕ ವಸ್ತು ಮಾರಾಟ ಮಾಡುವವರನ್ನು ಕಾನೂನು ಪ್ರಕಾರ ಶಿಕ್ಷೆಗೆ ಒಳಪಡಿಸಲಾಗುತ್ತದೆ. ಆದರೆ ಮಾದಕ ವಸ್ತು ಸೇವನೆ ಮಾಡುವವರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿ ಬಳಿಕ ಅವರನ್ನು ಕೌನ್ಸಲಿಂಗ್ ಒಳಪಡಿಸಿ ಡಿಅಡಿಕ್ಷನ್ ಸೆಂಟರ್ ಗೆ ದಾಖಲು ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

    ಮನವಿ ಸಲ್ಲಿಸುವ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್, ಪ್ರಮುಖರಾದ ಸಚಿನ್ ಗೌಡ, ಅಂಕಿತಾ ಮತ್ತಿತರರಿದ್ದರು.

    BJP Yuva Morcha urges control of drugs

  • ಇನ್ನರ್‌ವೀಲ್ ಕ್ಲಬ್ ಸಮಾಜಮುಖಿ ಕಾರ್ಯಗಳಿಗೆ ಮುಂದಾಗಬೇಕು

    ಇನ್ನರ್‌ವೀಲ್ ಕ್ಲಬ್ ಸಮಾಜಮುಖಿ ಕಾರ್ಯಗಳಿಗೆ ಮುಂದಾಗಬೇಕು

    ಚಿಕ್ಕಮಗಳೂರು: ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ ಹಾಗೂ ಪರಿಸರ ರಕ್ಷಣೆ ಇಂತಹ ಅನೇಕ ಸಮಾಜಮುಖಿ ಉತ್ತಮ ಕಾರ್ಯಕ್ರಮಗಳನ್ನು ಇನ್ನರ್ ವೀಲ್ ಸಂಸ್ಥೆ ಆಯೋಜನೆ ಮಾಡುವ ಅಗತ್ಯ ಇದೆ ಎಂದು ಕರ್ನಾಟಕ ಮಹಿಳಾ ಸಹಕಾರ ಬ್ಯಾಂಕ್ ಅಧ್ಯಕ್ಷೆ ಬಿ.ಸಿ. ಗೀತಾ ಹೇಳಿದರು.

    ಅವರು ಟಿಎಂಎಸ್‌ನ ಎಂಎಲ್‌ವಿ ರೋಟರಿ ಸಭಾಂಗಣದಲ್ಲಿ ಇನ್ನರ್ ವೀಲ್ ಕ್ಲಬ್ ಚಿಕ್ಕಮಗಳೂರು ಜಿಲ್ಲೆ-೩೧೮ ಇದರ ೨೦೨೫-೨೬ನೇ ಸಾಲಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನಯನಾ ಸಂತೋಷ್ ಅವರ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಅಭಿನಂದಿಸಿ ಶುಭಾಶಯ ಕೋರಿ ಮಾತನಾಡಿದರು.

    ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಹಾಗೂ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸೇವೆಯನ್ನು ತಲುಪಿಸುವ ನಿಟ್ಟಿನಲ್ಲಿ ಇನ್ನರ್ ವೀಲ್ ಕ್ಲಬ್ ಪದಾಧಿಕಾರಿಗಳು ಯೋಜನೆ, ಯೋಚನೆಗಳ ಮೂಲಕ ಕರ್ತವ್ಯ ನಿರತರಾಗಬೇಕೆಂದು ಕರೆನೀಡಿದರು.

    ಸಮಾಜದಲ್ಲಿ ಆಶಕ್ತರನ್ನು ಕಂಡಾಗ ನಮ್ಮ ಸಹಾಯಹಸ್ತ ಬಯಸುವವರಿಗಾಗಿ ಅಂತಹ ಬಡವರನ್ನು ಗುರ್ತಿಸಿ ಸಹಾಯ ಸೇವೆ ನೀಡುವುದೇ ಇನ್ನರ್ ವೀಲ್ ಸಂಸ್ಥೆಯ ಪ್ರಮುಖ ಉದ್ದೇಶ ಎಂದ ಅವರು, ರೋಟರಿ ಕ್ಲಬ್ ಮತ್ತು ಇನ್ನರ್ ವೀಲ್ ಕ್ಲಬ್‌ನ ಹೆಚ್ಚು ಸದಸ್ಯರು ವಿಮುಖರಾಗುತ್ತಿದ್ದಾರೆ. ಈ ಮಧ್ಯೆ ಈ ಕ್ಲಬ್‌ನಲ್ಲಿ ದಾನಿಗಳಾಗಿರುವ ೧೫ ನೂತನ ಸದಸ್ಯರು ಸದಸ್ಯತ್ವ ಪಡೆದುಕೊಂಡಿರುವುದರಿಂದ ಈ ಮೂಲಕ ಕ್ಲಬ್ ಉತ್ತಮವಾಗಿ, ಸುಲಲಿತವಾಗಿ ನಡೆಯಲಿ ಎಂದು ಶುಭ ಹಾರೈಸಿದರು.

    ೧೯೭೩ ರಲ್ಲಿ ಇಂಗ್ಲೆಂಡಿನಲ್ಲಿ ಪ್ರಾರಂಭಗೊಂಡ ಇನ್ನರ್‌ವೀಲ್ ಕ್ಲಬ್ ಭಾರತದಲ್ಲಿ ೧೯೫೬ ರಲ್ಲಿ ಅಹಮದಾಬಾದ್‌ನಲ್ಲಿ ಆರಂಭವಾಯಿತು. ಇಂತಹ ಇಂಟರ್ ನ್ಯಾಷನಲ್ ಕ್ಲಬ್‌ಗೆ ನಾವುಗಳೆಲ್ಲರು ಸದಸ್ಯರಾಗಿರುವುದು ಸಂತಸದ ಜೊತೆಗೆ ಹೆಮ್ಮೆ ಎಂದು ಹೇಳಿದರು.

    ಹೃದಯ ಶ್ರೀಮಂತಿಕೆ ಹೊಂದಿದ್ದರೆ ಮನಸ್ಸು ಬಂದಾಗ ಇನ್ನೊಂದು ಮಹಿಳಾ ಜೀವನ ಸಂಧ್ಯಾ ಪ್ರಾರಂಭಿಸಬಹುದು ಎಂದು ಸಲಹೆ ನೀಡಿದ ಅವರು, ಆ ಶಕ್ತಿ ನಿಮ್ಮೆಲ್ಲರಲ್ಲಿದೆ ಎಂದು ಭಾವಿಸುತ್ತೇನೆ, ದೂರದೃಷ್ಟಿ ಜೊತೆಗೆ ಘೋಷವಾಕ್ಯವಿದ್ದಾಗ ಮಾತ್ರ ಇಂತಹ ಸಾರ್ವಜನಿಕ ಸಂಸ್ಥೆಗಳಲ್ಲಿ ಉತ್ತಮವಾಗಿ, ಸಾಂಘಿಕವಾಗಿ ನಡೆಯಲು ಸಾಧ್ಯ ಎಂದರು.

    ನೂತನ ಅಧ್ಯಕ್ಷರಾಗಿ ನಯನಾ ಸಂತೋಷ್ ಆಯ್ಕೆಯಾಗಿದ್ದು, ಮೂರನೇ ಬಾರಿಗೆ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸುತ್ತಿರುವುದು ತೃಪ್ತಿ ಮತ್ತು ಹೆಮ್ಮೆ ತಂದಿದೆ, ಇದೊಂದು ಇನ್ನರ್ ವೀಲ್ ಕ್ಲಬ್‌ಗೆ ತಾವು ಹೊಂದಿರುವ ಅವಿನಾಭಾವ ಸಂಬಂಧ ಎಂದು ಹೇಳಿದರು.

    ನೂತನ ಅಧ್ಯಕ್ಷರು ವೇದಿಕೆಯಲ್ಲಿ ಸಂತೋಷ, ದುಃಖ, ಆಶ್ಚರ್ಯ ಇವೆಲ್ಲವುಗಳ ಮಧ್ಯೆ ಇಂದು ವಿರಾಜಮಾನರಾಗಿ, ವಿಜೃಂಭಿಸಿ ವಿರಮಿಸುತ್ತಿದ್ದಾರೆ. ಇದಕ್ಕೆ ಎಲ್ಲಾ ರೀತಿಯ ಸಂತೋಷ ನಿಮ್ಮಿಂದ ದೊರೆಯಲಿ ಎಂಬ ಆಶಾಭಾವನೆಯನ್ನು ವ್ಯಕ್ತಪಡಿಸಿದರು.

    ಜೀವನದಲ್ಲಿ ಸಂಸ್ಕೃತಿ ಸಂಸ್ಕಾರ ಇವುಗಳನ್ನು ಸರಿಯಾದ ರೀತಿಯಲ್ಲಿ ಉಳಿಸಿ-ಬೆಳೆಸಿದಾಗ ಮುಂದಿನ ಪೀಳಿಗೆಯನ್ನು ಸರಿಯಾದ ಮಾರ್ಗದಲ್ಲಿ ಕೊಂಡೊಯ್ಯಲು ಸಹಕಾರಿಯಾಗಲಿದೆ, ಕಷ್ಟದ ಅರಿವು ತಮ್ಮ ಮಕ್ಕಳಲ್ಲಿ ಬೆಳೆಸಬೇಕು ಆಗ ಮಾತ್ರ ಮಕ್ಕಳು ಉನ್ನತ ಸ್ಥಾನಕ್ಕೇರಲು ಸಾಧ್ಯ ಎಂದು ಕಿವಿಮಾತು ಹೇಳಿದರು.

    ನೂತನ ಅಧ್ಯಕ್ಷೆ ನಯನಾ ಸಂತೋಷ್ ಅಧಿಕಾರ ಸ್ವೀಕರಿಸಿ ಮಾತನಾಡಿ, ಜನಪರವಾಗಿ ಸೇವೆ ಸಲ್ಲಿಸುತ್ತಿರುವ ಇನ್ನರ್ ವೀಲ್ ಕ್ಲಬ್‌ಗೆ ತಾವು ಅಧ್ಯಕ್ಷರಾಗಿ ಆಯ್ಕೆಮಾಡಿರುವುದಕ್ಕೆ ಆಬಾರಿಯಾಗಿದ್ದೇನೆ, ಇದೂವರೆಗೆ ಕ್ಲಬ್‌ನ ಎಲ್ಲಾ ಸದಸ್ಯರು ನೀಡಿದ ಸಹಕಾರವನ್ನು ಸ್ಮರಿಸಿದರು.

    ಮಾಜಿ ಅಧ್ಯಕ್ಷೆ ಶಾಲಿನಿ ನಾಗೇಶ್ ಮಾತನಾಡಿ, ತಮ್ಮ ಅಧಿಕಾರವಧಿಯಲ್ಲಿ ಹಲವಾರು ಸಮಾಜಮುಖಿ ಕಾರ್ಯಗಳನ್ನು ಕೈಗೊಂಡಿದ್ದು ತೃಪ್ತಿ ತಂದಿದೆ. ಈ ಎಲ್ಲಾ ಕಾರ್ಯಗಳಲ್ಲಿ ಸಹಕರಿಸಿದ ಕ್ಲಬ್‌ನ ಕಾರ್ಯಕಾರಿ ಸಮಿತಿ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು.

    ಈ ಸಂದರ್ಭದಲ್ಲಿ ಕ್ಲಬ್‌ನ ಉಪಾಧ್ಯಕ್ಷೆ ಮಾಲವಿ ರಘುನಂದನ್, ಕಾರ್ಯದರ್ಶಿ ಶಾಲಿನಿ ನಾಗೇಶ್, ಖಜಾಂಚಿ ಸ್ನೇಹ ಸಂತೋಷ್, ಐಎಸ್‌ಓ ಸೌನಲ್ಯ ನಟರಾಜ್, ಎಡಿಟರ್ ನವ್ಯ ಅಮಿತ್ ಮತ್ತಿತರರು ಉಪಸ್ಥಿತರಿದ್ದರು.

    Innerwheel Club should take up social work

  • 2 ವರ್ಷಗಳ ಕಾಲ ನಗರದ ಜನರಿಗೆ ಕುಡಿಯುವ ನೀರಿಗೆ ತೊಂದರೆ ಇರುವುದಿಲ್ಲ

    2 ವರ್ಷಗಳ ಕಾಲ ನಗರದ ಜನರಿಗೆ ಕುಡಿಯುವ ನೀರಿಗೆ ತೊಂದರೆ ಇರುವುದಿಲ್ಲ

    ಚಿಕ್ಕಮಗಳೂರು: ನಗರಕ್ಕೆ ನೀರು ಪೂರೈಸುವ ಹಿರೇಕೊಳಲೆ ಕೆರೆಗೆ ಇಂದು ಬೆಳಿಗ್ಗೆ ಶಾಸಕ ಹೆಚ್.ಡಿ.ತಮ್ಮಯ್ಯ ಸಪತ್ನೀಕರಾಗಿ ಬಾಗಿನ ಅರ್ಪಿಸುವ ಮೂಲಕ ಪೂಜೆ ಸಲ್ಲಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಗರಕ್ಕೆ ಸುಮಾರು ೪೦ ವರ್ಷದಿಂದ ಗುರುತ್ವಾಕರ್ಷಣೆ ಮೂಲಕ ಕುಡಿಯುವ ನೀರಿನ ವ್ಯವಸ್ಥೆಯನ್ನು ಯಾವುದೇ ಖರ್ಚಿಲ್ಲದೆ ಸರಬರಾಜು ಮಾಡಲಾಗುತ್ತಿದೆ ಎಂದು ಹೇಳಿದರು.

    ರಾಜ್ಯದ ಕೆಲವೇ ಕೆಲವು ನಗರದ ಕುಡಿಯುವ ನೀರು ಸರಬರಾಜು ಮಾಡುವ ಗುರುತ್ವಾಕರ್ಷಣಾ ಕೆರೆಗಳಲ್ಲಿ ಈ ಹಿರೇಕೊಳಲೆ ಕೆರೆಯು ಒಂದು. ನಗರದ ೪೦ ಸಾವಿರ ಜನಸಂಖ್ಯೆಗೆ ಅನುಗುಣವಾಗಿ ಅಂದು ಈ ಕೆರೆಯನ್ನು ನಿರ್ಮಾಣ ಮಾಡಿ ಈ ನೀರನ್ನು ಜನರು ಕುಡಿಯುವುದಕ್ಕೆ ಬಳಸುತ್ತಿದ್ದಾರೆ. ಇಂತಹ ಸುಂದರವಾದ ಕೆರೆ ಇತಿಹಾಸದಲ್ಲಿ ಮೊದಲ ಬಾರಿಗೆ ಜೂನ್ ತಿಂಗಳಲ್ಲಿ ನೀರು ತುಂಬಿ ಕೋಡಿ ಬಿದ್ದಿದೆ ಎಂದು ಹೇಳಿದರು.

    ಅಮೃತ್ ಯೋಜನೆಯಡಿ ೨೪ ಗಂಟೆ ನೀರು ಪೂರೈಸಬೇಕಿತ್ತು. ಆದರೆ ತಾಂತ್ರಿಕ ಕಾರಣದಿಂದ ಎರಡು ದಿನಕೊಮ್ಮೆ ಸತತವಾಗಿ ನೀರನ್ನು ಸರಬರಾಜು ಮಾಡುತ್ತಿದ್ದೇವೆ ಎಂದ ಅವರು ಯಗಚಿ ಡ್ಯಾಂ ಹಾಗೂ ಹಿರೇಕೊಳಲೆ ಕೆರೆ ಕೋಡಿ ಬಿದ್ದಿರುವುದರಿಂದ ಇನ್ನು ಎರಡು ವರ್ಷಗಳ ಕಾಲ ನಗರದ ಜನರಿಗೆ ಕುಡಿಯುವ ನೀರಿಗೆ ಯಾವುದೇ ತೊಂದರೆ ಇರುವುದಿಲ್ಲ ಎಂದು ಹೇಳಿದರು.

    ನರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್, ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್, ತಹಶೀಲ್ದಾರ್ ರೇಷ್ಮಾಶೆಟ್ಟಿ, ಉಪಾಧಕ್ಷ ಅನುಮಧುಕರ್, ಹಿರೇಕೊಳಲೆ ಗ್ರಾ.ಪಂ ಅಧಕ್ಷೆ ಕವಿತಾ ಹಾಗೂ ಉಪಾಧ್ಯಕ್ಷರು, ಸದಸ್ಯರು, ಗಾಮಸ್ಥರು ಮುಂತಾದವರು ಹಾಜರಿದ್ದರು.

    The people of the city will not have any problem with drinking water for 2 years.