Category: ಚಿಕ್ಕಮಗಳೂರು ನಗರ

  • ರಾಜ್ಯಾಧ್ಯಕ್ಷ ಜಿ.ಎಂ ರಾಜಶೇಖರ್ ಗೆ ಕಡೂರು ಪತ್ರಕರ್ತರ ಗೌರವ

    ರಾಜ್ಯಾಧ್ಯಕ್ಷ ಜಿ.ಎಂ ರಾಜಶೇಖರ್ ಗೆ ಕಡೂರು ಪತ್ರಕರ್ತರ ಗೌರವ

    ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷರಾದ ಜಿ.ಎಂ. ರಾಜಶೇಖರವರು ತುಮಕೂರು ಹಾಗೂ ಹಾಸನ ಜಿಲ್ಲೆಯ ಅರಸಿಕೆರೆ ಪ್ರವಾಸದ ಸಂದರ್ಭದಲ್ಲಿ ಕಡೂರು ತಾಲೂಕು ಪತ್ರಕರ್ತರ ಸಂಘದವರು ಸ್ವಾಗತಿಸಿ ಗೌರವಿಸಿದರು.

    ಹಾಸನ ಹಾಗೂ ತುಮಕೂರು ಜಿಲ್ಲೆಯ ಪತ್ರಕರ್ತರನ್ನು ಭೇಟಿ ನೀಡುವ ಹಿನ್ನಲೆಯಲ್ಲಿ ಚಿಕ್ಕಮಗಳೂರಿನಿಂದ ಪ್ರವಾಸ ಕೈಗೊಳ್ಳಲಾಗಿತ್ತು. ಮಾರ್ಗದ ಮಧ್ಯದಲ್ಲಿ ಕಡೂರು ತಾಲೂಕಿನ ಪತ್ರಕರ್ತರು ಸ್ವಾಗತಿಸಿ ಗೌರವಿಸಲಾಯಿತು. ನಂತರ ಕರ್ನಾಟಕ ಮಾಧ್ಯಮ ಪತ್ರಕರ್ತ ಸಂಘದ ಸೌಲಭ್ಯ ಹಾಗೂ ಸಂಘದ ಕಾರ್ಯ ಚಟುವಟಿಕೆ ಕುರಿತಂತೆ ಮಾಹಿತಿಯನ್ನು ಸಭೆಯಲ್ಲಿ ಹಂಚಿಕೊಂಡರು, ಸಂಘದ ಸದಸ್ಯತ್ವ ಅಭಿಯಾನವನ್ನು ನಡೆಸಲಾಯಿತು.

    ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಜಗದೀಶ್, ವಿಜಯ ಕರ್ನಾಟಕ ವರದಿಗಾರರು. ಎ.ಜೆ. ಪ್ರಕಾಶಮೂರ್ತಿ, ಉದಯವಾಣಿ ವರದಿಗಾರರು, ಕೃಷ್ಣಮೂರ್ತಿ, ಕನ್ನಡಪ್ರಭ ವರದಿಗಾರರು. ಬಿ .ಆರ್. ಕುಮಾರ್ ಉದಯ ಕರ್ನಾಟಕ ವರದಿಗಾರರು. ಅನಿಲ್ ಆನಂದ್ ಭೂಮಿಕ ಟಿವಿ ಮಾಲೀಕರು ಹಾಗೂ ಚಿಕ್ಕಮಗಳೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರು. ಪುರುಷೋತ್ತಮ್ ಹಲ್ಮಿಡಿ ಪತ್ರಿಕೆ ಸಂಪಾದಕರು. ಹಾಗೂ ಪತ್ರಕರ್ತರಾದ ಶಿವು. ರಘು. ದೇವು ಮತ್ತು ರೇಣುಕಾ ಸ್ವಾಮಿ ಉಪಸ್ಥಿತರಿದ್ದರು.

    Kadur journalists pay tribute to State President G.M. Rajashekar

  • ವ್ಯಕ್ತಿ ಶಾಶ್ವತವಲ್ಲ ಆದರೆ ವ್ಯಕ್ತಿತ್ವ ಶಾಶ್ವತ

    ವ್ಯಕ್ತಿ ಶಾಶ್ವತವಲ್ಲ ಆದರೆ ವ್ಯಕ್ತಿತ್ವ ಶಾಶ್ವತ

    ಚಿಕ್ಕಮಗಳೂರು-ವ್ಯಕ್ತಿ ಶಾಶ್ವತವಲ್ಲ. ಆದರೆ ವ್ಯಕ್ತಿತ್ವ ಶಾಶ್ವತ. ಹುಟ್ಟು ಸಾವಿನ ನಡುವೆ ಇರುವುದೇ ಜೀವನ. ಈ ಅಂತರದಲ್ಲಿನ ಜೀವನ ಮೌಲ್ಯವೇ ನಮ್ಮನ್ನು ಶಾಶ್ವತವಾಗಿ ಇರುವಂತೆ ಮಾಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ತಿಳಿಸಿದರು.

    ನಗರದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಬೊಗಸೆ ದೇವರಗದ್ದೆ ಕೃಷ್ಣ ಶೆಟ್ಟರ ಸಂಸ್ಮರಣೆ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಜೀವನ ಮೌಲ್ಯವೇ ಸಾವಿನ ನಂತರವೂ ಉಳಿಯುತ್ತವೆ. ಜೀವನ ಮೌಲ್ಯಗಳು ಕಟಿಬದ್ಧರಾದವರು ಮರಣದ ಬಳಿಕವೂ ಶಾಶ್ವತವಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದು ಪ್ರತಿಪಾದಿಸಿದರು.

    ರಾಮ ಹಾಗೂ ರಾಮಾಯಣ ಹತ್ತರಿಂದ ಹದಿನೈದು ಸಾವಿರ ವರ್ಷಪೂರ್ವದ್ದು. ಆದರೆ ರಾಮ ಇಂದಿಗೂ ಜನಮಾನಸದಲ್ಲಿ ಓರ್ವ ಆದರ್ಶ ಪುರುಷ ದೇವತಾ ಸ್ವರೂಪವಾಗಿ ಉಳಿದುಕೊಂಡಿದ್ದಾನೆ. ಸತ್ಯಹರಿಶ್ಚಂದ್ರ ಮೌಲ್ಯಗಳಿಗೆ ಕಟಿಬದ್ಧನಾದ ಕಾರಣದಿಂದಲೇ ಆತನ ಹೆಸರಿನೊಂದಿಗೆ ಸತ್ಯ ಇದುವರೆಗೆ ಉಳಿದುಕೊಂಡು ಬಂದಿದೆ. ಶ್ರೀಮಂತರಾದ ಕ್ಷಣ ಅವರ ಹೆಸರು ಜನಮಾನಸದಲ್ಲಿ ಉಳಿಯುವುದಿಲ್ಲ. ಸಾಮ್ರಾಟರಾದರೂ ಅವರನ್ನು ಯಾರು ನೆನೆಯುವುದಿಲ್ಲ. ಆದರೆ ಜೀವನ ಮೌಲ್ಯವನ್ನು ಉಳಿಸಿಕೊಂಡು ಬದುಕಿದಾಗ ಅವರ ಹೆಸರು ಜನಮಾನಸದಲ್ಲಿ ಚಿರಸ್ಥಾಯಿಯಾಗಿ ಉಳಿಯುತ್ತದೆ ಎಂದರು.

    ದೇವರ ಮನೆ ಕೃಷ್ಣ ಶೆಟ್ಟಿ ಅವರು ಮರಣ ಹೊಂದಿ ೨೫ ವರ್ಷಗಳ ನಂತರ ಅವರ ಸಂಸ್ಮರಣೆ ಅಂಗವಾಗಿ ಪುಸ್ತಕ ಹೊರ ತರುತ್ತಿರುವುದು ಅವರು ಎಷ್ಟರಮಟ್ಟಿಗೆ ತಮ್ಮ ಪ್ರಭಾವ ಬೀರುದ್ದರು ಹಾಗೂ ಎಷ್ಟು ಜೀವನ ಮೌಲ್ಯ ಎಲ್ಲರಲ್ಲೂ ತುಂಬಿದ್ದರು ಎಂಬುದನ್ನು ತೋರುತ್ತದೆ ಎಂದು ಸ್ಮರಿಸಿದರು.

    ಹಿಂದುಗಳ ಜನಸಂಖ್ಯೆ ಕಡಿಮೆಯಾಗದಂತೆ ನೋಡಿಕೊಳ್ಳಬೇಕಿದೆ. ಇಂದು ಮದುವೆಯಾಗುವ ಯುವಕರಿಗೆ ಹುಡುಗಿಯನ್ನು ಕೊಡುವವರಿಲ್ಲ. ಮದುವೆಯಾದವರು ಮಕ್ಕಳು ಬೇಡ ಎನ್ನುತ್ತಿದ್ದಾರೆ. ಮುಂದೆ ನಾವಿರುವುದಿಲ್ಲ ಆದರೆ ಸಂಘರ್ಷ ಇರುತ್ತದೆ. ಹೀಗಾಗಿ ಮುಂದಿನ ದಿನಗಳಲ್ಲಿ ನಮ್ಮ ಜನಸಂಖ್ಯೆ ಕಡಿಮೆಯಾದಲ್ಲಿ ಹಿಂದೂ ಧರ್ಮಕ್ಕೆ ಧಕ್ಕೆಯಾಗುವ ಸಾಧ್ಯತೆ ಇದೆ. ಇದಕ್ಕೆ ಉತ್ತಮ ಉದಾಹರಣೆ ಎಂದರೆ ಹಿಂದಿನ ಗಾಂಧಾರ ಇಂದು ಅಫ್ಘಾನಿಸ್ತಾನವಾಗಿದೆ. ಇತ್ತೀಚೆಗೆ ಪಾಕಿಸ್ತಾನವು ಸೃಷ್ಟಿಯಾಗಿದೆ. ಬಾಂಗ್ಲಾದೇಶದಲ್ಲಿ ಸೇವೆ ಮಾಡುತ್ತಿದ್ದ ಇಸ್ಕಾನ್ ನವರನ್ನು ಭಯೋತ್ಪಾದಕರು ಎಂದು ಜೈಲಿಗಟ್ಟಿದ್ದಾರೆ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಶಾಸಕ ಎಚ್ ಡಿ ತಮ್ಮಯ್ಯ ಮಾತನಾಡಿ, ನಮ್ಮ ದೇಶ ಸಂಸ್ಕೃತಿ ಬಗ್ಗೆ ಅಭಿಮಾನ ಇದ್ದರೆ ಯುವ ಪೀಳಿಗೆ ತಮ್ಮ ಕುಟುಂಬದ ಹಿರಿಯರು ಹಾಗೂ ಸಮಾಜದ ಹಿರಿಯರ ಬಗ್ಗೆ ಸಾಮಾಜಕ್ಕೆ ತಿಳಿಸಿಕೊಡುವ ಕೆಲಸ ಮಾಡುತ್ತಾರೆ. ಕೇವಲ ಕುಟುಂಬಕ್ಕಾಗಿ ಮಾತ್ರವಲ್ಲದೆ ಸಮಾಜಕ್ಕಾಗಿ ಹಾಗೂ ದೇಶದ ಹಿತಕ್ಕಾಗಿ ಬದುಕಿದಾಗ ಎಲ್ಲರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯಲು ಸಾಧ್ಯ ಎಂದು ಪ್ರತಿಪಾದಿಸಿದರು.

    ಬೊಗಸೆ ದೇವರಗದ್ದೆ ಕುಟುಂಬದ ಮಂಜಪ್ಪ ಶೆಟ್ಟಿ ಮಾತನಾಡಿ, ಕೃಷ್ಣ ಶೆಟ್ಟಿ ಅವರು ತಾವು ಬದುಕಿರುವವರೆಗೂ ಸಮಾಜ ಸೇವಕರಾಗಿ ದಾನ ಧರ್ಮ ಮಾಡಿಕೊಂಡು ಹಲವು ಸಾಮಾಜಿಕ ಕಾರ್ಯ ಮಾಡಿದ್ದಾರೆ. ತಮ್ಮ ಮಕ್ಕಳ ವಿದ್ಯಾಭ್ಯಾಸದ ಜೊತೆಗೆ ಇತರೆ ಹಲವು ಮಕ್ಕಳ ಓದಿಗೆ ನೆರವಾಗಿದ್ದಾರೆ. ಇದಲ್ಲದೆ ತಮ್ಮ ಗ್ರಾಮದ ಅಕ್ಕಪಕ್ಕದ ಹಲವು ಗ್ರಾಮಗಳ ಜನರ ಸಮಸ್ಯೆಗಳನ್ನು ಬಗೆಹರಿಸಿ ಜನಾನುರಾಗಿ ಜೀವನ ನಡೆಸಿದ್ದಾರೆ ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೊಗಸೆಯ ಬಿ.ಕೆ.ಶೇಷಪ್ಪ ಶೆಟ್ಟರು ವಹಿಸಿದ್ದರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಮಂಜಪ್ಪ ಶೆಟ್ಟಿ ಮಸಗಲಿ, ಬೆಂಗಳೂರಿನ ಪತ್ರಿಕೆಯ ಬೆಳ್ಳಿಚುಕ್ಕಿ ವೀರೇಂದ್ರ, ಶ್ರೀ ನೀಲಕಂಠೇಶ್ವರ ಕುರುಹಿನ ಶೆಟ್ಟಿ ಸಂಘದ ಅಧ್ಯಕ್ಷ ಸಿ.ಎಚ್.ಇಂದುಕುಮಾರ್, ಕೋಲಾರದ ಡಿ.ಡಿ.ಎಲ್.ಆರ್. ಬಿ.ಕೆ.ಸಂಜಯ್, ಪುಸ್ತಕದ ಸಂಪಾದಕ ಎಚ್.ಎನ್.ಕೃಷ್ಣ ಶೆಟ್ಟಿ, ಕುಟುಂಬದ ಹಿರಿಯರಾದ ಜಯಲಕ್ಷ್ಮಮ್ಮ ಉಪಸ್ಥಿತರಿದ್ದರು.

    The person is not eternal but the personality is eternal.

  • ಮೌಲ್ಯಗಳ ಪರಿಪಾಲನೆಯಿಂದ ಬದುಕು ಉಜ್ವಲ

    ಮೌಲ್ಯಗಳ ಪರಿಪಾಲನೆಯಿಂದ ಬದುಕು ಉಜ್ವಲ

    ಕಡೂರು: ಮಾನವ ಜೀವನ ಅಮೂಲ್ಯ. ದೇವರು ಕೊಟ್ಟ ಕೊಡುಗೆ ಅಪಾರ. ಅರಿವು ಆದರ್ಶಗಳಿಂದ ಜೀವನ ಸಮೃದ್ಧಗೊಳ್ಳಬೇಕು. ಧಾರ್ಮಿಕ ಮತ್ತು ಸಾಮಾಜಿಕ ಮೌಲ್ಯಗಳ ಪರಿಪಾಲನೆಯಿಂದ ಬದುಕು ಉಜ್ವಲಗೊಳ್ಳುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

    ಅವರು ಶನಿವಾರ ತಾಲೂಕಿನ ಹುಲಿಕೆರೆ ದೊಡ್ಡಮಠದ ಶ್ರೀ ವಿರೂಪಾಕ್ಷಲಿಂಗ ಶಿವಾಚಾರ್ಯ ಸ್ವಾಮಿಗಳವರ ೮೦ನೇ ವರ್ಷದ ಜನ್ಮ ದಿನೋತ್ಸವ ಹಾಗೂ ಲಿಂ. ಬಸವರಾಜ ದೇಶಿಕೇಂದ್ರ ಶಿವಾಚಾರ್ಯ ಸ್ವಾಮಿಗಳ ಪುಣ್ಯ ಸ್ಮರಣೊತ್ಸವ ಅಂಗವಾಗಿ ಜರುಗಿದ ಧರ್ಮ ಜಾಗೃತಿ ಸಮಾರಂಭದ ಸಾನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.

    ಮನುಷ್ಯನಲ್ಲಿ ಆತ್ಮ ಬಲ ಬೆಳೆಯಲು ಆಧ್ಯಾತ್ಮದ ಹಸಿವು ಬೇಕು. ಸನ್ಮಾರ್ಗದಲ್ಲಿ ನಡೆಯುವ ಛಲ ಬೇಕು. ಅನಾರೋಗ್ಯಕರ ಸಮಾಜಕ್ಕೆ ಅಡಿಗಲ್ಲು ಇಡುವ ಜನರ ಸಂಖ್ಯೆ ಹೆಚ್ಚಾಗುತ್ತಿದೆ. ಮನುಷ್ಯ ಜಾಗೃತಗೊಂಡು ಆದರ್ಶ ಸಂಸ್ಕೃತಿ ಉಳಿವಿಗಾಗಿ ಶ್ರಮಿಸಬೇಕಾಗಿದೆ. ಸತ್ಯ ಶುದ್ಧ ಕಾಯಕದಿಂದ ಜೀವನ ಸಾರ್ಥಕಗೊಳ್ಳುತ್ತದೆ. ಜೀವ ಶಿವನಾಗಲು ಅಂಗ ಲಿಂಗವಾಗಲು ಮತ್ತು ಭವಿ ಭಕ್ತನಾಗುವ ಸಾಧನಾ ಮಾರ್ಗವನ್ನು ಬೋಧಿಸಿದ ಶ್ರೀ ಜಗದ್ಗುರು ರೇಣುಕಾಚಾರ್ಯರ ವಿಚಾರ ಧಾರೆಗಳನ್ನು ಯಾರೂ ಮರೆಯುವಂತಿಲ್ಲ. ಲಿಂ. ಬಸವರಾಜ ದೇಶಿಕೇಂದ್ರ ಶಿವಾಚಾರ್ಯ ಸ್ವಾಮಿಗಳವರ ಸಂಸ್ಕಾರದ ಗರಡಿಯಲ್ಲಿ ಬೆಳೆದ ಸರಳತೆ ಮತ್ತು ಸಾತ್ವಿಕತೆಗೆ ಹೆಸರಾದ ಶ್ರೀ ವಿರೂಪಾಕ್ಷಲಿಂಗ ಶಿವಾಚಾರ್ಯರು ವೀರಶೈವ ಧರ್ಮ ಸಂಸ್ಕೃತಿ ಬಿತ್ತಿ ಬೆಳೆಯುವಲ್ಲಿ ಬಹಳಷ್ಟು ಶ್ರಮಿಸಿದ್ದಾರೆ. ಧಾರ್ಮಿಕ ಮತ್ತು ಶೈಕ್ಷಣಿಕ ರಂಗದಲ್ಲಿ ಅಮೂಲ್ಯ ಕೊಡುಗೆ ಕೊಟ್ಟ ಕೀರ್ತಿ ಅವರಿಗೆ ಸಲ್ಲುತ್ತದೆ. ಇಂದು ೮೦ ರ ಜನ್ಮ ದಿನೋತ್ಸವ ಆಚರಿಸಿಕೊಳ್ಳುತ್ತಿರುವ ಶ್ರೀಗಳು ಮುಂದೊಂದು ದಿನ ಜನ್ಮ ಶತಮಾನೋತ್ಸವ ಆಚರಿಸಿಕೊಳ್ಳುವ ಸೌಭಾಗ್ಯ ಪ್ರಾಪ್ತವಾಗಲೆಂದು ಬಯಸಿ ಶ್ರೀಗಳಿಗೆ ರೇಶ್ಮೆ ಪೀತಾಂಬರ ಸ್ಮರಣಿಕೆ ಫಲ ಪುಷ್ಪವಿತ್ತು ಶುಭ ಹಾರೈಸಿದರು.

    ಶ್ರೀ ರಂಭಾಪುರಿ ಜಗದ್ಗುರುಗಳಿಂದ ಮತ್ತು ಭಕ್ತರಿಂದ ಸನ್ಮಾನಿತರಾದ ಶ್ರೀ ವಿರೂಪಾಕ್ಷಲಿಂಗ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ ನಮ್ಮ ಜನ್ಮ ಇಂದು ಸಾರ್ಥಕಗೊಂಡಿದೆ. ಭಕ್ತ ಸಮೂಹದ ಸಮ್ಮುಖದಲ್ಲಿ ಆಗಮಿಸಿದ ಶಿವಾಚಾರ್ಯರ ಸಮಕ್ಷಮದಲ್ಲಿ ಶ್ರೀ ರಂಭಾಪುರಿ ಜಗದ್ಗುರುಗಳು ದಯಮಾಡಿಸಿ ಆಶೀರ್ವದಿಸಿದ್ದು ನಮಗೆ ಆನೆ ಬಲ ಬಂದಂತಾಗಿದೆ. ಉಸಿರು ಇರುವ ತನಕ ವೀರಶೈವ ಸಂಸ್ಕೃತಿ ಮತ್ತು ಗುರು ಪರಂಪರೆ ವೈಶಿಷ್ಠ್ಯಗಳನ್ನು ಬೆಳೆಸುವುದಾಗಿ ಪಣ ತೊಟ್ಟರು. ಉಪದೇಶಾಮೃತ ನೀಡಿದ ಹುಲಿಕೆರೆ ದೊಡ್ಡಮಠದ ನೂತನ ಮಲ್ಲಿಕಾರ್ಜುನ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ ವೀರಶೈವ ಧರ್ಮದಲ್ಲಿ ಗುರುವಿಗೆ ಅಗ್ರ ಸ್ಥಾನವಿದೆ. ಗುರು ಕಾರುಣ್ಯವಿಲ್ಲದೇ ಬಾಳು ಬೆಳೆಯದು ಬಲಿಯದು. ವಿರೂಪಾಕ್ಷಲಿಂಗ ಶಿವಾಚಾರ್ಯ ಸ್ವಾಮಿಗಳು ನಮ್ಮ ಪಾಲಿನ ದೇವರು. ಅವರ ಸೇವೆಯೇ ನಮ್ಮ ಜೀವನದ ಉಸಿರು. ಅವರ ಆಶೀರ್ವಾದ ನಮ್ಮ ಮತ್ತು ಭಕ್ತರ ಮೇಲೆ ಸದ ಇರಲೆಂದು ಬಯಸಿದರು. ನೇತೃತ್ವ ವಹಿಸಿದ ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ ಜಗ ಬೆಳಗಲು ಸೂರ್ಯ ಬೇಕು. ಬದುಕು ಬೆಳಗಲು ಗುರು ಬೇಕು. ಗುರುವಿಗೂ-ಶಿವನಿಗೂ ಭೇದವಿಲ್ಲ. ಶಿವನ ಸಾಕಾರ ರೂಪವೇ ಶ್ರೀ ಗುರು. ವಿರೂಪಾಕ್ಷಲಿಂಗ ಶಿವಾಚಾರ್ಯರು ನಮಗೆ ಅತ್ಯಂತ ಆತ್ಮೀಯರು. ಸದ್ದು ಗದ್ದಲವಿಲ್ಲದ ಸಾಧನೆ ಅವರದೆಂದರು.

    ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ವಿಧಾನ ಪರಿ?ತ್ ಸದಸ್ಯ ಸಿ.ಟಿ.ರವಿ ಮಾತನಾಡಿ ಧರ್ಮದ ಅರ್ಥ ಬಹಳ? ವಿಶಾಲವಾದದ್ದು. ಧರ್ಮವೊಂದು ಅಶ್ವತ್ಥವೃಕ್ಷ. ಆ ವೃಕ್ಷದ ರೆಂಬೆ ಕೊಂಬೆಗಳಂತೆ ಧರ್ಮಕ್ಕೆ ಹಲವಾರು ಮತ ಪಂಥಗಳಿವೆ. ಆದರೆ ಅವುಗಳನ್ನೇ ಧರ್ಮವೆಂದು ತಿಳಿದಿರುವ ಕಾರಣ ಆತಂಕ ಸಂಘ?ಕ್ಕೆ ಕಾರಣವಾಗಿದೆ. ಸನಾತನ ಧರ್ಮದ ಮೌಲ್ಯಗಳನ್ನು ಸಂರಕ್ಷಿಸಿಕೊಂಡು ಬಂದರೆ ಎಲ್ಲ ಮತ ಧರ್ಮಗಳು ಸಾಮರಸ್ಯದಿಂದ ಬದುಕಿ ಬಾಳಲು ಸಾಧ್ಯವಾಗುತ್ತದೆ. ಹುಲಿಕೆರೆ ದೊಡ್ಡ ಮಠದ ವಿರೂಪಾಕ್ಷಲಿಂಗ ಶ್ರೀಗಳು ಜೀವನದುದ್ದಕ್ಕೂ ಧರ್ಮವನ್ನು ಮತ್ತು ಸಮಾಜವನ್ನು ಕಟ್ಟುವ ಕೆಲಸ ಮಾಡಿದ್ದಾರೆ ಎಂದರು.

    ಸಮಾರಂಭ ಉದ್ಘಾಟಿಸಿದ ಅ.ಭಾ.ವೀ.ಲಿಂ.ಮಹಾಸಭೆ ಚಿಕ್ಕಮಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಹೆಚ್.ಎಂ. ಲೋಕೇಶ್ ಮಾತನಾಡಿ ಜೀವನ ವಿಕಾಸಕ್ಕೆ ಆಧ್ಯಾತ್ಮದ ಅರಿವು ಮುಖ್ಯ. ವೀರೂಪಾಕ್ಷಲಿಂಗ ಶ್ರೀಗಳು ಧರ್ಮ ಮುಖಿಯಾಗಿ ಮತ್ತು ಸಮಾಜ ಮುಖಿಗಳಾಗಿ ಸಮಾಜಕ್ಕೆ ಮಾರ್ಗದರ್ಶನ ತೋರಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ ಎಂದರು. ವಿರೂಪಾಕ್ಷಲಿಂಗ ಶ್ರೀಗಳವರ ೮೦ನೇ ವರ್ಷದ ನಿಮಿತ್ಯವಾಗಿ ವರಯೋಗಿ ನಾಮಾಂಕಿತ ಅಭಿನಂದನಾ ಗ್ರಂಥವನ್ನು ಚಿಕ್ಕಮಗಳೂರು ಕ್ಷೇತ್ರದ ಶಾಸಕ ಹೆಚ್.ಡಿ.ತಮ್ಮಯ್ಯನವರು ಬಿಡುಗಡೆ ಮಾಡಿ ‘ಸಾಹಿತ್ಯ ಮತ್ತು ಸಂಸ್ಕೃತಿಯ ಅರಿವಿಲ್ಲದ ಜೀವನ ವ್ಯರ್ಥವಾದುದು. ಶ್ರೀಗಳವರ ಜೀವನದ ಸಿದ್ಧಿ ಸಾಧನೆಗಳನ್ನು ಒಳಗೊಂಡ ಅನೇಕ ವಿಚಾರಗಳಿವೆ. ಸಾಧನೆ ಮಾತನಾಡಬೇಕೆ ಹೊರತು ಮಾತನಾಡುವುದೇ ಸಾಧನೆಯಲ್ಲ. ಶ್ರೀಗಳವರ ಜೀವನವೇ ಒಂದು ತಪಸ್ಸು’ ಎಂದು ತಮ್ಮ ಹರುಷ ವ್ಯಕ್ತಪಡಿಸಿದರು. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಬೆಳ್ಳಿಪ್ರಕಾಶ್, ದಿಣ್ಣೇಕೆರೆ ಡಿ.ಎಂ. ಮಂಜುನಾಥಸ್ವಾಮಿ, ಹೆಚ್.ಸಿ.ಕಲ್ಕರುಡಪ್ಪ, ಎ.ಎನ್.ಮಹೇಶ್, ಬಿ.ಎ.ಶಿವಶಂಕರ್, ಹೆಚ್.ಎನ್.ನಂಜೇಗೌಡ, ಎಂ.ಎಲ್.ಮೂರ್ತಿ, ಲೋಕೇಶ್ ಪಿಳ್ಳೇನಹಳ್ಳಿ, ಎಮ್.ಬಿ. ಮುಂಡ್ರೇಗಿರಿರಾಜ್, ಎಸ್.ಬಿ.ರೇಣುಕಾರಾಧ್ಯ ಭಾಗವಹಿಸಿದ್ದರು.

    ಈ ಪವಿತ್ರ ಸಮಾರಂಭದಲ್ಲಿ ಕೆ.ಬಿದರೆ ಪ್ರಭುಕುಮಾರ ಶಿವಾಚಾರ್ಯರು, ಹುಣಸಘಟ್ಟ ಗುರುಮೂರ್ತಿ ಶಿವಾಚಾರ್ಯರು, ಬಿಳಕಿ ರಾಚೋಟೇಶ್ವರ ಶಿವಾಚಾರ್ಯರು, ಬೀರೂರು ರುದ್ರಮುನಿ ಶಿವಾಚಾರ್ಯರು, ತರೀಕೆರೆ ಜಗದೀಶ ಶಿವಾಚಾರ್ಯರು, ಹಣ್ಣೆಮಠದ ಮರುಳಸಿದ್ಧ ಪಂಡಿತಾರಾಧ್ಯ ಶಿವಾಚಾರ್ಯರು, ಬೇರುಗಂಡಿ ರೇಣುಕ ಮಹಂತ ಶಿವಾಚಾರ್ಯರು, ನಂದೀಪುರದ ನಂದೀಶ್ವರ ಶಿವಾಚಾರ್ಯರು, ಮಾದಿಹಳ್ಳಿ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯರು, ಫಲಾಹಾರಸ್ವಾಮಿ ಮಠದ ಮುರುಘೇಂದ್ರ ಶಿವಾಚಾರ್ಯರು, ಕರಡೀಗವಿಮಠದ ಶಿವಯೋಗಿ ಶಿವಶಂಕರ ಸ್ವಾಮಿಗಳು, ಕುಪ್ಪೂರು ತೇಜೇಶ್ವರ ಶಿವಾಚಾರ್ಯರು, ಕೊಡ್ಲಿಪೇಟೆ ಮಹಾಂತಸ್ವಾಮಿಗಳು, ಕಿರಿಕೊಡ್ಲಿಮಠದ ಸದಾಶಿವ ಸ್ವಾಮಿಗಳು ಪಾಲ್ಗೊಂಡಿದ್ದರು. ಈ ಪವಿತ್ರ ಸಮಾರಂಭಕ್ಕೆ ಸಾಕ್ಷಿಯಾಗಿ ಹಲವಾರು ಗಣ್ಯರು-ಭಕ್ತರು ಉಪಸ್ಥಿತರಿದ್ದು ಶ್ರೀಗಳವರಿಗೆ ಅಭಿನಂದನೆ ಸಲ್ಲಿಸಿದರು. ಮೈಸೂರಿನ ಸಂಶೋಧಕ ಗಿರಿಜಾಪತಿ ಉಪನ್ಯಾಸ ನೀಡಿದರು. ಸಖರಾಯಪಟ್ಟಣದ ಸತೀಶ್ ಮಹಡಿಮನೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಹೊಸಹಳ್ಳಿ ಜಿ.ಮಲ್ಲೇಗೌಡ ಸ್ವಾಗತಿಸಿದರು. ಸಖರಾಯಪಟ್ಟಣದ ಶಿಕ್ಷಕ ಜಗದೀಶ ನಿರೂಪಿಸಿದರು. ಸಮಾರಂಭದ ನಂತರ ಅನ್ನ ದಾಸೋಹ ಜರುಗಿತು.

    Life is bright by upholding values.

  • ಸಾಹಿತ್ಯ ಸಮ್ಮೇಳನ ನಿತ್ಯ ನಿರಂತರ ಮಹಿಳೆಯರಿಗೆ ಚಿಂತನೆಯ ದಾರಿಯಾಗಬೇಕು

    ಸಾಹಿತ್ಯ ಸಮ್ಮೇಳನ ನಿತ್ಯ ನಿರಂತರ ಮಹಿಳೆಯರಿಗೆ ಚಿಂತನೆಯ ದಾರಿಯಾಗಬೇಕು

    ಚಿಕ್ಕಮಗಳೂರು: ಸಾಹಿತ್ಯ ಸಮ್ಮೇಳನ ಕೇವಲ ನುಡಿಜಾತ್ರೆಯಲ್ಲ. ನಿತ್ಯ ನಿರಂತರ ಮಹಿಳೆಯರಿಗೆ ಚಿಂತನೆಯ ದಾರಿಯಾಗಬೇಕು. ನಮ್ಮಿಂದ ಈ ಸಮಾಜಕ್ಕೆ ಒಳ್ಳೆದಾಗುವ ಬಗೆ ಹಾಗೂ ಯಾವ ದಾರಿಯಲ್ಲಿ ನಡೆಯಬೇಕು ಎಂಬುದರ ಬಗ್ಗೆ ಚರ್ಚಿಸಬೇಕು ಎಂದು ಸಮ್ಮೇಳನಾಧ್ಯಕ್ಷೆ ಲಕ್ಷ್ಮೀ ಶ್ಯಾಮರಾವ್ ತಿಳಿಸಿದರು.

    ನಗರದ ಕುವೆಂಪು ಕಲಾಮಂದಿರದಲ್ಲಿ ನಡೆದ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕದ ಪ್ರಪ್ರಥಮ ಸಮ್ಮೇಳನ ಕಾರ್ಯಕ್ರಮದ ಅಧ್ಯಕ್ಷರಾಗಿ ಅವರು ಮಾತನಾಡಿದರು.

    ಗೃಹಿಣಿ ಗೃಹ ಮುಚ್ಚತೆ ಎಂಬ ಮಾತಿನಂತೆ ವೃತ್ತಿನಿರತ ಮಹಿಳೆಯರು ಮನೆಯ ನಿರ್ವಹಣೆ ಮಾಡುತ್ತಾ ಇರುವ ಸಮಯವನ್ನೆ ದಿಟ್ಟತನದಿಂದ ಸಾಧನೆ ಮಾಡುವ ಮಹಿಳೆಯರು ಸಾಧಿಸಲು ಹೊರಟ ಮಹಿಳೆಯರು ಇಂದು ಭಾರತದ ಉದ್ದಗಲಕ್ಕೂ ಇದ್ದಾರೆನ್ನುವುದು ಸತ್ಯವಾಗಿದೆ ಎಂದರು.

    ಪ್ರಾಚೀನ ಕಾಲದಿಂದಲೂ ಇಲ್ಲಿ ಮಹಿಳೆಯರು ಸ್ಥಾನಮಾನಕ್ಕೆ ಅಡ್ಡಿ ಆತಂಕಗಳು ಇದ್ದೇ ಇವೆ. ಮಹಿಳೆಯರ ಹಾದಿ ಅಷ್ಟೇನು ಸುಗಮ ಹಾದಿಯಲ್ಲ. ಇಲ್ಲಿ ಯಾವ ಯೋಜನೆಗಳು ಬಂದರೂ ಸಮಗ್ರವಾದ ಬದಲಾವಣೆ ಆಗುತ್ತಿಲ್ಲ. ಇಲ್ಲಿ ನಮ್ಮ ಹೋರಾಟವನ್ನು ಪುರುಷರ ವಿರುದ್ಧ ಎಂದುಕೊಳ್ಳದೆ ಮಹಿಳಾ ಶೋಷಣೆಯ ವಿರುದ್ಧ ಹೋರಾಟವೆಂದುಕೊಳ್ಳಬೇಕು ಎಂದರು.

    ಹೆಣ್ಣು ಸಂಸಾರದ ಕಣ್ಣೆಂದರೂ ಅವಳ ಮೇಲೆ ಆಗುತ್ತಿರುವ ಅನ್ಯಾಯ, ದೌರ್ಜನ್ಯ, ಅತ್ಯಾಚಾರ, ಭ್ರೂಣಹತ್ಯೆ, ಲೈಂಗಿಕ ಕಿರುಕುಳ, ಬಾಲ್ಯವಿವಾಹ ಇದರಂಥಹ ಸಾಮಾಜಿಕ ಪಿಡುಗಗಳು ಅವಳ ಜೀವನ ನರಕವಾಗದಂತೆ ಸಿಡಿದೇಳಬೇಕಾಗಿದೆ. ಮಹಿಳೆಯರು ಕಾನೂನುಗಳನ್ನು ಅರ್ಥಮಾಡಿಕೊಂಡು ದಿಟ್ಟತನದಿಂದ ಹೋರಾಡಬೇಕಿದೆ ಎಂದು ತಿಳಿಸಿದರು.

    ಅಕ್ಷರ ಹಾದಿಯ ಬೆಳಕಿನಿಂದ ವಂಚಿತಳಾಗಿದ್ದ ಮಹಿಳೆಗೆ ಶತಮಾನಕ್ಕೂ ಮೀರಿದ ಹೋರಾಟದ ಫಲವಾಗಿ ಇಂದು ಶಿಕ್ಷಣದಲ್ಲಿ ಪಳಗಿ ಉದ್ಯೋಗದ ಅವಕಾಶಗಳು ಸಿಗುತ್ತಿವೆ. ಜಾಗತಿಕ ಮಟ್ಟದಲ್ಲಿ ಮಹಿಳೆಯರು ಕ್ರಿಯಾಶೀಲರಾಗಿದ್ದಾರೆ ಎಂದು ಹೇಳಿದರು.

    ಸಾಹಿತ್ಯದ ವಿಷಯಕ್ಕೆ ಬಂದರೆ ಹಿಂದೆ ಅಡುಗೆಮನೆ ಸಾಹಿತ್ಯ ಎಂದು ಮಹಿಳಾ ಸಾಹಿತ್ಯವನ್ನು ಅಲ್ಲಗಳೆಯುತ್ತಿದ್ದರು. ಆದರೂ ಮಹಿಳೆಯರು ರಚಿಸಿದ ಸಾಹಿತ್ಯವನ್ನು ಓದಲು ಅಂದು ಓದುಗರ ಗುಂಪೇ ಸೃಷ್ಟಿಯಾಗಿತ್ತು. ಹಿಂದೆ ಲೇಖಕಿಯರು ಬರೆದ ಸಾಹಿತ್ಯವು ಧಾರವಾಹಿಗಳಾಗಿ, ಚಲನಚಿತ್ರಗಳಾಗಿ ಹಾಗೂ ಕಥೆಗಳು ಕಣ್ಣಮುಂದೆ ಅಚ್ಚಳಿಯದಂತಿದೆ ಎಂದರೆ ತಪ್ಪಾಗುವುದಿಲ್ಲ ಎಂದರು.

    ಭಾರತದಾದ್ಯಂತ ಮಹಿಳೆಯರು ಅಡುಗೆ ಮನೆಯಿಂದ ಅಂತರಿಕ್ಷದವರೆಗೆ, ಕೃಷಿ ಭೂಮಿಯಿಂದ ಯುದ್ಧಭೂಮಿಯವರೆಗೆ ತಮ್ಮ ಸ್ಥಾನವನ್ನು ವಿಸ್ತರಿಸಿಕೊಂಡಿದ್ದಾರೆ. ಶಿಕ್ಷಕರಾಗಿ, ವಕೀಲರಾಗಿ, ನ್ಯಾಯಾಧೀಶರಾಗಿ ವೈದ್ಯರಾಗಿ, ಉಪರಾಷ್ಟ್ರಪತಿಗಳಾಗಿ, ಸಾಹಿತ್ಯ, ಸಂಗೀತ, ಕಲೆ ನಾಟಕ, ರಂಗಭೂಮಿ ಎಲ್ಲದರಲ್ಲೂ ಉನ್ನತ ಸ್ಥಾನಗಳನ್ನು ಅಲಂಕರಿಸಿ ಅಪಾರ ಸಾಧನೆ ಮಾಡುತ್ತಿದ್ದಾರೆ ಎಂದರು.

    The Sahitya Sammelan should be a constant source of thought for women.

  • ಸಾಹಿತ್ಯ ಕ್ಷೇತ್ರಕ್ಕೆ ಮಹಿಳಾ ಕೊಡುಗೆ ಅಪಾರ

    ಸಾಹಿತ್ಯ ಕ್ಷೇತ್ರಕ್ಕೆ ಮಹಿಳಾ ಕೊಡುಗೆ ಅಪಾರ

    ಚಿಕ್ಕಮಗಳೂರು: ಮಹಿಳೆಯರ ಸಾಹಿತ್ಯ ಕ್ಷೇತ್ರದ ಸಾಧನೆ ನಿನ್ನೆ-ಮೊನ್ನೆಯಿಂದಲ್ಲ, ಹತ್ತನೇ ಶತಮಾನದಿಂದಲೇ ಜಾನಪದ ಗೀತೆಗಳ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಮಹಿಳಾ ಮಣಿಯರು ತಮ್ಮದೇ ಶೈಲಿಯಲ್ಲಿ ಕೊಡುಗೆ ನೀಡಿದ್ದಾರೆ ಎಂದು ಮೈಸೂರು ವಿಶ್ರಾಂತ ಸಹ ಪ್ರಾಧ್ಯಾಪಕಿ ಡಾ. ಎಸ್.ಪಿ.ಉಮಾ ದೇವಿ ಪುತ್ತೂರು ಹೇಳಿದರು.

    ನಗರದ ಕುವೆಂಪು ಕಲಾಮಂದಿರದಲ್ಲಿ ನಡೆದ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕದ ಪ್ರಪ್ರಥಮ ಸಮ್ಮೇಳನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ ಹಿಂದಿನಿಂದಲೇ ಮಹಿಳೆಯರು ಜಾನಪದ ಗೀತೆಗಳನ್ನು ಕಟ್ಟಿ ಬೆಳೆಸಿದ ಪರಿಣಾಮ ವಿಶ್ವಮಾನ್ಯದಲ್ಲಿ ಮನ್ನಣೆ ಗಳಿಸಿ ಕನ್ನಡ ಸಾಹಿತ್ಯಕ್ಕೆ ವಿಶೇಷ ಸ್ಥಾನಮಾನ ಸಿಕ್ಕಿದೆ. ಇಂದು ಕನ್ನಡಭಾಷೆಗೆ ಇರುವಂಥ ಜೀವಂತಿಕೆ ಬೇರೆ ಯಾವುದೇ ಭಾಷೆಗೆ ದೊರೆತಿಲ್ಲ. ಹಿರಿಯರ ಜಾನಪದವು ಜನವಾಣಿ, ಕವಿವಾಣಿಯಾಗಿ ಇಂದು ಸುಗಂಧಭರಿತ ಹೂವಾಗಿ ಎಲ್ಲೆಡೆ ಹಬ್ಬಿಕೊಂಡಿದೆ ಎಂದರು.

    ಪುರುಷರಂತೆಯೇ ಹೆಣ್ಣು ಸಾಹಿತ್ಯ ಲೋಕದಲ್ಲಿ ಹಿಂದೆ ಬಿದ್ದಿಲ್ಲ. ಜೀವನದ ನೋವುನಲಿವು, ಬದುಕಿನ ಬವಣೆ, ಕರುಣಜನಕ ಸ್ಥಿತಿಗತಿಯನ್ನು ಉಕ್ಕಿ ಹರಿಸಿ ಬರವಣಿಗೆ ಮುಖೇನಾ ಪುಸ್ತಕಗಳನ್ನು ರಚಿಸಿ ಸಮಾಜದ ಮುಂದಿಟ್ಟು ಸಾಧನೆ ಮಾಡಲು ಸಾಹಿತ್ಯ ಕ್ಷೇತ್ರ ಸ್ಪೂರ್ತಿ ನೀಡಿದೆ ಎಂದು ಹೇಳಿದರು.

    ಹನ್ನೆರಡನೇ ಶತಮಾನದಲ್ಲಿ ಹಲವಾರು ವಚನಗಾರ್ತಿಯರು ಕನ್ನಡದಲ್ಲಿ ವಚನಗಳನ್ನು ರಚಿಸಿ ಒಂದು ಚಳವಳಿಯನ್ನೇ ನಡೆಸಿದರು. ಮಹಿಳೆಯರು ತಮ್ಮ ಸಾಹಿತ್ಯದಲ್ಲಿ ಸಮಾಜದ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿ, ಸಾಹಿತ್ಯ ರಚಿಸತೊಡಗಿದ್ದನ್ನು ಕೆಲವು ಹಂತಗಳಲ್ಲಿ ಗುರುತಿಸಲಾಗಿದ್ದು, ಸಾಹಿತ್ಯ ಎಂದಿಗೂ ಒಂದು ಸಮಾಜಕ್ಕೆ ಸೀಮಿತಗೊಳ್ಳದೇ ಪ್ರತಿ ಜನಾಂಗದಲ್ಲೂ ಹುಟ್ಟಿಕೊಂಡಿತು ಎಂದರು.

    ಇತಿಹಾಸ ಚರಿತ್ರೆಗಳ ಪುಟಗಳಲ್ಲಿ ಸಂಚಿಹೊನ್ನಮ್ಮ, ಶೃಂಗಾರಮ್ಮ, ತಿರುಮಲಾಂಬ, ಅಕ್ಕಮಹಾದೇವಿ ಸೇರಿದಂತೆ ಅನೇಕ ಮಹಾನ್ ವಚನಗಾರ್ತಿಯರು ಸಾಹಿತ್ಯಕ್ಕೆ ಕೊಡುಗೆ ನೀಡಿದರು. ಕಾಲಕಳೆಯದಂತೆ ಆಧುನಿಕತೆ ಜಗತ್ತಿನಲ್ಲಿ ಬಹಳಷ್ಟು ಕವಿಯತ್ರಿಯರು ಉದಯಿಸಿ ವಿಶಿಷ್ಟ ಹಾಗೂ ವಿಭಿನ್ನ ಶೈಲಿಯಲ್ಲಿ ಕಥೆ, ಕವನಗಳನ್ನು ರಚಿಸಿ ಸಾಹಿತ್ಯ ಲೋಕಕ್ಕೆ ತಮ್ಮದೇಯಾದ ಕೊಡುಗೆ ನೀಡುತ್ತಿದ್ದಾರೆ ಎಂದರು.

    ಸಾಹಿತ್ಯ ಮತ್ತು ಕಲೆ ಎಂದರೆ ಮನಸ್ಸಿನಲ್ಲಿರುವ ಗೊಂದಲ, ಅಶಾಂತಿ ಹಾಗೂ ನಕಾರಾತ್ಮಕ ಚಿಂತನೆಗಳನ್ನು ಹೊರಹಾಕುವ ಭವ್ಯವಾದ ಸಾಧನ. ಯಾವುದೇ ವ್ಯಕ್ತಿ ತನ್ನನ್ನು ಸಾಹಿತ್ಯಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಾನೆ, ಜೀವನದಲ್ಲಿ ಸಂತೋಷವನ್ನು ಕಾಣಲು ಸಾಧ್ಯ. ಜೊತೆಗೆ ಹೃದಯಭಾಷೆ ಮರೆತರೆ ಬದುಕು ಶೂನ್ಯವಾಗಲಿದೆ ಎಂಬುದು ಅರಿಯಬೇಕು ಎಂದು ಹೇಳಿದರು.

    ಮಲೆನಾಡು ಪ್ರಕೃತಿಯ ಮಡಿಲಿನಲ್ಲಿ ಆಯೋಜಿಸಿರುವ ಮಹಿಳಾ ಸಮ್ಮೇಳನ ಬಹಳಷ್ಟು ಲೇಖಕಿಯರು, ಬರಹಗಾರ್ತಿಯರಿಗೆ ಮೆರುಗು ತಂದಿದೆ. ಈ ಮಣ್ಣಿನಲ್ಲಿ ಸಾಹಿತ್ಯ ಪ್ರೇಮ ರಕ್ತದ ಕಣಕಣದಲ್ಲಿ ತುಂಬಿ ಕೊಂಡಿವೆ. ಸಾಹಿತಿಗಳಿಗೆ ಭಾರತೀಯ ಹಾಗೂ ಕನ್ನಡಿಗನೆಂಬ ಎರಡಕ್ಕೂ ವಿಶೇಷ ಗೌರವವಿದ್ದು, ಮೊದಲ ಪ್ರಾಶಸ್ತ್ರ್ಯ ಮಾತೃಭಾಷೆಗೆ ನೀಡುವುದು ಕನ್ನಡಾಭಿಮಾನಿಗಳ ಕರ್ತವ್ಯ ಎಂದು ತಿಳಿಸಿದರು.

    ಮಹಿಳಾ ಹಾಗೂ ಪುರುಷರ ಸಾಹಿತ್ಯದಲ್ಲಿ ವಿಭಜಿಸುವುದು ಊರ್ಜಿತವಲ್ಲ. ಸಾಹಿತ್ಯದ ಒಲವಿನ ಕಡೆ ಹೆಚ್ಚು ಬೆಳವಣಿಗೆ ಹೊಂದಿ ಕನ್ನಡ ಸಾಹಿತ್ಯ ಮುಂಚೂಣಿಯಲ್ಲಿ ಬೆಳಗುವುದೇ ಮುಖ್ಯವಾಗಬೇಕು. ಜಿಲ್ಲೆಯಲ್ಲೂ ಸಾಕಷ್ಟು ಲೇಖಕಿಯರು, ಬರಹಗಾರರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾದರೆ ಸಮ್ಮೇಳನ ಮೂಲ ಆಶಯ ಈಡೇರಿದಂತೆ ಎಂದರು.

    ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಶಾಸಕ ಹೆಚ್.ಡಿ.ತಮ್ಮಯ್ಯ ಮಾತನಾಡಿ, ಮಹಿಳಾ ಕವಿಯತ್ರಿಯರ ಧ್ವನಿ ಹಾಗೂ ಹೆಜ್ಜೆ ಗುರುತಿಸಿ ಈ ವೇದಿಕೆ ಸಾಕ್ಷಿಯಾಗಬೇಕು. ಈ ಸಮ್ಮೇಳನ ಮಹಿಳಾ ಸಾಹಿತ್ಯ ಪ್ರೇಮಿಗಳಿಗೆ ಹೊಸದಾರಿಯಾಗುವ ಜೊತೆಗೆ ಶಾಲೆಗಳಲ್ಲಿ ಪುಟ್ಟ ಹೆಣ್ಣುಮಕ್ಕಳ ಸಾಹಿತ್ಯದ ಆಸಕ್ತಿ ಬೆಳೆಸುವಂಥ ಕಾರ್ಯಕ್ರಮ ಹಮ್ಮಿಕೊಳ್ಳಲಿ ಎಂದು ಶುಭ ಹಾರೈಸಿದರು.

    ಇತ್ತೀಚಿನ ದಿನಗಳಲ್ಲಿ ಒತ್ತಡ ಜೀವನದಲ್ಲಿ ಓದು, ಬರವಣಿಗೆ, ಚಿಂತನೆ ಹಾಗೂ ಆರೋಗ್ಯಕರ ಚರ್ಚೆಗಳು ಮಾಯಾವಾಗುವ ಅಭದ್ರತೆ ಮನುಷ್ಯನಲ್ಲಿ ಕಾಡುತ್ತಿದೆ. ಇವುಗಳನ್ನು ದೂರವಾಗಿಸಲು ಮಹಿಳಾ ಸಾಹಿತಿಗಳಲ್ಲಿ ಪರಿಹರಿಸುವ ಹಾಗೂ ಆತ್ಮವಿಶ್ವಾಸ ಮೂಡಿಸುವ ಗುಣವಿದೆ ಎಂದರು.

    ನಾಡಿನ ಕನ್ನಡ ಸಾಹಿತ್ಯದಲ್ಲಿ ೧೨ನೇ ಶತಮಾನದ ಅಕ್ಕಮಹಾದೇವಿ, ಸಾವಿತ್ರಿಬಾಯಿ ಫುಲೆ ಕಾಲದಿಂದ ಇಂದಿನ ಸುಧಾಮೂರ್ತಿ, ಗೌರಿಲಂಕೇಶ್, ಪ್ರತಿಭಾ ನಂದಕುಮಾರ್ ಸೇರಿದಂತೆ ಹಿರಿಯ-ಕಿರಿಯರು ಸೇರಿದಂತೆ ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆಗಳನ್ನು ನೀಡಿರುವುದು ನೆನಪಿಸಿಕೊಳ್ಳಬೇಕಿದೆ ಎಂದರು.

    ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ, ಸಾಹಿತ್ಯ ಲೋಕಕ್ಕೆ ರಾಜಾಶ್ರಯಕ್ಕಿಂತ ಪ್ರಜಾಶ್ರಾಯ ಮುಖ್ಯವಾಗಿದೆ. ರಾಜಾಶ್ರಯವಿದ್ದಲ್ಲಿ ಸಾಹಿತ್ಯ ಬೆಳವಣಿಗೆಯಾಗದು. ಪ್ರಜಾಶ್ರಯದಿಂದ ಸಾಹಿತ್ಯ ಬೆಳೆದಿರುವ ಕಾರಣ ವಿಶ್ವದೆಲ್ಲೆಡೆ ಪಸರಿಸಲು ಕಾರಣವಾಗಿದೆ. ಹಿರಿಯರ ಗಾಧೆ, ವಚನ, ಜಾನಪದ ಗೀತೆಗಳು ಹುಟ್ಟಿದ್ದು ಜನರ ಮದ್ಯದಿಂದಲೇ ಎಂಬುದು ಅರಿತು ಸಾಗಿದರೆ ಯಶಸ್ಸು ಲಭಿಸಲಿದೆ ಎಂದರು.

    ಇತ್ತೀಚೆಗೆ ಕುಟುಂಬದ ನಡುವೆಯೇ ಮಾತೃಭಾಷೆ ಕಳೆದುಹೋಗುವ ಆತಂಕ ಕಾಡುತ್ತಿದೆ. ಅಪ್ಪ-ಅಮ್ಮ ಎನ್ನುವ ಬದಲು ಮಮ್ಮಿ-ಡ್ಯಾಡಿ ಸಂಸ್ಕೃತಿ ಆಧುನಿಕತೆಯಲ್ಲಿ ಬೆಳೆಯುತ್ತಿದೆ. ಮೊದಲು ಕುಟುಂಬದಲ್ಲಿ ಭಾಷಾ ಅಭಿಮಾನ ಬೆಳೆಸಿಕೊಂಡರೆ, ಸಮಾಜದಲ್ಲಿ ಕನ್ನಡ ತನವನ್ನು ಎತ್ತಿಹಿಡಿಯಬಹುದು. ಕುಟುಂಬದಲ್ಲೇ ಭಾಷಾಭಿಮಾನ ಇಲ್ಲದಿದ್ದರೆ ಸಂಪೂರ್ಣ ಶೂನ್ಯವಾಗುತ್ತದೆ ಎಂದು ಹೇಳಿದರು.

    ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಮಾತನಾಡಿ, ರಾಜ್ಯದಲ್ಲೇ ಪ್ರಪ್ರಥಮ ಭಾರಿಗೆ ಜಿಲ್ಲಾ ಕೇಂದ್ರದಲ್ಲಿ ಮಹಿಳಾ ಸಮ್ಮೇಳನ ಹಮ್ಮಿಕೊಳ್ಳುವ ಮೂಲಕ ಪ್ರತಿಯೊಂದು ಕಾರ್ಯಕ್ರಮವು ಜಿಲ್ಲೆಯಿಂದಲೇ ಪ್ರಥಮವಾಗಿ ಆರಂಭಿಸಲಾಗುತ್ತಿದೆ. ಗಮಕ, ಕಾವ್ಯಕಮ್ಮಟ, ದಾಸ, ವಚನ ಸಾಹಿತ್ಯ ಸಮ್ಮೇಳನಗಳು ದೊಡ್ಡಮಟ್ಟಿನಲ್ಲಿ ನಡೆಸುವುದು ಮೂಲ ಆಶಯವಾಗಿದೆ ಎಂದರು.

    ವಿಶೇಷವಾಗಿ ಕನ್ನಡ ಕಟ್ಟುವ ಕೆಲಸದಲ್ಲಿ ನಿರಂತರ ದುಡಿಯುತ್ತಿರುವ ರಾಜ್ಯದ ಕಸಾಪ ಜಿಲ್ಲಾಧ್ಯಕ್ಷರಿಗೆ ಊರಿನಿಂದ ರಾಜಧಾನಿಗೆ ಅಥವಾ ಇನ್ನಿತರೆ ತೆರಳಲು ಸರ್ಕಾರ ಉಚಿತ ಪಾಸ್ ನೀಡಿ ಪ್ರೋತ್ಸಾಹಿಸುತ್ತಿದೆ. ಮುಖ್ಯವಾಗಿ ಜಿಲ್ಲೆಯಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆದು ೪೭ ವರ್ಷಗಳು ಕಳೆದಿದ್ದು ಈ ಬಾರಿಗೆ ಜಿಲ್ಲೆಯಲ್ಲಿ ಸಮ್ಮೇಳನಕ್ಕೆ ಅವಕಾಶ ಕಲ್ಪಿಸಲು ಶಾಸಕರುಗಳು ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

    ಸಮ್ಮೇಳನ ಅಧ್ಯಕ್ಷತೆಯನ್ನು ಲಕ್ಷ್ಮೀ ಶ್ಯಾಮರಾವ್ ವಹಿಸಿದ್ದರು. ಸ್ವಾಗತ ಸಮಿತಿ ಅಧ್ಯಕ್ಷೆ ರೇಖಾಹುಲಿಯಪ್ಪಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಸಾಪ ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ಹೆಚ್.ಕೆ. ವಿಜಯಲಕ್ಷ್ಮೀ ವಿಶ್ವನಾಥ್ ಸಮ್ಮೇಳನಾಧ್ಯಕ್ಷರ ಪರಿಚಯ ನಡೆಸಿಕೊಟ್ಟರು.

    ಈ ಸಂದರ್ಭದಲ್ಲಿ ಬೆಂಗಳೂರು ಕಸಾಪ ಕೋಶಾಧ್ಯಕ್ಷ ಪಟೇಲ್ ಪಾಂಡು, ಕಸಾಪ ಜಿಲ್ಲಾಧ್ಯಕ್ಷೆ ನಿರ್ಮಲಾ ಮಂಜೇಗೌಡ, ತಾಲ್ಲೂಕು ಅಧ್ಯಕ್ಷ ಮಾವಿನಕೆರೆ ದಯಾನಂದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್. ಎಸ್.ವೆಂಕಟೇಶ್, ಕೋಶಾಧ್ಯಕ್ಷ ಬಿ.ಪ್ರಕಾಶ್, ಸಾಹಿತಿ ಶೈಲಾ ನಾಗರಾಜ್, ನಗರಸಭಾ ಅಧ್ಯಕ್ಷೆ ಸುಜಾತ ಶಿವಕುಮಾರ್, ಉಪಾಧ್ಯಕ್ಷೆ ಅನುಮಧುಕರ್, ಕನ್ನಡಸೇನೆ ಜಿಲ್ಲಾಧ್ಯಕ್ಷೆ ಪಿ.ಸಿ.ರಾಜೇಗೌಡ, ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ರಾಜೇಶ್, ಸಂಸ್ಕೃತಿ ಚಿಂತಕಿ ಎ. ವರ್ಷ, ಬ್ರಹ್ಮಕುಮಾರೀಸ್ ಜಿಲ್ಲಾ ಸಂಚಾಲಕಿ ಭಾಗ್ಯಕ್ಕ, ಕಸಾಪ ನಗರಾಧ್ಯಕ್ಷ ಸಚಿನ್‌ಸಿಂಗ್, ಮತ್ತಿತರರು ಉಪಸ್ಥಿತರಿದ್ದರು.

    Women’s contribution to the field of literature is immense.

  • ಸಿರಿ ಸಂಪತ್ತುಗಳಿಗಿಂತ ಮನುಷ್ಯನಿಗೆ ನೆಮ್ಮದಿ ಮುಖ್ಯ

    ಸಿರಿ ಸಂಪತ್ತುಗಳಿಗಿಂತ ಮನುಷ್ಯನಿಗೆ ನೆಮ್ಮದಿ ಮುಖ್ಯ

    ಚಿಕ್ಕಮಗಳೂರು: ಬಹು ಜನ್ಮಗಳ ಪುಣ್ಯ ಫಲದಿಂದ ಮಾನವ ಜನ್ಮ ಪ್ರಾಪ್ತವಾಗಿದೆ. ಮನುಷ್ಯ ಜೀವನದಲ್ಲಿ ಅಂದವಾಗಿ ಇರುವುದಕ್ಕಿಂತ ಆನಂದದಿಂದ ಬಾಳುವುದು ಉತ್ತಮ. ಭೌತಿಕ ಸಿರಿ ಸಂಪತ್ತುಗಳಿಗಿಂತ ಮನುಷ್ಯನಿಗೆ ಆಧ್ಯಾತ್ಮ ಸಂಪತ್ತು ಮತ್ತು ಶಾಂತಿ ಮುಖ್ಯವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

    ಅವರು ಶುಕ್ರವಾರ ಶ್ರೀ ಜಗದ್ಗುರು ರೇಣುಕಾಚಾರ್ಯ ಸಮುದಾಯ ಭವನದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಭಕ್ತಿ ಭಂಡಾರಿ ಬಸವೇಶ್ವರ ಜಯಂತಿ ಸಮಾರಂಭದ ಸಾನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.

    ಸಕಲ ಮಾನವರಿಗೂ ಒಳಿತನ್ನು ಬಯಸುವುದೇ ನಿಜವಾದ ಧರ್ಮ. ವೀರಶೈವ ಧರ್ಮ ವೃಕ್ಷದ ಬೇರು ಶ್ರೀ ಜಗದ್ಗುರು ರೇಣುಕಾಚಾರ್ಯರಾದರೆ ಆ ವೃಕ್ಷದ ಹಣ್ಣು ಶ್ರೀ ಬಸವೇಶ್ವರರು. ಆಚಾರ್ಯರ ತತ್ವ ಸಿದ್ಧಾಂತ ಶರಣರ ಸಾಮಾಜಿಕ ಚಿಂತನ ಬದುಕಿ ಬಾಳುವ ಮನುಷ್ಯನಿಗೆ ದಾರಿದೀಪ. ಹಚ್ಚುವುದಾದರೆ ದೀಪ ಹಚ್ಚು ಬೆಂಕಿಯನ್ನಲ್ಲ. ಆರಿಸುವುದಾದರೆ ನೋವನ್ನು ಆರಿಸು ನಗುವನ್ನಲ್ಲ ಎಚಿದು

    ಶ್ರೀ ಜಗದ್ಗುರು ರೇಣುಕಾಚಾರ್ಯರು ರೇಣುಕ ಗೀತೆಯಲ್ಲಿ ಬೋಧಿಸಿದ್ದಾರೆ. ಸಪ್ತ ಸೂತ್ರ ಹೇಳಿದ ಬಸವೇಶ್ವರರು ಸುಳ್ಳು ಮಾತನಾಡಬಾರದೆಂದು ಹೇಳಿದ್ದಾರೆ. ಅರಿತು ಆಚರಿಸಿ ಬಾಳುವುದೇ ನಿಜವಾದ ಧರ್ಮವೆಂದು ಪೂರ್ವಜರು ಒತ್ತಿ ಹೇಳಿದ್ದಾರೆ. ಡೋಣಿ ಮುಳುಗಲು ಒಂದು ಸಣ್ಣ ರಂಧ್ರ ಸಾಕು. ಬದುಕು ಮುಳುಗಲು ಒಂದು ಕೆಟ್ಟ ನಿರ್ಧಾರ ಸಾಕು.

    ಆದ್ದರಿಂದ ಮನುಷ್ಯ ಬಹಳಷ್ಟು ವಿವೇಚನೆಯಿಂದ ಮಾತನಾಡುವುದು ಶ್ರೇಯಸ್ಕರ. ಶ್ರೀ ಜಗದ್ಗುರು ರೇಣುಕಾಚಾರ್ಯ ಟ್ರಸ್ಟಿನಿಂದ ಪ್ರತಿ ವರುಷ ಸಂಯುಕ್ತವಾಗಿ ಜಯಂತ್ಯುತ್ಸವ ಆಚರಿಸಿಕೊಂಡು ಬರುತ್ತಿರುವುದು ತಮಗೆ ಸಂತೋಷ ತಂದಿದೆ ಎಂದರು.

    ಹುಲಿಕೆರೆ ದೊಡ್ಡಮಠದ ವಿರೂಪಾಕ್ಷಲಿಂಗ ಶಿವಾಚಾರ್ಯ ಸ್ವಾಮಿಗಳು ಸಮಾರಂಭವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಮಾನವ ಜೀವನದ ಉನ್ನತಿಗೆ ಮತ್ತು ಶ್ರೇಯಸ್ಸಿಗೆ ಧರ್ಮವೇ ಮೂಲ. ಶ್ರೀ ಜಗದ್ಗುರು ರೇಣುಕಾಚಾರ್ಯರು ತತ್ವ ಸಿದ್ಧಾಂತಗಳನ್ನು ಸಾರ್ವಕಾಲಿಕ ಸತ್ಯ ಸಂಗತಿಗಳನ್ನು ಬೋಧಿಸಿದ್ದಾರೆ. ಆ ಉನ್ನತ ದಾರಿಯಲ್ಲಿ ಶ್ರೀ ಬಸವಣ್ಣನವರು ಮುನ್ನಡೆದು ಆಧ್ಯಾತ್ಮ ರಂಗದಲ್ಲಿ ಅದ್ಭುತ ಸಾಧನೆಗೈದರೆಂದು

    ಹರುಷ ವ್ಯಕ್ತಪಡಿಸಿದರು. ಬೇರುಗಂಡಿ ಬೃಹನ್ಮಠದ ರೇಣುಕ ಮಹಾಂತ ಶಿವಾಚಾರ್ಯ ಸ್ವಾಮಿಗಳು ಶ್ರೀ ಜಗದ್ಗುರು ರೇಣುಕಾಚಾರ್ಯರ ಧಾರ್ಮಿಕ ಮತ್ತು ಸಾಮಾಜಿಕ ಮೌಲ್ಯಗಳ ಕುರಿತು ಉಪದೇಶವನ್ನಿತ್ತರು. ಶಂಕರದೇವರ ಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ಭಕ್ತಿ ಭಂಡಾರಿ ಬಸವೇಶ್ವರರು ವೀರಶೈವ ಧರ್ಮವನ್ನು ಸ್ವೀಕರಿಸಿ ಮತ್ತಷ್ಟು ಬೆಳೆಸಿ ಬಲಿಸಿದ್ದನ್ನು ಮರೆಯಲಾಗದು.

    ಶ್ರೀ ಜಗದ್ಗುರು ರೇಣುಕಾಚಾರ್ಯರ ಮತ್ತು ಶ್ರೀ ಬಸವೇಶ್ವರರ ವಿಚಾರ ಧಾರೆಗಳು ಬದುಕಿ ಬಾಳುವ ಜನಾಂಗಕ್ಕೆ ಆಶಾ ಕಿರಣವೆಂದರು. ಸಮಾರಂಭದ ಅಧ್ಯಕ್ಷತೆಯನ್ನು ಟ್ರಸ್ಟಿನ ಖಜಾಂಚಿ ಯು.ಎಂ.ಬಸವರಾಜ್ ವಹಿಸಿ ಮಾತನಾಡಿದರು. ಟ್ರಸ್ಟಿನ ಗೌರವ ಕಾರ್ಯದರ್ಶಿ ಸಿ.ವಿ.ಮಲ್ಲಿಕಾರ್ಜುನ್, ಸದಸ್ಯರಾದ ಎಮ್.ಡಿ.ಪುಟ್ಟಸ್ವಾಮಿ, ಹೆಚ್.ಎನ್.ನಂಜೇಗೌಡ ಸೇರಿದಂತೆ ಎಲ್ಲ ಸದಸ್ಯರು ಉಪಸ್ಥಿತರಿದ್ದರು. ಶ್ರೀ ಜಗದ್ಗುರು ರೇಣುಕಾಚಾರ್ಯ ಮಂದಿರದ ಪ್ರಧಾನ ಅರ್ಚಕರಾದ ವೇ. ಪುಷ್ಪಯ್ಯ ಸ್ವಾಮಿ ಅವರಿಗೆ ಶ್ರೀ ರಂಭಾಪುರಿ ಜಗದ್ಗುರುಗಳು ವಿಶೇಷ ಗುರುರಕ್ಷೆಯಿತ್ತು ಶುಭ ಹಾರೈಸಿದರು. ಎಸ್.ಎಂ.ದೇವಣ್ಣಗೌಡ ಸ್ವಾಗತಿಸಿದರು. ಟ್ರಸ್ಟ್ ಸದಸ್ಯರಾದ ಬಿ.ಎಂ.ಶಿವಶಂಕರ್ ನಿರೂಪಿಸಿದರು.

    ಸಮಾರಂಭಕ್ಕೂ ಮುನ್ನ ಪ್ರಾತ:ಕಾಲ ೧೫ ಜನ ವಟುಗಳಿಗೆ ಶಿವದೀಕ್ಷಾ ಸಂಸ್ಕಾರ ಜರುಗಿತು. ನಂತರ ಶ್ರೀ ರಂಭಾಪುರಿ ಜಗದ್ಗುರುಗಳವರ ಇ?ಲಿಂಗ ಮಹಾಪೂಜಾ ಸಕಲ ಸದ್ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿತು. ಸಮಾರಂಭದ ನಂತರ ಅನ್ನ ದಾಸೋಹ ಜರುಗಿತು.

    Peace of mind is more important to a person than wealth.

  • ರಾಷ್ಟ್ರದ ಸಮಗ್ರತೆ- ಐಕ್ಯತೆ ಎತ್ತಿಹಿಡಿಯಲು ಸಜ್ಜಾಗಿ

    ರಾಷ್ಟ್ರದ ಸಮಗ್ರತೆ- ಐಕ್ಯತೆ ಎತ್ತಿಹಿಡಿಯಲು ಸಜ್ಜಾಗಿ

    ಚಿಕ್ಕಮಗಳೂರು:  ರಾಷ್ಟ್ರದ ಸಮಗ್ರತೆ ಹಾಗೂ ಐಕ್ಯತೆಯನ್ನು ಎತ್ತಿಹಿಡಿಯಲು ಕಾರ್ಯ ಕರ್ತರು ಮಾನಸಿಕವಾಗಿ ಸಜ್ಜಾಗಬೇಕು. ವಿಕಸಿತ ಭಾರತದ ಅಭಿವೃದ್ದಿಯನ್ನು ಸಮಾಜದ ಮುಂದಿಡಲು ಪಕ್ಷಾತೀತವಾಗಿ ಶ್ರಮಿಸಬೇಕು ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಣ್ಯಪಾಲ್ ಹೇಳಿದರು.

    ನಗರದ ಜಿಲ್ಲಾ ಬಿಜೆಪಿ ಪಾಂಚಜನ್ಯ ಕಚೇರಿಯಲ್ಲಿ ನಗರ ಮಂಡಲದಿಂದ ಶುಕ್ರವಾರ ನಡೆದ ಸೇವೆ, ಸುಶಾಸನ, ಬಡವರ ಕಲ್ಯಾಣದ ಮೋದಿ ಸರ್ಕಾರಕ್ಕೆ ೧೧ ವರ್ಷ ಪೂರೈಸಿದ ಅಂಗವಾಗಿ ವಿಕಸಿತ ಭಾರತ ಸಂಕಲ್ಪ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿ ಹಿಂದಿನ ಕಾಂಗ್ರೆಸ್ ಆಳ್ವಿಕೆಯಲ್ಲಿ ಭಾರತ ನಿರುದ್ಯೋಗ, ಬಡತನ, ನಕ್ಸಲ್ ಹಾಗೂ ಭಯೋತ್ಪಾದನೆ ಚಟುವಟಿಕೆಗಳಿಂದ ನಲುಗಿ ಹೋಗಿತ್ತು. ೨೦೧೪ರಲ್ಲಿ ನರೇಂದ್ರ ಮೋದಿ ದೇಶದ ಚುಕ್ಕಾಣಿ ಹಿಡಿದ ಬಳಿಕ ದೇ ಶದ ಕಟ್ಟಕಡೆಯ ವ್ಯಕ್ತಿಗೂ ಸಮಾನತೆ ಯೋಜನೆಗಳನ್ನು ರೂಪಿಸಿ ಹಂತ ಹಂತವಾಗಿ ರಾಷ್ಟ್ರವನ್ನು ಬಲಿಷ್ಟ ಗೊಳಿಸಲು ಮುಂದಾದರು.

    ಭಾರತ ಸ್ವಾತಂತ್ರ್ಯಗೊಂಡು ಏಳು ದಶಕ ಪೂರೈಸಿದರೂ ಬಡವರ ಪಾಲಿಗೆ ಕನಸಾಗಿದ್ಧ ಬ್ಯಾಂಕ್ ಖಾ ತೆ, ಅಡುಗೆ ಸಿಲಿಂಡರ್, ಜನೌಷಧಿ ಕೇಂದ್ರ ತೆರೆದರು. ಯುವಕರ ಸ್ವಾವಲಂಬಿ ಬದುಕಿಗೆ ಕೌಶಾಲ್ಯಾಭಿ ವೃದ್ದಿ ತರಬೇತಿ ನೀಡಿದರು. ಅಲ್ಲದೇ ಪ್ರತಿದಿನವು ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿಗೊಳಿಸಿ ಅಸಾಧ್ಯವಾಗಿದ್ದನ್ನು ಸಾ ಧ್ಯಗೊಳಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು.

    ದೇಶದ ಕೋಟ್ಯಾಂತರ ಜನರ ದೈನಂದಿನ ವ್ಯಾಪಾರವನ್ನು ಡಿಜಿಟಲೀಕರಣಗೊಳಿಸಿದ ಪರಿಣಾಮ ಇ ಂದು ದೇಶದಲ್ಲಿ ೨೪ ಲಕ್ಷ ಕೋಟಿ ವಹಿವಾಟು ಯುಪಿಐನಿಂದ ನಡೆಯುತ್ತಿದೆ. ಕೋವಿಡ್ ವೇಳೆಯಲ್ಲಿ ಆತ್ಮ ನಿರ್ಭಾರ ಪ್ಯಾಕೇಜ್ ಘೋಷಣೆ ಹಾಗೂ ದೇಶದ ಪ್ರಜೆಗಳು ಸೇರಿದಂತೆ ವಿದೇಶಗಳಿಗೂ ಕೋವಿಡ್ ಲಸಿಕೆ ಯನ್ನು ವಿತರಿಸಿದ ದೇಶವೆಂದರೆ ಭಾರತ ಎಂದರು

    ದೇಶದ ೨೮೫ ಜಿಲ್ಲೆಗಳಲ್ಲಿ ಸೂಕ್ಷ್ಮವಾಗಿ ಅಡಗಿದ್ದ ನಕ್ಸಲ್ ಚಟುವಟಿಕೆ ಕಡಿವಾಣಕ್ಕೆ ಮುನ್ನುಡಿ ಬರೆದ ವರು ಮೋದಿ. ಕಾಂಗ್ರೆಸ್ ಅವಧಿಯಲ್ಲಿ ಮಂಡಿಯೂರಿ ನಿಲ್ಲಿಸಿದ್ಧ ದೇಶವನ್ನು ಭುಜದೆತ್ತರಕ್ಕೆ ಕೊಂಡೊ ಯ್ದು ರಾಷ್ಟ್ರದ ಪ್ರಗತಿಗೆ ಭದ್ರಬುನಾದಿ ಹಾಕಿದವರು. ಭಾರತದ ನೆಲದಲ್ಲಿ ವಿದೇಶಿ ಪ್ರಖ್ಯಾತ ಕಂಪನಿಗಳ ತಯಾರಿಕಾ ಘಟಕ ಸ್ಥಾಪಿಸಲು ಮೋದಿಯವರ ಸ್ನೇಹತ್ವವೇ ಕಾರಣ ಎಂದು ಹೇಳಿದರು.

    ವಿಶ್ವಮಟ್ಟದಲ್ಲಿ ಭಾರತ ಮೂರನೇ ಅತಿದೊಡ್ಡ ರಾಷ್ಟ್ರವಾಗಲು ಕಾರ್ಯಕರ್ತರು ಜೊತೆಗೆ ಜನಸಾಮಾ ನ್ಯರು ತಮ್ಮ ಜವಾಬ್ದಾರಿ ಅರಿತು ದೇಶದ ಕರ್ತವ್ಯ ನೆನಪು ಮಾಡಿಕೊಳ್ಳಬೇಕು. ಆ ನಿಟ್ಟಿನಲ್ಲಿ ಕೇಂದ್ರ ಸರ್ಕಾ ರದ ಜನಪರ ಆಡಳಿತ ಯೋಜನೆಗಳನ್ನು ಜಿಲ್ಲೆ, ಹೋಬಳಿ, ವಾರ್ಡ್ ಹಾಗೂ ಬೂತ್‌ಗಳಲ್ಲಿ ನಿರಂತರವಾ ಗಿ ಕಾರ್ಯಾಗಾರ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದರು.

    ಭಾರತೀಯರ ಶಾಂತಿ ಕದಡಲು ಯತ್ನಿಸುತ್ತಿದ್ದ ನೆರೆದೇಶ ಪಾಕಿಸ್ತಾವನ್ನು ಮೋದಿ ಆಡಳಿತದಲ್ಲಿ ಎರ್ ಮತ್ತು ಸರ್ಜಿಕಲ್ ಸ್ಟ್ರೈಕ್, ಉರಿ ಮುಖಾಂತರ ತಕ್ಕಪಾಠ ಕಲಿಸಿದೆ. ಈಚೆಗೆ ಆಪರೇಷನ್ ಸಿಂಧೂರ್‌ದ ಮೂ ಲಕ ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನವನ್ನು ಒಂಟಿಕಾಲಿನಲ್ಲಿ ನಿಲ್ಲುವಂತೆ ಮಾಡಲು ಮೋದಿಯವರ ಆಡಳಿತ ವೈಖರಿಯೇ ಕಾರಣವಾಗಿದೆ ಎಂದು ಹೇಳಿದರು.

    ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಸವಿತಾ ರಮೇಶ್ ಮಾತನಾಡಿ ವಾಜಪೇಯಿ ಬಳಿಕ ದೇಶದ ಆರ್ಥಿಕತೆ, ರಕ್ಷಣೆ ವಿಚಾರದಲ್ಲಿ ಮುಂಚೂಣಿ ನಾಯಕರಾಗಿ ರಾಷ್ಟ್ರಕ್ಕಾಗಿ ದುಡಿಯುತ್ತಿರುವ ನರೇಂದ್ರ ಮೋದಿಯವರು ಸದಾಕಾಲ ದೇಶದ ಮಕ್ಕಳ ಭವಿಷ್ಯ, ಜನತೆಗೆ ಬೆಂಗವಲಾಗಿ ನಿಂತಿರುವುದು ಶ್ಲಾಘನೀಯ ಎಂದರು.

    ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಜೆಪಿ ನಗರಾಧ್ಯಕ್ಷ ಪುಷ್ಪರಾಜ್ ಗುಜರಾತ್‌ನಲ್ಲಿ ೧೫ ವರ್ಷ ಮುಖ್ಯಮಂತ್ರಿ ಹಾಗೂ ಪ್ರಧಾನಿಗಳಾಗಿ ೧೧ ವರ್ಷ ಪೂರೈಸಿರುವುದು ದೊಡ್ಡ ಸಾಧನೆ. ದೇಶದ ಸುಮಾರು ೧೮ ಸಾವಿರ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ, ೨೯ ಕೋಟಿ ಬ್ಯಾಂಕ್‌ಖಾತೆಗೆ ಅಡಿಪಾಯ ಹಾಗೂ ಭಾರತೀಯ ಕನಸಾಗಿದ್ದ ಶ್ರೀರಾಮಮಂದಿರದ ನಿರ್ಮಾಣಕ್ಕೆ ಕಾರಣೀಭೂತರಾದವರು ಎಂದು ಹೇಳಿದರು.

    ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡರಾದ ಪ್ರೇಮ್‌ಕುಮಾರ್, ಕೋಟೆ ರಂಗನಾಥ್, ಓಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಬಿ.ರಾಜಪ್ಪ, ನಗರಸಭಾ ಸದಸ್ಯ ಮಧುಕುಮಾರ್‌ರಾಜ್ ಅರಸ್, ಮುಖಂ ಡರುಗಳಾದ ಬಸವರಾಜ್, ಕೌಶಿಕ್, ವೆಂಕಟೇಶ್ ಅರಸ್ ಮತ್ತಿತರರು ಹಾಜರಿದ್ದರು.

    Ready to uphold the integrity and unity of the nation

  • ಇಪಿಎಸ್ ಕಾರ್ಮಿಕರ ಬೇಡಿಕೆ ಹೋರಾಟಕ್ಕೆ ಎನ್‌ಎಸಿ ಜಿಲ್ಲಾ ಘಟಕ ಆರಂಭ

    ಇಪಿಎಸ್ ಕಾರ್ಮಿಕರ ಬೇಡಿಕೆ ಹೋರಾಟಕ್ಕೆ ಎನ್‌ಎಸಿ ಜಿಲ್ಲಾ ಘಟಕ ಆರಂಭ

    ಚಿಕ್ಕಮಗಳೂರು: ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ನಿವೃತ್ತ ಎಲ್ಲಾ ಇಪಿಎಸ್ ಕಾರ್ಮಿಕರಿಗೆ, ಅಸಂಘಟಿತ ಕಾರ್ಮಿಕರಿಗೆ ೭೫೦೦ ರೂ ಪಿಂಚಣಿ ಹಾಗೂ ಆರೋಗ್ಯ ವಿಮೆ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ನೀಡಬೇಕೆಂದು ಎನ್‌ಎಸಿ ರಾಜ್ಯಾಧ್ಯಕ್ಷ ಜಿಎಸ್‌ಎಂ ಸ್ವಾಮಿ ಆಗ್ರಹಿಸಿದರು.

    ಅವರು ಇಂದು ನಗರದಲ್ಲಿ ನೂತನ ಎನ್‌ಎಸಿ ಘಟಕವನ್ನು ಉದ್ಘಾಟಿಸಿ ಮಾತನಾಡಿ, ನಿವೃತ್ತ ನೌಕರರಿಗೆ ಡಿಎ, ವಿಧವೆಯರಿಗೆ ಶೇ.೧೦ ರಷ್ಟು ಪಿಂಚಣಿ ಕೊಡಬೇಕೆಂಬುದು ನಮ್ಮ ಪ್ರಮುಖ ಬೇಡಿಕೆಯಾಗಿದೆ ಎಂದು ಹೇಳಿ ಇಪಿಎಸ್ ಕಾರ್ಮಿಕರು ಭವಿಷ್ಯ ನಿಧಿಯಲ್ಲಿ ಹಣ ತೊಡಗಿಸಿದ್ದು, ಈ ಹಣದಿಂದಲೇ ಪಿಂಚಣಿ ಕೊಡಬಹುದಾಗಿದೆ, ೯೦ ಸಾವಿರ ಕೋಟಿ ರೂ ಬಡ್ಡಿ ಬರುತ್ತಿದೆ ಎಂದು ಮಾಹಿತಿ ನೀಡಿದರು.

    ೬೮ ಸಾವಿರ ಪಿಂಚಣಿದಾರರಿಗೆ ೭೫೦೦ ರೂ ಮಾಸಿಕ ಪಿಂಚಣಿ ಕೊಡಬಹುದು. ಈ ನಾಲ್ಕು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಮುಂದಿಟ್ಟು ರಾಷ್ಟ್ರಾಧ್ಯಂತ ಪ್ರವಾಸ ಕೈಗೊಂಡು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಎನ್‌ಎಸಿ ಘಟಕಗಳನ್ನು ಸ್ಥಾಪಿಸುತ್ತಿರುವುದಾಗಿ ತಿಳಿಸಿದರು.

    ಭಾರತದ ೫೪೩ ಸಂಸದರನ್ನು ಈಗಾಗಲೇ ಭೇಟಿಮಾಡಿ, ಸಂಸತ್‌ನಲ್ಲಿ ನಮ್ಮ ಪರವಾಗಿ ಧ್ವನಿ ಎತ್ತುವಂತೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಸಂಸದರನ್ನು ಆಯ್ಕೆಮಾಡುವ ಚುನಾವಣೆ ಪ್ರಕ್ರಿಯೆಯಲ್ಲಿ ಇಪಿಎಸ್ ನೌಕರರ ಪಾತ್ರ ಅತೀ ಮುಖ್ಯ ಎಂದರು.

    ಇದೂವರೆಗೆ ರಾಜ್ಯದ ೨೮ ಸಂಸದರುಗಳು ನಮ್ಮ ಪರವಾಗಿ ಧ್ವನಿ ಎತ್ತಿಲ್ಲ ಎಂದು ದೂರಿದ ಅವರು ಕನಿಷ್ಟ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಅವರು ನಮ್ಮ ಪರವಾಗಿ ಸರ್ಕಾರದ ಮೇಲೆ ಒತ್ತಡ ತರುತ್ತಿದ್ದಾರೆ ಎಂದು ಹೇಳಿದರು.

    ಬೆಂಗಳೂರಿನಲ್ಲಿ ಇದೇ ಜೂ.೧೭ ರಂದು ರಾಜ್ಯದ ಎನ್‌ಎಸಿ ಕಾರ್ಯಕಾರಿ ಸಭೆಯನ್ನು ಕರೆಯಲಾಗಿದ್ದು, ಸಂಘಟನೆಯ ಸರ್ವ ಸದಸ್ಯರು ಸಂಘಟಿತರಾಗಿ ಭಾಗವಹಿಸುವ ಮೂಲಕ ನಮ್ಮ ಹೋರಾಟಕ್ಕೆ ಕೈಜೋಡಿಸಬೇಕೆಂದು ಮನವಿ ಮಾಡಿದರು.

    ಎನ್‌ಎಸಿ ಸಂಘಟನೆಯ ಮೂಲ ಉದ್ದೇಶ ಇಪಿಎಸ್ ನೌಕರರಿಗೆ ಹಲವು ಬೇಡಿಕೆಗಳನ್ನು ಒದಗಿಸುವ ನಿಟ್ಟಿನಲ್ಲಿ ಸಂಘಟನೆಯ ರಾಷ್ಟ್ರಾಧ್ಯಕ್ಷ ರಮಾಕಾಂತ್ ನರಗುಂದ, ಅಶೋಕ್ ರಾವತ್, ಸಿಂಗ್ ಇವರುಗಳ ನೇತೃತ್ವದಲ್ಲಿ ೩೪ ರಾಜ್ಯಗಳಲ್ಲಿ ಸಂಘಟನೆಯನ್ನು ಸ್ಥಾಪಿಸಿ ಹೋರಾಟ ಮಾಡುತ್ತಿದ್ದೇವೆಂದು ಹೇಳಿದರು.

    ಎನ್‌ಎಸಿ ಕಾರ್ಯಾಧ್ಯಕ್ಷ ಹಾಗೂ ಉಪಾಧ್ಯಕ್ಷ ವಿ.ಕೆ. ಗಡಾದ ಮಾತನಾಡಿ, ೧೯೫೨ ರಲ್ಲಿ ಭವಿಷ್ಯ ನಿಧಿ ಜಾರಿಮಾಡಿದರು, ೧೯೭೨ ರಲ್ಲಿ ಕುಟುಂಬ ಪಿಂಚಣಿ ಯೋಜನೆಯನ್ನು ಜಾರಿಮಾಡಿದರು. ೧೯೯೫ ರಲ್ಲಿ ಇಪಿಎಸ್-೯೫ ಪಿಂಚಣಿ ಯೋಜನೆ ಜಾರಿಗೆ ತಂದರು. ಇದನ್ನು ಜಾರಿಮಾಡಿದ ಸಂದರ್ಭದಲ್ಲಿ ರಾಜ್ಯ ಮತ್ತು ಕೇಂದ್ರಸರ್ಕಾರ ಹೆಚ್ಚಿನ ಪಿಂಚಣಿ ನೀಡುತ್ತದೆ ಎಂದು ಹೇಳಿದ್ದರು ಎಂದರು.

    ಆದರೆ, ಟ್ರೇಡ್ ಯೂನಿಯನ್ ಮುಖಂಡರು ಈ ಹೇಳಿಕೆ ಬಗ್ಗೆ ಕ್ರಮವಹಿಸದೆ ಉದಾಸೀನ ತಾಳಿದ ಹಿನ್ನೆಲೆಯಲ್ಲಿ ಇಂದು ನಾವುಗಳೆಲ್ಲರೂ ನಮ್ಮ ಬೇಡಿಕೆಗಳಿಗಾಗಿ ಸಂಘಟಿತರಾಗಿ ಹೋರಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದರು.

    ಪ್ರಾಸ್ತಾವಿಕವಾಗಿ ಮಾತನಾಡಿದ ಎನ್‌ಎಸಿ ರಾಜ್ಯ ಸಂಯೋಜಕ ಸುಬ್ಬಣ್ಣ ಎನ್‌ಎಸಿ ಎಂಬುದೇ ರಾಷ್ಟ್ರೀಯ ಸಂಘರ್ಷ ಸಮಿತಿ. ಇದರಲ್ಲಿ ಹೋರಾಟದ ಬಲವಿದೆ, ದೇಶಾದ್ಯಂತ ೭೮ ಲಕ್ಷ ಭವಿಷ್ಯ ನಿಧಿ ಪಿಂಚಣಿದಾರರ ಅತೀ ದೊಡ್ಡ ಸಂಘಟನೆಯಾಗಿ ಹೊರಹೊಮ್ಮಿದೆ ಎಂದರು.

    ಪ್ರಸ್ತುತ ರಾಜ್ಯದಲ್ಲಿ ಮಾದರಿ ಎನ್‌ಎಸಿ ಸಂಘಟನೆಯಾಗಿ ಕೆಲಸ ಮಾಡುತ್ತಿದ್ದು, ಬುದ್ದಿವಂತರ, ವಿಚಾರವಂತರ ನಾಡು ಚಿಕ್ಕಮಗಳೂರಿನಲ್ಲಿ ಇಂದು ಎನ್‌ಎಸಿ ಘಟಕ ಉದ್ಘಾಟನೆಯಾಗುತ್ತಿರುವುದು ಸಂತಸ ತಂದಿದೆ ಎಂದರು.

    ಕಾರ್ಯಕ್ರಮದಲ್ಲಿ ಎನ್‌ಎಸಿ ಸಂಘಟನೆ ಮುಖಂಡರಾದ ನಂಜುಂಡೇಗೌಡ, ಅನಿಲ್ ಇನಾಂದಾರ, ಎಸ್.ಎನ್. ಕುಲಕರ್ಣಿ, ಆರ್. ಸುಬ್ಬಣ್ಣ, ಹುಚ್ಚಪ್ಪ, ಜಿಲ್ಲಾಧ್ಯಕ್ಷ ಶಿವಕುಮಾರ್ ಯಗಟಿಪುರ, ಪ್ರಧಾನ ಕಾರ್ಯದರ್ಶಿ ಬಿ.ಟಿ.ಕುಮಾರ್ ಉಪಸ್ಥಿತರಿದ್ದರು.

    NAC district unit launched to fight for EPS workers’ demands

  • ಅರ್ಹರಿಗೆ ಪಂಚ ಗ್ಯಾರಂಟಿ ಯೋಜನೆಗಳ ಲಾಭ ದೊರೆಯಲಿ

    ಅರ್ಹರಿಗೆ ಪಂಚ ಗ್ಯಾರಂಟಿ ಯೋಜನೆಗಳ ಲಾಭ ದೊರೆಯಲಿ

    ಚಿಕ್ಕಮಗಳೂರು: ರಾಜ್ಯ ಸರ್ಕಾರವು ರಾಜ್ಯದ ಜನರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸದೃಢಗೊಳಿಸುವ ದೃಷ್ಟಿಯಿಂದ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳಿಗೆ ದೊರೆಯುವಂತೆ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಅನುಷ್ಠಾನಾಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ಇಂದು ಪಂಚ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಇದಾಗಿದ್ದು, ಈ ಯೋಜನೆಯಿಂದ ಅರ್ಹ ಫಲಾನುಭವಿಗಳು ವಂಚಿತರಾಗದಂತೆ ನಿಗಾ ವಹಿಸಿ ಶೇ.೧೦೦ ರಷ್ಟು ಪ್ರಗತಿ ಸಾಧಿಸುವಂತೆ ತಿಳಿಸಿದರು.

    ಹಸಿವು ಮುಕ್ತ ಕರ್ನಾಟಕ, ಮಹಿಳೆಯರ ಸಬಲೀಕರಣ, ಸ್ವಾವಲಂಬಿ ಬದುಕಿಗೆ ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿವೆ. ಯಾರ ಹಸ್ತಕ್ಷೇಪ, ಮಧ್ಯವರ್ತಿಗಳ ಹಾವಳಿ ಇಲ್ಲದೆ ರಾಜ್ಯದ ಜನತೆಗೆ ಪಂಚ ಗ್ಯಾರಂಟಿ ಯೋಜನೆಗಳು ತಲುಪುತ್ತಿರುವುದು ಹೆಮ್ಮೆಯ ಸಂಗತಿ ಎಂದ ಅವರು, ಇಂತಹ ಅನುಕೂಲಕರ ವಾತಾವರಣ ಸೃಷ್ಟಿಸಿರುವ ಗ್ಯಾರಂಟಿ ಯೋಜನೆಗಳ ಅನುಕೂಲದ ಬಗ್ಗೆ ತಾಲ್ಲೂಕು, ಹೋಬಳಿ ಪಂಚಾಯಿತಿವಾರು ಶಿಬಿರ, ಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದರು.

    ಇ-ಕೆವೈಸಿ ಅಡಿ ಕುಟುಂಬದ ಯಾವುದೇ ಸದಸ್ಯರು ಬಯೋಮೆಟ್ರಿಕ್ ಮರುದೃಢೀಕರಿಸಿದಲ್ಲಿ ಮುಂಬರುವ ದಿನಗಳಲ್ಲಿ ಪಡಿತರ ಆಹಾರ ಧಾನ್ಯವನ್ನು ಪಡೆಯಬಹುದು. ಜುಲೈ ಮಾಹೆಯಿಂದ ತರೀಕೆರೆ, ಕಡೂರು, ಚಿಕ್ಕಮಗಳೂರು, ಅಜ್ಜಂಪುರ ತಾಲ್ಲೂಕುಗಳಿಗೆ ಅಕ್ಕಿಯ ಜೊತೆಗೆ ರಾಗಿಯನ್ನು ಕೂಡ ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕಿ (ಪ್ರಭಾರ) ನಾಗರತ್ನ ಸಭೆಗೆ ಮಾಹಿತಿ ನೀಡಿದರು.

    ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ ಮಾತನಾಡಿ, ಯುವನಿಧಿ ಯೋಜನೆಯಡಿ ಸವಲತ್ತುಗಳನ್ನು ಪಡೆಯುತ್ತಿರುವ ಪದವಿ ಹಾಗೂ ಡಿಪ್ಲೊಮಾ ಫಲಾನುಭವಿಗಳ ಮಾಹಿತಿ ಪಡೆದು ಅವರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ ಸ್ವಾವಲಂಬಿಗಳನ್ನಾಗಿ ಮಾಡಿ ಸ್ವಂತ ಉದ್ದಿಮೆ ನಡೆಸಲು ಬ್ಯಾಂಕ್‌ಗಳಿಂದ ಸಾಲ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

    ಸಭೆಯಲ್ಲಿ ಜಿ.ಪಂ. ಉಪ ಕಾರ್ಯದರ್ಶಿ ಶಂಕರ ಕೊರವರ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯರು, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಮುಂತಾದವರು ಹಾಜರಿದ್ದರು.

  • ಕಾಂಗ್ರೆಸ್ ಸರ್ಕಾರದ ಜನಪರ ಜನಹಿತ ಸಾಧನೆ ಜನರಿಗೆ ಮನವರಿಕೆಮಾಡಿ

    ಕಾಂಗ್ರೆಸ್ ಸರ್ಕಾರದ ಜನಪರ ಜನಹಿತ ಸಾಧನೆ ಜನರಿಗೆ ಮನವರಿಕೆಮಾಡಿ

    ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ ಸಮಸಮಾಜ ನಿರ್ಮಾಣ ಹಾಗೂ ಸರ್ವ ಜನಾಂಗದ ಎಲ್ಲಾ ಶೋಷಿತರು ಬಡವರಿಗೆ ಸಾಮಾಜಿಕ ನ್ಯಾಯ ಒದಗಿಸಲು ಕಟಿಬದ್ಧವಾಗಿದ್ದು ಈ ತಳಹದಿಯ ಮೇಲೆ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಮುಖಂಡರು, ಕಾರ್ಯಕರ್ತರು ಮುಂದಾಗಬೇಕೆಂದು ವೈದ್ಯಕೀಯ ಶಿಕ್ಷಣ ಕೌಶಲ್ಯ ಇಲಾಖೆ ಸಚಿವ ಡಾ. ಶರಣ ಪ್ರಕಾಶ ಪಾಟೀಲ್ ಕರೆ ನೀಡಿದರು.

    ಅವರು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೋಂಡು ಮಾತನಾಡಿ ಕಳೆದ ೨ ವರ್ಷಗಳಿಂದ ರಾಜ್ಯ ಸರ್ಕಾರ ಜನಪರ, ಜನಹಿತವಾಗಿ ಆಡಳಿತ ನಡೆಸುತ್ತಿದ್ದು ಈ ಬಗ್ಗೆ ಪಕ್ಷದ ಕಾರ್ಯಕರ್ತರು, ಮುಖಂಡರು ಸರ್ಕಾರದ ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡುವ ಮೂಲಕ ವಿಪಕ್ಷಗಳ ಆರೋಪಕ್ಕೆ ಉತ್ತರ ನೀಡಬೇಕೆಂದು ತಿಳಿಸಿದರು.

    ರಾಜ್ಯ ಸರ್ಕಾರ ಭರವಸೆ ನೀಡಿದಂತೆ ಪಂಚಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಮುಖ್ಯ ಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಶ್ರಮಿಸಿ ನುಡಿದಂತೆ ನೆಡೆದ ಸರ್ಕಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದರು.

    ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಪದೆಪದೇ ಟೀಕೆ ಮಾಡುತ್ತಿದೆ ಪ್ರಧಾನಿ ನರೇಂದ್ರ ಮೋದಿಯವರು ಸಹ ಗ್ಯಾರಂಟಿ ಯೋಜನೆಗಳು ಅನುಷ್ಠಾನವಾದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಟೀಕಿಸಿದ್ದರು, ಆದರೆ ಸರ್ಕಾರ ಇದನ್ನೂ ಮೀರಿ ಯಶಸ್ವಿಯಾಗಿ ಎರಡೂವರೆ ವರ್ಷ ಪೂರೈಸಿದೆ ಎಂದರು.

    ವೈದ್ಯಕೀಯ ಇಲಾಖೆಯಿಂದ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಪ್ರಗತಿ ಸಾಧಿಸಿದ್ದೇವೆ ಮೆಡಿಕಲ್ ಕಾಲೇಜು, ಜಿಲ್ಲಾ ಆಸ್ಪತ್ರೆಗಳಲ್ಲಿ ಗುಣಮಟ್ಟದ ಉತ್ತಮ ಚಿಕಿತ್ಸೆ ಸಾರ್ವಜನಿಕರಿಗೆ ದೊರೆಯಬೇಕೆಂಬುದು ಪ್ರಮುಖ ಉದ್ದೇಶ ಮತ್ತು ಗುರಿ ಎಂದು ತಿಳಿಸಿದರು.

    ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಕಾಮಗಾರಿ ಪೂರ್ಣಗೊಂಡಿದ್ದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮುಂದಿನ ೮ ತಿಂಗಳ ಒಳಗೆ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಲಾಗಿದೆ, ಇದು ಲೋಕಾರ್ಪಣೆಯಾದರೆ ಈ ಭಾಗದ ಜನರಿಗೆ ಅನುಕೂಲವಾಗಲಿದೆ ಎಂದರು.

    ಜನಹಿತ-ಜನಪರವಾಗಿ ಸಾರ್ವಜನಿಕ ಹಿತಾಸಕ್ತಿಗೆ ಪೂರಕವಾಗಿ ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ ಆದರೆ ಇದನ್ನು ಸಹಿಸದ ವಿರೋಧ ಪಕ್ಷಗಳು ಸರ್ಕಾರಕ್ಕೆ ಕೆಟ್ಟ ಹೆಸರು ತರುವ ನಿಟ್ಟಿನಲ್ಲಿ ಹೇಳಿಕೆ ನೀಡುತ್ತಿರುವುದರಿಂದ ಸಾಮಾಜಿಕ ಗಲಭೆ ಸೃಷ್ಠಿಯಾಗಿ ಸಮಾಜ-ಸಮಾಜದ ಮಧ್ಯೆ ವಿಷ ಬೀಜ ಬಿತ್ತಿ ಅಶಾಂತಿ ಮೂಡಿಸುವ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.

    ಸಮಾಜದಲ್ಲಿರುವ ದುರ್ಬಲರಿಗೆ ಶಕ್ತಿ ತುಂಬುವ ಕೆಲಸವನ್ನು ರಾಜ್ಯ ಸರ್ಕಾರ ನಿರಂತರ ಪ್ರಯತ್ನ ಮಾಡುತ್ತಿದೆ, ಬಿಜೆಪಿ ಭದ್ರಕೋಟೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ೫ ಶಾಸಕರು ಗೆಲ್ಲುವ ಮೂಲಕ ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಕಾರಣವಾಗಿದೆ ಎಂದು ಶ್ಲಾಘಿಸಿದರು.

    ಚಿಕ್ಕಮಗಳೂರು, ಶಿವಮೊಗ್ಗ, ಕಾರವಾರ, ಮಂಗಳೂರು, ಉಡುಪಿ ಈ ೫ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷ ಗಟ್ಟಿಯಾಗಿ ಬೇರೂರಬೇಕೆಂಬುದೆ ನಮ್ಮ ಸದಾಶಯವಾಗಿದೆ ಎಂದು ಹೇಳಿದರು.

    ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಕೆ.ಪಿ ಅಂಶುಮಂತ್ ಮಾತನಾಡಿ ರಾಜ್ಯದಲ್ಲಿ ಜನಪರ ಆಡಳಿತವನ್ನು ಯಶಸ್ವಿಯಾಗಿ ೨ ವರ್ಷ ಪೂರೈಸಿರುವ ರಾಜ್ಯ ಸರ್ಕಾರ ಭರವಸೆಗಳನ್ನು ಮನೆಗೆ ಮುಟ್ಟಿಸುವಲ್ಲಿ ಸಾಕಾರಗೊಂಡಿದೆ ಎಂದರು.

    ಜಿಲ್ಲೆಯಲ್ಲಿ ಉಸ್ತುವಾರಿ ಸಚಿವ ಕೆ.ಜೆ ಜಾರ್ಜ್ ನೇತೃತ್ವದಲ್ಲಿ ೫ ಶಾಸಕರು ಜವಾಬ್ದಾರಿಯಿಂದ ಕ್ರಿಯಾಶೀಲವಾಗಿ ಸರ್ಕಾರದ ಜನಪರ ಕಾರ್ಯಗಳನ್ನು ಜನರ ಮನೆ ಭಾಗಿಲಿಗೆ ತಲುಪಿಸುವಲ್ಲಿ ಸಹಕರಿಸಿದ್ದಾರೆ ಎಂದು ಹೇಳಿದರು.

    ಮುಂಬರುವ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕೆಂದು ಕರೆ ನೀಡಿದ ಅವರು ಪಕ್ಷಕ್ಕೆ ಭದ್ರ ಬುನಾದಿ ಹಾಕುವ ನಿಟ್ಟಿನಲ್ಲಿ ತಳ ಮಟ್ಟದಿಂದ ಪಕ್ಷ ಸಂಘಟನೆಗೆ ಕಾರ್ಯಕರ್ತರು, ಮುಖಂಡರು ಒತ್ತು ನೀಡಬೇಕೆಂದು ಮನವಿ ಮಾಡಿದರು.

    ಈ ಸಂದರ್ಭದಲ್ಲಿ ಶಾಸಕ ಹೆಚ್.ಡಿ ತಮ್ಮಯ್ಯ, ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಶಿವಾನಂದಸ್ವಾಮಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ. ಕೆ.ಎಲ್ ವಿಜಯ್‌ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಪಿ ಮಂಜೇಗೌಡ, ಸೇವಾದಳದ ಅಧ್ಯಕ್ಷ ಬಸವರಾಜ್, ನಗರ ಕಾಂಗ್ರೆಸ್ ಅಧ್ಯಕ್ಷ ತನುಜ್‌ಕುಮಾರ್ ನಾಯ್ಡ್, ಮಲ್ಲೇಶ್ ಸ್ವಾಮಿ, ಅತೀಕ್ ಖೈಸರ್ ಮತ್ತಿತರರು ಉಪಸ್ಥಿತರಿದ್ದರು.

    Convince the people of the pro-people achievements of the Congress government.